Homeಅಂಕಣಗಳುಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

ಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

- Advertisement -
- Advertisement -

ಕಾಂಗ್ರೆಸ್-ಬಿಜೆಪಿ ಪಾಲಿಗೆ ಅಸ್ಸಾಮಿನ Tea Tribe ನಡೆದಾಡುವ ಮತಗಳೇ ವಿನಾ ಮನುಷ್ಯರಲ್ಲ

ದಮನಿತರು ಶೋಷಿತರು ಅವಮಾನಿತರ ನೋವುಗಳಿಗೆ ದನಿಯಾಗಿದ್ದ ಇಂಗ್ಲಿಷ್ ಕಾದಂಬರಿಕಾರ ದಿವಂಗತ ಮುಲ್ಕರಾಜ್ ಆನಂದ್ ಅವರು ಚಹಾ ತೋಟಗಳಲ್ಲಿ ಕಾರ್ಮಿಕರು ಅನುಭವಿಸುವ ರೌರವ ನರಕವನ್ನು ಸೆರೆಹಿಡಿದು ಜಗತ್ತಿಗೆ ತೋರಿದ ಮೊದಲಿಗರು. ಈ ಕಾದಂಬರಿಯ ಹೆಸರು Two Leaves and a Bud (ಎರಡೆಲೆ ಮತ್ತು ಒಂದು ಮುಗುಳು). 1937ರಲ್ಲಿ ಬರೆದಿದ್ದ ಕೃತಿಯದು.

ಒಮ್ಮೆ ಹೊಕ್ಕರೆ ಮತ್ತೆಂದೂ ಹೊರಬೀಳದಂತೆ ಬಂಧಿಸಿ ಹಗಲಿರುಳು ರಕ್ತ ಬೆವರು ಒಂದು ಮಾಡಿಸಿ ದುಡಿಸಿಕೊಳ್ಳುವ ಚಹಾ ತೋಟಗಳ ನರಕದಿಂದ ಮುಕ್ತಿ ನೀಡುವ ಶಕ್ತಿಯಿರುವುದು ಸಾವಿಗೆ ಮಾತ್ರವೇ ಎಂಬ ಕ್ರೂರ ಸತ್ಯ ಈ ಕಾದಂಬರಿಯಲ್ಲಿ ಅನಾವರಣವಾಗುತ್ತ ಹೋಗುತ್ತದೆ. ಅಮಾಯಕರ ಶ್ರಮವನ್ನು ದರೋಡೆ ಮಾಡುವ ಒಡೆಯರ ಪಾಲಿಗೆ ಕೂಲಿಗಳು ದುಡಿವ ಯಂತ್ರಗಳೇ ವಿನಾ ಮನುಷ್ಯರಲ್ಲ. ದಿನಕ್ಕೆ ಬೆಳಗಿನಂತ ರಾತ್ರಿಯತನಕ ಬಿಡುವಿಲ್ಲದೆ ದುಡಿದರೆ ಕೈಗೆ ಬೀಳುವ ಕೂಲಿ ಮೂರು ಆಣೆಗಳು. ದಿನಸಿ ತರಲು ಸಂತೆಗೆ ಹೋದರೆ ಯಾತಕ್ಕೂ ಸಾಲದು. ಮೈಮುರಿಯುವಂತೆ ಹೊಡೆತಗಳನ್ನು ತಿನ್ನಬೇಕಲ್ಲದೆ ಪತ್ನಿ ಪುತ್ರಿಯರನ್ನು ಒಡೆಯರ ಲೈಂಗಿಕ ವಾಂಛೆಗೆ ಒಪ್ಪಿಸಲೇಬೇಕು. ಕೂಲಿಗಳ ಮುರುಕು ವಸತಿಗಳು ಕೊಳಕಿನ ಕೂಪಗಳು. ಕೊಕ್ಕೆಹುಳುಗಳ ಆಗರ. ಹೊಂಚು ಹಾಕುವ ಕಾಲರಾ. ಬಂಡವಾಳ ಹಾಕಿದ ಒಡೆಯರ ಪಾಲಿಗೆ ಕೂಲಿಗಳು ಸುಳ್ಳರು, ಕಳ್ಳರು ಹಾಗೂ ಸೋಮಾರಿಗಳು. ನೈರ್ಮಲ್ಯವೇ ಇಲ್ಲದ ಕೂಪದಲ್ಲಿ ಕೂಲಿ ಗಂಗುವಿನ ಪತ್ನಿ ಸಜನಿ ಕಾಲರಾಕ್ಕೆ ತುತ್ತಾಗಿ ಸಾಯುತ್ತಾಳೆ. ಅಂತ್ಯಕ್ರಿಯೆಗೆ ಗಂಗುವಿನ ಬಳಿ ಹಣವಿಲ್ಲ. ಕೇಳಲು ಹೋದರೆ ಗದರಿ ಅಟ್ಟುತ್ತಾನೆ ಒಡೆಯ. ತೋಟದ ಮ್ಯಾನೇಜರ್ ಕಣ್ಣು ಗಂಗುವಿನ ಮಗಳ ಮೇಲೆ ಬೀಳುತ್ತದೆ. ತಡೆಯಲು ಅಡ್ಡ ಬಂದ ಗಂಗು ಗುಂಡೇಟಿಗೆ ಹೆಣವಾಗಿ ಉರುಳುತ್ತಾನೆ.

ಸಿನೆಮಾಗಳಲ್ಲಿ ಕಾಣುವ ಬೆಟ್ಟಗುಡ್ಡ, ಝರಿ ತೊರೆ, ಕಲಕಲ ನದಿಯ ಸೀಮೆಯ ನಡುವೆ ನಳನಳಿಸುವ ಮನಮೋಹಕ ಹಸಿರು ಚಹಾ ತೋಟಗಳ ಹಿತ್ತಲುಗಳಲ್ಲಿ ಅಸಹನೀಯ ಮೌನ, ಹಸಿವಿನ ಯಾತನೆ, ನಿಟ್ಟುಸಿರು, ರಕ್ತಹೀನತೆ, ರೋಗರುಜಿನಗಳು, ಅಮಾನವೀಯ ಶೋಷಣೆ, ಸಾವಿನ ನೆರಳು ಮೈಚಾಚಿ ಮಲಗಿದೆ. ಬದುಕಿನ ಸಂಗೀತ ಮರೆಯಾಗಿದೆ.

ಕಂಗೆಟ್ಟಿರುವ ಲಕ್ಷ ಲಕ್ಷ ಕಾರ್ಮಿಕರನ್ನು ಮೈದಡವಿ ಮಾತಾಡಿಸುವ ಸರ್ಕಾರಗಳಿಲ್ಲ. ತಮ್ಮ ನೆಲದಲ್ಲೇ ಅನಾಥರಾಗಿರುವ ಅಸಂಖ್ಯಾತರ ಸಾಲಿಗೆ ಸೇರಿ ಹೋಗಿದ್ದಾರೆ ಈ ಶ್ರಮಜೀವಿಗಳು.

ಚೀನಾದಿಂದ ಚಹಾ ಸಸ್ಯಗಳನ್ನು ಕದಿಯುವ ಈಸ್ಟ್ ಇಂಡಿಯಾ ಕಂಪನಿ ಭಾರತದಲ್ಲಿ ದಟ್ಟ ಕಾಡುಗಳನ್ನು ಬೋಳಿಸಿ ಬೆಳೆಸುತ್ತದೆ. ಬ್ರಿಟಿಷ್ ಪ್ಲಾಂಟರುಗಳು 150 ವರ್ಷಗಳ ಹಿಂದೆ ಕಾಡು ಕಡಿದು ಚಹಾ ತೋಟಗಳನ್ನು ಎಬ್ಬಿಸಲು ಮಧ್ಯಭಾರತದ ಆದಿವಾಸಿಗಳನ್ನು ಬಲವಂತದಿಂದ ಒಕ್ಕಲೆಬ್ಬಿಸಿ ಅಸ್ಸಾಮ್ ಮತ್ತು ಬಂಗಾಳಕ್ಕೆ ಪಶುಗಳಂತೆ ಸಾಗಿಸುತ್ತಾರೆ. ಮುಂಡಾ, ಸಂತಾಲ್, ಓರಾನ್, ಗೊಂಡರು, ಖಾರಿಯಾ ಹಾಗೂ ಸಾವೊರಾ ಪಂಗಡಗಳ ಈ ಆದಿವಾಸಿ ಕಾರ್ಮಿಕರನ್ನು ಈಗಲೂ Tea Tribes ಎಂದೇ ಕರೆಯಲಾಗುತ್ತದೆ. ಅಸ್ಸಾಮ್ ಒಂದರಲ್ಲೇ ಈ ಆದಿವಾಸಿ ಕಾರ್ಮಿಕರ ಸಂಖ್ಯೆ ಹತ್ತು ಲಕ್ಷಕ್ಕೂ ಹೆಚ್ಚು. ಅಸ್ಸಾಮಿನ ಜನಸಂಖ್ಯೆಯಲ್ಲಿ ಇವರ ಪ್ರಮಾಣ ಶೇ.18ರಷ್ಟು ಎನ್ನಲಾಗಿದೆ.

ಅಂದಿನ ಬ್ರಿಟಿಷ್ ಸರ್ಕಾರ ಭಾರತದಲ್ಲಿ ಬ್ರಿಟಿಷ್ ಪ್ಲಾಂಟರುಗಳಿಗೆ ಸಂಪನ್ಮೂಲಗಳು ಮತ್ತು ಕೂಲಿ ಕಾರ್ಮಿಕರ ಮೇಲೆ ಎಣೆಯಿಲ್ಲದ ಪ್ರಶ್ನಾತೀತ ಅಧಿಕಾರವನ್ನ ಅಧಿಪತ್ಯ ನೀಡಿತ್ತು. ಬಲವಂತದ ನೇಮಕ, ಅತಿ ಕಡಿಮೆ ಕೂಲಿ, ಅಮಾನವೀಯ ವಸತಿ ಮತ್ತು ಕೆಲಸದ ಪರಿಸ್ಥಿತಿಗಳು ಅಂದಿನ ಬ್ರಿಟಿಷ್ ಮಾಲೀಕರ ಲಾಭವನ್ನು ನೂರ್ಮಡಿಗೊಳಿಸುತ್ತಿದ್ದವು. ಸ್ವತಂತ್ರ ಭಾರತದ ಚಹಾ ತೋಟಗಳ ಕಾರ್ಮಿಕರ ಪರಿಸ್ಥಿತಿ ಹೆಚ್ಚೇನೂ ಬದಲಾಗಿಲ್ಲ.

ತಮ್ಮ ರಾಜ್ಯಗಳಲ್ಲೇ ಬದುಕಿದ್ದರೆ ಇವರಿಗೆ ಸ್ವಾಭಾವಿಕವಾಗಿ ಹಕ್ಕಿನ ಪ್ರಕಾರವೇ ದಕ್ಕಿರುವ ಪರಿಶಿಷ್ಟ ಪಂಗಡಗಳ ಸ್ಥಾನಮಾನ ಸಿಗುತ್ತಿತ್ತು. ಆದರೆ ಅಸ್ಸಾಮ್ ಸರ್ಕಾರ ಇವರಿಗೆ ಆದಿವಾಸಿಗಳ ಸ್ಥಾನಮಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ತಯಾರಿಲ್ಲ. ಈ ಸ್ಥಾನಮಾನಕ್ಕಾಗಿ ಹೋರಾಟ ನಡೆಸಿರುವ ಆದಿವಾಸಿಗಳು ಅಸ್ಸಾಮಿನ ಉಗ್ರರ ಕೆಂಗಣ್ಣಿಗೆ ಗುರಿಯಾಗಿ ಸಾವಿರ ಸಂಖ್ಯೆಯಲ್ಲಿ ಹತ್ಯೆಯಾಗಿ ಹೋಗಿದ್ದಾರೆ. ಚಹಾ ತೋಟಗಳ ಮಾಲೀಕರ ದೌರ್ಜನ್ಯಗಳಿಗೆ ಗುರಿಯಾಗಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಬಡಪಾಯಿಗಳ ವಿರುದ್ಧ ಹತ್ತು ಹಲವು ರೂಪಗಳಲ್ಲಿ ಯುದ್ಧ ಸಾರಿವೆ.

ಅಸ್ಸಾಮ್ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳ ಮೇಲೆ ಸೋಲು ಗೆಲುವಿನ ಮೇಲೆ ಪ್ರಭಾವ ಬೀರಬಲ್ಲವರು ಇವರು. ಸುಮಾರು 40 ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳನ್ನು ಇವರ ಮತಗಳು ತೀರ್ಮಾನಿಸಬಲ್ಲವು. ರಾಜಕೀಯ ಪಕ್ಷಗಳ ಪಾಲಿಗೆ ಈ ಜನರು ನಡೆದಾಡುವ ಉಸಿರಾಡುವ ವೋಟುಗಳು ಅಷ್ಟೇ. ಐದು ವರ್ಷಗಳಿಗೊಮ್ಮೆ ಇವರ ಕಣ್ಣಲ್ಲಿ ಮಣ್ಣು ಹಾಕಿದರೆ ಸಾಕು. ಮುಂದಿನ ಐದು ವರ್ಷಗಳ ಕಾಲ ನಿಶ್ಚಿಂತೆ. ಅಸ್ಸಾಮಿನ ಚುನಾವಣೆಗಳು ಜರುಗಿವೆ. ಹೀಗಾಗಿ ಬಿಜೆಪಿ- ಕಾಂಗ್ರೆಸ್ಸು ಎರಡೂ ಪಕ್ಷಗಳು ಈ ಉಸಿರಾಡುವ ವೋಟುಗಳನ್ನು ರಮಿಸಲು ತೊಡಗಿವೆ.

ನೀರು, ನೆರಳು, ಅನ್ನ ಯಾವ ಸೌಲಭ್ಯವೂ ಸಮರ್ಪಕವಿಲ್ಲ. ಅತಿ ಕಡಿಮೆ ದಿನಗೂಲಿ, ಜೊತೆಗೆ ಲೈಂಗಿಕ ಕಿರುಕುಳ ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ವರದಿಯೊಂದು ಅಸ್ಸಾಮಿನ ಚಹಾ ತೋಟಗಳ ಕಾರ್ಮಿಕರ ಬವಣೆಯನ್ನು ಬಣ್ಣಿಸುತ್ತದೆ. ಶೇ.89ರಷ್ಟು ಚಹಾ ತೋಟಗಳಲ್ಲಿ ನೈರ್ಮಲ್ಯದ ಸೌಲಭ್ಯಗಳಿಲ್ಲ. ಹೆಣ್ಣುಮಕ್ಕಳು ಮಾಸಿಕ ಚಕ್ರದ ದಿನಗಳಲ್ಲೂ ದುಡಿಯಬೇಕಿದೆ. ಶಿಶುವಿಹಾರ ವ್ಯವಸ್ಥೆಯಿಲ್ಲ ಎಂದು 2017ರಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ವಿಕಾಸ ಮಂತ್ರಾಲಯಕ್ಕೆ ಸಲ್ಲಿಸಲಾದ ವರದಿ ಹೇಳಿದೆ

ಚಹಾ ಎಲೆ ಕೀಳುವ ಕೂಲಿಯಾಳುಗಳು ಬಹುತೇಕ ಮಹಿಳೆಯರು. ಕೆಲಸದ ನಡುವೆ ಅವರು ಕುಡಿಯುವ ಚಹಾ ಕಷಾಯಕ್ಕೆ ಸಕ್ಕರೆಯ ಬದಲಿಗೆ ಉಪ್ಪು ಬೆರೆಸಿಕೊಳ್ಳುತ್ತಾರೆ. ಅಧಿಕ ರಕ್ತದೊತ್ತಡ ಅವರ ಬೆನ್ನು ಹತ್ತಿದೆ. ಉಪ್ಪಿನ ಬದಲು ಉಚಿತ ಸಕ್ಕರೆ ಸರಬರಾಜು ಮಾಡುವುದಾಗಿ 2019ರಲ್ಲಿ ರಾಜ್ಯ ಸರ್ಕಾರ ಆಶ್ವಾಸನೆ ನೀಡಿತ್ತು. ಆದರೆ ಅದೂ ಆಶ್ವಾಸನೆಯಾಗೇ ಉಳಿದಿದೆ.

ನರೇಂದ್ರ ಮೋದಿಯವರು ತಮ್ಮನ್ನು ’ಚಾಯ್ ವಾಲಾ’ ಎಂದು ಕರೆದುಕೊಂಡರು. ಚಹಾ ಮಾರಿದೆನೆಂದು ಹೇಳಿಕೊಂಡು ಅದನ್ನು ಚುನಾವಣೆಯಲ್ಲಿ ರಾಜಕೀಯ ಬಂಡವಾಳವನ್ನಾಗಿಯೂ ಮಾಡಿಕೊಂಡರು. ಆದರೆ ದೇಶದ ಚಹಾ ಮಾರುವವರ ಬದುಕುಗಳನ್ನು ಅರಳಿಸುವಂತಹದೇನನ್ನೂ ಅವರು ಮಾಡಲಿಲ್ಲ. 2014ರ ಲೋಕಸಭಾ ಚುನಾವಣೆಗಳ ಪ್ರಚಾರ ಭಾಷಣಗಳಲ್ಲಿ ದಿನಗೂಲಿಯನ್ನು 350 ರುಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದುಂಟು. ಬಿಜೆಪಿ 2016ರಲ್ಲಿ ಅಸ್ಸಾಮ್ ಚುನಾವಣಾ ಪ್ರಣಾಳಿಕೆಯಲ್ಲಿ ಈ ಆಶ್ವಾಸನೆಯನ್ನು ಅಚ್ಚು ಮಾಡಿತು. ಇದೀಗ ಮತ್ತೊಂದು ಚುನಾವಣೆ ಬಂದಿದೆ. ಆದರೆ ಆಶ್ವಾಸನೆ ಚುನಾವಣೆ ಪ್ರಣಾಳಿಕೆಯ ಪುಟಗಳಲ್ಲೇ ಹೂತು ಹೋಗಿದೆ.


ಇದನ್ನೂ ಓದಿ: ಬಹುಜನ ಭಾರತ: ಬಂಧನದಲ್ಲಿ ಕಳೆದುಹೋಗುವ ಮುಸಲ್ಮಾನ ಬದುಕುಗಳು- ಪರಿಹಾರ ಇಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...