Homeಮುಖಪುಟ4 ಗಂಟೆ ಮಳೆಯಲ್ಲೇ ನಿಂತು ಕರ್ತವ್ಯ ನಿರ್ವಹಿಸಿದ ಟ್ರಾಫಿಕ್ ಪೊಲೀಸ್‌ಗೆ ಸ್ಥಳದಲ್ಲೇ ಗೌರವ!

4 ಗಂಟೆ ಮಳೆಯಲ್ಲೇ ನಿಂತು ಕರ್ತವ್ಯ ನಿರ್ವಹಿಸಿದ ಟ್ರಾಫಿಕ್ ಪೊಲೀಸ್‌ಗೆ ಸ್ಥಳದಲ್ಲೇ ಗೌರವ!

’ನಾನು ವಿಶೇಷವಾಗಿ ದ್ವಿಚಕ್ರ ವಾಹನ ಸವಾರರ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಅವರು ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಕಾಯುವಾಗ ಮಳೆಯಿಂದ ಸಂಪೂರ್ಣವಾಗಿ ನೆನೆಯುತ್ತಾರೆ’

- Advertisement -
- Advertisement -

ಅತ್ಯಂತ ಜನನಿಬಿಡ ರಸ್ತೆಯೊಂದರಲ್ಲಿ ವಾಹನ ಸಂಚಾರವನ್ನು ನಿರ್ವಹಿಸಲು ಸತತ ನಾಲ್ಕು ಗಂಟೆಗಳ ಕಾಲ ಭಾರಿ ಮಳೆಯ ಮಧ್ಯೆ ನಿಂತಿದ್ದ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೇ ಎಸ್‌ಪಿಯವರು ಸ್ಥಳಕ್ಕೆ ಆಗಮಿಸಿ ಅವರಿಗೆ ಬಹುಮಾನ ನೀಡಿ ಗೌರವಿಸಿದ್ದಾರೆ.

ತಮಿಳುನಾಡು ರಾಜಧಾನಿ ಚೆನ್ನೈನಿಂದ 600 ಕಿ.ಮೀ ದೂರದಲ್ಲಿರುವ ತೂತುಕುಡಿ ದಕ್ಷಿಣ ನಗರದ ಬಿಡುವಿಲ್ಲದ VVD ಜಂಕ್ಷನ್‌ನಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ಪೇದೆ ಮುತ್ತುರಾಜ್ ಅವರು ಸುಮಾರು ನಾಲ್ಕು ಗಂಟೆಗಳ ಕಾಲ ಭಾರಿ ಮಳೆಯಲ್ಲಿ ನಿಂತು ಕರ್ತವ್ಯ ನಿರ್ವಹಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋ ನೋಡಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಯಕುಮಾರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದು ಜಂಕ್ಷನ್‌ನಲ್ಲಿ ರೇನ್‌ಕೋಟ್ ಧರಿಸಿ ವಾಹನಗಳನ್ನು ಸರಿಯಾಗಿ ಕಳಿಸುತ್ತಿದ್ದ ಮುತ್ತುರಾಜ್ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದ್ದಾರೆ.

ಇದನ್ನೂ ಓದಿ: 2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

“ಆ ಕಷ್ಟದ ಪರಿಸ್ಥಿತಿಯಲ್ಲೂ ಅವರ ಕರ್ತವ್ಯ ಪ್ರಜ್ಞೆಯನ್ನು ಗುರುತಿಸಲು ನಾನು ಬಯಸುತ್ತೇನೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ಅವರು ನನ್ನನ್ನು ಸ್ಥಳದಲ್ಲೇ ಗೌರವಿಸಲು ಸಮಯ ಮೀಸಲಿರಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಮತ್ತು ಹೆಮ್ಮೆ ಇದೆ. ಸಾಮಾನ್ಯವಾಗಿ ಪೊಲೀಸ್ ಸಿಬ್ಬಂದಿಯನ್ನು ಎಸ್‌ಪಿ ಕಚೇರಿಯಲ್ಲಿ ಮಾತ್ರ ಗೌರವಿಸಲಾಗುತ್ತದೆ. ನನಗೆ ಪ್ರೇರಣೆಯಾದ ನನ್ನ ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್‌ಗೂ ನಾನು ಧನ್ಯವಾದ ಹೇಳಬೇಕು” ಎಂದು ಮುತ್ತುರಾಜ್ ಹೇಳಿದರು.

“ಇದು ನನ್ನ ಕೆಲಸ, ನಾನು ವಿಶೇಷವಾಗಿ ದ್ವಿಚಕ್ರ ವಾಹನ ಸವಾರರ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಅವರು ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಕಾಯುವಾಗ ಮಳೆಯಿಂದ ಸಂಪೂರ್ಣವಾಗಿ ನೆನೆಯುತ್ತಾರೆ. ಹಾಗಾಗಿ ನಾನು ಸಿಗ್ನಲ್ ಆಫ್ ಮಾಡಿ ಕೈಯಾರೆ ಟ್ರಾಫಿಕ್ ನಿಯಂತ್ರಿಸಿದೆ. ಆಗ ಅದು ಅವರಿಗೆ ಸ್ವಲ್ಪ ಸುಲಭವಾಗುತ್ತದೆ” ಎಂದು ತಮ್ಮ ಕರ್ತವ್ಯ ನಿಷ್ಠೆ ಬಗ್ಗೆ ಮಾತನಾಡುತ್ತಾರೆ ಮುತ್ತುರಾಜ್.

ಪತಿ ಮುತ್ತುರಾಜ್ ಕೆಲಸದ ಬಗ್ಗೆ ಅವರ ಪತ್ನಿ ಶಿವರಾಜನಿ ಪ್ರತಿಕ್ರಿಯೆ ನೀಡಿದ್ದು, “ನಾನು ಅವರ ಬಗ್ಗೆ ತುಂಬಾ ಹೆಮ್ಮೆಪಡುತ್ತೇನೆ, ಕೆಲಸದ ವಿಷಯಕ್ಕೆ ಬಂದಾಗ ಆವರು ಯಾವಾಗಲೂ ಕರ್ತವ್ಯನಿಷ್ಠರಾಗಿರುತ್ತಾರೆ” ಎನ್ನುತ್ತಾರೆ. ಈ ದಂಪತಿಗೆ ಒಬ್ಬ ಮಗಳು ಮತ್ತು ಒಬ್ಬ ಮಗನಿದ್ದಾರೆ.


ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...