Homeಮುಖಪುಟ4 ಗಂಟೆ ಮಳೆಯಲ್ಲೇ ನಿಂತು ಕರ್ತವ್ಯ ನಿರ್ವಹಿಸಿದ ಟ್ರಾಫಿಕ್ ಪೊಲೀಸ್‌ಗೆ ಸ್ಥಳದಲ್ಲೇ ಗೌರವ!

4 ಗಂಟೆ ಮಳೆಯಲ್ಲೇ ನಿಂತು ಕರ್ತವ್ಯ ನಿರ್ವಹಿಸಿದ ಟ್ರಾಫಿಕ್ ಪೊಲೀಸ್‌ಗೆ ಸ್ಥಳದಲ್ಲೇ ಗೌರವ!

’ನಾನು ವಿಶೇಷವಾಗಿ ದ್ವಿಚಕ್ರ ವಾಹನ ಸವಾರರ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಅವರು ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಕಾಯುವಾಗ ಮಳೆಯಿಂದ ಸಂಪೂರ್ಣವಾಗಿ ನೆನೆಯುತ್ತಾರೆ’

- Advertisement -
- Advertisement -

ಅತ್ಯಂತ ಜನನಿಬಿಡ ರಸ್ತೆಯೊಂದರಲ್ಲಿ ವಾಹನ ಸಂಚಾರವನ್ನು ನಿರ್ವಹಿಸಲು ಸತತ ನಾಲ್ಕು ಗಂಟೆಗಳ ಕಾಲ ಭಾರಿ ಮಳೆಯ ಮಧ್ಯೆ ನಿಂತಿದ್ದ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೇ ಎಸ್‌ಪಿಯವರು ಸ್ಥಳಕ್ಕೆ ಆಗಮಿಸಿ ಅವರಿಗೆ ಬಹುಮಾನ ನೀಡಿ ಗೌರವಿಸಿದ್ದಾರೆ.

ತಮಿಳುನಾಡು ರಾಜಧಾನಿ ಚೆನ್ನೈನಿಂದ 600 ಕಿ.ಮೀ ದೂರದಲ್ಲಿರುವ ತೂತುಕುಡಿ ದಕ್ಷಿಣ ನಗರದ ಬಿಡುವಿಲ್ಲದ VVD ಜಂಕ್ಷನ್‌ನಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ಪೇದೆ ಮುತ್ತುರಾಜ್ ಅವರು ಸುಮಾರು ನಾಲ್ಕು ಗಂಟೆಗಳ ಕಾಲ ಭಾರಿ ಮಳೆಯಲ್ಲಿ ನಿಂತು ಕರ್ತವ್ಯ ನಿರ್ವಹಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋ ನೋಡಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಯಕುಮಾರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದು ಜಂಕ್ಷನ್‌ನಲ್ಲಿ ರೇನ್‌ಕೋಟ್ ಧರಿಸಿ ವಾಹನಗಳನ್ನು ಸರಿಯಾಗಿ ಕಳಿಸುತ್ತಿದ್ದ ಮುತ್ತುರಾಜ್ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದ್ದಾರೆ.

ಇದನ್ನೂ ಓದಿ: 2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

“ಆ ಕಷ್ಟದ ಪರಿಸ್ಥಿತಿಯಲ್ಲೂ ಅವರ ಕರ್ತವ್ಯ ಪ್ರಜ್ಞೆಯನ್ನು ಗುರುತಿಸಲು ನಾನು ಬಯಸುತ್ತೇನೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ಅವರು ನನ್ನನ್ನು ಸ್ಥಳದಲ್ಲೇ ಗೌರವಿಸಲು ಸಮಯ ಮೀಸಲಿರಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಮತ್ತು ಹೆಮ್ಮೆ ಇದೆ. ಸಾಮಾನ್ಯವಾಗಿ ಪೊಲೀಸ್ ಸಿಬ್ಬಂದಿಯನ್ನು ಎಸ್‌ಪಿ ಕಚೇರಿಯಲ್ಲಿ ಮಾತ್ರ ಗೌರವಿಸಲಾಗುತ್ತದೆ. ನನಗೆ ಪ್ರೇರಣೆಯಾದ ನನ್ನ ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್‌ಗೂ ನಾನು ಧನ್ಯವಾದ ಹೇಳಬೇಕು” ಎಂದು ಮುತ್ತುರಾಜ್ ಹೇಳಿದರು.

“ಇದು ನನ್ನ ಕೆಲಸ, ನಾನು ವಿಶೇಷವಾಗಿ ದ್ವಿಚಕ್ರ ವಾಹನ ಸವಾರರ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಅವರು ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಕಾಯುವಾಗ ಮಳೆಯಿಂದ ಸಂಪೂರ್ಣವಾಗಿ ನೆನೆಯುತ್ತಾರೆ. ಹಾಗಾಗಿ ನಾನು ಸಿಗ್ನಲ್ ಆಫ್ ಮಾಡಿ ಕೈಯಾರೆ ಟ್ರಾಫಿಕ್ ನಿಯಂತ್ರಿಸಿದೆ. ಆಗ ಅದು ಅವರಿಗೆ ಸ್ವಲ್ಪ ಸುಲಭವಾಗುತ್ತದೆ” ಎಂದು ತಮ್ಮ ಕರ್ತವ್ಯ ನಿಷ್ಠೆ ಬಗ್ಗೆ ಮಾತನಾಡುತ್ತಾರೆ ಮುತ್ತುರಾಜ್.

ಪತಿ ಮುತ್ತುರಾಜ್ ಕೆಲಸದ ಬಗ್ಗೆ ಅವರ ಪತ್ನಿ ಶಿವರಾಜನಿ ಪ್ರತಿಕ್ರಿಯೆ ನೀಡಿದ್ದು, “ನಾನು ಅವರ ಬಗ್ಗೆ ತುಂಬಾ ಹೆಮ್ಮೆಪಡುತ್ತೇನೆ, ಕೆಲಸದ ವಿಷಯಕ್ಕೆ ಬಂದಾಗ ಆವರು ಯಾವಾಗಲೂ ಕರ್ತವ್ಯನಿಷ್ಠರಾಗಿರುತ್ತಾರೆ” ಎನ್ನುತ್ತಾರೆ. ಈ ದಂಪತಿಗೆ ಒಬ್ಬ ಮಗಳು ಮತ್ತು ಒಬ್ಬ ಮಗನಿದ್ದಾರೆ.


ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...