Homeಕರ್ನಾಟಕಎಚ್ ಎಸ್ ದೊರೆಸ್ವಾಮಿ; ಜೇಬಲ್ಲೇ ಪರಿಹಾರ ಇಟ್ಟುಕೊಳ್ಳುತ್ತಿದ್ದ ಎನರ್ಜಿ ಬೂಸ್ಟರ್

ಎಚ್ ಎಸ್ ದೊರೆಸ್ವಾಮಿ; ಜೇಬಲ್ಲೇ ಪರಿಹಾರ ಇಟ್ಟುಕೊಳ್ಳುತ್ತಿದ್ದ ಎನರ್ಜಿ ಬೂಸ್ಟರ್

- Advertisement -
- Advertisement -

“ಛೇ ಏನೂ ಮಾಡೋಕೆ ಆಗಲ್ಲ ಬಿಡು ಹೋಗ್ಲಿ” ಈ ವಾಕ್ಯವನ್ನು ತಾತನ ಬಾಯಲ್ಲಿ ಯಾರೂ ಕೇಳಿರಲಿಕ್ಕೆ ಸಾಧ್ಯವಿಲ್ಲ. ಅವರು ಎಂದೂ ನಿರಾಶವಾದಿಯಾಗಿದ್ದವರಲ್ಲ. ತಾತನ ಭೇಟಿ ಮಾಡಿದ ಪ್ರತಿ ಬಾರಿಯೂ ಎನರ್ಜಿ ಡಬಲ್ ಆಗುತ್ತಿದ್ದದ್ದು ನಿಜ. 103 ವಯಸ್ಸನ್ನು ದಾಟಿದ ವ್ಯಕ್ತಿಯೊಬ್ಬರು ಎಂಥ ಕೆಟ್ಟ ಸಂದರ್ಭದಲ್ಲಿಯೂ ನಿರಾಸರಾಗಾದೆ ಸ್ಫೂರ್ತಿಯ ಚಿಲುಮೆಯಂತೆ ಇರುವುದು ನಿಜಕ್ಕೂ ಅಚ್ಚರಿಯೇ ಹೌದು. ಸಂಘಟನೆಯ ಯಾವುದೇ ವ್ಯಕ್ತಿ ಅವರನ್ನು ಭೇಟಿ ಮಾಡಿದಾಗ “ಏನ್ ನಡೀತಿದೆ”? ಆ ಹೋರಾಟ ಏನ್ ಆಗ್ತಿದೆ, ಇದೇನಾಯಿತು, ನೋಡಿ ಹೀಗೆ ಮಾಡಿ, ಇಲ್ಲ ಅಂದ್ರೆ ಹಾಗೆ ಮಾಡಿ ಎನ್ನುತ್ತಾ ಸದಾ ಪರಿಹಾರವನ್ನು ಹೇಳುತ್ತಿದ್ದರೆ ಹೊರತು. ಕೇವಲ ದೂರುತ್ತಾ ಎಂದೂ ಕೂತವರಲ್ಲ.

ಫುಲ್‌ಟೈಮರ್‌ಗಳಿಗೆ ಫುಲ್‍ಖುಷ್

ಸಂಘಟನೆಯಲ್ಲಿ ಫುಲ್‌ಟೈಮರ್ ಆಗಿ ಕೆಲಸ ಮಾಡುತ್ತಿರುವ ಹಲವರು ಇದ್ದೇವೆ. ನಮ್ಮ ಬಗ್ಗೆ, ಅದೆಷ್ಟೋ ಹಿರಿಯರು, ಸಮಾಜದಲ್ಲಿ ಹೆಸರುವಾಸಿಯಾದವರು, ಸಾಹಿತಿಗಳು, ಈ ಎಲ್ಲರೂ ಸರ್ವೇ ಸಾಮಾನ್ಯವಾಗಿ ಹೇಳುವ ಮಾತೆಂದರೆ – “ಇದೆಲ್ಲಾ ಎಷ್ಟು ದಿನ ಅಂತ ಮಾಡ್ತೀರ, ನಿಮ್ಮ ಜೀವನ ನೀವು ನೋಡ್ಕಳಿ” ಎಂದು. ಆದರೆ ತಾತನ ಜೊತೆ ಮೊದಲ ಬಾರಿಗೆ ಒಂದು ದಿನ ಕಳೆಯುವ ಸಂದರ್ಭ ಬಂದಾಗ “ನೀನು ಏನು ಕೆಲಸ ಮಾಡುತ್ತೀಯಪ್ಪ” ಎಂದು ಕೇಳಿದಾಗ, ಅಂಜಿಕೆಯಿಂದಲೇ ಸಂಘಟನೆಯಲ್ಲೇ ಫುಲ್‌ಟೈಮರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಉತ್ತರಿಸಿದೆ. ಅದಕ್ಕೆ ಅವರು ಬಹಳ ಖುಷಿ ವ್ಯಕ್ತಪಡಿಸಿ, ಊರು, ವಿದ್ಯಾಭ್ಯಾಸ ಎಲ್ಲವನ್ನೂ ವಿಚಾರಿಸಿಕೊಂಡು ಹಲವಾರು ಸಲಹೆಗಳನ್ನು ನೀಡಿದರು. “ನಿಮ್ಮ ಜೀವನ ನೋಡ್ಕಳಿ” ಎನ್ನುವುದಕ್ಕೆ ವಿರುದ್ಧವಾಗಿ ತಾತ “ಸಂಘಟನೆಯಲ್ಲಿ ಕೆಲಸ ಮಾಡುವುದು ಸಾರ್ಥಕತೆಯ ಜೀವನ ನಡೆಸಿದಂತೆ ಎಂದು ನನ್ನಲ್ಲಿ ಹೆಮ್ಮೆ ಮೂಡುವಂತೆ ಮಾಡಿದವರು. ಅಲ್ಲದೆ ಸಮಾಜ ಸೇವೆ ಮಾಡುವುದೆಂದರೆ ಸ್ವಯಂ ಪ್ರೇರಣೆಯಿಂದ ಬಡತನವನ್ನು ಅಪ್ಪಿಕೊಳ್ಳುವುದು ಎಂದು ಯಾವಾಗಲೂ ಹೇಳುತ್ತಾ ನಮ್ಮನ್ನು ಗಟ್ಟಿ ಮಾಡುತ್ತಿದ್ದರು. ಕರಾಳ ಕೃಷಿ ಕಾಯ್ದೆ ವಿರೋಧಿಸಿ ನವೆಂಬರ್ 2020ರಲ್ಲಿ ಪ್ರತಿಭಟನೆಯ ಮಾಹಿತಿಯನ್ನು ಆಸ್ಪತ್ರೆಯಿಂದಲೇ ಮಾಹಿತಿ ಪಡೆಯುತ್ತಿದ್ದ ಅವರು ಕಾರ್ಯಕರ್ತರ ಬಂಧನವಾಗಿದೆ ಎಂದು ತಿಳಿದಮೇಲೆ “ಹೌದ, ಒಳ್ಳೇದು ಇದರಿಂದ ಹುಡುಗರೆಲ್ಲಾ ಗಟ್ಟಿಯಾಗುತ್ತಾರೆ, ಒಂದೆರೆಡು ಲಾಠಿ ಏಟು ಬಿದ್ದರೆ ರಾಜಕೀಯವಾಗಿ ಮತ್ತಷ್ಟು ಗಟ್ಟಿಯಾಗುತ್ತಾರೆ” ಎಂದು ಹೇಳಿ ನಮ್ಮಲ್ಲಿ ಉತ್ಸಾಹವನ್ನು ಇಮ್ಮಡಿಗೊಳಿಸುತ್ತಿದ್ದರು.

ದೊರೆಸ್ವಾಮಿ, doreswamy

ಕಾರ್ಯಕರ್ತರ ಶ್ರಮವನ್ನು ಗುರುತಿಸಿ ಗೌರವಿಸುವ ಅಪರೂಪದ ವ್ಯಕ್ತಿ

ನಾಯಕರು ಎಂದರೆ ಕಾರ್ಯಕರ್ತರಿಗಿಂತ ಭಿನ್ನ ಮತ್ತು ಅವರಿಗಿಂತ ಮೇಲೆ ಎನ್ನುವ ಧೋರಣೆ ಈಗ ಸಾಮಾನ್ಯವಾಗಿರುವುದು ದುರಂತ. ದೊರೆಸ್ವಾಮಿ ಅವರು ಆಸ್ಪತ್ರೆಯಲ್ಲಿ ದಾಖಲಾಗಿ ಮನೆಗೆ ಬಂದ ಸಂದರ್ಭದಲ್ಲಿ, ಅವರ ಮನೆಯಲ್ಲಿ ಉಳಿದುಕೊಂಡು ರಾತ್ರಿ ಶೌಚಕ್ಕೆ ಹೋಗುವಾಗ ಸಹಾಯ ಮಾಡಲು ನನಗೆ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ತಿಳಿಸಿದ್ದರು. ಅಂತೆಯೇ ಮೊದಲ ಬಾರಿಗೆ ತಾತನ ಮನೆಗೆ ಹೋದ ದಿನ, ನಾನು ಅನ್ನಭಾಗ್ಯ ಲೋಡಿಂಗ್ ಅನ್‌ಲೋಡಿಂಗ್ ಕಾರ್ಮಿಕರ ಪ್ರತಿಭಟನೆಯ ಕೆಲಸ ಮುಗಿಸಿಕೊಂಡು ಹೋಗಿದ್ದನ್ನು ತಾತ ತಿಳಿದುಕೊಂಡರು. ರಾತ್ರಿ ಅಲ್ಲಿಯೇ ಮಲಗಿ ಬೆಳಿಗ್ಗೆ ಸ್ವಲ್ಪ ತಡವಾಗಿ ಎದ್ದೆ. ತಾತ ಅದಾಗಲೇ ಪೇಪರ್ ಓದುತ್ತಾ ಕುಳಿತಿದ್ದರು. ನಾನು ಎಚ್ಚರವಾಗಿದ್ದು ಗಮನಿಸಿ “ನೀವು ತುಂಬಾ ಸುಸ್ತಾಗಿದ್ರಿ ಅನಿಸುತ್ತೆ, ಅದಕ್ಕೆ ಎಬ್ಬಿಸಲಿಲ್ಲ. ಮಲಗಿದ ತಕ್ಷಣ ಗೊರಕೆ ಹೊಡಿಯೋಕೆ ಶುರು ಮಾಡಿದ್ರಿ, ಪ್ರತಿಭಟನೆಯ ಕೆಲಸ ಜಾಸ್ತಿ ಇತ್ತು ಅನಿಸುತ್ತೆ, ಅದಕ್ಕೆ ರಾತ್ರಿ ಟಾಯ್ಲೆಟ್‌ಗೆ ಒಬ್ಬನೇ ಹೋಗಿಬಂದೆ ನಿಮ್ಮನ್ನು ಎಬ್ಬಿಸಲಿಲ್ಲ” ಎಂದರು. ಅವರು ಆ ಹೊತ್ತಲ್ಲಿ ಸಹಾಯವಿಲ್ಲದೆ ಒಬ್ಬರೆ ನಡೆಯುವುದು ಕಷ್ಟದ ಕೆಲಸವಾಗಿತ್ತು. ಆ ಕಾರಣಕ್ಕಾಗಿಯೇ ನಾನು ಅಲ್ಲಿಗೆ ಹೋಗಿದ್ದರೂ ಕೂಡ, ದಣಿದುಕೊಂಡ ಬಂದಿದ್ದಾನೆ ಎಂದು ತಿಳಿದು, ತಾವೇ ನಡೆದು ಶೌಚಕ್ಕೆ ಹೋಗಿಬಂದಿದ್ದರು! ಎಲ್ಲರನ್ನೂ ಅವರು ಅತ್ಯಂತ ಮಾನವೀಯ ದೃಷ್ಟಿಯಿಂದ ನೋಡುತ್ತಿದ್ದರು ಅನ್ನುವುದಕ್ಕೆ ಇದು ಉದಾಹರಣೆ. ಆದರೆ ಅಂದು ರಾತ್ರಿ ನಾನು ಎದ್ದು ಅವರಿಗೆ ಸಹಾಯ ಮಾಡಲಿಲ್ಲ ಎನ್ನುವುದು ಇಂದಿಗೂ ಕಾಡುತ್ತದೆ.

ನಮಗೆಲ್ಲಾ ತಿಳಿದಿರುವಂತೆ ತಾತ ನಿತ್ಯ ಐದು ದಿನಪತ್ರಿಕೆಗಳನ್ನು ತಪ್ಪದೇ ಓದುತ್ತಿದ್ದರು. ಆಸ್ಪತ್ರೆಯಲ್ಲಿ ಇದ್ದಾಗಲೂ ಸಹ ನಮ್ಮಲ್ಲಿ ಕೇಳಿ ಪತ್ರಿಕೆಗಳನ್ನು ತರಿಸಿಕೊಳ್ಳುತ್ತಿದ್ದರು. ಅಲ್ಲದೆ ಅವರೊಡನೆ ಇರುವವರನ್ನು ಒದುವಂತೆ ಒತ್ತಾಯಿಸುತ್ತಿದ್ದರು. ಓದಿನ ನಂತರ ಚರ್ಚೆ ಮಾಡುತ್ತಿದ್ದರು. ಹಲವು ಬಾರಿ ಗಂಭೀರವಾದ ಸೈದ್ಧಾಂತಿಕ ಚರ್ಚೆಯನ್ನು ನಡೆಸುತ್ತಿದ್ದರು. ತಾವು ಒಪ್ಪದ ವಿಚಾರವನ್ನು ಸೂಕ್ಷ್ಮವಾಗಿ ತಿಳಿಸಿ ಅದಕ್ಕೆ ಪರ್ಯಾಯ ವಿಚಾರವನ್ನು ಮುಂದಿಡುತ್ತಿದ್ದರು. ಇಂತಹ ಅಪರೂಪದ ಸ್ಫೂರ್ತಿಯ ಚಿಲುಮೆಯ ಜೊತೆ ಹೋರಾಟಗಳಲ್ಲಿ ಭಾಗಿಯಾಗಿದ್ದು, ಅವರ ಜೊತೆ ಕೆಲವು ದಿನಗಳು ಕಳೆದದ್ದು ನಿಜಕ್ಕು ನಮ್ಮಂಥವರ ಭಾಗ್ಯವೇ ಹೌದು. ಕೊನೆಯವರೆಗೂ ನಿಜಕ್ಕೂ ಸ್ಫೂರ್ತಿಯಿಂದ ಬದುಕಿದ್ದವರು ಅವರು. ಅವರು ಮುದಕರು ಆಗಲೇ ಇಲ್ಲ 103 ವರ್ಷದ ಯುವಕರಾಗಿಯೇ ದೈಹಿಕವಾಗಿ ನಮ್ಮಿಂದ ಅಗಲಿದ್ದಾರೆ. ಬದುಕಿದರೆ ನಿಮ್ಮಂಥೆ ಬದುಕಬೇಕು. ಶ್ರದ್ಧಾಂಜಲಿಗಳು ತಾತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೇಡಂ ದಯವಿಟ್ಟು ನನಗೆ ಒಂದು ಮಾಹಿತಿ ಬೇಕಿದೆ ಅದೇನು ಅಂದರೆ. ಇಂದಿರಾ ಗಾಂಧಿ ಅವರ ಕುಟುಂಬದ ಜಾತಿ ಅವರ ಧರ್ಮ ಅವರು ಎಲ್ಲಿಂದ ವಲಸೆ ಬಂದಿದ್ದು. ಅವರಿಗೆ ಗಾಂಧಿ ಅನ್ನೋ ಮನೆತನ ಹೇಗಾಯಿತು ಮತ್ತು ಅವರು ಭಾರತ ದೇಶದ ಸದಸ್ಯತ್ವ ಪಡೆದಿದ್ದು ಹೇಗೆ ದಯಮಾಡಿ ನನಗೆ ಈ ಎಲ್ಲಾ ಮಾಹಿತಿ ಬೇಕಿದೆ ದಯವಿಟ್ಟು ಆದಷ್ಟು ಬೇಗ ನಿಮ್ಮ ಮಾಹಿತಿಗಾಗಿ ಕಾದಿರುತ್ತೇನೆ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...