Homeಕರ್ನಾಟಕಎಚ್ ಎಸ್ ದೊರೆಸ್ವಾಮಿ; ಜೇಬಲ್ಲೇ ಪರಿಹಾರ ಇಟ್ಟುಕೊಳ್ಳುತ್ತಿದ್ದ ಎನರ್ಜಿ ಬೂಸ್ಟರ್

ಎಚ್ ಎಸ್ ದೊರೆಸ್ವಾಮಿ; ಜೇಬಲ್ಲೇ ಪರಿಹಾರ ಇಟ್ಟುಕೊಳ್ಳುತ್ತಿದ್ದ ಎನರ್ಜಿ ಬೂಸ್ಟರ್

- Advertisement -
- Advertisement -

“ಛೇ ಏನೂ ಮಾಡೋಕೆ ಆಗಲ್ಲ ಬಿಡು ಹೋಗ್ಲಿ” ಈ ವಾಕ್ಯವನ್ನು ತಾತನ ಬಾಯಲ್ಲಿ ಯಾರೂ ಕೇಳಿರಲಿಕ್ಕೆ ಸಾಧ್ಯವಿಲ್ಲ. ಅವರು ಎಂದೂ ನಿರಾಶವಾದಿಯಾಗಿದ್ದವರಲ್ಲ. ತಾತನ ಭೇಟಿ ಮಾಡಿದ ಪ್ರತಿ ಬಾರಿಯೂ ಎನರ್ಜಿ ಡಬಲ್ ಆಗುತ್ತಿದ್ದದ್ದು ನಿಜ. 103 ವಯಸ್ಸನ್ನು ದಾಟಿದ ವ್ಯಕ್ತಿಯೊಬ್ಬರು ಎಂಥ ಕೆಟ್ಟ ಸಂದರ್ಭದಲ್ಲಿಯೂ ನಿರಾಸರಾಗಾದೆ ಸ್ಫೂರ್ತಿಯ ಚಿಲುಮೆಯಂತೆ ಇರುವುದು ನಿಜಕ್ಕೂ ಅಚ್ಚರಿಯೇ ಹೌದು. ಸಂಘಟನೆಯ ಯಾವುದೇ ವ್ಯಕ್ತಿ ಅವರನ್ನು ಭೇಟಿ ಮಾಡಿದಾಗ “ಏನ್ ನಡೀತಿದೆ”? ಆ ಹೋರಾಟ ಏನ್ ಆಗ್ತಿದೆ, ಇದೇನಾಯಿತು, ನೋಡಿ ಹೀಗೆ ಮಾಡಿ, ಇಲ್ಲ ಅಂದ್ರೆ ಹಾಗೆ ಮಾಡಿ ಎನ್ನುತ್ತಾ ಸದಾ ಪರಿಹಾರವನ್ನು ಹೇಳುತ್ತಿದ್ದರೆ ಹೊರತು. ಕೇವಲ ದೂರುತ್ತಾ ಎಂದೂ ಕೂತವರಲ್ಲ.

ಫುಲ್‌ಟೈಮರ್‌ಗಳಿಗೆ ಫುಲ್‍ಖುಷ್

ಸಂಘಟನೆಯಲ್ಲಿ ಫುಲ್‌ಟೈಮರ್ ಆಗಿ ಕೆಲಸ ಮಾಡುತ್ತಿರುವ ಹಲವರು ಇದ್ದೇವೆ. ನಮ್ಮ ಬಗ್ಗೆ, ಅದೆಷ್ಟೋ ಹಿರಿಯರು, ಸಮಾಜದಲ್ಲಿ ಹೆಸರುವಾಸಿಯಾದವರು, ಸಾಹಿತಿಗಳು, ಈ ಎಲ್ಲರೂ ಸರ್ವೇ ಸಾಮಾನ್ಯವಾಗಿ ಹೇಳುವ ಮಾತೆಂದರೆ – “ಇದೆಲ್ಲಾ ಎಷ್ಟು ದಿನ ಅಂತ ಮಾಡ್ತೀರ, ನಿಮ್ಮ ಜೀವನ ನೀವು ನೋಡ್ಕಳಿ” ಎಂದು. ಆದರೆ ತಾತನ ಜೊತೆ ಮೊದಲ ಬಾರಿಗೆ ಒಂದು ದಿನ ಕಳೆಯುವ ಸಂದರ್ಭ ಬಂದಾಗ “ನೀನು ಏನು ಕೆಲಸ ಮಾಡುತ್ತೀಯಪ್ಪ” ಎಂದು ಕೇಳಿದಾಗ, ಅಂಜಿಕೆಯಿಂದಲೇ ಸಂಘಟನೆಯಲ್ಲೇ ಫುಲ್‌ಟೈಮರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಉತ್ತರಿಸಿದೆ. ಅದಕ್ಕೆ ಅವರು ಬಹಳ ಖುಷಿ ವ್ಯಕ್ತಪಡಿಸಿ, ಊರು, ವಿದ್ಯಾಭ್ಯಾಸ ಎಲ್ಲವನ್ನೂ ವಿಚಾರಿಸಿಕೊಂಡು ಹಲವಾರು ಸಲಹೆಗಳನ್ನು ನೀಡಿದರು. “ನಿಮ್ಮ ಜೀವನ ನೋಡ್ಕಳಿ” ಎನ್ನುವುದಕ್ಕೆ ವಿರುದ್ಧವಾಗಿ ತಾತ “ಸಂಘಟನೆಯಲ್ಲಿ ಕೆಲಸ ಮಾಡುವುದು ಸಾರ್ಥಕತೆಯ ಜೀವನ ನಡೆಸಿದಂತೆ ಎಂದು ನನ್ನಲ್ಲಿ ಹೆಮ್ಮೆ ಮೂಡುವಂತೆ ಮಾಡಿದವರು. ಅಲ್ಲದೆ ಸಮಾಜ ಸೇವೆ ಮಾಡುವುದೆಂದರೆ ಸ್ವಯಂ ಪ್ರೇರಣೆಯಿಂದ ಬಡತನವನ್ನು ಅಪ್ಪಿಕೊಳ್ಳುವುದು ಎಂದು ಯಾವಾಗಲೂ ಹೇಳುತ್ತಾ ನಮ್ಮನ್ನು ಗಟ್ಟಿ ಮಾಡುತ್ತಿದ್ದರು. ಕರಾಳ ಕೃಷಿ ಕಾಯ್ದೆ ವಿರೋಧಿಸಿ ನವೆಂಬರ್ 2020ರಲ್ಲಿ ಪ್ರತಿಭಟನೆಯ ಮಾಹಿತಿಯನ್ನು ಆಸ್ಪತ್ರೆಯಿಂದಲೇ ಮಾಹಿತಿ ಪಡೆಯುತ್ತಿದ್ದ ಅವರು ಕಾರ್ಯಕರ್ತರ ಬಂಧನವಾಗಿದೆ ಎಂದು ತಿಳಿದಮೇಲೆ “ಹೌದ, ಒಳ್ಳೇದು ಇದರಿಂದ ಹುಡುಗರೆಲ್ಲಾ ಗಟ್ಟಿಯಾಗುತ್ತಾರೆ, ಒಂದೆರೆಡು ಲಾಠಿ ಏಟು ಬಿದ್ದರೆ ರಾಜಕೀಯವಾಗಿ ಮತ್ತಷ್ಟು ಗಟ್ಟಿಯಾಗುತ್ತಾರೆ” ಎಂದು ಹೇಳಿ ನಮ್ಮಲ್ಲಿ ಉತ್ಸಾಹವನ್ನು ಇಮ್ಮಡಿಗೊಳಿಸುತ್ತಿದ್ದರು.

ದೊರೆಸ್ವಾಮಿ, doreswamy

ಕಾರ್ಯಕರ್ತರ ಶ್ರಮವನ್ನು ಗುರುತಿಸಿ ಗೌರವಿಸುವ ಅಪರೂಪದ ವ್ಯಕ್ತಿ

ನಾಯಕರು ಎಂದರೆ ಕಾರ್ಯಕರ್ತರಿಗಿಂತ ಭಿನ್ನ ಮತ್ತು ಅವರಿಗಿಂತ ಮೇಲೆ ಎನ್ನುವ ಧೋರಣೆ ಈಗ ಸಾಮಾನ್ಯವಾಗಿರುವುದು ದುರಂತ. ದೊರೆಸ್ವಾಮಿ ಅವರು ಆಸ್ಪತ್ರೆಯಲ್ಲಿ ದಾಖಲಾಗಿ ಮನೆಗೆ ಬಂದ ಸಂದರ್ಭದಲ್ಲಿ, ಅವರ ಮನೆಯಲ್ಲಿ ಉಳಿದುಕೊಂಡು ರಾತ್ರಿ ಶೌಚಕ್ಕೆ ಹೋಗುವಾಗ ಸಹಾಯ ಮಾಡಲು ನನಗೆ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ತಿಳಿಸಿದ್ದರು. ಅಂತೆಯೇ ಮೊದಲ ಬಾರಿಗೆ ತಾತನ ಮನೆಗೆ ಹೋದ ದಿನ, ನಾನು ಅನ್ನಭಾಗ್ಯ ಲೋಡಿಂಗ್ ಅನ್‌ಲೋಡಿಂಗ್ ಕಾರ್ಮಿಕರ ಪ್ರತಿಭಟನೆಯ ಕೆಲಸ ಮುಗಿಸಿಕೊಂಡು ಹೋಗಿದ್ದನ್ನು ತಾತ ತಿಳಿದುಕೊಂಡರು. ರಾತ್ರಿ ಅಲ್ಲಿಯೇ ಮಲಗಿ ಬೆಳಿಗ್ಗೆ ಸ್ವಲ್ಪ ತಡವಾಗಿ ಎದ್ದೆ. ತಾತ ಅದಾಗಲೇ ಪೇಪರ್ ಓದುತ್ತಾ ಕುಳಿತಿದ್ದರು. ನಾನು ಎಚ್ಚರವಾಗಿದ್ದು ಗಮನಿಸಿ “ನೀವು ತುಂಬಾ ಸುಸ್ತಾಗಿದ್ರಿ ಅನಿಸುತ್ತೆ, ಅದಕ್ಕೆ ಎಬ್ಬಿಸಲಿಲ್ಲ. ಮಲಗಿದ ತಕ್ಷಣ ಗೊರಕೆ ಹೊಡಿಯೋಕೆ ಶುರು ಮಾಡಿದ್ರಿ, ಪ್ರತಿಭಟನೆಯ ಕೆಲಸ ಜಾಸ್ತಿ ಇತ್ತು ಅನಿಸುತ್ತೆ, ಅದಕ್ಕೆ ರಾತ್ರಿ ಟಾಯ್ಲೆಟ್‌ಗೆ ಒಬ್ಬನೇ ಹೋಗಿಬಂದೆ ನಿಮ್ಮನ್ನು ಎಬ್ಬಿಸಲಿಲ್ಲ” ಎಂದರು. ಅವರು ಆ ಹೊತ್ತಲ್ಲಿ ಸಹಾಯವಿಲ್ಲದೆ ಒಬ್ಬರೆ ನಡೆಯುವುದು ಕಷ್ಟದ ಕೆಲಸವಾಗಿತ್ತು. ಆ ಕಾರಣಕ್ಕಾಗಿಯೇ ನಾನು ಅಲ್ಲಿಗೆ ಹೋಗಿದ್ದರೂ ಕೂಡ, ದಣಿದುಕೊಂಡ ಬಂದಿದ್ದಾನೆ ಎಂದು ತಿಳಿದು, ತಾವೇ ನಡೆದು ಶೌಚಕ್ಕೆ ಹೋಗಿಬಂದಿದ್ದರು! ಎಲ್ಲರನ್ನೂ ಅವರು ಅತ್ಯಂತ ಮಾನವೀಯ ದೃಷ್ಟಿಯಿಂದ ನೋಡುತ್ತಿದ್ದರು ಅನ್ನುವುದಕ್ಕೆ ಇದು ಉದಾಹರಣೆ. ಆದರೆ ಅಂದು ರಾತ್ರಿ ನಾನು ಎದ್ದು ಅವರಿಗೆ ಸಹಾಯ ಮಾಡಲಿಲ್ಲ ಎನ್ನುವುದು ಇಂದಿಗೂ ಕಾಡುತ್ತದೆ.

ನಮಗೆಲ್ಲಾ ತಿಳಿದಿರುವಂತೆ ತಾತ ನಿತ್ಯ ಐದು ದಿನಪತ್ರಿಕೆಗಳನ್ನು ತಪ್ಪದೇ ಓದುತ್ತಿದ್ದರು. ಆಸ್ಪತ್ರೆಯಲ್ಲಿ ಇದ್ದಾಗಲೂ ಸಹ ನಮ್ಮಲ್ಲಿ ಕೇಳಿ ಪತ್ರಿಕೆಗಳನ್ನು ತರಿಸಿಕೊಳ್ಳುತ್ತಿದ್ದರು. ಅಲ್ಲದೆ ಅವರೊಡನೆ ಇರುವವರನ್ನು ಒದುವಂತೆ ಒತ್ತಾಯಿಸುತ್ತಿದ್ದರು. ಓದಿನ ನಂತರ ಚರ್ಚೆ ಮಾಡುತ್ತಿದ್ದರು. ಹಲವು ಬಾರಿ ಗಂಭೀರವಾದ ಸೈದ್ಧಾಂತಿಕ ಚರ್ಚೆಯನ್ನು ನಡೆಸುತ್ತಿದ್ದರು. ತಾವು ಒಪ್ಪದ ವಿಚಾರವನ್ನು ಸೂಕ್ಷ್ಮವಾಗಿ ತಿಳಿಸಿ ಅದಕ್ಕೆ ಪರ್ಯಾಯ ವಿಚಾರವನ್ನು ಮುಂದಿಡುತ್ತಿದ್ದರು. ಇಂತಹ ಅಪರೂಪದ ಸ್ಫೂರ್ತಿಯ ಚಿಲುಮೆಯ ಜೊತೆ ಹೋರಾಟಗಳಲ್ಲಿ ಭಾಗಿಯಾಗಿದ್ದು, ಅವರ ಜೊತೆ ಕೆಲವು ದಿನಗಳು ಕಳೆದದ್ದು ನಿಜಕ್ಕು ನಮ್ಮಂಥವರ ಭಾಗ್ಯವೇ ಹೌದು. ಕೊನೆಯವರೆಗೂ ನಿಜಕ್ಕೂ ಸ್ಫೂರ್ತಿಯಿಂದ ಬದುಕಿದ್ದವರು ಅವರು. ಅವರು ಮುದಕರು ಆಗಲೇ ಇಲ್ಲ 103 ವರ್ಷದ ಯುವಕರಾಗಿಯೇ ದೈಹಿಕವಾಗಿ ನಮ್ಮಿಂದ ಅಗಲಿದ್ದಾರೆ. ಬದುಕಿದರೆ ನಿಮ್ಮಂಥೆ ಬದುಕಬೇಕು. ಶ್ರದ್ಧಾಂಜಲಿಗಳು ತಾತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೇಡಂ ದಯವಿಟ್ಟು ನನಗೆ ಒಂದು ಮಾಹಿತಿ ಬೇಕಿದೆ ಅದೇನು ಅಂದರೆ. ಇಂದಿರಾ ಗಾಂಧಿ ಅವರ ಕುಟುಂಬದ ಜಾತಿ ಅವರ ಧರ್ಮ ಅವರು ಎಲ್ಲಿಂದ ವಲಸೆ ಬಂದಿದ್ದು. ಅವರಿಗೆ ಗಾಂಧಿ ಅನ್ನೋ ಮನೆತನ ಹೇಗಾಯಿತು ಮತ್ತು ಅವರು ಭಾರತ ದೇಶದ ಸದಸ್ಯತ್ವ ಪಡೆದಿದ್ದು ಹೇಗೆ ದಯಮಾಡಿ ನನಗೆ ಈ ಎಲ್ಲಾ ಮಾಹಿತಿ ಬೇಕಿದೆ ದಯವಿಟ್ಟು ಆದಷ್ಟು ಬೇಗ ನಿಮ್ಮ ಮಾಹಿತಿಗಾಗಿ ಕಾದಿರುತ್ತೇನೆ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...