Homeಕರ್ನಾಟಕಶ್ರದ್ಧಾಂಜಲಿ; ಶಾಶ್ವತ ಮೌನಕ್ಕೆ ಜಾರಿದ ನಿಷ್ಠುರ ಮಾತಿನ ಮಾದೇಗೌಡರು

ಶ್ರದ್ಧಾಂಜಲಿ; ಶಾಶ್ವತ ಮೌನಕ್ಕೆ ಜಾರಿದ ನಿಷ್ಠುರ ಮಾತಿನ ಮಾದೇಗೌಡರು

- Advertisement -
- Advertisement -

ಜಿ. ಮಾದೇಗೌಡರು ಗಾಂಧಿವಾದಿ. ಕೆಲವರಿಗೆ ’ಇವನ್ಯಾವ ಸೀಮೆ ಗಾಂಧಿವಾದಿ’ ಅನ್ನಿಸುತ್ತಿದ್ದುದೂ ಉಂಟು. ಯಾಕೆಂದರೆ ಅವರ ಅಸಹನೆಯ ಸಿಟ್ಟಿನ ಮುಖ, ತೀಕ್ಷ್ಣವಾದ ಕಣ್ಣುಗಳು ಮತ್ತು ಈ ರೂಪಕ್ಕೆ ಮೆರಗು ಕೊಟ್ಟಂತಹ ಅವರ ನಿಷ್ಠುರವಾದ ಮಾತುಗಳು ಹಾಗೂ ಆ ಮಾತಿನಲ್ಲಿ ಅಡಗಿದ್ದ ಸತ್ಯ ಸಂಗತಿಗಳು. ಹೀಗೆ, ಗಾಂಧಿವಾದಿಗಳು ಹೀಗೂ ಇರಬಲ್ಲರು ಎಂದು ತೋರಿಸಿಕೊಟ್ಟವರು ಮಾದೇಗೌಡರು. ಮಂಡ್ಯದ ಮಣ್ಣು ರೂಪಿಸಿದ ಅಪರೂಪದ ರಾಜಕಾರಣಿಗಳ ಪೈಕಿ ಮಾದೇಗೌಡರ ವರಸೆಯೇ ಬೇರೆ. ಇತರರನ್ನು ಮೆಚ್ಚಿಸುವುದಕ್ಕಾಗಿ ಎಂದೂ ಮಾತನಾಡಿದವರಲ್ಲ. ಹಾಸ್ಯ ಅವರಿಗೆ ಹಿಡಿಸುತ್ತಿರಲಿಲ್ಲ. ಆದರೆ ಅವರ ಕೆಲವು ಮಾತುಗಳು ಹಾಸ್ಯವಾಗಿ ಪರಿವರ್ತನೆಯಾಗುತ್ತಿದ್ದವು. ಉದಾಹರಣೆಗೆ ಅವರೇ ಹೇಳಿದಂತೆ, ’ಈ ಎಸ್.ಎಂ. ಕೃಷ್ಣ ಮತ್ತೆ ಅಂಬರೀಶ್ ರಾಜಕಾರಣದಲ್ಲಿ ಯಾವ ಗೇಮೆಯನ್ನು ಮಾಡದವರು. ಪ್ರತಿಭಟನೆ, ಸತ್ಯಾಗ್ರಹ, ಕಾಲ್ನಡಿಗೆ ಇಂತಹ ದೈಹಿಕ ಶ್ರಮದಿಂದ ದೂರವುಳಿದವರು. ಆದರೂ ಅವುರು ರಾಜಕಾರಣದಲ್ಲಿ ಏನೇನೊ ಆದ್ರು. ಒಬ್ಬ ಮೋಜುಗಾರ ಇನ್ನೊಬ್ಬ ಸೊಗಸುಗಾರ. ಈ ಹಾಳುಡುಗ್ರು ಅವುರು ಬಂದಾಗ ನ್ವಣ ಮುತ್ತಿದಂಗೆ ಮುತ್ತಿಗತವೆ. ಇದಕೇನೇಳನ’ ಎಂದಿದ್ದರು.

ಕಾವೇರಿ ವಿಷಯ ಅವರ ಜೀವನಾಡಿಯಾಗಿತ್ತು. ಕಾವೇರಿ ಸಮಸ್ಯೆ ಭುಗಿಲೇಳುವುದಕ್ಕೂ ಮೊದಲೆ ಹಾಜರಾಗಿ ಚಳವಳಿಯನ್ನ ನಿಯಂತ್ರಿಸುತ್ತಿದ್ದರು. ಅದೂ ಗಾಂಧಿ ಮಾರ್ಗದಲ್ಲಿ. ಒಮ್ಮೆ ಈ ಚಳವಳಿಯೊಳಕ್ಕೆ ಕೇಂದ್ರ ಸಚಿವರಾಗಿದ್ದ ಅಂಬರೀಶ್ ರಾಜಿನಾಮೆಯಿತ್ತು ಬಂದು ಸೇರಿಕೊಂಡರು. ಇದು ಮಾದೇಗೌಡರಿಗೆ
ಸಿಟ್ಟು ತರಿಸಿ ಗದರಿಸಿ ಕಳಿಸಿದ್ದರು. ಇಷ್ಟಾದರೂ ಅಂಬಿ ಮತ್ತು ಮಾದೇಗೌಡರ ನಡುವೆ ಒಳ್ಳೆ ಸಂಬಂಧವಿತ್ತು. ಒಮ್ಮೆ ಗೌಡರು ಅಂಬರೀಶ್‌ರನ್ನು ಕುರಿತು “ಲೇ ಅಂಬರೀಶ ಒಳ್ಳೆ ಬುದ್ದಿನೆ ಕಲಿಲಿಲ್ಲವಲ್ಲೊ ನೀನು” ಅಂದರು. ಅದಕ್ಕೆ ಅಂಬಿ “ಲೇ ಮುದುಕ ಮ್ಯಟ್ರೆ ಹಿಸಿಗಿ ಸಾಯಿಸಿಬುಡ್ತಿನಿ ಸುಮ್ಮನಿರು” ಎಂದರು. ಎಲ್ಲರ ಸ್ಥಾನಮಾನ ಸೊಕ್ಕನ್ನು ಮುರಿದು ತನ್ನ ವ್ಯಕ್ತಿತ್ವಕ್ಕೆ ಒಗ್ಗಿಸಿಕೊಳ್ಳುವ ಅಂಬರೀಶ್ ತನ್ನ ಇಂತಹ ಗುಣಕ್ಕೆ ಒಗ್ಗಿಕೊಳ್ಳದವರ ಬಳಿ ಸುಳಿಯುತ್ತಿರಲಿಲ್ಲ. ಉದಾಹರಣೆ ದೇವೇಗೌಡರು, ರಾಮಕೃಷ್ಣ ಹೆಗಡೆ, ಬೊಮ್ಮಾಯಿ ಇಂತಹವರ ಬಳಿ ಐದು ನಿಮಿಷವೂ ಇರುತ್ತಿರಲಿಲ್ಲ. ಆದರೆ ಇಂತವರ ಸಾಲಿನ ಮಾದೇಗೌಡರನ್ನ ಪಳಗಿಸಿದ್ದರು. ಕಾವೇರಿ ವಿಷಯದಲ್ಲಿ ಇಬ್ಬರ ಅಭಿಪ್ರಾಯಗಳು ಅವರ ಮನೋಗತಕ್ಕೆ ತಕ್ಕಂತಿದ್ದವು. ಕೆರೆಕಟ್ಟೆಯ ವಿಷಯದಲ್ಲಿ ವಾಟರ್ ಪಾಲಿಸಿ ಎಂಬುದೊಂದಿದೆ. ಅಚ್ಚುಕಟ್ಟಿನ ಕಟ್ಟಕಡೆ ರೈತನಿಗೂ ನೀರು ತಲುಪಬೇಕು.

ಆದರೆ ಮಾದೇಗೌಡರು “ಡ್ಯಾಂ ನಮ್ಮದು, ಅದರ ಗೇಟಿನ ಕೀ ನನ್ನ ಬಳಿ ಇರಬೇಕು. ಬೇಕಾದ್ರೆ ನೀರು ಕೊಟ್ಟೆ ಇಲ್ದಿದ್ರೆ ಇಲ್ಲ ಎನ್ನುವಂತೆ ಮಾತನಾಡುತ್ತಿದ್ದರು. ಅದೇ ಅಂಬರೀಶ್ “ನನ್ನ ಬಕೀಟಲ್ಲಿ ನೀರಿದ್ರೆ ಯರಡು ಲೋಟ ಕೊಡ್ತಿನಪ್ಪ ನೀರೆ ಇಲ್ದಿದ್ರೆ ಎಲ್ಲಿಕೊಡ್ಲಿ” ಎನ್ನುತ್ತಿದ್ದರು.

ಮಾದೇಗೌಡರ ಚಳವಳಿ ಕಾವೇರಿಗೆ ಮಾತ್ರ ಸೀಮಿತವಾಗಿತ್ತು. ಒಂದು ಬಾರಿ ಕಾವೇರಿಗಾಗಿ ರೈತರು ನಡೆಸುತ್ತಿರುವ ಪ್ರತಿಭಟನೆ ಜಾಗಕ್ಕೆ ಬಂದರು. ಈಗಾಗಲೇ ಪ್ರತಿಭಟಿಸುತ್ತಿದ್ದ ರೈತರು “ಅಯ್ಯವ್ ಏಳಯ್ಯ ಮ್ಯಾಕೆ ನಡಿಯಯ್ಯ ಈಗ ಬಂದುಬಿಟ್ಟ. ಅಲ್ಲೋಗಿ ಸಿ.ಎಂ ಅತ್ರ ಏನೇನೊ ಕ್ಯಲಸ ಮಾಡಿಸಿಕೊಳದು ಇಲ್ಲಿ ಬಂದು ಚಳವಳಿ ಮಾಡದು” ಎಂದು ಮೂದಲಿಸಿಬಿಟ್ಟರು. ಚಳವಳಿಗೆ ನನ್ನಂಥವರ ಅಗತ್ಯವಿಲ್ಲವೇನೊ ಅಂತ ಒಂದುಕ್ಷಣ ಮಾದೇಗೌಡರಿಗೆ ಅನ್ನಿಸಿಬಿಟ್ಟಿತು. ಆದರೆ, ಗಾಂಧಿಯಿಂದ ಸ್ಫೂರ್ತಿ ಪಡೆಯುತ್ತಿದ್ದ ಅವರು ತಮ್ಮ ಹೋರಾಟಗಳನ್ನು ಕೈಬಿಟ್ಟವರಲ್ಲ. ಅವರ ಬದುಕಿನ ಬಹುದೊಡ್ಡ ಸಾಧನೆಯಾದ ಗಾಂಧಿ ಭವನ ನಿರ್ಮಾಣ ಪೂರ್ಣಗೊಂಡ ಮೇಲೆ ಅದರ ಮುಂದೆ ಕುಳಿತು, ಹಾಳಾಗುತ್ತಿರುವ ಯುವಜನತೆ, ಕುಸಿಯುತ್ತಿರುವ ಮೌಲ್ಯಗಳ ಬಗ್ಗೆ ಯೋಚಿಸುತ್ತ ನಿಷ್ಠುರವಾಗಿ ಪ್ರತಿಕ್ರಿಯಿಸುತ್ತಿದ್ದರು.

ಅಂತಹ ಒಂದು ಸಂದರ್ಭದಲ್ಲಿ ಅವರ ಸಮಕಾಲೀನ ರಾಜಕಾರಣಿಯಾದ ಹೆಚ್.ಟಿ ಕೃಷ್ಣಪ್ಪನವರ ಬಗ್ಗೆ ಅಭಿನಂದನಾ ಗ್ರಂಥ ತರುವ ಸಮಯದಲ್ಲಿ ಮಾತನಾಡಿಸಲು ಹೋಗಿದ್ದೆ. ಗಾಂಧಿ ಭವನದ ವರಾಂಡದಲ್ಲಿ ಕುಳಿತಿದ್ದ ಅವರ ಪಕ್ಕ ಕುಳಿತ ನಾನು “ಸಾರ್ ಹೆಚ್.ಟಿ ಕೃಷ್ಣಪ್ಪನವರ ಬಗ್ಗೆ ಒಂದು ಅಭಿನಂದನಾ ಗ್ರಂಥ ತರತಾಯಿದ್ದಿವಿ, ಅವರು ನಿಮ್ಮ ಸಮಕಾಲೀನರು ಮತ್ತು ಒಡನಾಡಿಯಾಗಿದ್ರು. ಅವುರ ಬಗ್ಗೆ ಹೇಳಿ ಸಾರ್” ಎಂದೆ. ಮಾದೇಗೌಡರು ಒಳಗಣ್ಣಾಗಿ “ಕೃಷ್ಣಪ್ಪ ನಾನು ತಾಲೂಕ್ ಬೋರ್ಡ್ ಚುನಾವಣೆ ಮುಖಾಂತರ ರಾಜಕೀಯಕ್ಕೆ ಬಂದೊ.. ಅವುರು ಇಲ್ಲೇ ಲಾಯರಾಗಿದ್ರು. ನಾಟಕದಲ್ಲಿ ಪಾರ್ಟು ಮಾಡತಿದ್ರು. ಪದ ಹೇಳತಿದ್ರು. ಮಾತ್ರ ವಳ್ಳೆ ಮನ್ಸ” ಎಂದವರು ತಿರುಗಿ ಮಾತನಾಡಲಿಲ್ಲ. ಈ ರೀತಿ ಕೇಳಲು ಬಂದವನು ಯಾವೂರ ದಾಸಯ್ಯ ಎಂದೂ ನೋಡಲಿಲ್ಲ. ’ಗಾಂಧಿ ಭವನ ಚನ್ನಾಗ್ಯದೆ ಸಾರ್’ ಎಂದೆ. “ಇನ್ನ ಚನ್ನಾಗಿರದು. ಇರೊ ಜಾಗದಲ್ಯಲ್ಲ. ಕಟ್ಟಿದ್ರೆ ಹೊರಗಡೆ ಜಾಗದಲ್ಲಿ ಗಾಡಿಗಳು ನಿಂತಗಳವು. ಆ ಡಿ.ಕೆ ಶಿವಕುಮಾರ ವಸಿ ಜಾಗ ವಡಕಂಡು ಅದೇನೊ ಕಟ್ಟಿಗಂಡ. ಬರಿ ಇಂತ ಕ್ಯಲಸಗಳಯ ಅವುರವು” ಎಂದು ಸಿಟ್ಟಾದರು. ಎದ್ದು ಬಂದೆ ಆ ನಂತರ ಹೆಚ್.ಟಿ ಕೃಷ್ಣಪ್ಪನವರ ಬಳಿ ಬಂದು “ಸಾರ್ ಮಾದೇಗೌಡ್ರು ಅದ್ಭುತ ಸಾರ್. ನಿಮ್ಮ ಇಡೀ ಜೀವನನ ಐದು ಪದದಲ್ಲಿ ಹೇಳಿ ಮುಗಿಸಿದ್ರು” ಅಂದೆ. ನಗಾಡಿದ ಅವರು “ಆಯ್ತು ಅಷ್ಟನೆ ಹಾಕಿ” ಎಂದರು. ಹಾಗೇ ಮಾಡಿದೆ. ಮಾದೇಗೌಡರ ಬಳಿ ಅನವಶ್ಯಕ ಪುಲಾರಕ್ಕೆ ಅವಕಾಶವಿರಲಿಲ್ಲ.

ವಯಸ್ಸಾದ ವ್ಯಕ್ತಿಯ ಮಾತಿನಲ್ಲಿ ಮೊದಲಿನ ನಿಷ್ಠುರತೆ ಸಿಟ್ಟು ಸೆಡವುಗಳಿರುವುದಿಲ್ಲ ಎನ್ನುತ್ತಾರೆ. ಆದರೆ ಮಾದೇಗೌಡರ ವಿಷಯದಲ್ಲಿ ಇವು ಸುಳ್ಳಾಗಿದ್ದವು. ಬದುಕಿನ ಕಟ್ಟಕಡೆಯವರೆಗೂ ಅವರು ಕಡುಪಾಗೇ ಇದ್ದರು. ಜಿಲ್ಲಾಧಿಕಾರಿಯಿಂದ ಹಿಡಿದು ಯಾರಿಗೂ ಕೇರ್ ಮಾಡದ ಮಾದೇಗೌಡರು, ಮೈಗಳ್ಳ ಅಧಿಕಾರಿಗಳಿಗೆ ಮೈಚಳಿ ಬಿಡಿಸುತ್ತಿದ್ದರು. ಕಲೆ, ಸಾಹಿತ್ಯ ಸಂಗೀತದ ಅಭಿರುಚಿಯಿಂದ ಕೆ.ವಿ ಶಂಕರೇಗೌಡರು ಜಿಲ್ಲೆಗೆ ಕೀರ್ತಿ ತಂದರೆ ಮಾದೇಗೌಡರು ತಮ್ಮ ವಿಶಿಷ್ಟ ರೀತಿಯ ರಾಜಕಾರಣದ ವರಸೆಯಿಂದ ಮಂಡ್ಯ ಜಿಲ್ಲೆಗೆ ಹೆಸರು ತಂದಿದ್ದರು. ತುಂಬ ಶಿಸ್ತಿನಿಂದ ಶಿಕ್ಷಣ ಸಂಸ್ಥೆಗಳನ್ನು ನಡೆಸಿ ಮಗನಿಗೆ ವಹಿಸಿದ್ದರು. ಮಗ ಚಿರಂಜೀವಿ ಸಿಂಗ್ ತರದ ಅಧಿಕಾರಿಯಾಗಬೇಕೆಂದು ಬಯಸಿದ್ದರು. ಆದರೆ ಮಗ ರಾಜಕಾರಣಕ್ಕೆ ಬಂದಾಗ ಅವರು ಸಿಡಿಮಿಡಿಗೊಂಡು “ವಳ್ಳೆ ಅಧಿಕಾರಿಯಾಗು ಅಂದ್ರೆ ಈ ಬಡೆತದ್ದು ರಾಜಕೀಯಕ್ಕೆ ಬತ್ತಲ್ಲ ಹೇಳು” ಎಂದಿದ್ದರು.

ಒಮ್ಮೆ ಲಂಕೇಶ್ ಎದುರು ಕುಳಿತಿದ್ದ ಹೆಚ್.ಎಲ್. ಕೇಶವಮೂರ್ತಿಯವರು ಮಾದೇಗೌಡರ ಆರೋಗ್ಯದ ಬಗ್ಗೆ ಮಾತನಾಡುತ್ತ “ತುಂಬಾ ಕುಡಿತರೆ ಸಾರ್ ಎದುರಿಗಿದ್ದ ಬಾಟ್ಳಿ ಖಾಲಿ ಮಾಡಿದ ಮ್ಯಾಲೆ ಮೇಕ್ಕೇಳದು” ಎಂದರು. ತುಂಬಾ ಒಳ್ಳೆದು, ಮಾದೇಗೌಡ್ರು ಈ ವಯಸ್ಸಲ್ಲಿ ಅಷ್ಟು ಕುಡಿತರೆ ಅಂದ್ರೆ ಹೆಮ್ಮೆ ಪಡಬೇಕು ನಾವು ಎಂದು ನಕ್ಕರು. ಆದರೆ, ಮಾದೇಗೌಡರು ತುಂಬು ಜೀವನ ನಡೆಸಿ ಶಿಕ್ಷಣ ಸಂಸ್ಥೆ, ಗಾಂಧಿ ಭವನ ಮತ್ತು ಚಳವಳಿಯನ್ನು ಬಿಟ್ಟು ಹೋಗಿದ್ದಾರೆ. ಸದ್ಯಕ್ಕೆ ಮಂಡ್ಯದಲ್ಲಿ ಅವರ ಜಾಗ ತುಂಬುವವರು ಯಾರೂ ಇಲ್ಲ. ಒಂದು ಇತಿಹಾಸ ಕೊನೆಗೊಂಡಿದೆ.

  • ಬಿ ಚಂದ್ರೇಗೌಡ

ಇದನ್ನೂ ಓದಿ: ಕೊಪ್ಪಳ: ಹಿರಿಯ ಸಾಹಿತಿ, ಜನಪರ ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...