Homeಕರ್ನಾಟಕಶ್ರದ್ಧಾಂಜಲಿ; ಶಾಶ್ವತ ಮೌನಕ್ಕೆ ಜಾರಿದ ನಿಷ್ಠುರ ಮಾತಿನ ಮಾದೇಗೌಡರು

ಶ್ರದ್ಧಾಂಜಲಿ; ಶಾಶ್ವತ ಮೌನಕ್ಕೆ ಜಾರಿದ ನಿಷ್ಠುರ ಮಾತಿನ ಮಾದೇಗೌಡರು

- Advertisement -
- Advertisement -

ಜಿ. ಮಾದೇಗೌಡರು ಗಾಂಧಿವಾದಿ. ಕೆಲವರಿಗೆ ’ಇವನ್ಯಾವ ಸೀಮೆ ಗಾಂಧಿವಾದಿ’ ಅನ್ನಿಸುತ್ತಿದ್ದುದೂ ಉಂಟು. ಯಾಕೆಂದರೆ ಅವರ ಅಸಹನೆಯ ಸಿಟ್ಟಿನ ಮುಖ, ತೀಕ್ಷ್ಣವಾದ ಕಣ್ಣುಗಳು ಮತ್ತು ಈ ರೂಪಕ್ಕೆ ಮೆರಗು ಕೊಟ್ಟಂತಹ ಅವರ ನಿಷ್ಠುರವಾದ ಮಾತುಗಳು ಹಾಗೂ ಆ ಮಾತಿನಲ್ಲಿ ಅಡಗಿದ್ದ ಸತ್ಯ ಸಂಗತಿಗಳು. ಹೀಗೆ, ಗಾಂಧಿವಾದಿಗಳು ಹೀಗೂ ಇರಬಲ್ಲರು ಎಂದು ತೋರಿಸಿಕೊಟ್ಟವರು ಮಾದೇಗೌಡರು. ಮಂಡ್ಯದ ಮಣ್ಣು ರೂಪಿಸಿದ ಅಪರೂಪದ ರಾಜಕಾರಣಿಗಳ ಪೈಕಿ ಮಾದೇಗೌಡರ ವರಸೆಯೇ ಬೇರೆ. ಇತರರನ್ನು ಮೆಚ್ಚಿಸುವುದಕ್ಕಾಗಿ ಎಂದೂ ಮಾತನಾಡಿದವರಲ್ಲ. ಹಾಸ್ಯ ಅವರಿಗೆ ಹಿಡಿಸುತ್ತಿರಲಿಲ್ಲ. ಆದರೆ ಅವರ ಕೆಲವು ಮಾತುಗಳು ಹಾಸ್ಯವಾಗಿ ಪರಿವರ್ತನೆಯಾಗುತ್ತಿದ್ದವು. ಉದಾಹರಣೆಗೆ ಅವರೇ ಹೇಳಿದಂತೆ, ’ಈ ಎಸ್.ಎಂ. ಕೃಷ್ಣ ಮತ್ತೆ ಅಂಬರೀಶ್ ರಾಜಕಾರಣದಲ್ಲಿ ಯಾವ ಗೇಮೆಯನ್ನು ಮಾಡದವರು. ಪ್ರತಿಭಟನೆ, ಸತ್ಯಾಗ್ರಹ, ಕಾಲ್ನಡಿಗೆ ಇಂತಹ ದೈಹಿಕ ಶ್ರಮದಿಂದ ದೂರವುಳಿದವರು. ಆದರೂ ಅವುರು ರಾಜಕಾರಣದಲ್ಲಿ ಏನೇನೊ ಆದ್ರು. ಒಬ್ಬ ಮೋಜುಗಾರ ಇನ್ನೊಬ್ಬ ಸೊಗಸುಗಾರ. ಈ ಹಾಳುಡುಗ್ರು ಅವುರು ಬಂದಾಗ ನ್ವಣ ಮುತ್ತಿದಂಗೆ ಮುತ್ತಿಗತವೆ. ಇದಕೇನೇಳನ’ ಎಂದಿದ್ದರು.

ಕಾವೇರಿ ವಿಷಯ ಅವರ ಜೀವನಾಡಿಯಾಗಿತ್ತು. ಕಾವೇರಿ ಸಮಸ್ಯೆ ಭುಗಿಲೇಳುವುದಕ್ಕೂ ಮೊದಲೆ ಹಾಜರಾಗಿ ಚಳವಳಿಯನ್ನ ನಿಯಂತ್ರಿಸುತ್ತಿದ್ದರು. ಅದೂ ಗಾಂಧಿ ಮಾರ್ಗದಲ್ಲಿ. ಒಮ್ಮೆ ಈ ಚಳವಳಿಯೊಳಕ್ಕೆ ಕೇಂದ್ರ ಸಚಿವರಾಗಿದ್ದ ಅಂಬರೀಶ್ ರಾಜಿನಾಮೆಯಿತ್ತು ಬಂದು ಸೇರಿಕೊಂಡರು. ಇದು ಮಾದೇಗೌಡರಿಗೆ
ಸಿಟ್ಟು ತರಿಸಿ ಗದರಿಸಿ ಕಳಿಸಿದ್ದರು. ಇಷ್ಟಾದರೂ ಅಂಬಿ ಮತ್ತು ಮಾದೇಗೌಡರ ನಡುವೆ ಒಳ್ಳೆ ಸಂಬಂಧವಿತ್ತು. ಒಮ್ಮೆ ಗೌಡರು ಅಂಬರೀಶ್‌ರನ್ನು ಕುರಿತು “ಲೇ ಅಂಬರೀಶ ಒಳ್ಳೆ ಬುದ್ದಿನೆ ಕಲಿಲಿಲ್ಲವಲ್ಲೊ ನೀನು” ಅಂದರು. ಅದಕ್ಕೆ ಅಂಬಿ “ಲೇ ಮುದುಕ ಮ್ಯಟ್ರೆ ಹಿಸಿಗಿ ಸಾಯಿಸಿಬುಡ್ತಿನಿ ಸುಮ್ಮನಿರು” ಎಂದರು. ಎಲ್ಲರ ಸ್ಥಾನಮಾನ ಸೊಕ್ಕನ್ನು ಮುರಿದು ತನ್ನ ವ್ಯಕ್ತಿತ್ವಕ್ಕೆ ಒಗ್ಗಿಸಿಕೊಳ್ಳುವ ಅಂಬರೀಶ್ ತನ್ನ ಇಂತಹ ಗುಣಕ್ಕೆ ಒಗ್ಗಿಕೊಳ್ಳದವರ ಬಳಿ ಸುಳಿಯುತ್ತಿರಲಿಲ್ಲ. ಉದಾಹರಣೆ ದೇವೇಗೌಡರು, ರಾಮಕೃಷ್ಣ ಹೆಗಡೆ, ಬೊಮ್ಮಾಯಿ ಇಂತಹವರ ಬಳಿ ಐದು ನಿಮಿಷವೂ ಇರುತ್ತಿರಲಿಲ್ಲ. ಆದರೆ ಇಂತವರ ಸಾಲಿನ ಮಾದೇಗೌಡರನ್ನ ಪಳಗಿಸಿದ್ದರು. ಕಾವೇರಿ ವಿಷಯದಲ್ಲಿ ಇಬ್ಬರ ಅಭಿಪ್ರಾಯಗಳು ಅವರ ಮನೋಗತಕ್ಕೆ ತಕ್ಕಂತಿದ್ದವು. ಕೆರೆಕಟ್ಟೆಯ ವಿಷಯದಲ್ಲಿ ವಾಟರ್ ಪಾಲಿಸಿ ಎಂಬುದೊಂದಿದೆ. ಅಚ್ಚುಕಟ್ಟಿನ ಕಟ್ಟಕಡೆ ರೈತನಿಗೂ ನೀರು ತಲುಪಬೇಕು.

ಆದರೆ ಮಾದೇಗೌಡರು “ಡ್ಯಾಂ ನಮ್ಮದು, ಅದರ ಗೇಟಿನ ಕೀ ನನ್ನ ಬಳಿ ಇರಬೇಕು. ಬೇಕಾದ್ರೆ ನೀರು ಕೊಟ್ಟೆ ಇಲ್ದಿದ್ರೆ ಇಲ್ಲ ಎನ್ನುವಂತೆ ಮಾತನಾಡುತ್ತಿದ್ದರು. ಅದೇ ಅಂಬರೀಶ್ “ನನ್ನ ಬಕೀಟಲ್ಲಿ ನೀರಿದ್ರೆ ಯರಡು ಲೋಟ ಕೊಡ್ತಿನಪ್ಪ ನೀರೆ ಇಲ್ದಿದ್ರೆ ಎಲ್ಲಿಕೊಡ್ಲಿ” ಎನ್ನುತ್ತಿದ್ದರು.

ಮಾದೇಗೌಡರ ಚಳವಳಿ ಕಾವೇರಿಗೆ ಮಾತ್ರ ಸೀಮಿತವಾಗಿತ್ತು. ಒಂದು ಬಾರಿ ಕಾವೇರಿಗಾಗಿ ರೈತರು ನಡೆಸುತ್ತಿರುವ ಪ್ರತಿಭಟನೆ ಜಾಗಕ್ಕೆ ಬಂದರು. ಈಗಾಗಲೇ ಪ್ರತಿಭಟಿಸುತ್ತಿದ್ದ ರೈತರು “ಅಯ್ಯವ್ ಏಳಯ್ಯ ಮ್ಯಾಕೆ ನಡಿಯಯ್ಯ ಈಗ ಬಂದುಬಿಟ್ಟ. ಅಲ್ಲೋಗಿ ಸಿ.ಎಂ ಅತ್ರ ಏನೇನೊ ಕ್ಯಲಸ ಮಾಡಿಸಿಕೊಳದು ಇಲ್ಲಿ ಬಂದು ಚಳವಳಿ ಮಾಡದು” ಎಂದು ಮೂದಲಿಸಿಬಿಟ್ಟರು. ಚಳವಳಿಗೆ ನನ್ನಂಥವರ ಅಗತ್ಯವಿಲ್ಲವೇನೊ ಅಂತ ಒಂದುಕ್ಷಣ ಮಾದೇಗೌಡರಿಗೆ ಅನ್ನಿಸಿಬಿಟ್ಟಿತು. ಆದರೆ, ಗಾಂಧಿಯಿಂದ ಸ್ಫೂರ್ತಿ ಪಡೆಯುತ್ತಿದ್ದ ಅವರು ತಮ್ಮ ಹೋರಾಟಗಳನ್ನು ಕೈಬಿಟ್ಟವರಲ್ಲ. ಅವರ ಬದುಕಿನ ಬಹುದೊಡ್ಡ ಸಾಧನೆಯಾದ ಗಾಂಧಿ ಭವನ ನಿರ್ಮಾಣ ಪೂರ್ಣಗೊಂಡ ಮೇಲೆ ಅದರ ಮುಂದೆ ಕುಳಿತು, ಹಾಳಾಗುತ್ತಿರುವ ಯುವಜನತೆ, ಕುಸಿಯುತ್ತಿರುವ ಮೌಲ್ಯಗಳ ಬಗ್ಗೆ ಯೋಚಿಸುತ್ತ ನಿಷ್ಠುರವಾಗಿ ಪ್ರತಿಕ್ರಿಯಿಸುತ್ತಿದ್ದರು.

ಅಂತಹ ಒಂದು ಸಂದರ್ಭದಲ್ಲಿ ಅವರ ಸಮಕಾಲೀನ ರಾಜಕಾರಣಿಯಾದ ಹೆಚ್.ಟಿ ಕೃಷ್ಣಪ್ಪನವರ ಬಗ್ಗೆ ಅಭಿನಂದನಾ ಗ್ರಂಥ ತರುವ ಸಮಯದಲ್ಲಿ ಮಾತನಾಡಿಸಲು ಹೋಗಿದ್ದೆ. ಗಾಂಧಿ ಭವನದ ವರಾಂಡದಲ್ಲಿ ಕುಳಿತಿದ್ದ ಅವರ ಪಕ್ಕ ಕುಳಿತ ನಾನು “ಸಾರ್ ಹೆಚ್.ಟಿ ಕೃಷ್ಣಪ್ಪನವರ ಬಗ್ಗೆ ಒಂದು ಅಭಿನಂದನಾ ಗ್ರಂಥ ತರತಾಯಿದ್ದಿವಿ, ಅವರು ನಿಮ್ಮ ಸಮಕಾಲೀನರು ಮತ್ತು ಒಡನಾಡಿಯಾಗಿದ್ರು. ಅವುರ ಬಗ್ಗೆ ಹೇಳಿ ಸಾರ್” ಎಂದೆ. ಮಾದೇಗೌಡರು ಒಳಗಣ್ಣಾಗಿ “ಕೃಷ್ಣಪ್ಪ ನಾನು ತಾಲೂಕ್ ಬೋರ್ಡ್ ಚುನಾವಣೆ ಮುಖಾಂತರ ರಾಜಕೀಯಕ್ಕೆ ಬಂದೊ.. ಅವುರು ಇಲ್ಲೇ ಲಾಯರಾಗಿದ್ರು. ನಾಟಕದಲ್ಲಿ ಪಾರ್ಟು ಮಾಡತಿದ್ರು. ಪದ ಹೇಳತಿದ್ರು. ಮಾತ್ರ ವಳ್ಳೆ ಮನ್ಸ” ಎಂದವರು ತಿರುಗಿ ಮಾತನಾಡಲಿಲ್ಲ. ಈ ರೀತಿ ಕೇಳಲು ಬಂದವನು ಯಾವೂರ ದಾಸಯ್ಯ ಎಂದೂ ನೋಡಲಿಲ್ಲ. ’ಗಾಂಧಿ ಭವನ ಚನ್ನಾಗ್ಯದೆ ಸಾರ್’ ಎಂದೆ. “ಇನ್ನ ಚನ್ನಾಗಿರದು. ಇರೊ ಜಾಗದಲ್ಯಲ್ಲ. ಕಟ್ಟಿದ್ರೆ ಹೊರಗಡೆ ಜಾಗದಲ್ಲಿ ಗಾಡಿಗಳು ನಿಂತಗಳವು. ಆ ಡಿ.ಕೆ ಶಿವಕುಮಾರ ವಸಿ ಜಾಗ ವಡಕಂಡು ಅದೇನೊ ಕಟ್ಟಿಗಂಡ. ಬರಿ ಇಂತ ಕ್ಯಲಸಗಳಯ ಅವುರವು” ಎಂದು ಸಿಟ್ಟಾದರು. ಎದ್ದು ಬಂದೆ ಆ ನಂತರ ಹೆಚ್.ಟಿ ಕೃಷ್ಣಪ್ಪನವರ ಬಳಿ ಬಂದು “ಸಾರ್ ಮಾದೇಗೌಡ್ರು ಅದ್ಭುತ ಸಾರ್. ನಿಮ್ಮ ಇಡೀ ಜೀವನನ ಐದು ಪದದಲ್ಲಿ ಹೇಳಿ ಮುಗಿಸಿದ್ರು” ಅಂದೆ. ನಗಾಡಿದ ಅವರು “ಆಯ್ತು ಅಷ್ಟನೆ ಹಾಕಿ” ಎಂದರು. ಹಾಗೇ ಮಾಡಿದೆ. ಮಾದೇಗೌಡರ ಬಳಿ ಅನವಶ್ಯಕ ಪುಲಾರಕ್ಕೆ ಅವಕಾಶವಿರಲಿಲ್ಲ.

ವಯಸ್ಸಾದ ವ್ಯಕ್ತಿಯ ಮಾತಿನಲ್ಲಿ ಮೊದಲಿನ ನಿಷ್ಠುರತೆ ಸಿಟ್ಟು ಸೆಡವುಗಳಿರುವುದಿಲ್ಲ ಎನ್ನುತ್ತಾರೆ. ಆದರೆ ಮಾದೇಗೌಡರ ವಿಷಯದಲ್ಲಿ ಇವು ಸುಳ್ಳಾಗಿದ್ದವು. ಬದುಕಿನ ಕಟ್ಟಕಡೆಯವರೆಗೂ ಅವರು ಕಡುಪಾಗೇ ಇದ್ದರು. ಜಿಲ್ಲಾಧಿಕಾರಿಯಿಂದ ಹಿಡಿದು ಯಾರಿಗೂ ಕೇರ್ ಮಾಡದ ಮಾದೇಗೌಡರು, ಮೈಗಳ್ಳ ಅಧಿಕಾರಿಗಳಿಗೆ ಮೈಚಳಿ ಬಿಡಿಸುತ್ತಿದ್ದರು. ಕಲೆ, ಸಾಹಿತ್ಯ ಸಂಗೀತದ ಅಭಿರುಚಿಯಿಂದ ಕೆ.ವಿ ಶಂಕರೇಗೌಡರು ಜಿಲ್ಲೆಗೆ ಕೀರ್ತಿ ತಂದರೆ ಮಾದೇಗೌಡರು ತಮ್ಮ ವಿಶಿಷ್ಟ ರೀತಿಯ ರಾಜಕಾರಣದ ವರಸೆಯಿಂದ ಮಂಡ್ಯ ಜಿಲ್ಲೆಗೆ ಹೆಸರು ತಂದಿದ್ದರು. ತುಂಬ ಶಿಸ್ತಿನಿಂದ ಶಿಕ್ಷಣ ಸಂಸ್ಥೆಗಳನ್ನು ನಡೆಸಿ ಮಗನಿಗೆ ವಹಿಸಿದ್ದರು. ಮಗ ಚಿರಂಜೀವಿ ಸಿಂಗ್ ತರದ ಅಧಿಕಾರಿಯಾಗಬೇಕೆಂದು ಬಯಸಿದ್ದರು. ಆದರೆ ಮಗ ರಾಜಕಾರಣಕ್ಕೆ ಬಂದಾಗ ಅವರು ಸಿಡಿಮಿಡಿಗೊಂಡು “ವಳ್ಳೆ ಅಧಿಕಾರಿಯಾಗು ಅಂದ್ರೆ ಈ ಬಡೆತದ್ದು ರಾಜಕೀಯಕ್ಕೆ ಬತ್ತಲ್ಲ ಹೇಳು” ಎಂದಿದ್ದರು.

ಒಮ್ಮೆ ಲಂಕೇಶ್ ಎದುರು ಕುಳಿತಿದ್ದ ಹೆಚ್.ಎಲ್. ಕೇಶವಮೂರ್ತಿಯವರು ಮಾದೇಗೌಡರ ಆರೋಗ್ಯದ ಬಗ್ಗೆ ಮಾತನಾಡುತ್ತ “ತುಂಬಾ ಕುಡಿತರೆ ಸಾರ್ ಎದುರಿಗಿದ್ದ ಬಾಟ್ಳಿ ಖಾಲಿ ಮಾಡಿದ ಮ್ಯಾಲೆ ಮೇಕ್ಕೇಳದು” ಎಂದರು. ತುಂಬಾ ಒಳ್ಳೆದು, ಮಾದೇಗೌಡ್ರು ಈ ವಯಸ್ಸಲ್ಲಿ ಅಷ್ಟು ಕುಡಿತರೆ ಅಂದ್ರೆ ಹೆಮ್ಮೆ ಪಡಬೇಕು ನಾವು ಎಂದು ನಕ್ಕರು. ಆದರೆ, ಮಾದೇಗೌಡರು ತುಂಬು ಜೀವನ ನಡೆಸಿ ಶಿಕ್ಷಣ ಸಂಸ್ಥೆ, ಗಾಂಧಿ ಭವನ ಮತ್ತು ಚಳವಳಿಯನ್ನು ಬಿಟ್ಟು ಹೋಗಿದ್ದಾರೆ. ಸದ್ಯಕ್ಕೆ ಮಂಡ್ಯದಲ್ಲಿ ಅವರ ಜಾಗ ತುಂಬುವವರು ಯಾರೂ ಇಲ್ಲ. ಒಂದು ಇತಿಹಾಸ ಕೊನೆಗೊಂಡಿದೆ.

  • ಬಿ ಚಂದ್ರೇಗೌಡ

ಇದನ್ನೂ ಓದಿ: ಕೊಪ್ಪಳ: ಹಿರಿಯ ಸಾಹಿತಿ, ಜನಪರ ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...