Homeಕರ್ನಾಟಕಶ್ರದ್ಧಾಂಜಲಿ; ಶಾಶ್ವತ ಮೌನಕ್ಕೆ ಜಾರಿದ ನಿಷ್ಠುರ ಮಾತಿನ ಮಾದೇಗೌಡರು

ಶ್ರದ್ಧಾಂಜಲಿ; ಶಾಶ್ವತ ಮೌನಕ್ಕೆ ಜಾರಿದ ನಿಷ್ಠುರ ಮಾತಿನ ಮಾದೇಗೌಡರು

- Advertisement -
- Advertisement -

ಜಿ. ಮಾದೇಗೌಡರು ಗಾಂಧಿವಾದಿ. ಕೆಲವರಿಗೆ ’ಇವನ್ಯಾವ ಸೀಮೆ ಗಾಂಧಿವಾದಿ’ ಅನ್ನಿಸುತ್ತಿದ್ದುದೂ ಉಂಟು. ಯಾಕೆಂದರೆ ಅವರ ಅಸಹನೆಯ ಸಿಟ್ಟಿನ ಮುಖ, ತೀಕ್ಷ್ಣವಾದ ಕಣ್ಣುಗಳು ಮತ್ತು ಈ ರೂಪಕ್ಕೆ ಮೆರಗು ಕೊಟ್ಟಂತಹ ಅವರ ನಿಷ್ಠುರವಾದ ಮಾತುಗಳು ಹಾಗೂ ಆ ಮಾತಿನಲ್ಲಿ ಅಡಗಿದ್ದ ಸತ್ಯ ಸಂಗತಿಗಳು. ಹೀಗೆ, ಗಾಂಧಿವಾದಿಗಳು ಹೀಗೂ ಇರಬಲ್ಲರು ಎಂದು ತೋರಿಸಿಕೊಟ್ಟವರು ಮಾದೇಗೌಡರು. ಮಂಡ್ಯದ ಮಣ್ಣು ರೂಪಿಸಿದ ಅಪರೂಪದ ರಾಜಕಾರಣಿಗಳ ಪೈಕಿ ಮಾದೇಗೌಡರ ವರಸೆಯೇ ಬೇರೆ. ಇತರರನ್ನು ಮೆಚ್ಚಿಸುವುದಕ್ಕಾಗಿ ಎಂದೂ ಮಾತನಾಡಿದವರಲ್ಲ. ಹಾಸ್ಯ ಅವರಿಗೆ ಹಿಡಿಸುತ್ತಿರಲಿಲ್ಲ. ಆದರೆ ಅವರ ಕೆಲವು ಮಾತುಗಳು ಹಾಸ್ಯವಾಗಿ ಪರಿವರ್ತನೆಯಾಗುತ್ತಿದ್ದವು. ಉದಾಹರಣೆಗೆ ಅವರೇ ಹೇಳಿದಂತೆ, ’ಈ ಎಸ್.ಎಂ. ಕೃಷ್ಣ ಮತ್ತೆ ಅಂಬರೀಶ್ ರಾಜಕಾರಣದಲ್ಲಿ ಯಾವ ಗೇಮೆಯನ್ನು ಮಾಡದವರು. ಪ್ರತಿಭಟನೆ, ಸತ್ಯಾಗ್ರಹ, ಕಾಲ್ನಡಿಗೆ ಇಂತಹ ದೈಹಿಕ ಶ್ರಮದಿಂದ ದೂರವುಳಿದವರು. ಆದರೂ ಅವುರು ರಾಜಕಾರಣದಲ್ಲಿ ಏನೇನೊ ಆದ್ರು. ಒಬ್ಬ ಮೋಜುಗಾರ ಇನ್ನೊಬ್ಬ ಸೊಗಸುಗಾರ. ಈ ಹಾಳುಡುಗ್ರು ಅವುರು ಬಂದಾಗ ನ್ವಣ ಮುತ್ತಿದಂಗೆ ಮುತ್ತಿಗತವೆ. ಇದಕೇನೇಳನ’ ಎಂದಿದ್ದರು.

ಕಾವೇರಿ ವಿಷಯ ಅವರ ಜೀವನಾಡಿಯಾಗಿತ್ತು. ಕಾವೇರಿ ಸಮಸ್ಯೆ ಭುಗಿಲೇಳುವುದಕ್ಕೂ ಮೊದಲೆ ಹಾಜರಾಗಿ ಚಳವಳಿಯನ್ನ ನಿಯಂತ್ರಿಸುತ್ತಿದ್ದರು. ಅದೂ ಗಾಂಧಿ ಮಾರ್ಗದಲ್ಲಿ. ಒಮ್ಮೆ ಈ ಚಳವಳಿಯೊಳಕ್ಕೆ ಕೇಂದ್ರ ಸಚಿವರಾಗಿದ್ದ ಅಂಬರೀಶ್ ರಾಜಿನಾಮೆಯಿತ್ತು ಬಂದು ಸೇರಿಕೊಂಡರು. ಇದು ಮಾದೇಗೌಡರಿಗೆ
ಸಿಟ್ಟು ತರಿಸಿ ಗದರಿಸಿ ಕಳಿಸಿದ್ದರು. ಇಷ್ಟಾದರೂ ಅಂಬಿ ಮತ್ತು ಮಾದೇಗೌಡರ ನಡುವೆ ಒಳ್ಳೆ ಸಂಬಂಧವಿತ್ತು. ಒಮ್ಮೆ ಗೌಡರು ಅಂಬರೀಶ್‌ರನ್ನು ಕುರಿತು “ಲೇ ಅಂಬರೀಶ ಒಳ್ಳೆ ಬುದ್ದಿನೆ ಕಲಿಲಿಲ್ಲವಲ್ಲೊ ನೀನು” ಅಂದರು. ಅದಕ್ಕೆ ಅಂಬಿ “ಲೇ ಮುದುಕ ಮ್ಯಟ್ರೆ ಹಿಸಿಗಿ ಸಾಯಿಸಿಬುಡ್ತಿನಿ ಸುಮ್ಮನಿರು” ಎಂದರು. ಎಲ್ಲರ ಸ್ಥಾನಮಾನ ಸೊಕ್ಕನ್ನು ಮುರಿದು ತನ್ನ ವ್ಯಕ್ತಿತ್ವಕ್ಕೆ ಒಗ್ಗಿಸಿಕೊಳ್ಳುವ ಅಂಬರೀಶ್ ತನ್ನ ಇಂತಹ ಗುಣಕ್ಕೆ ಒಗ್ಗಿಕೊಳ್ಳದವರ ಬಳಿ ಸುಳಿಯುತ್ತಿರಲಿಲ್ಲ. ಉದಾಹರಣೆ ದೇವೇಗೌಡರು, ರಾಮಕೃಷ್ಣ ಹೆಗಡೆ, ಬೊಮ್ಮಾಯಿ ಇಂತಹವರ ಬಳಿ ಐದು ನಿಮಿಷವೂ ಇರುತ್ತಿರಲಿಲ್ಲ. ಆದರೆ ಇಂತವರ ಸಾಲಿನ ಮಾದೇಗೌಡರನ್ನ ಪಳಗಿಸಿದ್ದರು. ಕಾವೇರಿ ವಿಷಯದಲ್ಲಿ ಇಬ್ಬರ ಅಭಿಪ್ರಾಯಗಳು ಅವರ ಮನೋಗತಕ್ಕೆ ತಕ್ಕಂತಿದ್ದವು. ಕೆರೆಕಟ್ಟೆಯ ವಿಷಯದಲ್ಲಿ ವಾಟರ್ ಪಾಲಿಸಿ ಎಂಬುದೊಂದಿದೆ. ಅಚ್ಚುಕಟ್ಟಿನ ಕಟ್ಟಕಡೆ ರೈತನಿಗೂ ನೀರು ತಲುಪಬೇಕು.

ಆದರೆ ಮಾದೇಗೌಡರು “ಡ್ಯಾಂ ನಮ್ಮದು, ಅದರ ಗೇಟಿನ ಕೀ ನನ್ನ ಬಳಿ ಇರಬೇಕು. ಬೇಕಾದ್ರೆ ನೀರು ಕೊಟ್ಟೆ ಇಲ್ದಿದ್ರೆ ಇಲ್ಲ ಎನ್ನುವಂತೆ ಮಾತನಾಡುತ್ತಿದ್ದರು. ಅದೇ ಅಂಬರೀಶ್ “ನನ್ನ ಬಕೀಟಲ್ಲಿ ನೀರಿದ್ರೆ ಯರಡು ಲೋಟ ಕೊಡ್ತಿನಪ್ಪ ನೀರೆ ಇಲ್ದಿದ್ರೆ ಎಲ್ಲಿಕೊಡ್ಲಿ” ಎನ್ನುತ್ತಿದ್ದರು.

ಮಾದೇಗೌಡರ ಚಳವಳಿ ಕಾವೇರಿಗೆ ಮಾತ್ರ ಸೀಮಿತವಾಗಿತ್ತು. ಒಂದು ಬಾರಿ ಕಾವೇರಿಗಾಗಿ ರೈತರು ನಡೆಸುತ್ತಿರುವ ಪ್ರತಿಭಟನೆ ಜಾಗಕ್ಕೆ ಬಂದರು. ಈಗಾಗಲೇ ಪ್ರತಿಭಟಿಸುತ್ತಿದ್ದ ರೈತರು “ಅಯ್ಯವ್ ಏಳಯ್ಯ ಮ್ಯಾಕೆ ನಡಿಯಯ್ಯ ಈಗ ಬಂದುಬಿಟ್ಟ. ಅಲ್ಲೋಗಿ ಸಿ.ಎಂ ಅತ್ರ ಏನೇನೊ ಕ್ಯಲಸ ಮಾಡಿಸಿಕೊಳದು ಇಲ್ಲಿ ಬಂದು ಚಳವಳಿ ಮಾಡದು” ಎಂದು ಮೂದಲಿಸಿಬಿಟ್ಟರು. ಚಳವಳಿಗೆ ನನ್ನಂಥವರ ಅಗತ್ಯವಿಲ್ಲವೇನೊ ಅಂತ ಒಂದುಕ್ಷಣ ಮಾದೇಗೌಡರಿಗೆ ಅನ್ನಿಸಿಬಿಟ್ಟಿತು. ಆದರೆ, ಗಾಂಧಿಯಿಂದ ಸ್ಫೂರ್ತಿ ಪಡೆಯುತ್ತಿದ್ದ ಅವರು ತಮ್ಮ ಹೋರಾಟಗಳನ್ನು ಕೈಬಿಟ್ಟವರಲ್ಲ. ಅವರ ಬದುಕಿನ ಬಹುದೊಡ್ಡ ಸಾಧನೆಯಾದ ಗಾಂಧಿ ಭವನ ನಿರ್ಮಾಣ ಪೂರ್ಣಗೊಂಡ ಮೇಲೆ ಅದರ ಮುಂದೆ ಕುಳಿತು, ಹಾಳಾಗುತ್ತಿರುವ ಯುವಜನತೆ, ಕುಸಿಯುತ್ತಿರುವ ಮೌಲ್ಯಗಳ ಬಗ್ಗೆ ಯೋಚಿಸುತ್ತ ನಿಷ್ಠುರವಾಗಿ ಪ್ರತಿಕ್ರಿಯಿಸುತ್ತಿದ್ದರು.

ಅಂತಹ ಒಂದು ಸಂದರ್ಭದಲ್ಲಿ ಅವರ ಸಮಕಾಲೀನ ರಾಜಕಾರಣಿಯಾದ ಹೆಚ್.ಟಿ ಕೃಷ್ಣಪ್ಪನವರ ಬಗ್ಗೆ ಅಭಿನಂದನಾ ಗ್ರಂಥ ತರುವ ಸಮಯದಲ್ಲಿ ಮಾತನಾಡಿಸಲು ಹೋಗಿದ್ದೆ. ಗಾಂಧಿ ಭವನದ ವರಾಂಡದಲ್ಲಿ ಕುಳಿತಿದ್ದ ಅವರ ಪಕ್ಕ ಕುಳಿತ ನಾನು “ಸಾರ್ ಹೆಚ್.ಟಿ ಕೃಷ್ಣಪ್ಪನವರ ಬಗ್ಗೆ ಒಂದು ಅಭಿನಂದನಾ ಗ್ರಂಥ ತರತಾಯಿದ್ದಿವಿ, ಅವರು ನಿಮ್ಮ ಸಮಕಾಲೀನರು ಮತ್ತು ಒಡನಾಡಿಯಾಗಿದ್ರು. ಅವುರ ಬಗ್ಗೆ ಹೇಳಿ ಸಾರ್” ಎಂದೆ. ಮಾದೇಗೌಡರು ಒಳಗಣ್ಣಾಗಿ “ಕೃಷ್ಣಪ್ಪ ನಾನು ತಾಲೂಕ್ ಬೋರ್ಡ್ ಚುನಾವಣೆ ಮುಖಾಂತರ ರಾಜಕೀಯಕ್ಕೆ ಬಂದೊ.. ಅವುರು ಇಲ್ಲೇ ಲಾಯರಾಗಿದ್ರು. ನಾಟಕದಲ್ಲಿ ಪಾರ್ಟು ಮಾಡತಿದ್ರು. ಪದ ಹೇಳತಿದ್ರು. ಮಾತ್ರ ವಳ್ಳೆ ಮನ್ಸ” ಎಂದವರು ತಿರುಗಿ ಮಾತನಾಡಲಿಲ್ಲ. ಈ ರೀತಿ ಕೇಳಲು ಬಂದವನು ಯಾವೂರ ದಾಸಯ್ಯ ಎಂದೂ ನೋಡಲಿಲ್ಲ. ’ಗಾಂಧಿ ಭವನ ಚನ್ನಾಗ್ಯದೆ ಸಾರ್’ ಎಂದೆ. “ಇನ್ನ ಚನ್ನಾಗಿರದು. ಇರೊ ಜಾಗದಲ್ಯಲ್ಲ. ಕಟ್ಟಿದ್ರೆ ಹೊರಗಡೆ ಜಾಗದಲ್ಲಿ ಗಾಡಿಗಳು ನಿಂತಗಳವು. ಆ ಡಿ.ಕೆ ಶಿವಕುಮಾರ ವಸಿ ಜಾಗ ವಡಕಂಡು ಅದೇನೊ ಕಟ್ಟಿಗಂಡ. ಬರಿ ಇಂತ ಕ್ಯಲಸಗಳಯ ಅವುರವು” ಎಂದು ಸಿಟ್ಟಾದರು. ಎದ್ದು ಬಂದೆ ಆ ನಂತರ ಹೆಚ್.ಟಿ ಕೃಷ್ಣಪ್ಪನವರ ಬಳಿ ಬಂದು “ಸಾರ್ ಮಾದೇಗೌಡ್ರು ಅದ್ಭುತ ಸಾರ್. ನಿಮ್ಮ ಇಡೀ ಜೀವನನ ಐದು ಪದದಲ್ಲಿ ಹೇಳಿ ಮುಗಿಸಿದ್ರು” ಅಂದೆ. ನಗಾಡಿದ ಅವರು “ಆಯ್ತು ಅಷ್ಟನೆ ಹಾಕಿ” ಎಂದರು. ಹಾಗೇ ಮಾಡಿದೆ. ಮಾದೇಗೌಡರ ಬಳಿ ಅನವಶ್ಯಕ ಪುಲಾರಕ್ಕೆ ಅವಕಾಶವಿರಲಿಲ್ಲ.

ವಯಸ್ಸಾದ ವ್ಯಕ್ತಿಯ ಮಾತಿನಲ್ಲಿ ಮೊದಲಿನ ನಿಷ್ಠುರತೆ ಸಿಟ್ಟು ಸೆಡವುಗಳಿರುವುದಿಲ್ಲ ಎನ್ನುತ್ತಾರೆ. ಆದರೆ ಮಾದೇಗೌಡರ ವಿಷಯದಲ್ಲಿ ಇವು ಸುಳ್ಳಾಗಿದ್ದವು. ಬದುಕಿನ ಕಟ್ಟಕಡೆಯವರೆಗೂ ಅವರು ಕಡುಪಾಗೇ ಇದ್ದರು. ಜಿಲ್ಲಾಧಿಕಾರಿಯಿಂದ ಹಿಡಿದು ಯಾರಿಗೂ ಕೇರ್ ಮಾಡದ ಮಾದೇಗೌಡರು, ಮೈಗಳ್ಳ ಅಧಿಕಾರಿಗಳಿಗೆ ಮೈಚಳಿ ಬಿಡಿಸುತ್ತಿದ್ದರು. ಕಲೆ, ಸಾಹಿತ್ಯ ಸಂಗೀತದ ಅಭಿರುಚಿಯಿಂದ ಕೆ.ವಿ ಶಂಕರೇಗೌಡರು ಜಿಲ್ಲೆಗೆ ಕೀರ್ತಿ ತಂದರೆ ಮಾದೇಗೌಡರು ತಮ್ಮ ವಿಶಿಷ್ಟ ರೀತಿಯ ರಾಜಕಾರಣದ ವರಸೆಯಿಂದ ಮಂಡ್ಯ ಜಿಲ್ಲೆಗೆ ಹೆಸರು ತಂದಿದ್ದರು. ತುಂಬ ಶಿಸ್ತಿನಿಂದ ಶಿಕ್ಷಣ ಸಂಸ್ಥೆಗಳನ್ನು ನಡೆಸಿ ಮಗನಿಗೆ ವಹಿಸಿದ್ದರು. ಮಗ ಚಿರಂಜೀವಿ ಸಿಂಗ್ ತರದ ಅಧಿಕಾರಿಯಾಗಬೇಕೆಂದು ಬಯಸಿದ್ದರು. ಆದರೆ ಮಗ ರಾಜಕಾರಣಕ್ಕೆ ಬಂದಾಗ ಅವರು ಸಿಡಿಮಿಡಿಗೊಂಡು “ವಳ್ಳೆ ಅಧಿಕಾರಿಯಾಗು ಅಂದ್ರೆ ಈ ಬಡೆತದ್ದು ರಾಜಕೀಯಕ್ಕೆ ಬತ್ತಲ್ಲ ಹೇಳು” ಎಂದಿದ್ದರು.

ಒಮ್ಮೆ ಲಂಕೇಶ್ ಎದುರು ಕುಳಿತಿದ್ದ ಹೆಚ್.ಎಲ್. ಕೇಶವಮೂರ್ತಿಯವರು ಮಾದೇಗೌಡರ ಆರೋಗ್ಯದ ಬಗ್ಗೆ ಮಾತನಾಡುತ್ತ “ತುಂಬಾ ಕುಡಿತರೆ ಸಾರ್ ಎದುರಿಗಿದ್ದ ಬಾಟ್ಳಿ ಖಾಲಿ ಮಾಡಿದ ಮ್ಯಾಲೆ ಮೇಕ್ಕೇಳದು” ಎಂದರು. ತುಂಬಾ ಒಳ್ಳೆದು, ಮಾದೇಗೌಡ್ರು ಈ ವಯಸ್ಸಲ್ಲಿ ಅಷ್ಟು ಕುಡಿತರೆ ಅಂದ್ರೆ ಹೆಮ್ಮೆ ಪಡಬೇಕು ನಾವು ಎಂದು ನಕ್ಕರು. ಆದರೆ, ಮಾದೇಗೌಡರು ತುಂಬು ಜೀವನ ನಡೆಸಿ ಶಿಕ್ಷಣ ಸಂಸ್ಥೆ, ಗಾಂಧಿ ಭವನ ಮತ್ತು ಚಳವಳಿಯನ್ನು ಬಿಟ್ಟು ಹೋಗಿದ್ದಾರೆ. ಸದ್ಯಕ್ಕೆ ಮಂಡ್ಯದಲ್ಲಿ ಅವರ ಜಾಗ ತುಂಬುವವರು ಯಾರೂ ಇಲ್ಲ. ಒಂದು ಇತಿಹಾಸ ಕೊನೆಗೊಂಡಿದೆ.

  • ಬಿ ಚಂದ್ರೇಗೌಡ

ಇದನ್ನೂ ಓದಿ: ಕೊಪ್ಪಳ: ಹಿರಿಯ ಸಾಹಿತಿ, ಜನಪರ ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...