Homeಕರ್ನಾಟಕಶ್ರದ್ಧಾಂಜಲಿ; ಬಿಡುಗಡೆಯ ಕನಸುಗಾರ ಪ್ರೊ.ಗಂಗಾಧರಮೂರ್ತಿ

ಶ್ರದ್ಧಾಂಜಲಿ; ಬಿಡುಗಡೆಯ ಕನಸುಗಾರ ಪ್ರೊ.ಗಂಗಾಧರಮೂರ್ತಿ

- Advertisement -
- Advertisement -

70ರ ದಶಕದಲ್ಲಿ ಇಡೀ ಕರ್ನಾಟಕ ರಾಜ್ಯದಲ್ಲಿ ಸಂಚಲನವನ್ನುಂಟುಮಾಡಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮತ್ತೊಬ್ಬ ಹಿರಿಯ ಒಡನಾಡಿ ಪ್ರೊ. ಗಂಗಾಧರ ಮೂರ್ತಿ ಅವರು ಸೆಪ್ಟಂಬರ್ 10ರಂದು ನಮ್ಮನ್ನಗಲಿದ್ದಾರೆ. ನಮಗೆಲ್ಲ ಈ ಸಮಯದಲ್ಲಿ ಅವರು ಇನ್ನಷ್ಟು ಕಾಲ ಇರಬೇಕಿತ್ತು ಎಂದು ಅನಿಸುವುದೊಂದು ಸಹಜ ಭಾವನೆ. ಕನ್ನಡದ ಮಹತ್ವದ ಕವಿಗಳಾದ ಮತ್ತು ಹಿರಿಯ ದಲಿತ ಚಳವಳಿಯ ನೇತಾರರಾಗಿದ್ದ ಡಾ. ಸಿದ್ದಲಿಂಗಯ್ಯ, ಪ್ರೊ. ಕೆ.ಬಿ ಸಿದ್ದಯ್ಯ ನಮ್ಮನ್ನು ಅಗಲಿದಾಗಲೂ ಅನೇಕರಲ್ಲಿ ಈ ರೀತಿಯ ಭಾವನೆ ಮೂಡಿತ್ತು.

ದಲಿತ ಸಂಘರ್ಷ ಸಮಿತಿಯು ಸಾಮಾಜಿಕವಾಗಿ ತುಳಿಯಲ್ಪಟ್ಟ ಅಥವಾ ಬಂಧಿಸಲ್ಪಟ್ಟ ಸಮಾಜದ ಬಿಡುಗಡೆಗಾಗಿ ಹಂಬಲಿಸಿ ಈ ನೆಲದಲ್ಲಿ ರೂಪುಗೊಂಡ ಒಂದು ಮಹತ್ವದ, ಐತಿಹಾಸಿಕ ಚಳವಳಿ. ಸಾಮಾನ್ಯವಾಗಿ ದಲಿತ ಚಳವಳಿಯೆಂದರೆ ತಮ್ಮ ಹಕ್ಕುಗಳಿಗಾಗಿ ದಲಿತರೇ ನಡೆಸಿದ ಹೋರಾಟ ಎಂಬ ಭಾವನೆ ನಮ್ಮ ಸಮಾಜದ ಅನೇಕರಲ್ಲಿದೆ. ಕೆಲವೊಮ್ಮೆ ಈ ಭಾವನೆ ಸಹಜವೂ ಇರಬಹುದು. ಆದರೆ ಕರ್ನಾಟಕದ ದಲಿತ ಚಳವಳಿ ಸ್ವರೂಪ ಈ ನಿಟ್ಟಿನಲ್ಲಿ ಬಹಳ ಭಿನ್ನವಾದುದು. ಕನ್ನಡದ ನೆಲದಲ್ಲಿ ಮೊದಲ ತಲೆಮಾರಿನ ದಲಿತರು ತಮ್ಮ ನೋವು ನಲಿವುಗಳನ್ನ, ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ದಬ್ಬಾಳಿಕೆಗಳನ್ನು ಪ್ರಶ್ನೆ ಮಾಡುವಂತಹ, ಅಭಿವ್ಯಕ್ತಿಸುವಂತಹ ಸಾಹಿತ್ಯವನ್ನು ಬರೆದಾಗ ಅದನ್ನು ಬಹಳ ಪ್ರೀತಿಯಿಂದ ಸ್ವಾಗತಿಸಿ, ಸ್ವೀಕರಿಸಿ, ಪ್ರೋತ್ಸಾಹಿಸಿದ ಅನೇಕ ಪ್ರಜ್ಞಾವಂತರು ಈ ನಾಡಿನಲ್ಲಿ ಬದುಕಿ ಹೋಗಿದ್ದಾರೆ ಮತ್ತು ಇನ್ನು ಬದುಕುತ್ತಿದ್ದಾರೆ. ಅದೇ ರೀತಿ ದಲಿತರು ಸಂಘಟಿತರಾಗಿ ಚಳವಳಿಯನ್ನು ರೂಪಿಸಿದಾಗ ದಲಿತ ಸಮುದಾಯಕ್ಕೆ ಅದರ ನೇತೃತ್ವವನ್ನು ಕೊಟ್ಟು ಚಳವಳಿಗೆ ಬೆನ್ನೆಲುಬಾಗಿ ನಿಂತ ಅನೇಕ ದಲಿತೇತರ ಸಂಗಾತಿಗಳು ಈ ನಾಡಿನಲ್ಲಿ ಇದ್ದಾರೆ ಅಂತಹ ಮಹತ್ವದ ವ್ಯಕ್ತಿತ್ವಗಳಲ್ಲಿ ಒಬ್ಬರಾಗಿದ್ದವರು ಪ್ರೊ. ಗಂಗಾಧರ ಮೂರ್ತಿಯವರು. ಇಂಗ್ಲಿಷ್ ಸಾಹಿತ್ಯದ ಮೇಷ್ಟ್ರಾಗಿ ಅಧ್ಯಾಪನದ ಜೊತೆಗೆ ಅವಿಭಜಿತ ಕೋಲಾರ ಜಿಲ್ಲೆಯ ಗೌರಿಬಿದನೂರಿನ ಸುತ್ತಮುತ್ತ ದಲಿತ ಚಳವಳಿಯ ಸಂಗಾತಿಗಳ ಜೊತೆಗೂಡಿ ಅದನ್ನು ಕಟ್ಟಿ ಬೆಳೆಸಿದವರು. ಹಾಗೆಯೇ ಈ ಚಳವಳಿಯು ನಡೆಸಿದ ಮಹತ್ವದ ಭೂಮಿ ಹೋರಾಟಗಳಲ್ಲಿ ಒಂದಾದ ನಾಗಸಂದ್ರ ಭೂ ಹೋರಾಟದ ಮುಂಚೂಣಿಯಲ್ಲಿದ್ದವರು.

ಈ ಕುರಿತು ಅವರು ’ನಾಗಸಂದ್ರ ಭೂ ಆಕ್ರಮಣ ಚಳವಳಿ’ ಎಂಬ ಮಹತ್ವದ ಪುಸ್ತಕವನ್ನು ಬರೆದು ದಾಖಲಿಸಿದ್ದಾರೆ.ಇದು ಒಂದು ಭಾಗವಾದರೆ, ಪ್ರೊ ಗಂಗಾಧರಮೂರ್ತಿಯಂತವರ ವ್ಯಕ್ತಿತ್ವ ಈ ದೇಶಕ್ಕೆ, ಈ ಸಮಾಜಕ್ಕೆ ಯಾಕೆ ಬಹಳ ಅವಶ್ಯಕ ಎಂಬುದನ್ನು ಈ ಸಮಯದಲ್ಲಿ ನಾವು ಗಂಭೀರವಾಗಿ ಅವಲೋಕಿಸಬೇಕಾಗಿದೆ. ಅವರು ಬದುಕಿದ್ದಷ್ಟು ಕಾಲ ತಾವು ನಂಬಿದ ವಿಚಾರಗಳಿಗೆ ಬದ್ಧರಾಗಿ ಜನ ಚಳವಳಿಗಳ ಜೊತೆಗೆ ಬದುಕಿ ಮಾದರಿಯಾದರು. ಮೊದಲ ಬಾರಿಗೆ ನಾನು ಅವರನ್ನು ಭೇಟಿಯಾಗಿದ್ದು 2011ರ ಇಸವಿ. ಭಾರತದ ಮೊದಲ ತಲೆಮಾರಿನ ಸ್ತ್ರೀವಾದಿ ಚಿಂತಕಿ ಮತ್ತು ಬರಹಗಾರ್ತಿ ಪ್ರೊ. ಸೂಸಿಥಾರು ಅವರ ಜೊತೆಗೆ ’ದಕ್ಷಿಣ ಭಾರತದ ದಲಿತ ಬರಹಗಳು’ ಎಂಬ ಯೋಜನೆಗೆ ಕಾರ್ಯನಿರ್ವಹಿಸುವಾಗ ಅವರನ್ನು ಸಂದರ್ಶಿಸಲು ಗೌರಿಬಿದನೂರಿನ ಅವರ ಮನೆಗೆ ಭೇಟಿ ನೀಡಿದ್ದೆವು. ಆ ದಿನ ಅವರು ದಲಿತ ಸಂಘರ್ಷ ಸಮಿತಿಯ ಜೊತೆಗಿನ ತಮ್ಮ ಒಡನಾಟ ಹಾಗೂ ಜೀತ ವಿಮುಕ್ತರಿಗೆ ಸರ್ಕಾರದಿಂದ ಪ್ರತ್ಯೇಕ ಜಾಗವನ್ನು ಮಂಜೂರು ಮಾಡಿಸಿ ಶಂಭೂಕ ನಗರ ಎಂಬ ಹೊಸ ಹಳ್ಳಿಯನ್ನೇ ಕಟ್ಟಿದ ಸಂಗತಿಗಳನ್ನು ಹಂಚಿಕೊಂಡಿದ್ದು ಮಾತ್ರವಲ್ಲದೆ ಅಂದು ಶಂಭೂಕ ನಗರ ಎಂಬ ಆ ಕಾಲೋನಿಗೆ ನಮ್ಮನ್ನೆಲ್ಲ ಕರೆದುಕೊಂಡು ಹೋಗಿದ್ದರು.

ಪ್ರೊ.ಗಂಗಾಧರ ಮೂರ್ತಿಯವರು ಅಂದು ಕಾಲೋನಿಗೆ ಭೇಟಿ ನೀಡಿದ ಕೂಡಲೇ ಅಲ್ಲಿದ್ದ ಜನರು ’ಸರ್ ಬಂದಿದ್ದಾರೆ’ ಎಂದು ಒಬ್ಬರಿಗೊಬ್ಬರು ಮಾಹಿತಿಯನ್ನು ನೀಡಿಕೊಂಡು ಅವರ ಜೊತೆಗೆ ಖುಷಿಯಿಂದ ನೆರೆದದ್ದನ್ನು ನಾವು ಕಂಡೆವು. ಕಾಲೋನಿಯ ಜನರ ಕಷ್ಟ ಸುಖಗಳಿಗೆ ನಿರಂತರವಾಗಿ ಸ್ಪಂದಿಸುತ್ತಾ ಅವರ ಕೊನೆಯ ದಿನಗಳವರೆಗೂ ಶಂಭೂಕ ನಗರದ ಜನರ ಸಂಪರ್ಕವನ್ನು ಉಳಿಸಿಕೊಂಡಿದ್ದ ರೀತಿ ಅವರ ಚಳವಳಿಯ ಬದ್ಧತೆಯ ಮಾದರಿ.

1938ರಲ್ಲಿ ಗೌರಿಬಿದನೂರಿನ ವಿದುರಾಶ್ವತ್ಥದಲ್ಲಿ ನಡೆದ ಧ್ವಜ ಸತ್ಯಾಗ್ರಹ ಹತ್ಯಾಕಾಂಡದ (ದಕ್ಷಿಣದ ಜಲಿಯನ ವಾಲಾಬಾಗ್ ಎಂದೇ ಪ್ರಖ್ಯಾತವಾಗಿದೆ) ನೆನಪಿಗಾಗಿ ಸ್ಮಾರಕ ಮತ್ತು ಗ್ರಂಥಾಲಯ ರೂಪಿಸಿ ಅದರ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು ಪ್ರೊ.ಗಂಗಾಧರ ಮೂರ್ತಿಯವರು. ಜನಪರ ಚಳವಳಿಗಳಲ್ಲಿ ತೊಡಗಿಸಿಕೊಂಡೇ ಜತೆಜತೆಗೆ ಅತ್ಯುತ್ತಮವಾದ ಸಾಹಿತ್ಯ ಕೃತಿಗಳ ಅನುವಾದ ಮತ್ತು ರಚನೆಯಲ್ಲಿ ತೊಡಗಿ ಅಕ್ಷರದ ಮೂಲಕವೂ ಜಾಗೃತಿಯನ್ನು ಬಿತ್ತಿದರು. ಇಂದು ಜಾಗತಿಕ ಹಳ್ಳಿ ಎಂಬ ಹೆಬ್ಬಾವು ಚಳವಳಿಗಳನ್ನು ಸ್ವಲ್ಪಸ್ವಲ್ಪವೇ ನುಂಗಿಕೊಳ್ಳುತ್ತಿರುವ, ಬಂಡವಾಳಶಾಹಿಗಳು ಕೋಮುವಾದಿಗಳೊಂದಿಗೆ ಕೈಜೋಡಿಸಿರುವ ಈ ದುರಿತಕಾಲದಲ್ಲಿ ಪ್ರೊ. ಗಂಗಾಧರ ಮೂರ್ತಿಯವರು ನಮ್ಮೊಟ್ಟಿಗೆ ಇನ್ನಷ್ಟು ಕಾಲ ಇರಬೇಕಿತ್ತು ಎಂಬ ಭಾವನೆ ಮೂಡುವುದು ಈಗ ಸಹಜ. ಆದರೆ ಅವರು ಸದ್ಯ ಸ್ವಲ್ಪ ವಿಶ್ರಾಂತಿಯಲ್ಲಿದ್ದಾರೆಂದು ಭಾವಿಸಿ ನಾವೆಲ್ಲರೂ ಅವರ ಕೆಲಸಗಳನ್ನು ಮುಂದುವರಿಸೋಣ ಎಂಬುದಷ್ಟೇ ಈಗ ನಮಗೆ ನಾವೇ ಮಾಡಿಕೊಳ್ಳುವ ಸಾಂತ್ವನ.


ಇದನ್ನೂ ಓದಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...