Homeಕರ್ನಾಟಕಶ್ರದ್ಧಾಂಜಲಿ; ಬಿಡುಗಡೆಯ ಕನಸುಗಾರ ಪ್ರೊ.ಗಂಗಾಧರಮೂರ್ತಿ

ಶ್ರದ್ಧಾಂಜಲಿ; ಬಿಡುಗಡೆಯ ಕನಸುಗಾರ ಪ್ರೊ.ಗಂಗಾಧರಮೂರ್ತಿ

- Advertisement -
- Advertisement -

70ರ ದಶಕದಲ್ಲಿ ಇಡೀ ಕರ್ನಾಟಕ ರಾಜ್ಯದಲ್ಲಿ ಸಂಚಲನವನ್ನುಂಟುಮಾಡಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮತ್ತೊಬ್ಬ ಹಿರಿಯ ಒಡನಾಡಿ ಪ್ರೊ. ಗಂಗಾಧರ ಮೂರ್ತಿ ಅವರು ಸೆಪ್ಟಂಬರ್ 10ರಂದು ನಮ್ಮನ್ನಗಲಿದ್ದಾರೆ. ನಮಗೆಲ್ಲ ಈ ಸಮಯದಲ್ಲಿ ಅವರು ಇನ್ನಷ್ಟು ಕಾಲ ಇರಬೇಕಿತ್ತು ಎಂದು ಅನಿಸುವುದೊಂದು ಸಹಜ ಭಾವನೆ. ಕನ್ನಡದ ಮಹತ್ವದ ಕವಿಗಳಾದ ಮತ್ತು ಹಿರಿಯ ದಲಿತ ಚಳವಳಿಯ ನೇತಾರರಾಗಿದ್ದ ಡಾ. ಸಿದ್ದಲಿಂಗಯ್ಯ, ಪ್ರೊ. ಕೆ.ಬಿ ಸಿದ್ದಯ್ಯ ನಮ್ಮನ್ನು ಅಗಲಿದಾಗಲೂ ಅನೇಕರಲ್ಲಿ ಈ ರೀತಿಯ ಭಾವನೆ ಮೂಡಿತ್ತು.

ದಲಿತ ಸಂಘರ್ಷ ಸಮಿತಿಯು ಸಾಮಾಜಿಕವಾಗಿ ತುಳಿಯಲ್ಪಟ್ಟ ಅಥವಾ ಬಂಧಿಸಲ್ಪಟ್ಟ ಸಮಾಜದ ಬಿಡುಗಡೆಗಾಗಿ ಹಂಬಲಿಸಿ ಈ ನೆಲದಲ್ಲಿ ರೂಪುಗೊಂಡ ಒಂದು ಮಹತ್ವದ, ಐತಿಹಾಸಿಕ ಚಳವಳಿ. ಸಾಮಾನ್ಯವಾಗಿ ದಲಿತ ಚಳವಳಿಯೆಂದರೆ ತಮ್ಮ ಹಕ್ಕುಗಳಿಗಾಗಿ ದಲಿತರೇ ನಡೆಸಿದ ಹೋರಾಟ ಎಂಬ ಭಾವನೆ ನಮ್ಮ ಸಮಾಜದ ಅನೇಕರಲ್ಲಿದೆ. ಕೆಲವೊಮ್ಮೆ ಈ ಭಾವನೆ ಸಹಜವೂ ಇರಬಹುದು. ಆದರೆ ಕರ್ನಾಟಕದ ದಲಿತ ಚಳವಳಿ ಸ್ವರೂಪ ಈ ನಿಟ್ಟಿನಲ್ಲಿ ಬಹಳ ಭಿನ್ನವಾದುದು. ಕನ್ನಡದ ನೆಲದಲ್ಲಿ ಮೊದಲ ತಲೆಮಾರಿನ ದಲಿತರು ತಮ್ಮ ನೋವು ನಲಿವುಗಳನ್ನ, ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ದಬ್ಬಾಳಿಕೆಗಳನ್ನು ಪ್ರಶ್ನೆ ಮಾಡುವಂತಹ, ಅಭಿವ್ಯಕ್ತಿಸುವಂತಹ ಸಾಹಿತ್ಯವನ್ನು ಬರೆದಾಗ ಅದನ್ನು ಬಹಳ ಪ್ರೀತಿಯಿಂದ ಸ್ವಾಗತಿಸಿ, ಸ್ವೀಕರಿಸಿ, ಪ್ರೋತ್ಸಾಹಿಸಿದ ಅನೇಕ ಪ್ರಜ್ಞಾವಂತರು ಈ ನಾಡಿನಲ್ಲಿ ಬದುಕಿ ಹೋಗಿದ್ದಾರೆ ಮತ್ತು ಇನ್ನು ಬದುಕುತ್ತಿದ್ದಾರೆ. ಅದೇ ರೀತಿ ದಲಿತರು ಸಂಘಟಿತರಾಗಿ ಚಳವಳಿಯನ್ನು ರೂಪಿಸಿದಾಗ ದಲಿತ ಸಮುದಾಯಕ್ಕೆ ಅದರ ನೇತೃತ್ವವನ್ನು ಕೊಟ್ಟು ಚಳವಳಿಗೆ ಬೆನ್ನೆಲುಬಾಗಿ ನಿಂತ ಅನೇಕ ದಲಿತೇತರ ಸಂಗಾತಿಗಳು ಈ ನಾಡಿನಲ್ಲಿ ಇದ್ದಾರೆ ಅಂತಹ ಮಹತ್ವದ ವ್ಯಕ್ತಿತ್ವಗಳಲ್ಲಿ ಒಬ್ಬರಾಗಿದ್ದವರು ಪ್ರೊ. ಗಂಗಾಧರ ಮೂರ್ತಿಯವರು. ಇಂಗ್ಲಿಷ್ ಸಾಹಿತ್ಯದ ಮೇಷ್ಟ್ರಾಗಿ ಅಧ್ಯಾಪನದ ಜೊತೆಗೆ ಅವಿಭಜಿತ ಕೋಲಾರ ಜಿಲ್ಲೆಯ ಗೌರಿಬಿದನೂರಿನ ಸುತ್ತಮುತ್ತ ದಲಿತ ಚಳವಳಿಯ ಸಂಗಾತಿಗಳ ಜೊತೆಗೂಡಿ ಅದನ್ನು ಕಟ್ಟಿ ಬೆಳೆಸಿದವರು. ಹಾಗೆಯೇ ಈ ಚಳವಳಿಯು ನಡೆಸಿದ ಮಹತ್ವದ ಭೂಮಿ ಹೋರಾಟಗಳಲ್ಲಿ ಒಂದಾದ ನಾಗಸಂದ್ರ ಭೂ ಹೋರಾಟದ ಮುಂಚೂಣಿಯಲ್ಲಿದ್ದವರು.

ಈ ಕುರಿತು ಅವರು ’ನಾಗಸಂದ್ರ ಭೂ ಆಕ್ರಮಣ ಚಳವಳಿ’ ಎಂಬ ಮಹತ್ವದ ಪುಸ್ತಕವನ್ನು ಬರೆದು ದಾಖಲಿಸಿದ್ದಾರೆ.ಇದು ಒಂದು ಭಾಗವಾದರೆ, ಪ್ರೊ ಗಂಗಾಧರಮೂರ್ತಿಯಂತವರ ವ್ಯಕ್ತಿತ್ವ ಈ ದೇಶಕ್ಕೆ, ಈ ಸಮಾಜಕ್ಕೆ ಯಾಕೆ ಬಹಳ ಅವಶ್ಯಕ ಎಂಬುದನ್ನು ಈ ಸಮಯದಲ್ಲಿ ನಾವು ಗಂಭೀರವಾಗಿ ಅವಲೋಕಿಸಬೇಕಾಗಿದೆ. ಅವರು ಬದುಕಿದ್ದಷ್ಟು ಕಾಲ ತಾವು ನಂಬಿದ ವಿಚಾರಗಳಿಗೆ ಬದ್ಧರಾಗಿ ಜನ ಚಳವಳಿಗಳ ಜೊತೆಗೆ ಬದುಕಿ ಮಾದರಿಯಾದರು. ಮೊದಲ ಬಾರಿಗೆ ನಾನು ಅವರನ್ನು ಭೇಟಿಯಾಗಿದ್ದು 2011ರ ಇಸವಿ. ಭಾರತದ ಮೊದಲ ತಲೆಮಾರಿನ ಸ್ತ್ರೀವಾದಿ ಚಿಂತಕಿ ಮತ್ತು ಬರಹಗಾರ್ತಿ ಪ್ರೊ. ಸೂಸಿಥಾರು ಅವರ ಜೊತೆಗೆ ’ದಕ್ಷಿಣ ಭಾರತದ ದಲಿತ ಬರಹಗಳು’ ಎಂಬ ಯೋಜನೆಗೆ ಕಾರ್ಯನಿರ್ವಹಿಸುವಾಗ ಅವರನ್ನು ಸಂದರ್ಶಿಸಲು ಗೌರಿಬಿದನೂರಿನ ಅವರ ಮನೆಗೆ ಭೇಟಿ ನೀಡಿದ್ದೆವು. ಆ ದಿನ ಅವರು ದಲಿತ ಸಂಘರ್ಷ ಸಮಿತಿಯ ಜೊತೆಗಿನ ತಮ್ಮ ಒಡನಾಟ ಹಾಗೂ ಜೀತ ವಿಮುಕ್ತರಿಗೆ ಸರ್ಕಾರದಿಂದ ಪ್ರತ್ಯೇಕ ಜಾಗವನ್ನು ಮಂಜೂರು ಮಾಡಿಸಿ ಶಂಭೂಕ ನಗರ ಎಂಬ ಹೊಸ ಹಳ್ಳಿಯನ್ನೇ ಕಟ್ಟಿದ ಸಂಗತಿಗಳನ್ನು ಹಂಚಿಕೊಂಡಿದ್ದು ಮಾತ್ರವಲ್ಲದೆ ಅಂದು ಶಂಭೂಕ ನಗರ ಎಂಬ ಆ ಕಾಲೋನಿಗೆ ನಮ್ಮನ್ನೆಲ್ಲ ಕರೆದುಕೊಂಡು ಹೋಗಿದ್ದರು.

ಪ್ರೊ.ಗಂಗಾಧರ ಮೂರ್ತಿಯವರು ಅಂದು ಕಾಲೋನಿಗೆ ಭೇಟಿ ನೀಡಿದ ಕೂಡಲೇ ಅಲ್ಲಿದ್ದ ಜನರು ’ಸರ್ ಬಂದಿದ್ದಾರೆ’ ಎಂದು ಒಬ್ಬರಿಗೊಬ್ಬರು ಮಾಹಿತಿಯನ್ನು ನೀಡಿಕೊಂಡು ಅವರ ಜೊತೆಗೆ ಖುಷಿಯಿಂದ ನೆರೆದದ್ದನ್ನು ನಾವು ಕಂಡೆವು. ಕಾಲೋನಿಯ ಜನರ ಕಷ್ಟ ಸುಖಗಳಿಗೆ ನಿರಂತರವಾಗಿ ಸ್ಪಂದಿಸುತ್ತಾ ಅವರ ಕೊನೆಯ ದಿನಗಳವರೆಗೂ ಶಂಭೂಕ ನಗರದ ಜನರ ಸಂಪರ್ಕವನ್ನು ಉಳಿಸಿಕೊಂಡಿದ್ದ ರೀತಿ ಅವರ ಚಳವಳಿಯ ಬದ್ಧತೆಯ ಮಾದರಿ.

1938ರಲ್ಲಿ ಗೌರಿಬಿದನೂರಿನ ವಿದುರಾಶ್ವತ್ಥದಲ್ಲಿ ನಡೆದ ಧ್ವಜ ಸತ್ಯಾಗ್ರಹ ಹತ್ಯಾಕಾಂಡದ (ದಕ್ಷಿಣದ ಜಲಿಯನ ವಾಲಾಬಾಗ್ ಎಂದೇ ಪ್ರಖ್ಯಾತವಾಗಿದೆ) ನೆನಪಿಗಾಗಿ ಸ್ಮಾರಕ ಮತ್ತು ಗ್ರಂಥಾಲಯ ರೂಪಿಸಿ ಅದರ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು ಪ್ರೊ.ಗಂಗಾಧರ ಮೂರ್ತಿಯವರು. ಜನಪರ ಚಳವಳಿಗಳಲ್ಲಿ ತೊಡಗಿಸಿಕೊಂಡೇ ಜತೆಜತೆಗೆ ಅತ್ಯುತ್ತಮವಾದ ಸಾಹಿತ್ಯ ಕೃತಿಗಳ ಅನುವಾದ ಮತ್ತು ರಚನೆಯಲ್ಲಿ ತೊಡಗಿ ಅಕ್ಷರದ ಮೂಲಕವೂ ಜಾಗೃತಿಯನ್ನು ಬಿತ್ತಿದರು. ಇಂದು ಜಾಗತಿಕ ಹಳ್ಳಿ ಎಂಬ ಹೆಬ್ಬಾವು ಚಳವಳಿಗಳನ್ನು ಸ್ವಲ್ಪಸ್ವಲ್ಪವೇ ನುಂಗಿಕೊಳ್ಳುತ್ತಿರುವ, ಬಂಡವಾಳಶಾಹಿಗಳು ಕೋಮುವಾದಿಗಳೊಂದಿಗೆ ಕೈಜೋಡಿಸಿರುವ ಈ ದುರಿತಕಾಲದಲ್ಲಿ ಪ್ರೊ. ಗಂಗಾಧರ ಮೂರ್ತಿಯವರು ನಮ್ಮೊಟ್ಟಿಗೆ ಇನ್ನಷ್ಟು ಕಾಲ ಇರಬೇಕಿತ್ತು ಎಂಬ ಭಾವನೆ ಮೂಡುವುದು ಈಗ ಸಹಜ. ಆದರೆ ಅವರು ಸದ್ಯ ಸ್ವಲ್ಪ ವಿಶ್ರಾಂತಿಯಲ್ಲಿದ್ದಾರೆಂದು ಭಾವಿಸಿ ನಾವೆಲ್ಲರೂ ಅವರ ಕೆಲಸಗಳನ್ನು ಮುಂದುವರಿಸೋಣ ಎಂಬುದಷ್ಟೇ ಈಗ ನಮಗೆ ನಾವೇ ಮಾಡಿಕೊಳ್ಳುವ ಸಾಂತ್ವನ.


ಇದನ್ನೂ ಓದಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...