Homeಕರ್ನಾಟಕಶ್ರದ್ಧಾಂಜಲಿ; ಬಿಡುಗಡೆಯ ಕನಸುಗಾರ ಪ್ರೊ.ಗಂಗಾಧರಮೂರ್ತಿ

ಶ್ರದ್ಧಾಂಜಲಿ; ಬಿಡುಗಡೆಯ ಕನಸುಗಾರ ಪ್ರೊ.ಗಂಗಾಧರಮೂರ್ತಿ

- Advertisement -
- Advertisement -

70ರ ದಶಕದಲ್ಲಿ ಇಡೀ ಕರ್ನಾಟಕ ರಾಜ್ಯದಲ್ಲಿ ಸಂಚಲನವನ್ನುಂಟುಮಾಡಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮತ್ತೊಬ್ಬ ಹಿರಿಯ ಒಡನಾಡಿ ಪ್ರೊ. ಗಂಗಾಧರ ಮೂರ್ತಿ ಅವರು ಸೆಪ್ಟಂಬರ್ 10ರಂದು ನಮ್ಮನ್ನಗಲಿದ್ದಾರೆ. ನಮಗೆಲ್ಲ ಈ ಸಮಯದಲ್ಲಿ ಅವರು ಇನ್ನಷ್ಟು ಕಾಲ ಇರಬೇಕಿತ್ತು ಎಂದು ಅನಿಸುವುದೊಂದು ಸಹಜ ಭಾವನೆ. ಕನ್ನಡದ ಮಹತ್ವದ ಕವಿಗಳಾದ ಮತ್ತು ಹಿರಿಯ ದಲಿತ ಚಳವಳಿಯ ನೇತಾರರಾಗಿದ್ದ ಡಾ. ಸಿದ್ದಲಿಂಗಯ್ಯ, ಪ್ರೊ. ಕೆ.ಬಿ ಸಿದ್ದಯ್ಯ ನಮ್ಮನ್ನು ಅಗಲಿದಾಗಲೂ ಅನೇಕರಲ್ಲಿ ಈ ರೀತಿಯ ಭಾವನೆ ಮೂಡಿತ್ತು.

ದಲಿತ ಸಂಘರ್ಷ ಸಮಿತಿಯು ಸಾಮಾಜಿಕವಾಗಿ ತುಳಿಯಲ್ಪಟ್ಟ ಅಥವಾ ಬಂಧಿಸಲ್ಪಟ್ಟ ಸಮಾಜದ ಬಿಡುಗಡೆಗಾಗಿ ಹಂಬಲಿಸಿ ಈ ನೆಲದಲ್ಲಿ ರೂಪುಗೊಂಡ ಒಂದು ಮಹತ್ವದ, ಐತಿಹಾಸಿಕ ಚಳವಳಿ. ಸಾಮಾನ್ಯವಾಗಿ ದಲಿತ ಚಳವಳಿಯೆಂದರೆ ತಮ್ಮ ಹಕ್ಕುಗಳಿಗಾಗಿ ದಲಿತರೇ ನಡೆಸಿದ ಹೋರಾಟ ಎಂಬ ಭಾವನೆ ನಮ್ಮ ಸಮಾಜದ ಅನೇಕರಲ್ಲಿದೆ. ಕೆಲವೊಮ್ಮೆ ಈ ಭಾವನೆ ಸಹಜವೂ ಇರಬಹುದು. ಆದರೆ ಕರ್ನಾಟಕದ ದಲಿತ ಚಳವಳಿ ಸ್ವರೂಪ ಈ ನಿಟ್ಟಿನಲ್ಲಿ ಬಹಳ ಭಿನ್ನವಾದುದು. ಕನ್ನಡದ ನೆಲದಲ್ಲಿ ಮೊದಲ ತಲೆಮಾರಿನ ದಲಿತರು ತಮ್ಮ ನೋವು ನಲಿವುಗಳನ್ನ, ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ದಬ್ಬಾಳಿಕೆಗಳನ್ನು ಪ್ರಶ್ನೆ ಮಾಡುವಂತಹ, ಅಭಿವ್ಯಕ್ತಿಸುವಂತಹ ಸಾಹಿತ್ಯವನ್ನು ಬರೆದಾಗ ಅದನ್ನು ಬಹಳ ಪ್ರೀತಿಯಿಂದ ಸ್ವಾಗತಿಸಿ, ಸ್ವೀಕರಿಸಿ, ಪ್ರೋತ್ಸಾಹಿಸಿದ ಅನೇಕ ಪ್ರಜ್ಞಾವಂತರು ಈ ನಾಡಿನಲ್ಲಿ ಬದುಕಿ ಹೋಗಿದ್ದಾರೆ ಮತ್ತು ಇನ್ನು ಬದುಕುತ್ತಿದ್ದಾರೆ. ಅದೇ ರೀತಿ ದಲಿತರು ಸಂಘಟಿತರಾಗಿ ಚಳವಳಿಯನ್ನು ರೂಪಿಸಿದಾಗ ದಲಿತ ಸಮುದಾಯಕ್ಕೆ ಅದರ ನೇತೃತ್ವವನ್ನು ಕೊಟ್ಟು ಚಳವಳಿಗೆ ಬೆನ್ನೆಲುಬಾಗಿ ನಿಂತ ಅನೇಕ ದಲಿತೇತರ ಸಂಗಾತಿಗಳು ಈ ನಾಡಿನಲ್ಲಿ ಇದ್ದಾರೆ ಅಂತಹ ಮಹತ್ವದ ವ್ಯಕ್ತಿತ್ವಗಳಲ್ಲಿ ಒಬ್ಬರಾಗಿದ್ದವರು ಪ್ರೊ. ಗಂಗಾಧರ ಮೂರ್ತಿಯವರು. ಇಂಗ್ಲಿಷ್ ಸಾಹಿತ್ಯದ ಮೇಷ್ಟ್ರಾಗಿ ಅಧ್ಯಾಪನದ ಜೊತೆಗೆ ಅವಿಭಜಿತ ಕೋಲಾರ ಜಿಲ್ಲೆಯ ಗೌರಿಬಿದನೂರಿನ ಸುತ್ತಮುತ್ತ ದಲಿತ ಚಳವಳಿಯ ಸಂಗಾತಿಗಳ ಜೊತೆಗೂಡಿ ಅದನ್ನು ಕಟ್ಟಿ ಬೆಳೆಸಿದವರು. ಹಾಗೆಯೇ ಈ ಚಳವಳಿಯು ನಡೆಸಿದ ಮಹತ್ವದ ಭೂಮಿ ಹೋರಾಟಗಳಲ್ಲಿ ಒಂದಾದ ನಾಗಸಂದ್ರ ಭೂ ಹೋರಾಟದ ಮುಂಚೂಣಿಯಲ್ಲಿದ್ದವರು.

ಈ ಕುರಿತು ಅವರು ’ನಾಗಸಂದ್ರ ಭೂ ಆಕ್ರಮಣ ಚಳವಳಿ’ ಎಂಬ ಮಹತ್ವದ ಪುಸ್ತಕವನ್ನು ಬರೆದು ದಾಖಲಿಸಿದ್ದಾರೆ.ಇದು ಒಂದು ಭಾಗವಾದರೆ, ಪ್ರೊ ಗಂಗಾಧರಮೂರ್ತಿಯಂತವರ ವ್ಯಕ್ತಿತ್ವ ಈ ದೇಶಕ್ಕೆ, ಈ ಸಮಾಜಕ್ಕೆ ಯಾಕೆ ಬಹಳ ಅವಶ್ಯಕ ಎಂಬುದನ್ನು ಈ ಸಮಯದಲ್ಲಿ ನಾವು ಗಂಭೀರವಾಗಿ ಅವಲೋಕಿಸಬೇಕಾಗಿದೆ. ಅವರು ಬದುಕಿದ್ದಷ್ಟು ಕಾಲ ತಾವು ನಂಬಿದ ವಿಚಾರಗಳಿಗೆ ಬದ್ಧರಾಗಿ ಜನ ಚಳವಳಿಗಳ ಜೊತೆಗೆ ಬದುಕಿ ಮಾದರಿಯಾದರು. ಮೊದಲ ಬಾರಿಗೆ ನಾನು ಅವರನ್ನು ಭೇಟಿಯಾಗಿದ್ದು 2011ರ ಇಸವಿ. ಭಾರತದ ಮೊದಲ ತಲೆಮಾರಿನ ಸ್ತ್ರೀವಾದಿ ಚಿಂತಕಿ ಮತ್ತು ಬರಹಗಾರ್ತಿ ಪ್ರೊ. ಸೂಸಿಥಾರು ಅವರ ಜೊತೆಗೆ ’ದಕ್ಷಿಣ ಭಾರತದ ದಲಿತ ಬರಹಗಳು’ ಎಂಬ ಯೋಜನೆಗೆ ಕಾರ್ಯನಿರ್ವಹಿಸುವಾಗ ಅವರನ್ನು ಸಂದರ್ಶಿಸಲು ಗೌರಿಬಿದನೂರಿನ ಅವರ ಮನೆಗೆ ಭೇಟಿ ನೀಡಿದ್ದೆವು. ಆ ದಿನ ಅವರು ದಲಿತ ಸಂಘರ್ಷ ಸಮಿತಿಯ ಜೊತೆಗಿನ ತಮ್ಮ ಒಡನಾಟ ಹಾಗೂ ಜೀತ ವಿಮುಕ್ತರಿಗೆ ಸರ್ಕಾರದಿಂದ ಪ್ರತ್ಯೇಕ ಜಾಗವನ್ನು ಮಂಜೂರು ಮಾಡಿಸಿ ಶಂಭೂಕ ನಗರ ಎಂಬ ಹೊಸ ಹಳ್ಳಿಯನ್ನೇ ಕಟ್ಟಿದ ಸಂಗತಿಗಳನ್ನು ಹಂಚಿಕೊಂಡಿದ್ದು ಮಾತ್ರವಲ್ಲದೆ ಅಂದು ಶಂಭೂಕ ನಗರ ಎಂಬ ಆ ಕಾಲೋನಿಗೆ ನಮ್ಮನ್ನೆಲ್ಲ ಕರೆದುಕೊಂಡು ಹೋಗಿದ್ದರು.

ಪ್ರೊ.ಗಂಗಾಧರ ಮೂರ್ತಿಯವರು ಅಂದು ಕಾಲೋನಿಗೆ ಭೇಟಿ ನೀಡಿದ ಕೂಡಲೇ ಅಲ್ಲಿದ್ದ ಜನರು ’ಸರ್ ಬಂದಿದ್ದಾರೆ’ ಎಂದು ಒಬ್ಬರಿಗೊಬ್ಬರು ಮಾಹಿತಿಯನ್ನು ನೀಡಿಕೊಂಡು ಅವರ ಜೊತೆಗೆ ಖುಷಿಯಿಂದ ನೆರೆದದ್ದನ್ನು ನಾವು ಕಂಡೆವು. ಕಾಲೋನಿಯ ಜನರ ಕಷ್ಟ ಸುಖಗಳಿಗೆ ನಿರಂತರವಾಗಿ ಸ್ಪಂದಿಸುತ್ತಾ ಅವರ ಕೊನೆಯ ದಿನಗಳವರೆಗೂ ಶಂಭೂಕ ನಗರದ ಜನರ ಸಂಪರ್ಕವನ್ನು ಉಳಿಸಿಕೊಂಡಿದ್ದ ರೀತಿ ಅವರ ಚಳವಳಿಯ ಬದ್ಧತೆಯ ಮಾದರಿ.

1938ರಲ್ಲಿ ಗೌರಿಬಿದನೂರಿನ ವಿದುರಾಶ್ವತ್ಥದಲ್ಲಿ ನಡೆದ ಧ್ವಜ ಸತ್ಯಾಗ್ರಹ ಹತ್ಯಾಕಾಂಡದ (ದಕ್ಷಿಣದ ಜಲಿಯನ ವಾಲಾಬಾಗ್ ಎಂದೇ ಪ್ರಖ್ಯಾತವಾಗಿದೆ) ನೆನಪಿಗಾಗಿ ಸ್ಮಾರಕ ಮತ್ತು ಗ್ರಂಥಾಲಯ ರೂಪಿಸಿ ಅದರ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು ಪ್ರೊ.ಗಂಗಾಧರ ಮೂರ್ತಿಯವರು. ಜನಪರ ಚಳವಳಿಗಳಲ್ಲಿ ತೊಡಗಿಸಿಕೊಂಡೇ ಜತೆಜತೆಗೆ ಅತ್ಯುತ್ತಮವಾದ ಸಾಹಿತ್ಯ ಕೃತಿಗಳ ಅನುವಾದ ಮತ್ತು ರಚನೆಯಲ್ಲಿ ತೊಡಗಿ ಅಕ್ಷರದ ಮೂಲಕವೂ ಜಾಗೃತಿಯನ್ನು ಬಿತ್ತಿದರು. ಇಂದು ಜಾಗತಿಕ ಹಳ್ಳಿ ಎಂಬ ಹೆಬ್ಬಾವು ಚಳವಳಿಗಳನ್ನು ಸ್ವಲ್ಪಸ್ವಲ್ಪವೇ ನುಂಗಿಕೊಳ್ಳುತ್ತಿರುವ, ಬಂಡವಾಳಶಾಹಿಗಳು ಕೋಮುವಾದಿಗಳೊಂದಿಗೆ ಕೈಜೋಡಿಸಿರುವ ಈ ದುರಿತಕಾಲದಲ್ಲಿ ಪ್ರೊ. ಗಂಗಾಧರ ಮೂರ್ತಿಯವರು ನಮ್ಮೊಟ್ಟಿಗೆ ಇನ್ನಷ್ಟು ಕಾಲ ಇರಬೇಕಿತ್ತು ಎಂಬ ಭಾವನೆ ಮೂಡುವುದು ಈಗ ಸಹಜ. ಆದರೆ ಅವರು ಸದ್ಯ ಸ್ವಲ್ಪ ವಿಶ್ರಾಂತಿಯಲ್ಲಿದ್ದಾರೆಂದು ಭಾವಿಸಿ ನಾವೆಲ್ಲರೂ ಅವರ ಕೆಲಸಗಳನ್ನು ಮುಂದುವರಿಸೋಣ ಎಂಬುದಷ್ಟೇ ಈಗ ನಮಗೆ ನಾವೇ ಮಾಡಿಕೊಳ್ಳುವ ಸಾಂತ್ವನ.


ಇದನ್ನೂ ಓದಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...