Homeಕರ್ನಾಟಕಶ್ರದ್ಧಾಂಜಲಿ; ಬಿಡುಗಡೆಯ ಕನಸುಗಾರ ಪ್ರೊ.ಗಂಗಾಧರಮೂರ್ತಿ

ಶ್ರದ್ಧಾಂಜಲಿ; ಬಿಡುಗಡೆಯ ಕನಸುಗಾರ ಪ್ರೊ.ಗಂಗಾಧರಮೂರ್ತಿ

- Advertisement -
- Advertisement -

70ರ ದಶಕದಲ್ಲಿ ಇಡೀ ಕರ್ನಾಟಕ ರಾಜ್ಯದಲ್ಲಿ ಸಂಚಲನವನ್ನುಂಟುಮಾಡಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮತ್ತೊಬ್ಬ ಹಿರಿಯ ಒಡನಾಡಿ ಪ್ರೊ. ಗಂಗಾಧರ ಮೂರ್ತಿ ಅವರು ಸೆಪ್ಟಂಬರ್ 10ರಂದು ನಮ್ಮನ್ನಗಲಿದ್ದಾರೆ. ನಮಗೆಲ್ಲ ಈ ಸಮಯದಲ್ಲಿ ಅವರು ಇನ್ನಷ್ಟು ಕಾಲ ಇರಬೇಕಿತ್ತು ಎಂದು ಅನಿಸುವುದೊಂದು ಸಹಜ ಭಾವನೆ. ಕನ್ನಡದ ಮಹತ್ವದ ಕವಿಗಳಾದ ಮತ್ತು ಹಿರಿಯ ದಲಿತ ಚಳವಳಿಯ ನೇತಾರರಾಗಿದ್ದ ಡಾ. ಸಿದ್ದಲಿಂಗಯ್ಯ, ಪ್ರೊ. ಕೆ.ಬಿ ಸಿದ್ದಯ್ಯ ನಮ್ಮನ್ನು ಅಗಲಿದಾಗಲೂ ಅನೇಕರಲ್ಲಿ ಈ ರೀತಿಯ ಭಾವನೆ ಮೂಡಿತ್ತು.

ದಲಿತ ಸಂಘರ್ಷ ಸಮಿತಿಯು ಸಾಮಾಜಿಕವಾಗಿ ತುಳಿಯಲ್ಪಟ್ಟ ಅಥವಾ ಬಂಧಿಸಲ್ಪಟ್ಟ ಸಮಾಜದ ಬಿಡುಗಡೆಗಾಗಿ ಹಂಬಲಿಸಿ ಈ ನೆಲದಲ್ಲಿ ರೂಪುಗೊಂಡ ಒಂದು ಮಹತ್ವದ, ಐತಿಹಾಸಿಕ ಚಳವಳಿ. ಸಾಮಾನ್ಯವಾಗಿ ದಲಿತ ಚಳವಳಿಯೆಂದರೆ ತಮ್ಮ ಹಕ್ಕುಗಳಿಗಾಗಿ ದಲಿತರೇ ನಡೆಸಿದ ಹೋರಾಟ ಎಂಬ ಭಾವನೆ ನಮ್ಮ ಸಮಾಜದ ಅನೇಕರಲ್ಲಿದೆ. ಕೆಲವೊಮ್ಮೆ ಈ ಭಾವನೆ ಸಹಜವೂ ಇರಬಹುದು. ಆದರೆ ಕರ್ನಾಟಕದ ದಲಿತ ಚಳವಳಿ ಸ್ವರೂಪ ಈ ನಿಟ್ಟಿನಲ್ಲಿ ಬಹಳ ಭಿನ್ನವಾದುದು. ಕನ್ನಡದ ನೆಲದಲ್ಲಿ ಮೊದಲ ತಲೆಮಾರಿನ ದಲಿತರು ತಮ್ಮ ನೋವು ನಲಿವುಗಳನ್ನ, ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ದಬ್ಬಾಳಿಕೆಗಳನ್ನು ಪ್ರಶ್ನೆ ಮಾಡುವಂತಹ, ಅಭಿವ್ಯಕ್ತಿಸುವಂತಹ ಸಾಹಿತ್ಯವನ್ನು ಬರೆದಾಗ ಅದನ್ನು ಬಹಳ ಪ್ರೀತಿಯಿಂದ ಸ್ವಾಗತಿಸಿ, ಸ್ವೀಕರಿಸಿ, ಪ್ರೋತ್ಸಾಹಿಸಿದ ಅನೇಕ ಪ್ರಜ್ಞಾವಂತರು ಈ ನಾಡಿನಲ್ಲಿ ಬದುಕಿ ಹೋಗಿದ್ದಾರೆ ಮತ್ತು ಇನ್ನು ಬದುಕುತ್ತಿದ್ದಾರೆ. ಅದೇ ರೀತಿ ದಲಿತರು ಸಂಘಟಿತರಾಗಿ ಚಳವಳಿಯನ್ನು ರೂಪಿಸಿದಾಗ ದಲಿತ ಸಮುದಾಯಕ್ಕೆ ಅದರ ನೇತೃತ್ವವನ್ನು ಕೊಟ್ಟು ಚಳವಳಿಗೆ ಬೆನ್ನೆಲುಬಾಗಿ ನಿಂತ ಅನೇಕ ದಲಿತೇತರ ಸಂಗಾತಿಗಳು ಈ ನಾಡಿನಲ್ಲಿ ಇದ್ದಾರೆ ಅಂತಹ ಮಹತ್ವದ ವ್ಯಕ್ತಿತ್ವಗಳಲ್ಲಿ ಒಬ್ಬರಾಗಿದ್ದವರು ಪ್ರೊ. ಗಂಗಾಧರ ಮೂರ್ತಿಯವರು. ಇಂಗ್ಲಿಷ್ ಸಾಹಿತ್ಯದ ಮೇಷ್ಟ್ರಾಗಿ ಅಧ್ಯಾಪನದ ಜೊತೆಗೆ ಅವಿಭಜಿತ ಕೋಲಾರ ಜಿಲ್ಲೆಯ ಗೌರಿಬಿದನೂರಿನ ಸುತ್ತಮುತ್ತ ದಲಿತ ಚಳವಳಿಯ ಸಂಗಾತಿಗಳ ಜೊತೆಗೂಡಿ ಅದನ್ನು ಕಟ್ಟಿ ಬೆಳೆಸಿದವರು. ಹಾಗೆಯೇ ಈ ಚಳವಳಿಯು ನಡೆಸಿದ ಮಹತ್ವದ ಭೂಮಿ ಹೋರಾಟಗಳಲ್ಲಿ ಒಂದಾದ ನಾಗಸಂದ್ರ ಭೂ ಹೋರಾಟದ ಮುಂಚೂಣಿಯಲ್ಲಿದ್ದವರು.

ಈ ಕುರಿತು ಅವರು ’ನಾಗಸಂದ್ರ ಭೂ ಆಕ್ರಮಣ ಚಳವಳಿ’ ಎಂಬ ಮಹತ್ವದ ಪುಸ್ತಕವನ್ನು ಬರೆದು ದಾಖಲಿಸಿದ್ದಾರೆ.ಇದು ಒಂದು ಭಾಗವಾದರೆ, ಪ್ರೊ ಗಂಗಾಧರಮೂರ್ತಿಯಂತವರ ವ್ಯಕ್ತಿತ್ವ ಈ ದೇಶಕ್ಕೆ, ಈ ಸಮಾಜಕ್ಕೆ ಯಾಕೆ ಬಹಳ ಅವಶ್ಯಕ ಎಂಬುದನ್ನು ಈ ಸಮಯದಲ್ಲಿ ನಾವು ಗಂಭೀರವಾಗಿ ಅವಲೋಕಿಸಬೇಕಾಗಿದೆ. ಅವರು ಬದುಕಿದ್ದಷ್ಟು ಕಾಲ ತಾವು ನಂಬಿದ ವಿಚಾರಗಳಿಗೆ ಬದ್ಧರಾಗಿ ಜನ ಚಳವಳಿಗಳ ಜೊತೆಗೆ ಬದುಕಿ ಮಾದರಿಯಾದರು. ಮೊದಲ ಬಾರಿಗೆ ನಾನು ಅವರನ್ನು ಭೇಟಿಯಾಗಿದ್ದು 2011ರ ಇಸವಿ. ಭಾರತದ ಮೊದಲ ತಲೆಮಾರಿನ ಸ್ತ್ರೀವಾದಿ ಚಿಂತಕಿ ಮತ್ತು ಬರಹಗಾರ್ತಿ ಪ್ರೊ. ಸೂಸಿಥಾರು ಅವರ ಜೊತೆಗೆ ’ದಕ್ಷಿಣ ಭಾರತದ ದಲಿತ ಬರಹಗಳು’ ಎಂಬ ಯೋಜನೆಗೆ ಕಾರ್ಯನಿರ್ವಹಿಸುವಾಗ ಅವರನ್ನು ಸಂದರ್ಶಿಸಲು ಗೌರಿಬಿದನೂರಿನ ಅವರ ಮನೆಗೆ ಭೇಟಿ ನೀಡಿದ್ದೆವು. ಆ ದಿನ ಅವರು ದಲಿತ ಸಂಘರ್ಷ ಸಮಿತಿಯ ಜೊತೆಗಿನ ತಮ್ಮ ಒಡನಾಟ ಹಾಗೂ ಜೀತ ವಿಮುಕ್ತರಿಗೆ ಸರ್ಕಾರದಿಂದ ಪ್ರತ್ಯೇಕ ಜಾಗವನ್ನು ಮಂಜೂರು ಮಾಡಿಸಿ ಶಂಭೂಕ ನಗರ ಎಂಬ ಹೊಸ ಹಳ್ಳಿಯನ್ನೇ ಕಟ್ಟಿದ ಸಂಗತಿಗಳನ್ನು ಹಂಚಿಕೊಂಡಿದ್ದು ಮಾತ್ರವಲ್ಲದೆ ಅಂದು ಶಂಭೂಕ ನಗರ ಎಂಬ ಆ ಕಾಲೋನಿಗೆ ನಮ್ಮನ್ನೆಲ್ಲ ಕರೆದುಕೊಂಡು ಹೋಗಿದ್ದರು.

ಪ್ರೊ.ಗಂಗಾಧರ ಮೂರ್ತಿಯವರು ಅಂದು ಕಾಲೋನಿಗೆ ಭೇಟಿ ನೀಡಿದ ಕೂಡಲೇ ಅಲ್ಲಿದ್ದ ಜನರು ’ಸರ್ ಬಂದಿದ್ದಾರೆ’ ಎಂದು ಒಬ್ಬರಿಗೊಬ್ಬರು ಮಾಹಿತಿಯನ್ನು ನೀಡಿಕೊಂಡು ಅವರ ಜೊತೆಗೆ ಖುಷಿಯಿಂದ ನೆರೆದದ್ದನ್ನು ನಾವು ಕಂಡೆವು. ಕಾಲೋನಿಯ ಜನರ ಕಷ್ಟ ಸುಖಗಳಿಗೆ ನಿರಂತರವಾಗಿ ಸ್ಪಂದಿಸುತ್ತಾ ಅವರ ಕೊನೆಯ ದಿನಗಳವರೆಗೂ ಶಂಭೂಕ ನಗರದ ಜನರ ಸಂಪರ್ಕವನ್ನು ಉಳಿಸಿಕೊಂಡಿದ್ದ ರೀತಿ ಅವರ ಚಳವಳಿಯ ಬದ್ಧತೆಯ ಮಾದರಿ.

1938ರಲ್ಲಿ ಗೌರಿಬಿದನೂರಿನ ವಿದುರಾಶ್ವತ್ಥದಲ್ಲಿ ನಡೆದ ಧ್ವಜ ಸತ್ಯಾಗ್ರಹ ಹತ್ಯಾಕಾಂಡದ (ದಕ್ಷಿಣದ ಜಲಿಯನ ವಾಲಾಬಾಗ್ ಎಂದೇ ಪ್ರಖ್ಯಾತವಾಗಿದೆ) ನೆನಪಿಗಾಗಿ ಸ್ಮಾರಕ ಮತ್ತು ಗ್ರಂಥಾಲಯ ರೂಪಿಸಿ ಅದರ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು ಪ್ರೊ.ಗಂಗಾಧರ ಮೂರ್ತಿಯವರು. ಜನಪರ ಚಳವಳಿಗಳಲ್ಲಿ ತೊಡಗಿಸಿಕೊಂಡೇ ಜತೆಜತೆಗೆ ಅತ್ಯುತ್ತಮವಾದ ಸಾಹಿತ್ಯ ಕೃತಿಗಳ ಅನುವಾದ ಮತ್ತು ರಚನೆಯಲ್ಲಿ ತೊಡಗಿ ಅಕ್ಷರದ ಮೂಲಕವೂ ಜಾಗೃತಿಯನ್ನು ಬಿತ್ತಿದರು. ಇಂದು ಜಾಗತಿಕ ಹಳ್ಳಿ ಎಂಬ ಹೆಬ್ಬಾವು ಚಳವಳಿಗಳನ್ನು ಸ್ವಲ್ಪಸ್ವಲ್ಪವೇ ನುಂಗಿಕೊಳ್ಳುತ್ತಿರುವ, ಬಂಡವಾಳಶಾಹಿಗಳು ಕೋಮುವಾದಿಗಳೊಂದಿಗೆ ಕೈಜೋಡಿಸಿರುವ ಈ ದುರಿತಕಾಲದಲ್ಲಿ ಪ್ರೊ. ಗಂಗಾಧರ ಮೂರ್ತಿಯವರು ನಮ್ಮೊಟ್ಟಿಗೆ ಇನ್ನಷ್ಟು ಕಾಲ ಇರಬೇಕಿತ್ತು ಎಂಬ ಭಾವನೆ ಮೂಡುವುದು ಈಗ ಸಹಜ. ಆದರೆ ಅವರು ಸದ್ಯ ಸ್ವಲ್ಪ ವಿಶ್ರಾಂತಿಯಲ್ಲಿದ್ದಾರೆಂದು ಭಾವಿಸಿ ನಾವೆಲ್ಲರೂ ಅವರ ಕೆಲಸಗಳನ್ನು ಮುಂದುವರಿಸೋಣ ಎಂಬುದಷ್ಟೇ ಈಗ ನಮಗೆ ನಾವೇ ಮಾಡಿಕೊಳ್ಳುವ ಸಾಂತ್ವನ.


ಇದನ್ನೂ ಓದಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....