Homeಕರ್ನಾಟಕತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

ತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

- Advertisement -
- Advertisement -

ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು 2022-23ನೇ ಸಾಲಿನ ಹತ್ತನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದ್ದು, ಹೆಡಗೇವಾರ್‌ ಅವರ ಮೂಲ ಪಠ್ಯವನ್ನೇ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ತಿರುಚಿರುವುದು ಪಠ್ಯದ ಹಾಳೆ ಹಾಗೂ ಮುದ್ರಿತ ಹಳೆಯ ಕೃತಿಗಳಿಂದ ತಿಳಿದುಬಂದಿದೆ.

‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಪಠ್ಯವಾಗಿ ಇಡಲಾಗಿದ್ದು, ಹೆಡಗೇವಾರ್‌ ಅವರು ಹೇಳಿರುವ ವಿಚಾರಗಳನ್ನು ತಿರುಚಿ ಪಠ್ಯದಲ್ಲಿ ಅಳವಡಿಸಲಾಗಿದೆ. “ತ್ರಿವರ್ಣ ಧ್ವಜವನ್ನು ಹೆಡಗೇವಾರ್‌ ಒಪ್ಪಿರಲಿಲ್ಲ. ಭಗವಾಧ್ವಜವೇ ಶ್ರೇಷ್ಠ” ಎಂದು ಹೆಡಗೇವಾರ್‌ ಪ್ರತಿಪಾದಿಸಿದ್ದನ್ನು ಆರ್‌ಎಸ್‌ಎಸ್‌ ಮೂಲದವರೇ ಬರೆದ ಜೀವನಚರಿತ್ರೆಗಳಿಂದ ಸಾಬೀತಾಗುತ್ತದೆ. ಜೊತೆಗೆ ಹೆಡಗೇವಾರ್‌ ತಮ್ಮ ಭಾಷಣದಲ್ಲೂ ‘ಭಗವಾಧ್ವಜ’ದ ಪ್ರಸ್ತಾಪವನ್ನೇ ಮಾಡುತ್ತಾರೆ. ಆದರೆ ಚಕ್ರತೀರ್ಥ ನೇತೃತ್ವದ ಸಮಿತಿಯು ಭಾಗವಾಧ್ವಜ ಎಂಬುದನ್ನು ಕೇವಲ ಧ್ವಜ ಎಂದಷ್ಟೇ ಪ್ರಕಟಿಸಿ, ವಿದ್ಯಾರ್ಥಿಗಳ ದಿಕ್ಕು ತಪ್ಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್‌ಎಸ್‌ಎಸ್‌ ಮುಖ್ಯ ಕಚೇರಿಯಲ್ಲಿ ಸುಮಾರು 2002ರವರೆಗೂ ತ್ರಿವರ್ಣಧ್ವಜ ಹಾರಿಸಿರಲಿಲ್ಲ ಎಂಬುದು ಚರ್ಚೆಯಲ್ಲಿದೆ. ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪುವುದಿಲ್ಲ ಎಂಬುದು ಹೆಡಗೇವಾರ್‌ ಜೀವನಚರಿತ್ರೆಯಿಂದ ತಿಳಿದುಬರುತ್ತದೆ. ಆದರೆ ಪಠ್ಯಪುಸ್ತಕವನ್ನು ಪರಿಶೀಲಿಸಿ ಮರು ಪಠ್ಯ ಅಳವಡಿಸುವಾಗ ‘ಭಗವಾಧ್ವಜ’ ಎಂದಿರುವಲ್ಲಿ ‘ಭಗವಾ’ ಎಂಬ ಪದಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.

‘ಪರಮ ಪೂಜನೀಯ ಡಾ.ಹೆಡ್ಗೇವಾರ್‌’ ಎಂಬ ಹಳೆಯ ಕೃತಿಯಲ್ಲಿ ಪ್ರಕಟವಾಗಿರುವ ಭಾಷಣದಲ್ಲಿ ‘ಭಗವಾಧ್ವಜ’ ಎಂದು ಸ್ಪಷ್ಟವಾಗಿ ಉಲ್ಲೇಖಿತವಾಗಿದೆ. ಪುಟ ಸಂಖ್ಯೆ 78ರಲ್ಲಿನ ಈ ಸಾಲುಗಳನ್ನೇ ಗಮನವಿಟ್ಟು ನೋಡಬಹುದು.

“….ಯಾವ ಧ್ವಜವನ್ನು ನೋಡಿದ ಮಾತ್ರದಿಂದ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆಯೋ, ಯಾವುದನ್ನು ಕಂಡಕೂಡಲೇ ಹೃದಯದ ಭಾವನೆಗಳು ಉಕ್ಕಿ ಬರುತ್ತವೆಯೋ, ಅಂತೆಯೇ ಹೃದಯದಲ್ಲಿ ಒಂದು ವಿಶಿಷ್ಟ ಸ್ಫೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಭಗವಾಧ್ವಜವನ್ನು, ನಮ್ಮ ತತ್ವಗಳ ಪ್ರತೀಕವಾದ ಕಾರಣ, ನಾವು ನಮ್ಮ ಗುರುವೆಂದು ಭಾವಿಸುತ್ತೇವೆ. ಇದೇ ಕಾರಣದಿಂದಲೇ ಯಾವ ಒಬ್ಬ ವ್ಯಕ್ತಿಯನ್ನೂ ತನ್ನ ಗುರುವೆಂದು ಭಾವಿಸಲು ಸಂಘಕ್ಕೆ ಸರ್ವಥಾ ಇಚ್ಛೆಯಿಲ್ಲ” ಎಂದಿದೆ.

ಆದರೆ ಚಕ್ರತೀರ್ಥ ಸಮಿತಿಯ ಪರಿಶೀಲನೆಯಲ್ಲಿ ಮೂಲಪಠ್ಯವನ್ನು ಬದಲಿಸಲಾಗಿದೆ. ಕೆಲವು ಸಾಲುಗಳನ್ನು ಕೈಬಿಡಲಾಗಿದೆ. ಮೂಲ ಪಠ್ಯದಲ್ಲಿರುವ ಕೆಲವು ಸಾಲುಗಳನ್ನು ಕೈಬಿಡಲಾಗಿದ್ದು, ಅಲ್ಲಿ ‘ಸಂಘ’ (ಆರ್‌ಎಸ್‌ಎಸ್‌) ಎಂದಿರುವುದನ್ನು ಗಮನಿಸಬಹುದು.

ಇದನ್ನೂ ಓದಿರಿ: ಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

ಹತ್ತನೇ ತರಗತಿ ಪಠ್ಯದಲ್ಲೇನಿದೆ?

“ನಾವು ಧ್ವಜವನ್ನೇ ಗುರುವೆಂದು ಭಾವಿಸಿ, ಗುರುಪೂರ್ಣಿಮಾ ದಿನದಂದು ಅದನ್ನು ಪೂಜಿಸುತ್ತೇವೆ. ನಾವು ಯಾವ ವ್ಯಕ್ತಿಯನ್ನೂ ಪೂಜಿಸುವುದಿಲ್ಲ. ಯಾಕೆಂದರೆ ಯಾರೇ ಆಗಲೀ ಅವರು ತಮ್ಮ ಮಾರ್ಗದಲ್ಲಿ ಅಚಲರಾಗಿಯೇ ಇದ್ದಾರು ಎಂಬ ಭರವಸೆಯಾದರೂ ಏನು? ಕೇವಲ ತತ್ವವೊಂದೇ ಆ ಅಚಲ ಪದವಿಯಲ್ಲಿ ಇರಬಲ್ಲದು. ಅದನ್ನು ಧ್ವಜವೂ ಸಂಕೇತಿಸುವುದು. ಯಾವ ಧ್ವಜವನ್ನು ನೋಡಿದೊಡನೆ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣಿಗೆ ಕಟ್ಟುತ್ತವೆಯೋ ಯಾವುದನ್ನು ಕಂಡಕೂಡಲೇ ಹೃದಯ ಭಾವೆನೆಗಳು ಉಕ್ಕಿ ಬರುತ್ತವೆಯೋ, ಹೃದಯದಲ್ಲಿ ಅಪೂರ್ವ ಸ್ಪೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಧ್ವಜವನ್ನೇ ನಾವು ನಮ್ಮ ಗುರುವೆಂದು ಭಾವಿಸುತ್ತೇವೆ”.

ತ್ರಿವರ್ಣ ಧ್ವಜ v/s ಭಗವಾಧ್ವಜ

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪನವರು ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಭಗವಾಧ್ವಜ ಕುರಿತ ಒಲವನ್ನು ಮಕ್ಕಳ ಮೇಲೆ ಹೇರುವ ಹಿಡನ್‌ ಅಜೆಂಡಾವನ್ನು ಸರ್ಕಾರ ಮಾಡುತ್ತಿದೆಯೇ ಎಂಬ ಅನುಮಾನಗಳಿಗೆ ತಿರುಚಿದ ಪಠ್ಯ ಉಂಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುಂದಿನ ದಿನಗಳಲ್ಲಿ ಕೇಸರಿ ಧ್ವಜ ರಾಷ್ಟ್ರ ಧ್ವಜ ಆಗೋದು ಖಚಿತ ,ಭಾರತ ಹಿಂದೂರಾಷ್ಟ್ರ ಆಗೋದು ಖಚಿತ ,ಯಾವ ದೊಣ್ಣೆ ನಾಯಕನ ಅಪ್ಪಣೆ ಈ ವಿಚಾರದಲ್ಲಿ ಪಡೆಯುವ ,ಕೇಳುವ ಪ್ರಶ್ನೆಯೇ ಇಲ್ಲಾ ,ನಗರ ನಕ್ಸಲರಾಗಲಿ,ಗುಲಾಮರಾಗಲಿ,ಶಾಂತಿ ದೂತರಾಗಲಿ

  2. ಮನುವಾದಿಗಳ ಕುತಂತ್ರವನ್ನು ಬಯಲುಗೊಳಿಸಿದ ನಿಮಗೆ ಧನ್ಯವಾದಗಳು. ಮನುವಾದಿಗಳು ತಿರುಚುವುದರಲ್ಲಿ ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...