Homeಕರ್ನಾಟಕತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

ತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

- Advertisement -
- Advertisement -

ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು 2022-23ನೇ ಸಾಲಿನ ಹತ್ತನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದ್ದು, ಹೆಡಗೇವಾರ್‌ ಅವರ ಮೂಲ ಪಠ್ಯವನ್ನೇ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ತಿರುಚಿರುವುದು ಪಠ್ಯದ ಹಾಳೆ ಹಾಗೂ ಮುದ್ರಿತ ಹಳೆಯ ಕೃತಿಗಳಿಂದ ತಿಳಿದುಬಂದಿದೆ.

‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಪಠ್ಯವಾಗಿ ಇಡಲಾಗಿದ್ದು, ಹೆಡಗೇವಾರ್‌ ಅವರು ಹೇಳಿರುವ ವಿಚಾರಗಳನ್ನು ತಿರುಚಿ ಪಠ್ಯದಲ್ಲಿ ಅಳವಡಿಸಲಾಗಿದೆ. “ತ್ರಿವರ್ಣ ಧ್ವಜವನ್ನು ಹೆಡಗೇವಾರ್‌ ಒಪ್ಪಿರಲಿಲ್ಲ. ಭಗವಾಧ್ವಜವೇ ಶ್ರೇಷ್ಠ” ಎಂದು ಹೆಡಗೇವಾರ್‌ ಪ್ರತಿಪಾದಿಸಿದ್ದನ್ನು ಆರ್‌ಎಸ್‌ಎಸ್‌ ಮೂಲದವರೇ ಬರೆದ ಜೀವನಚರಿತ್ರೆಗಳಿಂದ ಸಾಬೀತಾಗುತ್ತದೆ. ಜೊತೆಗೆ ಹೆಡಗೇವಾರ್‌ ತಮ್ಮ ಭಾಷಣದಲ್ಲೂ ‘ಭಗವಾಧ್ವಜ’ದ ಪ್ರಸ್ತಾಪವನ್ನೇ ಮಾಡುತ್ತಾರೆ. ಆದರೆ ಚಕ್ರತೀರ್ಥ ನೇತೃತ್ವದ ಸಮಿತಿಯು ಭಾಗವಾಧ್ವಜ ಎಂಬುದನ್ನು ಕೇವಲ ಧ್ವಜ ಎಂದಷ್ಟೇ ಪ್ರಕಟಿಸಿ, ವಿದ್ಯಾರ್ಥಿಗಳ ದಿಕ್ಕು ತಪ್ಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್‌ಎಸ್‌ಎಸ್‌ ಮುಖ್ಯ ಕಚೇರಿಯಲ್ಲಿ ಸುಮಾರು 2002ರವರೆಗೂ ತ್ರಿವರ್ಣಧ್ವಜ ಹಾರಿಸಿರಲಿಲ್ಲ ಎಂಬುದು ಚರ್ಚೆಯಲ್ಲಿದೆ. ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪುವುದಿಲ್ಲ ಎಂಬುದು ಹೆಡಗೇವಾರ್‌ ಜೀವನಚರಿತ್ರೆಯಿಂದ ತಿಳಿದುಬರುತ್ತದೆ. ಆದರೆ ಪಠ್ಯಪುಸ್ತಕವನ್ನು ಪರಿಶೀಲಿಸಿ ಮರು ಪಠ್ಯ ಅಳವಡಿಸುವಾಗ ‘ಭಗವಾಧ್ವಜ’ ಎಂದಿರುವಲ್ಲಿ ‘ಭಗವಾ’ ಎಂಬ ಪದಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.

‘ಪರಮ ಪೂಜನೀಯ ಡಾ.ಹೆಡ್ಗೇವಾರ್‌’ ಎಂಬ ಹಳೆಯ ಕೃತಿಯಲ್ಲಿ ಪ್ರಕಟವಾಗಿರುವ ಭಾಷಣದಲ್ಲಿ ‘ಭಗವಾಧ್ವಜ’ ಎಂದು ಸ್ಪಷ್ಟವಾಗಿ ಉಲ್ಲೇಖಿತವಾಗಿದೆ. ಪುಟ ಸಂಖ್ಯೆ 78ರಲ್ಲಿನ ಈ ಸಾಲುಗಳನ್ನೇ ಗಮನವಿಟ್ಟು ನೋಡಬಹುದು.

“….ಯಾವ ಧ್ವಜವನ್ನು ನೋಡಿದ ಮಾತ್ರದಿಂದ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆಯೋ, ಯಾವುದನ್ನು ಕಂಡಕೂಡಲೇ ಹೃದಯದ ಭಾವನೆಗಳು ಉಕ್ಕಿ ಬರುತ್ತವೆಯೋ, ಅಂತೆಯೇ ಹೃದಯದಲ್ಲಿ ಒಂದು ವಿಶಿಷ್ಟ ಸ್ಫೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಭಗವಾಧ್ವಜವನ್ನು, ನಮ್ಮ ತತ್ವಗಳ ಪ್ರತೀಕವಾದ ಕಾರಣ, ನಾವು ನಮ್ಮ ಗುರುವೆಂದು ಭಾವಿಸುತ್ತೇವೆ. ಇದೇ ಕಾರಣದಿಂದಲೇ ಯಾವ ಒಬ್ಬ ವ್ಯಕ್ತಿಯನ್ನೂ ತನ್ನ ಗುರುವೆಂದು ಭಾವಿಸಲು ಸಂಘಕ್ಕೆ ಸರ್ವಥಾ ಇಚ್ಛೆಯಿಲ್ಲ” ಎಂದಿದೆ.

ಆದರೆ ಚಕ್ರತೀರ್ಥ ಸಮಿತಿಯ ಪರಿಶೀಲನೆಯಲ್ಲಿ ಮೂಲಪಠ್ಯವನ್ನು ಬದಲಿಸಲಾಗಿದೆ. ಕೆಲವು ಸಾಲುಗಳನ್ನು ಕೈಬಿಡಲಾಗಿದೆ. ಮೂಲ ಪಠ್ಯದಲ್ಲಿರುವ ಕೆಲವು ಸಾಲುಗಳನ್ನು ಕೈಬಿಡಲಾಗಿದ್ದು, ಅಲ್ಲಿ ‘ಸಂಘ’ (ಆರ್‌ಎಸ್‌ಎಸ್‌) ಎಂದಿರುವುದನ್ನು ಗಮನಿಸಬಹುದು.

ಇದನ್ನೂ ಓದಿರಿ: ಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

ಹತ್ತನೇ ತರಗತಿ ಪಠ್ಯದಲ್ಲೇನಿದೆ?

“ನಾವು ಧ್ವಜವನ್ನೇ ಗುರುವೆಂದು ಭಾವಿಸಿ, ಗುರುಪೂರ್ಣಿಮಾ ದಿನದಂದು ಅದನ್ನು ಪೂಜಿಸುತ್ತೇವೆ. ನಾವು ಯಾವ ವ್ಯಕ್ತಿಯನ್ನೂ ಪೂಜಿಸುವುದಿಲ್ಲ. ಯಾಕೆಂದರೆ ಯಾರೇ ಆಗಲೀ ಅವರು ತಮ್ಮ ಮಾರ್ಗದಲ್ಲಿ ಅಚಲರಾಗಿಯೇ ಇದ್ದಾರು ಎಂಬ ಭರವಸೆಯಾದರೂ ಏನು? ಕೇವಲ ತತ್ವವೊಂದೇ ಆ ಅಚಲ ಪದವಿಯಲ್ಲಿ ಇರಬಲ್ಲದು. ಅದನ್ನು ಧ್ವಜವೂ ಸಂಕೇತಿಸುವುದು. ಯಾವ ಧ್ವಜವನ್ನು ನೋಡಿದೊಡನೆ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣಿಗೆ ಕಟ್ಟುತ್ತವೆಯೋ ಯಾವುದನ್ನು ಕಂಡಕೂಡಲೇ ಹೃದಯ ಭಾವೆನೆಗಳು ಉಕ್ಕಿ ಬರುತ್ತವೆಯೋ, ಹೃದಯದಲ್ಲಿ ಅಪೂರ್ವ ಸ್ಪೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಧ್ವಜವನ್ನೇ ನಾವು ನಮ್ಮ ಗುರುವೆಂದು ಭಾವಿಸುತ್ತೇವೆ”.

ತ್ರಿವರ್ಣ ಧ್ವಜ v/s ಭಗವಾಧ್ವಜ

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪನವರು ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಭಗವಾಧ್ವಜ ಕುರಿತ ಒಲವನ್ನು ಮಕ್ಕಳ ಮೇಲೆ ಹೇರುವ ಹಿಡನ್‌ ಅಜೆಂಡಾವನ್ನು ಸರ್ಕಾರ ಮಾಡುತ್ತಿದೆಯೇ ಎಂಬ ಅನುಮಾನಗಳಿಗೆ ತಿರುಚಿದ ಪಠ್ಯ ಉಂಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುಂದಿನ ದಿನಗಳಲ್ಲಿ ಕೇಸರಿ ಧ್ವಜ ರಾಷ್ಟ್ರ ಧ್ವಜ ಆಗೋದು ಖಚಿತ ,ಭಾರತ ಹಿಂದೂರಾಷ್ಟ್ರ ಆಗೋದು ಖಚಿತ ,ಯಾವ ದೊಣ್ಣೆ ನಾಯಕನ ಅಪ್ಪಣೆ ಈ ವಿಚಾರದಲ್ಲಿ ಪಡೆಯುವ ,ಕೇಳುವ ಪ್ರಶ್ನೆಯೇ ಇಲ್ಲಾ ,ನಗರ ನಕ್ಸಲರಾಗಲಿ,ಗುಲಾಮರಾಗಲಿ,ಶಾಂತಿ ದೂತರಾಗಲಿ

  2. ಮನುವಾದಿಗಳ ಕುತಂತ್ರವನ್ನು ಬಯಲುಗೊಳಿಸಿದ ನಿಮಗೆ ಧನ್ಯವಾದಗಳು. ಮನುವಾದಿಗಳು ತಿರುಚುವುದರಲ್ಲಿ ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...