Homeಕರ್ನಾಟಕತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

ತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

- Advertisement -
- Advertisement -

ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು 2022-23ನೇ ಸಾಲಿನ ಹತ್ತನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದ್ದು, ಹೆಡಗೇವಾರ್‌ ಅವರ ಮೂಲ ಪಠ್ಯವನ್ನೇ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ತಿರುಚಿರುವುದು ಪಠ್ಯದ ಹಾಳೆ ಹಾಗೂ ಮುದ್ರಿತ ಹಳೆಯ ಕೃತಿಗಳಿಂದ ತಿಳಿದುಬಂದಿದೆ.

‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಪಠ್ಯವಾಗಿ ಇಡಲಾಗಿದ್ದು, ಹೆಡಗೇವಾರ್‌ ಅವರು ಹೇಳಿರುವ ವಿಚಾರಗಳನ್ನು ತಿರುಚಿ ಪಠ್ಯದಲ್ಲಿ ಅಳವಡಿಸಲಾಗಿದೆ. “ತ್ರಿವರ್ಣ ಧ್ವಜವನ್ನು ಹೆಡಗೇವಾರ್‌ ಒಪ್ಪಿರಲಿಲ್ಲ. ಭಗವಾಧ್ವಜವೇ ಶ್ರೇಷ್ಠ” ಎಂದು ಹೆಡಗೇವಾರ್‌ ಪ್ರತಿಪಾದಿಸಿದ್ದನ್ನು ಆರ್‌ಎಸ್‌ಎಸ್‌ ಮೂಲದವರೇ ಬರೆದ ಜೀವನಚರಿತ್ರೆಗಳಿಂದ ಸಾಬೀತಾಗುತ್ತದೆ. ಜೊತೆಗೆ ಹೆಡಗೇವಾರ್‌ ತಮ್ಮ ಭಾಷಣದಲ್ಲೂ ‘ಭಗವಾಧ್ವಜ’ದ ಪ್ರಸ್ತಾಪವನ್ನೇ ಮಾಡುತ್ತಾರೆ. ಆದರೆ ಚಕ್ರತೀರ್ಥ ನೇತೃತ್ವದ ಸಮಿತಿಯು ಭಾಗವಾಧ್ವಜ ಎಂಬುದನ್ನು ಕೇವಲ ಧ್ವಜ ಎಂದಷ್ಟೇ ಪ್ರಕಟಿಸಿ, ವಿದ್ಯಾರ್ಥಿಗಳ ದಿಕ್ಕು ತಪ್ಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್‌ಎಸ್‌ಎಸ್‌ ಮುಖ್ಯ ಕಚೇರಿಯಲ್ಲಿ ಸುಮಾರು 2002ರವರೆಗೂ ತ್ರಿವರ್ಣಧ್ವಜ ಹಾರಿಸಿರಲಿಲ್ಲ ಎಂಬುದು ಚರ್ಚೆಯಲ್ಲಿದೆ. ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪುವುದಿಲ್ಲ ಎಂಬುದು ಹೆಡಗೇವಾರ್‌ ಜೀವನಚರಿತ್ರೆಯಿಂದ ತಿಳಿದುಬರುತ್ತದೆ. ಆದರೆ ಪಠ್ಯಪುಸ್ತಕವನ್ನು ಪರಿಶೀಲಿಸಿ ಮರು ಪಠ್ಯ ಅಳವಡಿಸುವಾಗ ‘ಭಗವಾಧ್ವಜ’ ಎಂದಿರುವಲ್ಲಿ ‘ಭಗವಾ’ ಎಂಬ ಪದಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.

‘ಪರಮ ಪೂಜನೀಯ ಡಾ.ಹೆಡ್ಗೇವಾರ್‌’ ಎಂಬ ಹಳೆಯ ಕೃತಿಯಲ್ಲಿ ಪ್ರಕಟವಾಗಿರುವ ಭಾಷಣದಲ್ಲಿ ‘ಭಗವಾಧ್ವಜ’ ಎಂದು ಸ್ಪಷ್ಟವಾಗಿ ಉಲ್ಲೇಖಿತವಾಗಿದೆ. ಪುಟ ಸಂಖ್ಯೆ 78ರಲ್ಲಿನ ಈ ಸಾಲುಗಳನ್ನೇ ಗಮನವಿಟ್ಟು ನೋಡಬಹುದು.

“….ಯಾವ ಧ್ವಜವನ್ನು ನೋಡಿದ ಮಾತ್ರದಿಂದ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆಯೋ, ಯಾವುದನ್ನು ಕಂಡಕೂಡಲೇ ಹೃದಯದ ಭಾವನೆಗಳು ಉಕ್ಕಿ ಬರುತ್ತವೆಯೋ, ಅಂತೆಯೇ ಹೃದಯದಲ್ಲಿ ಒಂದು ವಿಶಿಷ್ಟ ಸ್ಫೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಭಗವಾಧ್ವಜವನ್ನು, ನಮ್ಮ ತತ್ವಗಳ ಪ್ರತೀಕವಾದ ಕಾರಣ, ನಾವು ನಮ್ಮ ಗುರುವೆಂದು ಭಾವಿಸುತ್ತೇವೆ. ಇದೇ ಕಾರಣದಿಂದಲೇ ಯಾವ ಒಬ್ಬ ವ್ಯಕ್ತಿಯನ್ನೂ ತನ್ನ ಗುರುವೆಂದು ಭಾವಿಸಲು ಸಂಘಕ್ಕೆ ಸರ್ವಥಾ ಇಚ್ಛೆಯಿಲ್ಲ” ಎಂದಿದೆ.

ಆದರೆ ಚಕ್ರತೀರ್ಥ ಸಮಿತಿಯ ಪರಿಶೀಲನೆಯಲ್ಲಿ ಮೂಲಪಠ್ಯವನ್ನು ಬದಲಿಸಲಾಗಿದೆ. ಕೆಲವು ಸಾಲುಗಳನ್ನು ಕೈಬಿಡಲಾಗಿದೆ. ಮೂಲ ಪಠ್ಯದಲ್ಲಿರುವ ಕೆಲವು ಸಾಲುಗಳನ್ನು ಕೈಬಿಡಲಾಗಿದ್ದು, ಅಲ್ಲಿ ‘ಸಂಘ’ (ಆರ್‌ಎಸ್‌ಎಸ್‌) ಎಂದಿರುವುದನ್ನು ಗಮನಿಸಬಹುದು.

ಇದನ್ನೂ ಓದಿರಿ: ಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

ಹತ್ತನೇ ತರಗತಿ ಪಠ್ಯದಲ್ಲೇನಿದೆ?

“ನಾವು ಧ್ವಜವನ್ನೇ ಗುರುವೆಂದು ಭಾವಿಸಿ, ಗುರುಪೂರ್ಣಿಮಾ ದಿನದಂದು ಅದನ್ನು ಪೂಜಿಸುತ್ತೇವೆ. ನಾವು ಯಾವ ವ್ಯಕ್ತಿಯನ್ನೂ ಪೂಜಿಸುವುದಿಲ್ಲ. ಯಾಕೆಂದರೆ ಯಾರೇ ಆಗಲೀ ಅವರು ತಮ್ಮ ಮಾರ್ಗದಲ್ಲಿ ಅಚಲರಾಗಿಯೇ ಇದ್ದಾರು ಎಂಬ ಭರವಸೆಯಾದರೂ ಏನು? ಕೇವಲ ತತ್ವವೊಂದೇ ಆ ಅಚಲ ಪದವಿಯಲ್ಲಿ ಇರಬಲ್ಲದು. ಅದನ್ನು ಧ್ವಜವೂ ಸಂಕೇತಿಸುವುದು. ಯಾವ ಧ್ವಜವನ್ನು ನೋಡಿದೊಡನೆ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣಿಗೆ ಕಟ್ಟುತ್ತವೆಯೋ ಯಾವುದನ್ನು ಕಂಡಕೂಡಲೇ ಹೃದಯ ಭಾವೆನೆಗಳು ಉಕ್ಕಿ ಬರುತ್ತವೆಯೋ, ಹೃದಯದಲ್ಲಿ ಅಪೂರ್ವ ಸ್ಪೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಧ್ವಜವನ್ನೇ ನಾವು ನಮ್ಮ ಗುರುವೆಂದು ಭಾವಿಸುತ್ತೇವೆ”.

ತ್ರಿವರ್ಣ ಧ್ವಜ v/s ಭಗವಾಧ್ವಜ

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪನವರು ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಭಗವಾಧ್ವಜ ಕುರಿತ ಒಲವನ್ನು ಮಕ್ಕಳ ಮೇಲೆ ಹೇರುವ ಹಿಡನ್‌ ಅಜೆಂಡಾವನ್ನು ಸರ್ಕಾರ ಮಾಡುತ್ತಿದೆಯೇ ಎಂಬ ಅನುಮಾನಗಳಿಗೆ ತಿರುಚಿದ ಪಠ್ಯ ಉಂಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುಂದಿನ ದಿನಗಳಲ್ಲಿ ಕೇಸರಿ ಧ್ವಜ ರಾಷ್ಟ್ರ ಧ್ವಜ ಆಗೋದು ಖಚಿತ ,ಭಾರತ ಹಿಂದೂರಾಷ್ಟ್ರ ಆಗೋದು ಖಚಿತ ,ಯಾವ ದೊಣ್ಣೆ ನಾಯಕನ ಅಪ್ಪಣೆ ಈ ವಿಚಾರದಲ್ಲಿ ಪಡೆಯುವ ,ಕೇಳುವ ಪ್ರಶ್ನೆಯೇ ಇಲ್ಲಾ ,ನಗರ ನಕ್ಸಲರಾಗಲಿ,ಗುಲಾಮರಾಗಲಿ,ಶಾಂತಿ ದೂತರಾಗಲಿ

  2. ಮನುವಾದಿಗಳ ಕುತಂತ್ರವನ್ನು ಬಯಲುಗೊಳಿಸಿದ ನಿಮಗೆ ಧನ್ಯವಾದಗಳು. ಮನುವಾದಿಗಳು ತಿರುಚುವುದರಲ್ಲಿ ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಪ್ರಾಧಿಕಾರ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...