Homeಕರ್ನಾಟಕತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

ತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

- Advertisement -
- Advertisement -

ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು 2022-23ನೇ ಸಾಲಿನ ಹತ್ತನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದ್ದು, ಹೆಡಗೇವಾರ್‌ ಅವರ ಮೂಲ ಪಠ್ಯವನ್ನೇ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ತಿರುಚಿರುವುದು ಪಠ್ಯದ ಹಾಳೆ ಹಾಗೂ ಮುದ್ರಿತ ಹಳೆಯ ಕೃತಿಗಳಿಂದ ತಿಳಿದುಬಂದಿದೆ.

‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಪಠ್ಯವಾಗಿ ಇಡಲಾಗಿದ್ದು, ಹೆಡಗೇವಾರ್‌ ಅವರು ಹೇಳಿರುವ ವಿಚಾರಗಳನ್ನು ತಿರುಚಿ ಪಠ್ಯದಲ್ಲಿ ಅಳವಡಿಸಲಾಗಿದೆ. “ತ್ರಿವರ್ಣ ಧ್ವಜವನ್ನು ಹೆಡಗೇವಾರ್‌ ಒಪ್ಪಿರಲಿಲ್ಲ. ಭಗವಾಧ್ವಜವೇ ಶ್ರೇಷ್ಠ” ಎಂದು ಹೆಡಗೇವಾರ್‌ ಪ್ರತಿಪಾದಿಸಿದ್ದನ್ನು ಆರ್‌ಎಸ್‌ಎಸ್‌ ಮೂಲದವರೇ ಬರೆದ ಜೀವನಚರಿತ್ರೆಗಳಿಂದ ಸಾಬೀತಾಗುತ್ತದೆ. ಜೊತೆಗೆ ಹೆಡಗೇವಾರ್‌ ತಮ್ಮ ಭಾಷಣದಲ್ಲೂ ‘ಭಗವಾಧ್ವಜ’ದ ಪ್ರಸ್ತಾಪವನ್ನೇ ಮಾಡುತ್ತಾರೆ. ಆದರೆ ಚಕ್ರತೀರ್ಥ ನೇತೃತ್ವದ ಸಮಿತಿಯು ಭಾಗವಾಧ್ವಜ ಎಂಬುದನ್ನು ಕೇವಲ ಧ್ವಜ ಎಂದಷ್ಟೇ ಪ್ರಕಟಿಸಿ, ವಿದ್ಯಾರ್ಥಿಗಳ ದಿಕ್ಕು ತಪ್ಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್‌ಎಸ್‌ಎಸ್‌ ಮುಖ್ಯ ಕಚೇರಿಯಲ್ಲಿ ಸುಮಾರು 2002ರವರೆಗೂ ತ್ರಿವರ್ಣಧ್ವಜ ಹಾರಿಸಿರಲಿಲ್ಲ ಎಂಬುದು ಚರ್ಚೆಯಲ್ಲಿದೆ. ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪುವುದಿಲ್ಲ ಎಂಬುದು ಹೆಡಗೇವಾರ್‌ ಜೀವನಚರಿತ್ರೆಯಿಂದ ತಿಳಿದುಬರುತ್ತದೆ. ಆದರೆ ಪಠ್ಯಪುಸ್ತಕವನ್ನು ಪರಿಶೀಲಿಸಿ ಮರು ಪಠ್ಯ ಅಳವಡಿಸುವಾಗ ‘ಭಗವಾಧ್ವಜ’ ಎಂದಿರುವಲ್ಲಿ ‘ಭಗವಾ’ ಎಂಬ ಪದಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.

‘ಪರಮ ಪೂಜನೀಯ ಡಾ.ಹೆಡ್ಗೇವಾರ್‌’ ಎಂಬ ಹಳೆಯ ಕೃತಿಯಲ್ಲಿ ಪ್ರಕಟವಾಗಿರುವ ಭಾಷಣದಲ್ಲಿ ‘ಭಗವಾಧ್ವಜ’ ಎಂದು ಸ್ಪಷ್ಟವಾಗಿ ಉಲ್ಲೇಖಿತವಾಗಿದೆ. ಪುಟ ಸಂಖ್ಯೆ 78ರಲ್ಲಿನ ಈ ಸಾಲುಗಳನ್ನೇ ಗಮನವಿಟ್ಟು ನೋಡಬಹುದು.

“….ಯಾವ ಧ್ವಜವನ್ನು ನೋಡಿದ ಮಾತ್ರದಿಂದ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆಯೋ, ಯಾವುದನ್ನು ಕಂಡಕೂಡಲೇ ಹೃದಯದ ಭಾವನೆಗಳು ಉಕ್ಕಿ ಬರುತ್ತವೆಯೋ, ಅಂತೆಯೇ ಹೃದಯದಲ್ಲಿ ಒಂದು ವಿಶಿಷ್ಟ ಸ್ಫೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಭಗವಾಧ್ವಜವನ್ನು, ನಮ್ಮ ತತ್ವಗಳ ಪ್ರತೀಕವಾದ ಕಾರಣ, ನಾವು ನಮ್ಮ ಗುರುವೆಂದು ಭಾವಿಸುತ್ತೇವೆ. ಇದೇ ಕಾರಣದಿಂದಲೇ ಯಾವ ಒಬ್ಬ ವ್ಯಕ್ತಿಯನ್ನೂ ತನ್ನ ಗುರುವೆಂದು ಭಾವಿಸಲು ಸಂಘಕ್ಕೆ ಸರ್ವಥಾ ಇಚ್ಛೆಯಿಲ್ಲ” ಎಂದಿದೆ.

ಆದರೆ ಚಕ್ರತೀರ್ಥ ಸಮಿತಿಯ ಪರಿಶೀಲನೆಯಲ್ಲಿ ಮೂಲಪಠ್ಯವನ್ನು ಬದಲಿಸಲಾಗಿದೆ. ಕೆಲವು ಸಾಲುಗಳನ್ನು ಕೈಬಿಡಲಾಗಿದೆ. ಮೂಲ ಪಠ್ಯದಲ್ಲಿರುವ ಕೆಲವು ಸಾಲುಗಳನ್ನು ಕೈಬಿಡಲಾಗಿದ್ದು, ಅಲ್ಲಿ ‘ಸಂಘ’ (ಆರ್‌ಎಸ್‌ಎಸ್‌) ಎಂದಿರುವುದನ್ನು ಗಮನಿಸಬಹುದು.

ಇದನ್ನೂ ಓದಿರಿ: ಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

ಹತ್ತನೇ ತರಗತಿ ಪಠ್ಯದಲ್ಲೇನಿದೆ?

“ನಾವು ಧ್ವಜವನ್ನೇ ಗುರುವೆಂದು ಭಾವಿಸಿ, ಗುರುಪೂರ್ಣಿಮಾ ದಿನದಂದು ಅದನ್ನು ಪೂಜಿಸುತ್ತೇವೆ. ನಾವು ಯಾವ ವ್ಯಕ್ತಿಯನ್ನೂ ಪೂಜಿಸುವುದಿಲ್ಲ. ಯಾಕೆಂದರೆ ಯಾರೇ ಆಗಲೀ ಅವರು ತಮ್ಮ ಮಾರ್ಗದಲ್ಲಿ ಅಚಲರಾಗಿಯೇ ಇದ್ದಾರು ಎಂಬ ಭರವಸೆಯಾದರೂ ಏನು? ಕೇವಲ ತತ್ವವೊಂದೇ ಆ ಅಚಲ ಪದವಿಯಲ್ಲಿ ಇರಬಲ್ಲದು. ಅದನ್ನು ಧ್ವಜವೂ ಸಂಕೇತಿಸುವುದು. ಯಾವ ಧ್ವಜವನ್ನು ನೋಡಿದೊಡನೆ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣಿಗೆ ಕಟ್ಟುತ್ತವೆಯೋ ಯಾವುದನ್ನು ಕಂಡಕೂಡಲೇ ಹೃದಯ ಭಾವೆನೆಗಳು ಉಕ್ಕಿ ಬರುತ್ತವೆಯೋ, ಹೃದಯದಲ್ಲಿ ಅಪೂರ್ವ ಸ್ಪೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಧ್ವಜವನ್ನೇ ನಾವು ನಮ್ಮ ಗುರುವೆಂದು ಭಾವಿಸುತ್ತೇವೆ”.

ತ್ರಿವರ್ಣ ಧ್ವಜ v/s ಭಗವಾಧ್ವಜ

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪನವರು ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಭಗವಾಧ್ವಜ ಕುರಿತ ಒಲವನ್ನು ಮಕ್ಕಳ ಮೇಲೆ ಹೇರುವ ಹಿಡನ್‌ ಅಜೆಂಡಾವನ್ನು ಸರ್ಕಾರ ಮಾಡುತ್ತಿದೆಯೇ ಎಂಬ ಅನುಮಾನಗಳಿಗೆ ತಿರುಚಿದ ಪಠ್ಯ ಉಂಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುಂದಿನ ದಿನಗಳಲ್ಲಿ ಕೇಸರಿ ಧ್ವಜ ರಾಷ್ಟ್ರ ಧ್ವಜ ಆಗೋದು ಖಚಿತ ,ಭಾರತ ಹಿಂದೂರಾಷ್ಟ್ರ ಆಗೋದು ಖಚಿತ ,ಯಾವ ದೊಣ್ಣೆ ನಾಯಕನ ಅಪ್ಪಣೆ ಈ ವಿಚಾರದಲ್ಲಿ ಪಡೆಯುವ ,ಕೇಳುವ ಪ್ರಶ್ನೆಯೇ ಇಲ್ಲಾ ,ನಗರ ನಕ್ಸಲರಾಗಲಿ,ಗುಲಾಮರಾಗಲಿ,ಶಾಂತಿ ದೂತರಾಗಲಿ

  2. ಮನುವಾದಿಗಳ ಕುತಂತ್ರವನ್ನು ಬಯಲುಗೊಳಿಸಿದ ನಿಮಗೆ ಧನ್ಯವಾದಗಳು. ಮನುವಾದಿಗಳು ತಿರುಚುವುದರಲ್ಲಿ ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...