Homeಕರ್ನಾಟಕತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

ತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

- Advertisement -
- Advertisement -

ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು 2022-23ನೇ ಸಾಲಿನ ಹತ್ತನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದ್ದು, ಹೆಡಗೇವಾರ್‌ ಅವರ ಮೂಲ ಪಠ್ಯವನ್ನೇ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ತಿರುಚಿರುವುದು ಪಠ್ಯದ ಹಾಳೆ ಹಾಗೂ ಮುದ್ರಿತ ಹಳೆಯ ಕೃತಿಗಳಿಂದ ತಿಳಿದುಬಂದಿದೆ.

‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಪಠ್ಯವಾಗಿ ಇಡಲಾಗಿದ್ದು, ಹೆಡಗೇವಾರ್‌ ಅವರು ಹೇಳಿರುವ ವಿಚಾರಗಳನ್ನು ತಿರುಚಿ ಪಠ್ಯದಲ್ಲಿ ಅಳವಡಿಸಲಾಗಿದೆ. “ತ್ರಿವರ್ಣ ಧ್ವಜವನ್ನು ಹೆಡಗೇವಾರ್‌ ಒಪ್ಪಿರಲಿಲ್ಲ. ಭಗವಾಧ್ವಜವೇ ಶ್ರೇಷ್ಠ” ಎಂದು ಹೆಡಗೇವಾರ್‌ ಪ್ರತಿಪಾದಿಸಿದ್ದನ್ನು ಆರ್‌ಎಸ್‌ಎಸ್‌ ಮೂಲದವರೇ ಬರೆದ ಜೀವನಚರಿತ್ರೆಗಳಿಂದ ಸಾಬೀತಾಗುತ್ತದೆ. ಜೊತೆಗೆ ಹೆಡಗೇವಾರ್‌ ತಮ್ಮ ಭಾಷಣದಲ್ಲೂ ‘ಭಗವಾಧ್ವಜ’ದ ಪ್ರಸ್ತಾಪವನ್ನೇ ಮಾಡುತ್ತಾರೆ. ಆದರೆ ಚಕ್ರತೀರ್ಥ ನೇತೃತ್ವದ ಸಮಿತಿಯು ಭಾಗವಾಧ್ವಜ ಎಂಬುದನ್ನು ಕೇವಲ ಧ್ವಜ ಎಂದಷ್ಟೇ ಪ್ರಕಟಿಸಿ, ವಿದ್ಯಾರ್ಥಿಗಳ ದಿಕ್ಕು ತಪ್ಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್‌ಎಸ್‌ಎಸ್‌ ಮುಖ್ಯ ಕಚೇರಿಯಲ್ಲಿ ಸುಮಾರು 2002ರವರೆಗೂ ತ್ರಿವರ್ಣಧ್ವಜ ಹಾರಿಸಿರಲಿಲ್ಲ ಎಂಬುದು ಚರ್ಚೆಯಲ್ಲಿದೆ. ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪುವುದಿಲ್ಲ ಎಂಬುದು ಹೆಡಗೇವಾರ್‌ ಜೀವನಚರಿತ್ರೆಯಿಂದ ತಿಳಿದುಬರುತ್ತದೆ. ಆದರೆ ಪಠ್ಯಪುಸ್ತಕವನ್ನು ಪರಿಶೀಲಿಸಿ ಮರು ಪಠ್ಯ ಅಳವಡಿಸುವಾಗ ‘ಭಗವಾಧ್ವಜ’ ಎಂದಿರುವಲ್ಲಿ ‘ಭಗವಾ’ ಎಂಬ ಪದಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.

‘ಪರಮ ಪೂಜನೀಯ ಡಾ.ಹೆಡ್ಗೇವಾರ್‌’ ಎಂಬ ಹಳೆಯ ಕೃತಿಯಲ್ಲಿ ಪ್ರಕಟವಾಗಿರುವ ಭಾಷಣದಲ್ಲಿ ‘ಭಗವಾಧ್ವಜ’ ಎಂದು ಸ್ಪಷ್ಟವಾಗಿ ಉಲ್ಲೇಖಿತವಾಗಿದೆ. ಪುಟ ಸಂಖ್ಯೆ 78ರಲ್ಲಿನ ಈ ಸಾಲುಗಳನ್ನೇ ಗಮನವಿಟ್ಟು ನೋಡಬಹುದು.

“….ಯಾವ ಧ್ವಜವನ್ನು ನೋಡಿದ ಮಾತ್ರದಿಂದ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆಯೋ, ಯಾವುದನ್ನು ಕಂಡಕೂಡಲೇ ಹೃದಯದ ಭಾವನೆಗಳು ಉಕ್ಕಿ ಬರುತ್ತವೆಯೋ, ಅಂತೆಯೇ ಹೃದಯದಲ್ಲಿ ಒಂದು ವಿಶಿಷ್ಟ ಸ್ಫೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಭಗವಾಧ್ವಜವನ್ನು, ನಮ್ಮ ತತ್ವಗಳ ಪ್ರತೀಕವಾದ ಕಾರಣ, ನಾವು ನಮ್ಮ ಗುರುವೆಂದು ಭಾವಿಸುತ್ತೇವೆ. ಇದೇ ಕಾರಣದಿಂದಲೇ ಯಾವ ಒಬ್ಬ ವ್ಯಕ್ತಿಯನ್ನೂ ತನ್ನ ಗುರುವೆಂದು ಭಾವಿಸಲು ಸಂಘಕ್ಕೆ ಸರ್ವಥಾ ಇಚ್ಛೆಯಿಲ್ಲ” ಎಂದಿದೆ.

ಆದರೆ ಚಕ್ರತೀರ್ಥ ಸಮಿತಿಯ ಪರಿಶೀಲನೆಯಲ್ಲಿ ಮೂಲಪಠ್ಯವನ್ನು ಬದಲಿಸಲಾಗಿದೆ. ಕೆಲವು ಸಾಲುಗಳನ್ನು ಕೈಬಿಡಲಾಗಿದೆ. ಮೂಲ ಪಠ್ಯದಲ್ಲಿರುವ ಕೆಲವು ಸಾಲುಗಳನ್ನು ಕೈಬಿಡಲಾಗಿದ್ದು, ಅಲ್ಲಿ ‘ಸಂಘ’ (ಆರ್‌ಎಸ್‌ಎಸ್‌) ಎಂದಿರುವುದನ್ನು ಗಮನಿಸಬಹುದು.

ಇದನ್ನೂ ಓದಿರಿ: ಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

ಹತ್ತನೇ ತರಗತಿ ಪಠ್ಯದಲ್ಲೇನಿದೆ?

“ನಾವು ಧ್ವಜವನ್ನೇ ಗುರುವೆಂದು ಭಾವಿಸಿ, ಗುರುಪೂರ್ಣಿಮಾ ದಿನದಂದು ಅದನ್ನು ಪೂಜಿಸುತ್ತೇವೆ. ನಾವು ಯಾವ ವ್ಯಕ್ತಿಯನ್ನೂ ಪೂಜಿಸುವುದಿಲ್ಲ. ಯಾಕೆಂದರೆ ಯಾರೇ ಆಗಲೀ ಅವರು ತಮ್ಮ ಮಾರ್ಗದಲ್ಲಿ ಅಚಲರಾಗಿಯೇ ಇದ್ದಾರು ಎಂಬ ಭರವಸೆಯಾದರೂ ಏನು? ಕೇವಲ ತತ್ವವೊಂದೇ ಆ ಅಚಲ ಪದವಿಯಲ್ಲಿ ಇರಬಲ್ಲದು. ಅದನ್ನು ಧ್ವಜವೂ ಸಂಕೇತಿಸುವುದು. ಯಾವ ಧ್ವಜವನ್ನು ನೋಡಿದೊಡನೆ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣಿಗೆ ಕಟ್ಟುತ್ತವೆಯೋ ಯಾವುದನ್ನು ಕಂಡಕೂಡಲೇ ಹೃದಯ ಭಾವೆನೆಗಳು ಉಕ್ಕಿ ಬರುತ್ತವೆಯೋ, ಹೃದಯದಲ್ಲಿ ಅಪೂರ್ವ ಸ್ಪೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಧ್ವಜವನ್ನೇ ನಾವು ನಮ್ಮ ಗುರುವೆಂದು ಭಾವಿಸುತ್ತೇವೆ”.

ತ್ರಿವರ್ಣ ಧ್ವಜ v/s ಭಗವಾಧ್ವಜ

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪನವರು ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಭಗವಾಧ್ವಜ ಕುರಿತ ಒಲವನ್ನು ಮಕ್ಕಳ ಮೇಲೆ ಹೇರುವ ಹಿಡನ್‌ ಅಜೆಂಡಾವನ್ನು ಸರ್ಕಾರ ಮಾಡುತ್ತಿದೆಯೇ ಎಂಬ ಅನುಮಾನಗಳಿಗೆ ತಿರುಚಿದ ಪಠ್ಯ ಉಂಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುಂದಿನ ದಿನಗಳಲ್ಲಿ ಕೇಸರಿ ಧ್ವಜ ರಾಷ್ಟ್ರ ಧ್ವಜ ಆಗೋದು ಖಚಿತ ,ಭಾರತ ಹಿಂದೂರಾಷ್ಟ್ರ ಆಗೋದು ಖಚಿತ ,ಯಾವ ದೊಣ್ಣೆ ನಾಯಕನ ಅಪ್ಪಣೆ ಈ ವಿಚಾರದಲ್ಲಿ ಪಡೆಯುವ ,ಕೇಳುವ ಪ್ರಶ್ನೆಯೇ ಇಲ್ಲಾ ,ನಗರ ನಕ್ಸಲರಾಗಲಿ,ಗುಲಾಮರಾಗಲಿ,ಶಾಂತಿ ದೂತರಾಗಲಿ

  2. ಮನುವಾದಿಗಳ ಕುತಂತ್ರವನ್ನು ಬಯಲುಗೊಳಿಸಿದ ನಿಮಗೆ ಧನ್ಯವಾದಗಳು. ಮನುವಾದಿಗಳು ತಿರುಚುವುದರಲ್ಲಿ ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....