Homeಕರ್ನಾಟಕತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

ತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

- Advertisement -
- Advertisement -

ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು 2022-23ನೇ ಸಾಲಿನ ಹತ್ತನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದ್ದು, ಹೆಡಗೇವಾರ್‌ ಅವರ ಮೂಲ ಪಠ್ಯವನ್ನೇ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ತಿರುಚಿರುವುದು ಪಠ್ಯದ ಹಾಳೆ ಹಾಗೂ ಮುದ್ರಿತ ಹಳೆಯ ಕೃತಿಗಳಿಂದ ತಿಳಿದುಬಂದಿದೆ.

‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಪಠ್ಯವಾಗಿ ಇಡಲಾಗಿದ್ದು, ಹೆಡಗೇವಾರ್‌ ಅವರು ಹೇಳಿರುವ ವಿಚಾರಗಳನ್ನು ತಿರುಚಿ ಪಠ್ಯದಲ್ಲಿ ಅಳವಡಿಸಲಾಗಿದೆ. “ತ್ರಿವರ್ಣ ಧ್ವಜವನ್ನು ಹೆಡಗೇವಾರ್‌ ಒಪ್ಪಿರಲಿಲ್ಲ. ಭಗವಾಧ್ವಜವೇ ಶ್ರೇಷ್ಠ” ಎಂದು ಹೆಡಗೇವಾರ್‌ ಪ್ರತಿಪಾದಿಸಿದ್ದನ್ನು ಆರ್‌ಎಸ್‌ಎಸ್‌ ಮೂಲದವರೇ ಬರೆದ ಜೀವನಚರಿತ್ರೆಗಳಿಂದ ಸಾಬೀತಾಗುತ್ತದೆ. ಜೊತೆಗೆ ಹೆಡಗೇವಾರ್‌ ತಮ್ಮ ಭಾಷಣದಲ್ಲೂ ‘ಭಗವಾಧ್ವಜ’ದ ಪ್ರಸ್ತಾಪವನ್ನೇ ಮಾಡುತ್ತಾರೆ. ಆದರೆ ಚಕ್ರತೀರ್ಥ ನೇತೃತ್ವದ ಸಮಿತಿಯು ಭಾಗವಾಧ್ವಜ ಎಂಬುದನ್ನು ಕೇವಲ ಧ್ವಜ ಎಂದಷ್ಟೇ ಪ್ರಕಟಿಸಿ, ವಿದ್ಯಾರ್ಥಿಗಳ ದಿಕ್ಕು ತಪ್ಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್‌ಎಸ್‌ಎಸ್‌ ಮುಖ್ಯ ಕಚೇರಿಯಲ್ಲಿ ಸುಮಾರು 2002ರವರೆಗೂ ತ್ರಿವರ್ಣಧ್ವಜ ಹಾರಿಸಿರಲಿಲ್ಲ ಎಂಬುದು ಚರ್ಚೆಯಲ್ಲಿದೆ. ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪುವುದಿಲ್ಲ ಎಂಬುದು ಹೆಡಗೇವಾರ್‌ ಜೀವನಚರಿತ್ರೆಯಿಂದ ತಿಳಿದುಬರುತ್ತದೆ. ಆದರೆ ಪಠ್ಯಪುಸ್ತಕವನ್ನು ಪರಿಶೀಲಿಸಿ ಮರು ಪಠ್ಯ ಅಳವಡಿಸುವಾಗ ‘ಭಗವಾಧ್ವಜ’ ಎಂದಿರುವಲ್ಲಿ ‘ಭಗವಾ’ ಎಂಬ ಪದಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.

‘ಪರಮ ಪೂಜನೀಯ ಡಾ.ಹೆಡ್ಗೇವಾರ್‌’ ಎಂಬ ಹಳೆಯ ಕೃತಿಯಲ್ಲಿ ಪ್ರಕಟವಾಗಿರುವ ಭಾಷಣದಲ್ಲಿ ‘ಭಗವಾಧ್ವಜ’ ಎಂದು ಸ್ಪಷ್ಟವಾಗಿ ಉಲ್ಲೇಖಿತವಾಗಿದೆ. ಪುಟ ಸಂಖ್ಯೆ 78ರಲ್ಲಿನ ಈ ಸಾಲುಗಳನ್ನೇ ಗಮನವಿಟ್ಟು ನೋಡಬಹುದು.

“….ಯಾವ ಧ್ವಜವನ್ನು ನೋಡಿದ ಮಾತ್ರದಿಂದ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆಯೋ, ಯಾವುದನ್ನು ಕಂಡಕೂಡಲೇ ಹೃದಯದ ಭಾವನೆಗಳು ಉಕ್ಕಿ ಬರುತ್ತವೆಯೋ, ಅಂತೆಯೇ ಹೃದಯದಲ್ಲಿ ಒಂದು ವಿಶಿಷ್ಟ ಸ್ಫೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಭಗವಾಧ್ವಜವನ್ನು, ನಮ್ಮ ತತ್ವಗಳ ಪ್ರತೀಕವಾದ ಕಾರಣ, ನಾವು ನಮ್ಮ ಗುರುವೆಂದು ಭಾವಿಸುತ್ತೇವೆ. ಇದೇ ಕಾರಣದಿಂದಲೇ ಯಾವ ಒಬ್ಬ ವ್ಯಕ್ತಿಯನ್ನೂ ತನ್ನ ಗುರುವೆಂದು ಭಾವಿಸಲು ಸಂಘಕ್ಕೆ ಸರ್ವಥಾ ಇಚ್ಛೆಯಿಲ್ಲ” ಎಂದಿದೆ.

ಆದರೆ ಚಕ್ರತೀರ್ಥ ಸಮಿತಿಯ ಪರಿಶೀಲನೆಯಲ್ಲಿ ಮೂಲಪಠ್ಯವನ್ನು ಬದಲಿಸಲಾಗಿದೆ. ಕೆಲವು ಸಾಲುಗಳನ್ನು ಕೈಬಿಡಲಾಗಿದೆ. ಮೂಲ ಪಠ್ಯದಲ್ಲಿರುವ ಕೆಲವು ಸಾಲುಗಳನ್ನು ಕೈಬಿಡಲಾಗಿದ್ದು, ಅಲ್ಲಿ ‘ಸಂಘ’ (ಆರ್‌ಎಸ್‌ಎಸ್‌) ಎಂದಿರುವುದನ್ನು ಗಮನಿಸಬಹುದು.

ಇದನ್ನೂ ಓದಿರಿ: ಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

ಹತ್ತನೇ ತರಗತಿ ಪಠ್ಯದಲ್ಲೇನಿದೆ?

“ನಾವು ಧ್ವಜವನ್ನೇ ಗುರುವೆಂದು ಭಾವಿಸಿ, ಗುರುಪೂರ್ಣಿಮಾ ದಿನದಂದು ಅದನ್ನು ಪೂಜಿಸುತ್ತೇವೆ. ನಾವು ಯಾವ ವ್ಯಕ್ತಿಯನ್ನೂ ಪೂಜಿಸುವುದಿಲ್ಲ. ಯಾಕೆಂದರೆ ಯಾರೇ ಆಗಲೀ ಅವರು ತಮ್ಮ ಮಾರ್ಗದಲ್ಲಿ ಅಚಲರಾಗಿಯೇ ಇದ್ದಾರು ಎಂಬ ಭರವಸೆಯಾದರೂ ಏನು? ಕೇವಲ ತತ್ವವೊಂದೇ ಆ ಅಚಲ ಪದವಿಯಲ್ಲಿ ಇರಬಲ್ಲದು. ಅದನ್ನು ಧ್ವಜವೂ ಸಂಕೇತಿಸುವುದು. ಯಾವ ಧ್ವಜವನ್ನು ನೋಡಿದೊಡನೆ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣಿಗೆ ಕಟ್ಟುತ್ತವೆಯೋ ಯಾವುದನ್ನು ಕಂಡಕೂಡಲೇ ಹೃದಯ ಭಾವೆನೆಗಳು ಉಕ್ಕಿ ಬರುತ್ತವೆಯೋ, ಹೃದಯದಲ್ಲಿ ಅಪೂರ್ವ ಸ್ಪೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಧ್ವಜವನ್ನೇ ನಾವು ನಮ್ಮ ಗುರುವೆಂದು ಭಾವಿಸುತ್ತೇವೆ”.

ತ್ರಿವರ್ಣ ಧ್ವಜ v/s ಭಗವಾಧ್ವಜ

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪನವರು ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಭಗವಾಧ್ವಜ ಕುರಿತ ಒಲವನ್ನು ಮಕ್ಕಳ ಮೇಲೆ ಹೇರುವ ಹಿಡನ್‌ ಅಜೆಂಡಾವನ್ನು ಸರ್ಕಾರ ಮಾಡುತ್ತಿದೆಯೇ ಎಂಬ ಅನುಮಾನಗಳಿಗೆ ತಿರುಚಿದ ಪಠ್ಯ ಉಂಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುಂದಿನ ದಿನಗಳಲ್ಲಿ ಕೇಸರಿ ಧ್ವಜ ರಾಷ್ಟ್ರ ಧ್ವಜ ಆಗೋದು ಖಚಿತ ,ಭಾರತ ಹಿಂದೂರಾಷ್ಟ್ರ ಆಗೋದು ಖಚಿತ ,ಯಾವ ದೊಣ್ಣೆ ನಾಯಕನ ಅಪ್ಪಣೆ ಈ ವಿಚಾರದಲ್ಲಿ ಪಡೆಯುವ ,ಕೇಳುವ ಪ್ರಶ್ನೆಯೇ ಇಲ್ಲಾ ,ನಗರ ನಕ್ಸಲರಾಗಲಿ,ಗುಲಾಮರಾಗಲಿ,ಶಾಂತಿ ದೂತರಾಗಲಿ

  2. ಮನುವಾದಿಗಳ ಕುತಂತ್ರವನ್ನು ಬಯಲುಗೊಳಿಸಿದ ನಿಮಗೆ ಧನ್ಯವಾದಗಳು. ಮನುವಾದಿಗಳು ತಿರುಚುವುದರಲ್ಲಿ ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...