Homeಕರ್ನಾಟಕತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

ತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

- Advertisement -
- Advertisement -

ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು 2022-23ನೇ ಸಾಲಿನ ಹತ್ತನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದ್ದು, ಹೆಡಗೇವಾರ್‌ ಅವರ ಮೂಲ ಪಠ್ಯವನ್ನೇ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ತಿರುಚಿರುವುದು ಪಠ್ಯದ ಹಾಳೆ ಹಾಗೂ ಮುದ್ರಿತ ಹಳೆಯ ಕೃತಿಗಳಿಂದ ತಿಳಿದುಬಂದಿದೆ.

‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಪಠ್ಯವಾಗಿ ಇಡಲಾಗಿದ್ದು, ಹೆಡಗೇವಾರ್‌ ಅವರು ಹೇಳಿರುವ ವಿಚಾರಗಳನ್ನು ತಿರುಚಿ ಪಠ್ಯದಲ್ಲಿ ಅಳವಡಿಸಲಾಗಿದೆ. “ತ್ರಿವರ್ಣ ಧ್ವಜವನ್ನು ಹೆಡಗೇವಾರ್‌ ಒಪ್ಪಿರಲಿಲ್ಲ. ಭಗವಾಧ್ವಜವೇ ಶ್ರೇಷ್ಠ” ಎಂದು ಹೆಡಗೇವಾರ್‌ ಪ್ರತಿಪಾದಿಸಿದ್ದನ್ನು ಆರ್‌ಎಸ್‌ಎಸ್‌ ಮೂಲದವರೇ ಬರೆದ ಜೀವನಚರಿತ್ರೆಗಳಿಂದ ಸಾಬೀತಾಗುತ್ತದೆ. ಜೊತೆಗೆ ಹೆಡಗೇವಾರ್‌ ತಮ್ಮ ಭಾಷಣದಲ್ಲೂ ‘ಭಗವಾಧ್ವಜ’ದ ಪ್ರಸ್ತಾಪವನ್ನೇ ಮಾಡುತ್ತಾರೆ. ಆದರೆ ಚಕ್ರತೀರ್ಥ ನೇತೃತ್ವದ ಸಮಿತಿಯು ಭಾಗವಾಧ್ವಜ ಎಂಬುದನ್ನು ಕೇವಲ ಧ್ವಜ ಎಂದಷ್ಟೇ ಪ್ರಕಟಿಸಿ, ವಿದ್ಯಾರ್ಥಿಗಳ ದಿಕ್ಕು ತಪ್ಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್‌ಎಸ್‌ಎಸ್‌ ಮುಖ್ಯ ಕಚೇರಿಯಲ್ಲಿ ಸುಮಾರು 2002ರವರೆಗೂ ತ್ರಿವರ್ಣಧ್ವಜ ಹಾರಿಸಿರಲಿಲ್ಲ ಎಂಬುದು ಚರ್ಚೆಯಲ್ಲಿದೆ. ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪುವುದಿಲ್ಲ ಎಂಬುದು ಹೆಡಗೇವಾರ್‌ ಜೀವನಚರಿತ್ರೆಯಿಂದ ತಿಳಿದುಬರುತ್ತದೆ. ಆದರೆ ಪಠ್ಯಪುಸ್ತಕವನ್ನು ಪರಿಶೀಲಿಸಿ ಮರು ಪಠ್ಯ ಅಳವಡಿಸುವಾಗ ‘ಭಗವಾಧ್ವಜ’ ಎಂದಿರುವಲ್ಲಿ ‘ಭಗವಾ’ ಎಂಬ ಪದಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.

‘ಪರಮ ಪೂಜನೀಯ ಡಾ.ಹೆಡ್ಗೇವಾರ್‌’ ಎಂಬ ಹಳೆಯ ಕೃತಿಯಲ್ಲಿ ಪ್ರಕಟವಾಗಿರುವ ಭಾಷಣದಲ್ಲಿ ‘ಭಗವಾಧ್ವಜ’ ಎಂದು ಸ್ಪಷ್ಟವಾಗಿ ಉಲ್ಲೇಖಿತವಾಗಿದೆ. ಪುಟ ಸಂಖ್ಯೆ 78ರಲ್ಲಿನ ಈ ಸಾಲುಗಳನ್ನೇ ಗಮನವಿಟ್ಟು ನೋಡಬಹುದು.

“….ಯಾವ ಧ್ವಜವನ್ನು ನೋಡಿದ ಮಾತ್ರದಿಂದ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆಯೋ, ಯಾವುದನ್ನು ಕಂಡಕೂಡಲೇ ಹೃದಯದ ಭಾವನೆಗಳು ಉಕ್ಕಿ ಬರುತ್ತವೆಯೋ, ಅಂತೆಯೇ ಹೃದಯದಲ್ಲಿ ಒಂದು ವಿಶಿಷ್ಟ ಸ್ಫೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಭಗವಾಧ್ವಜವನ್ನು, ನಮ್ಮ ತತ್ವಗಳ ಪ್ರತೀಕವಾದ ಕಾರಣ, ನಾವು ನಮ್ಮ ಗುರುವೆಂದು ಭಾವಿಸುತ್ತೇವೆ. ಇದೇ ಕಾರಣದಿಂದಲೇ ಯಾವ ಒಬ್ಬ ವ್ಯಕ್ತಿಯನ್ನೂ ತನ್ನ ಗುರುವೆಂದು ಭಾವಿಸಲು ಸಂಘಕ್ಕೆ ಸರ್ವಥಾ ಇಚ್ಛೆಯಿಲ್ಲ” ಎಂದಿದೆ.

ಆದರೆ ಚಕ್ರತೀರ್ಥ ಸಮಿತಿಯ ಪರಿಶೀಲನೆಯಲ್ಲಿ ಮೂಲಪಠ್ಯವನ್ನು ಬದಲಿಸಲಾಗಿದೆ. ಕೆಲವು ಸಾಲುಗಳನ್ನು ಕೈಬಿಡಲಾಗಿದೆ. ಮೂಲ ಪಠ್ಯದಲ್ಲಿರುವ ಕೆಲವು ಸಾಲುಗಳನ್ನು ಕೈಬಿಡಲಾಗಿದ್ದು, ಅಲ್ಲಿ ‘ಸಂಘ’ (ಆರ್‌ಎಸ್‌ಎಸ್‌) ಎಂದಿರುವುದನ್ನು ಗಮನಿಸಬಹುದು.

ಇದನ್ನೂ ಓದಿರಿ: ಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

ಹತ್ತನೇ ತರಗತಿ ಪಠ್ಯದಲ್ಲೇನಿದೆ?

“ನಾವು ಧ್ವಜವನ್ನೇ ಗುರುವೆಂದು ಭಾವಿಸಿ, ಗುರುಪೂರ್ಣಿಮಾ ದಿನದಂದು ಅದನ್ನು ಪೂಜಿಸುತ್ತೇವೆ. ನಾವು ಯಾವ ವ್ಯಕ್ತಿಯನ್ನೂ ಪೂಜಿಸುವುದಿಲ್ಲ. ಯಾಕೆಂದರೆ ಯಾರೇ ಆಗಲೀ ಅವರು ತಮ್ಮ ಮಾರ್ಗದಲ್ಲಿ ಅಚಲರಾಗಿಯೇ ಇದ್ದಾರು ಎಂಬ ಭರವಸೆಯಾದರೂ ಏನು? ಕೇವಲ ತತ್ವವೊಂದೇ ಆ ಅಚಲ ಪದವಿಯಲ್ಲಿ ಇರಬಲ್ಲದು. ಅದನ್ನು ಧ್ವಜವೂ ಸಂಕೇತಿಸುವುದು. ಯಾವ ಧ್ವಜವನ್ನು ನೋಡಿದೊಡನೆ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣಿಗೆ ಕಟ್ಟುತ್ತವೆಯೋ ಯಾವುದನ್ನು ಕಂಡಕೂಡಲೇ ಹೃದಯ ಭಾವೆನೆಗಳು ಉಕ್ಕಿ ಬರುತ್ತವೆಯೋ, ಹೃದಯದಲ್ಲಿ ಅಪೂರ್ವ ಸ್ಪೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಧ್ವಜವನ್ನೇ ನಾವು ನಮ್ಮ ಗುರುವೆಂದು ಭಾವಿಸುತ್ತೇವೆ”.

ತ್ರಿವರ್ಣ ಧ್ವಜ v/s ಭಗವಾಧ್ವಜ

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪನವರು ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಭಗವಾಧ್ವಜ ಕುರಿತ ಒಲವನ್ನು ಮಕ್ಕಳ ಮೇಲೆ ಹೇರುವ ಹಿಡನ್‌ ಅಜೆಂಡಾವನ್ನು ಸರ್ಕಾರ ಮಾಡುತ್ತಿದೆಯೇ ಎಂಬ ಅನುಮಾನಗಳಿಗೆ ತಿರುಚಿದ ಪಠ್ಯ ಉಂಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುಂದಿನ ದಿನಗಳಲ್ಲಿ ಕೇಸರಿ ಧ್ವಜ ರಾಷ್ಟ್ರ ಧ್ವಜ ಆಗೋದು ಖಚಿತ ,ಭಾರತ ಹಿಂದೂರಾಷ್ಟ್ರ ಆಗೋದು ಖಚಿತ ,ಯಾವ ದೊಣ್ಣೆ ನಾಯಕನ ಅಪ್ಪಣೆ ಈ ವಿಚಾರದಲ್ಲಿ ಪಡೆಯುವ ,ಕೇಳುವ ಪ್ರಶ್ನೆಯೇ ಇಲ್ಲಾ ,ನಗರ ನಕ್ಸಲರಾಗಲಿ,ಗುಲಾಮರಾಗಲಿ,ಶಾಂತಿ ದೂತರಾಗಲಿ

  2. ಮನುವಾದಿಗಳ ಕುತಂತ್ರವನ್ನು ಬಯಲುಗೊಳಿಸಿದ ನಿಮಗೆ ಧನ್ಯವಾದಗಳು. ಮನುವಾದಿಗಳು ತಿರುಚುವುದರಲ್ಲಿ ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...