Homeಕರ್ನಾಟಕಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

ಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಪಕ್ಷದ ಕೇಂದ್ರದ ನಾಯಕತ್ವ (ಹೈಕಮಾಂಡ್) ಬೇರೆ ಯೋಜನೆಗಳನ್ನು ಹೊಂದಿತ್ತು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

‘ದಿ ಹಿಂದೂ’ ಪತ್ರಿಕೆಯ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು, “ಹೌದು, ನಾನು ನನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ, ಪಕ್ಷದ ಕೇಂದ್ರ ನಾಯಕತ್ವವು ಬೇರೆ ಯೋಜನೆಗಳನ್ನು ಹೊಂದಿತ್ತು. ಕೆ.ಎಸ್.ಈಶ್ವರಪ್ಪ, ಶೆಟ್ಟರ್ ಸೇರಿದಂತೆ ಹಲವು ನಾಯಕರಿಗೆ ಈ ಬಾರಿ ಟಿಕೆಟ್ ನೀಡಿಲ್ಲ. ಪಕ್ಷದ ಯುವ ಕಾರ್ಯಕರ್ತರಿಗೆ ಹೆಚ್ಚಿನ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದರು” ಎಂದು ತಿಳಿಸಿದ್ದಾರೆ.

“ಬಿಜೆಪಿಯು ಲಿಂಗಾಯತರಿಗೆ ಟಿಕೆಟ್ ನಿರಾಕರಿಸುವ ಮೂಲಕ ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಂತಹ ಹಿರಿಯ ನಾಯಕರು ಬಿಜೆಪಿ ತೊರೆದಿದ್ದಾರೆ. ಸಮುದಾಯದ ನಾಯಕರಾಗಿ ಇದರ ಬಗ್ಗೆ ಏನು ಹೇಳುತ್ತೀರಿ?” ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

“ಶೆಟ್ಟರ್ ಅವರಿಗೆ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲ ಸ್ಥಾನಮಾನ, ಗೌರವ ನೀಡಿದ್ದೆವು. ಅವರಿಗೇನಾದರೂ ಕುಂದುಕೊರತೆಗಳಿದ್ದರೆ ನಮ್ಮೊಂದಿಗೆ ಚರ್ಚಿಸಬಹುದಿತ್ತು. ಕಾರಣಾಂತರಗಳಿಂದ ಅವರನ್ನು ಚುನಾವಣೆಯಲ್ಲಿ ಕಣಕ್ಕಿಳಿಸಲು ಪಕ್ಷದ ನಾಯಕತ್ವ ಸಿದ್ಧವಿಲ್ಲ ಎಂದು ಹೇಳಿದ್ದೆವು. ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿ ಕೇಂದ್ರ ಸಚಿವರಾಗುವಂತೆ ಕೇಳಿದ್ದೆವು. ಅವರಿಗೆ ಆಸೆಯಿದ್ದರೆ ಅವರ ಪತ್ನಿಯನ್ನು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವಂತೆಯೂ ಹೇಳಿದ್ದೆವು. ಇಷ್ಟೆಲ್ಲ ಆಶ್ವಾಸನೆ ನೀಡಿದರೂ ಪಕ್ಷ ತ್ಯಜಿಸಿದರು” ಎಂದಿದ್ದಾರೆ.

ಮುಂದುವರಿದು, “ಅದೇ ರೀತಿ ಸವದಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ನಂತರ ಉಪಮುಖ್ಯಮಂತ್ರಿ ಮಾಡಿದ್ದೆವು. ಅವರು ಆರು ವರ್ಷಗಳ ಎಂಎಲ್‌ಸಿ ಅವಧಿಯ ಕೇವಲ 10 ತಿಂಗಳುಗಳನ್ನು ಪೂರ್ಣಗೊಳಿಸಿದ್ದಾರೆ ಎಂಬುದು ನಿಮಗೆ ತಿಳಿದಿರಬೇಕು. ಅವರನ್ನು ಸಚಿವರನ್ನಾಗಿ ಮಾಡಿರಬಹುದು ಅಥವಾ ಬೇರೆ ಸ್ಥಾನಮಾನ ನೀಡಿರಬಹುದು. ಸ್ವಾರ್ಥಕ್ಕಾಗಿ ಪಕ್ಷ ತೊರೆದಿದ್ದು, ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿನ ಬಂಡಾಯಕ್ಕೆ ಬಿ.ಎಲ್.ಸಂತೋಷ್ ಕಾರಣ ಎಂಬ ಬಲವಾದ ಆರೋಪಗಳಿವೆ. ನಿಮ್ಮ ಅಭಿಪ್ರಾಯ ಏನು?” ಎಂಬ ಪ್ರಶ್ನೆಗೆ, “ಇಂತಹ ಆರೋಪಗಳಿಗೆ ಬೆಲೆ ಇಲ್ಲ. ಪೂರ್ಣಾವಧಿ ಕಾರ್ಯಕರ್ತರಾಗಿ ಪಕ್ಷದ ಬಲವರ್ಧನೆಗೆ ಸಂತೋಷ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಇಂತಹ ಆರೋಪ ಮಾಡುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ಬಂಜಾರ ಸಮುದಾಯವು ಒಳಮೀಸಲಾತಿ ಪ್ರಸ್ತಾಪವನ್ನು ವಿರೋಧಿಸಿ ಮಾಡಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಅದರಲ್ಲಿ ಗಂಭೀರವಾದದ್ದೇನೂ ಇಲ್ಲ. ನಾವು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದ್ದೇವೆ ಮತ್ತು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಈ ಬಾರಿ ಬಹುಮತವನ್ನು ಪಡೆದು ಹಳೆಯ ಸಂಪ್ರದಾಯವನ್ನು ಮುರಿಯುತ್ತೇವೆ. ನಾವು ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

“ನಾವು ಅಭಿವೃದ್ಧಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದೇವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೆ ತಂದ ಕಾರ್ಯಕ್ರಮಗಳ ಹೊರತಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ನೀಡಿದ ಕಾರ್ಯಕ್ರಮಗಳನ್ನು ತೋರಿಸಲು ನಾವು ಜನಾದೇಶವನ್ನು ಬಯಸುತ್ತೇವೆ. ನಮ್ಮ ಅಭಿಯಾನ ಅಭಿವೃದ್ಧಿಯ ಮೇಲೆ ಆಧಾರಿತವಾಗಿದೆ. ಸುಳ್ಳು ಪ್ರಚಾರಕ್ಕೆ ಬೆಲೆ ಇಲ್ಲ. ಶೇ.40ರಷ್ಟು ಕಮಿಷನ್ ಎಂಬ ಆರೋಪ ಎತ್ತುತ್ತಿರುವವರಿಗೇ ಹಿನ್ನಡೆಯಾಗುತ್ತದೆ. ನಾವು ಖಂಡಿತವಾಗಿಯೂ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ” ಎಂದು ಭವಿಷ್ಯ ನುಡಿದಿದ್ದಾರೆ.

ಕೃಪೆ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...