Homeಕರ್ನಾಟಕಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

ಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಪಕ್ಷದ ಕೇಂದ್ರದ ನಾಯಕತ್ವ (ಹೈಕಮಾಂಡ್) ಬೇರೆ ಯೋಜನೆಗಳನ್ನು ಹೊಂದಿತ್ತು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

‘ದಿ ಹಿಂದೂ’ ಪತ್ರಿಕೆಯ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು, “ಹೌದು, ನಾನು ನನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ, ಪಕ್ಷದ ಕೇಂದ್ರ ನಾಯಕತ್ವವು ಬೇರೆ ಯೋಜನೆಗಳನ್ನು ಹೊಂದಿತ್ತು. ಕೆ.ಎಸ್.ಈಶ್ವರಪ್ಪ, ಶೆಟ್ಟರ್ ಸೇರಿದಂತೆ ಹಲವು ನಾಯಕರಿಗೆ ಈ ಬಾರಿ ಟಿಕೆಟ್ ನೀಡಿಲ್ಲ. ಪಕ್ಷದ ಯುವ ಕಾರ್ಯಕರ್ತರಿಗೆ ಹೆಚ್ಚಿನ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದರು” ಎಂದು ತಿಳಿಸಿದ್ದಾರೆ.

“ಬಿಜೆಪಿಯು ಲಿಂಗಾಯತರಿಗೆ ಟಿಕೆಟ್ ನಿರಾಕರಿಸುವ ಮೂಲಕ ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಂತಹ ಹಿರಿಯ ನಾಯಕರು ಬಿಜೆಪಿ ತೊರೆದಿದ್ದಾರೆ. ಸಮುದಾಯದ ನಾಯಕರಾಗಿ ಇದರ ಬಗ್ಗೆ ಏನು ಹೇಳುತ್ತೀರಿ?” ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

“ಶೆಟ್ಟರ್ ಅವರಿಗೆ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲ ಸ್ಥಾನಮಾನ, ಗೌರವ ನೀಡಿದ್ದೆವು. ಅವರಿಗೇನಾದರೂ ಕುಂದುಕೊರತೆಗಳಿದ್ದರೆ ನಮ್ಮೊಂದಿಗೆ ಚರ್ಚಿಸಬಹುದಿತ್ತು. ಕಾರಣಾಂತರಗಳಿಂದ ಅವರನ್ನು ಚುನಾವಣೆಯಲ್ಲಿ ಕಣಕ್ಕಿಳಿಸಲು ಪಕ್ಷದ ನಾಯಕತ್ವ ಸಿದ್ಧವಿಲ್ಲ ಎಂದು ಹೇಳಿದ್ದೆವು. ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿ ಕೇಂದ್ರ ಸಚಿವರಾಗುವಂತೆ ಕೇಳಿದ್ದೆವು. ಅವರಿಗೆ ಆಸೆಯಿದ್ದರೆ ಅವರ ಪತ್ನಿಯನ್ನು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವಂತೆಯೂ ಹೇಳಿದ್ದೆವು. ಇಷ್ಟೆಲ್ಲ ಆಶ್ವಾಸನೆ ನೀಡಿದರೂ ಪಕ್ಷ ತ್ಯಜಿಸಿದರು” ಎಂದಿದ್ದಾರೆ.

ಮುಂದುವರಿದು, “ಅದೇ ರೀತಿ ಸವದಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ನಂತರ ಉಪಮುಖ್ಯಮಂತ್ರಿ ಮಾಡಿದ್ದೆವು. ಅವರು ಆರು ವರ್ಷಗಳ ಎಂಎಲ್‌ಸಿ ಅವಧಿಯ ಕೇವಲ 10 ತಿಂಗಳುಗಳನ್ನು ಪೂರ್ಣಗೊಳಿಸಿದ್ದಾರೆ ಎಂಬುದು ನಿಮಗೆ ತಿಳಿದಿರಬೇಕು. ಅವರನ್ನು ಸಚಿವರನ್ನಾಗಿ ಮಾಡಿರಬಹುದು ಅಥವಾ ಬೇರೆ ಸ್ಥಾನಮಾನ ನೀಡಿರಬಹುದು. ಸ್ವಾರ್ಥಕ್ಕಾಗಿ ಪಕ್ಷ ತೊರೆದಿದ್ದು, ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿನ ಬಂಡಾಯಕ್ಕೆ ಬಿ.ಎಲ್.ಸಂತೋಷ್ ಕಾರಣ ಎಂಬ ಬಲವಾದ ಆರೋಪಗಳಿವೆ. ನಿಮ್ಮ ಅಭಿಪ್ರಾಯ ಏನು?” ಎಂಬ ಪ್ರಶ್ನೆಗೆ, “ಇಂತಹ ಆರೋಪಗಳಿಗೆ ಬೆಲೆ ಇಲ್ಲ. ಪೂರ್ಣಾವಧಿ ಕಾರ್ಯಕರ್ತರಾಗಿ ಪಕ್ಷದ ಬಲವರ್ಧನೆಗೆ ಸಂತೋಷ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಇಂತಹ ಆರೋಪ ಮಾಡುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ಬಂಜಾರ ಸಮುದಾಯವು ಒಳಮೀಸಲಾತಿ ಪ್ರಸ್ತಾಪವನ್ನು ವಿರೋಧಿಸಿ ಮಾಡಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಅದರಲ್ಲಿ ಗಂಭೀರವಾದದ್ದೇನೂ ಇಲ್ಲ. ನಾವು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದ್ದೇವೆ ಮತ್ತು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಈ ಬಾರಿ ಬಹುಮತವನ್ನು ಪಡೆದು ಹಳೆಯ ಸಂಪ್ರದಾಯವನ್ನು ಮುರಿಯುತ್ತೇವೆ. ನಾವು ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

“ನಾವು ಅಭಿವೃದ್ಧಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದೇವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೆ ತಂದ ಕಾರ್ಯಕ್ರಮಗಳ ಹೊರತಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ನೀಡಿದ ಕಾರ್ಯಕ್ರಮಗಳನ್ನು ತೋರಿಸಲು ನಾವು ಜನಾದೇಶವನ್ನು ಬಯಸುತ್ತೇವೆ. ನಮ್ಮ ಅಭಿಯಾನ ಅಭಿವೃದ್ಧಿಯ ಮೇಲೆ ಆಧಾರಿತವಾಗಿದೆ. ಸುಳ್ಳು ಪ್ರಚಾರಕ್ಕೆ ಬೆಲೆ ಇಲ್ಲ. ಶೇ.40ರಷ್ಟು ಕಮಿಷನ್ ಎಂಬ ಆರೋಪ ಎತ್ತುತ್ತಿರುವವರಿಗೇ ಹಿನ್ನಡೆಯಾಗುತ್ತದೆ. ನಾವು ಖಂಡಿತವಾಗಿಯೂ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ” ಎಂದು ಭವಿಷ್ಯ ನುಡಿದಿದ್ದಾರೆ.

ಕೃಪೆ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...