Homeಕರ್ನಾಟಕಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

ಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಪಕ್ಷದ ಕೇಂದ್ರದ ನಾಯಕತ್ವ (ಹೈಕಮಾಂಡ್) ಬೇರೆ ಯೋಜನೆಗಳನ್ನು ಹೊಂದಿತ್ತು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

‘ದಿ ಹಿಂದೂ’ ಪತ್ರಿಕೆಯ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು, “ಹೌದು, ನಾನು ನನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ, ಪಕ್ಷದ ಕೇಂದ್ರ ನಾಯಕತ್ವವು ಬೇರೆ ಯೋಜನೆಗಳನ್ನು ಹೊಂದಿತ್ತು. ಕೆ.ಎಸ್.ಈಶ್ವರಪ್ಪ, ಶೆಟ್ಟರ್ ಸೇರಿದಂತೆ ಹಲವು ನಾಯಕರಿಗೆ ಈ ಬಾರಿ ಟಿಕೆಟ್ ನೀಡಿಲ್ಲ. ಪಕ್ಷದ ಯುವ ಕಾರ್ಯಕರ್ತರಿಗೆ ಹೆಚ್ಚಿನ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದರು” ಎಂದು ತಿಳಿಸಿದ್ದಾರೆ.

“ಬಿಜೆಪಿಯು ಲಿಂಗಾಯತರಿಗೆ ಟಿಕೆಟ್ ನಿರಾಕರಿಸುವ ಮೂಲಕ ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಂತಹ ಹಿರಿಯ ನಾಯಕರು ಬಿಜೆಪಿ ತೊರೆದಿದ್ದಾರೆ. ಸಮುದಾಯದ ನಾಯಕರಾಗಿ ಇದರ ಬಗ್ಗೆ ಏನು ಹೇಳುತ್ತೀರಿ?” ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

“ಶೆಟ್ಟರ್ ಅವರಿಗೆ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲ ಸ್ಥಾನಮಾನ, ಗೌರವ ನೀಡಿದ್ದೆವು. ಅವರಿಗೇನಾದರೂ ಕುಂದುಕೊರತೆಗಳಿದ್ದರೆ ನಮ್ಮೊಂದಿಗೆ ಚರ್ಚಿಸಬಹುದಿತ್ತು. ಕಾರಣಾಂತರಗಳಿಂದ ಅವರನ್ನು ಚುನಾವಣೆಯಲ್ಲಿ ಕಣಕ್ಕಿಳಿಸಲು ಪಕ್ಷದ ನಾಯಕತ್ವ ಸಿದ್ಧವಿಲ್ಲ ಎಂದು ಹೇಳಿದ್ದೆವು. ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿ ಕೇಂದ್ರ ಸಚಿವರಾಗುವಂತೆ ಕೇಳಿದ್ದೆವು. ಅವರಿಗೆ ಆಸೆಯಿದ್ದರೆ ಅವರ ಪತ್ನಿಯನ್ನು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವಂತೆಯೂ ಹೇಳಿದ್ದೆವು. ಇಷ್ಟೆಲ್ಲ ಆಶ್ವಾಸನೆ ನೀಡಿದರೂ ಪಕ್ಷ ತ್ಯಜಿಸಿದರು” ಎಂದಿದ್ದಾರೆ.

ಮುಂದುವರಿದು, “ಅದೇ ರೀತಿ ಸವದಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ನಂತರ ಉಪಮುಖ್ಯಮಂತ್ರಿ ಮಾಡಿದ್ದೆವು. ಅವರು ಆರು ವರ್ಷಗಳ ಎಂಎಲ್‌ಸಿ ಅವಧಿಯ ಕೇವಲ 10 ತಿಂಗಳುಗಳನ್ನು ಪೂರ್ಣಗೊಳಿಸಿದ್ದಾರೆ ಎಂಬುದು ನಿಮಗೆ ತಿಳಿದಿರಬೇಕು. ಅವರನ್ನು ಸಚಿವರನ್ನಾಗಿ ಮಾಡಿರಬಹುದು ಅಥವಾ ಬೇರೆ ಸ್ಥಾನಮಾನ ನೀಡಿರಬಹುದು. ಸ್ವಾರ್ಥಕ್ಕಾಗಿ ಪಕ್ಷ ತೊರೆದಿದ್ದು, ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿನ ಬಂಡಾಯಕ್ಕೆ ಬಿ.ಎಲ್.ಸಂತೋಷ್ ಕಾರಣ ಎಂಬ ಬಲವಾದ ಆರೋಪಗಳಿವೆ. ನಿಮ್ಮ ಅಭಿಪ್ರಾಯ ಏನು?” ಎಂಬ ಪ್ರಶ್ನೆಗೆ, “ಇಂತಹ ಆರೋಪಗಳಿಗೆ ಬೆಲೆ ಇಲ್ಲ. ಪೂರ್ಣಾವಧಿ ಕಾರ್ಯಕರ್ತರಾಗಿ ಪಕ್ಷದ ಬಲವರ್ಧನೆಗೆ ಸಂತೋಷ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಇಂತಹ ಆರೋಪ ಮಾಡುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ಬಂಜಾರ ಸಮುದಾಯವು ಒಳಮೀಸಲಾತಿ ಪ್ರಸ್ತಾಪವನ್ನು ವಿರೋಧಿಸಿ ಮಾಡಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಅದರಲ್ಲಿ ಗಂಭೀರವಾದದ್ದೇನೂ ಇಲ್ಲ. ನಾವು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದ್ದೇವೆ ಮತ್ತು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಈ ಬಾರಿ ಬಹುಮತವನ್ನು ಪಡೆದು ಹಳೆಯ ಸಂಪ್ರದಾಯವನ್ನು ಮುರಿಯುತ್ತೇವೆ. ನಾವು ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

“ನಾವು ಅಭಿವೃದ್ಧಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದೇವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೆ ತಂದ ಕಾರ್ಯಕ್ರಮಗಳ ಹೊರತಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ನೀಡಿದ ಕಾರ್ಯಕ್ರಮಗಳನ್ನು ತೋರಿಸಲು ನಾವು ಜನಾದೇಶವನ್ನು ಬಯಸುತ್ತೇವೆ. ನಮ್ಮ ಅಭಿಯಾನ ಅಭಿವೃದ್ಧಿಯ ಮೇಲೆ ಆಧಾರಿತವಾಗಿದೆ. ಸುಳ್ಳು ಪ್ರಚಾರಕ್ಕೆ ಬೆಲೆ ಇಲ್ಲ. ಶೇ.40ರಷ್ಟು ಕಮಿಷನ್ ಎಂಬ ಆರೋಪ ಎತ್ತುತ್ತಿರುವವರಿಗೇ ಹಿನ್ನಡೆಯಾಗುತ್ತದೆ. ನಾವು ಖಂಡಿತವಾಗಿಯೂ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ” ಎಂದು ಭವಿಷ್ಯ ನುಡಿದಿದ್ದಾರೆ.

ಕೃಪೆ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...