Homeಕರ್ನಾಟಕಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

ಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಪಕ್ಷದ ಕೇಂದ್ರದ ನಾಯಕತ್ವ (ಹೈಕಮಾಂಡ್) ಬೇರೆ ಯೋಜನೆಗಳನ್ನು ಹೊಂದಿತ್ತು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

‘ದಿ ಹಿಂದೂ’ ಪತ್ರಿಕೆಯ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು, “ಹೌದು, ನಾನು ನನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ, ಪಕ್ಷದ ಕೇಂದ್ರ ನಾಯಕತ್ವವು ಬೇರೆ ಯೋಜನೆಗಳನ್ನು ಹೊಂದಿತ್ತು. ಕೆ.ಎಸ್.ಈಶ್ವರಪ್ಪ, ಶೆಟ್ಟರ್ ಸೇರಿದಂತೆ ಹಲವು ನಾಯಕರಿಗೆ ಈ ಬಾರಿ ಟಿಕೆಟ್ ನೀಡಿಲ್ಲ. ಪಕ್ಷದ ಯುವ ಕಾರ್ಯಕರ್ತರಿಗೆ ಹೆಚ್ಚಿನ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದರು” ಎಂದು ತಿಳಿಸಿದ್ದಾರೆ.

“ಬಿಜೆಪಿಯು ಲಿಂಗಾಯತರಿಗೆ ಟಿಕೆಟ್ ನಿರಾಕರಿಸುವ ಮೂಲಕ ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಂತಹ ಹಿರಿಯ ನಾಯಕರು ಬಿಜೆಪಿ ತೊರೆದಿದ್ದಾರೆ. ಸಮುದಾಯದ ನಾಯಕರಾಗಿ ಇದರ ಬಗ್ಗೆ ಏನು ಹೇಳುತ್ತೀರಿ?” ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

“ಶೆಟ್ಟರ್ ಅವರಿಗೆ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲ ಸ್ಥಾನಮಾನ, ಗೌರವ ನೀಡಿದ್ದೆವು. ಅವರಿಗೇನಾದರೂ ಕುಂದುಕೊರತೆಗಳಿದ್ದರೆ ನಮ್ಮೊಂದಿಗೆ ಚರ್ಚಿಸಬಹುದಿತ್ತು. ಕಾರಣಾಂತರಗಳಿಂದ ಅವರನ್ನು ಚುನಾವಣೆಯಲ್ಲಿ ಕಣಕ್ಕಿಳಿಸಲು ಪಕ್ಷದ ನಾಯಕತ್ವ ಸಿದ್ಧವಿಲ್ಲ ಎಂದು ಹೇಳಿದ್ದೆವು. ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿ ಕೇಂದ್ರ ಸಚಿವರಾಗುವಂತೆ ಕೇಳಿದ್ದೆವು. ಅವರಿಗೆ ಆಸೆಯಿದ್ದರೆ ಅವರ ಪತ್ನಿಯನ್ನು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವಂತೆಯೂ ಹೇಳಿದ್ದೆವು. ಇಷ್ಟೆಲ್ಲ ಆಶ್ವಾಸನೆ ನೀಡಿದರೂ ಪಕ್ಷ ತ್ಯಜಿಸಿದರು” ಎಂದಿದ್ದಾರೆ.

ಮುಂದುವರಿದು, “ಅದೇ ರೀತಿ ಸವದಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ನಂತರ ಉಪಮುಖ್ಯಮಂತ್ರಿ ಮಾಡಿದ್ದೆವು. ಅವರು ಆರು ವರ್ಷಗಳ ಎಂಎಲ್‌ಸಿ ಅವಧಿಯ ಕೇವಲ 10 ತಿಂಗಳುಗಳನ್ನು ಪೂರ್ಣಗೊಳಿಸಿದ್ದಾರೆ ಎಂಬುದು ನಿಮಗೆ ತಿಳಿದಿರಬೇಕು. ಅವರನ್ನು ಸಚಿವರನ್ನಾಗಿ ಮಾಡಿರಬಹುದು ಅಥವಾ ಬೇರೆ ಸ್ಥಾನಮಾನ ನೀಡಿರಬಹುದು. ಸ್ವಾರ್ಥಕ್ಕಾಗಿ ಪಕ್ಷ ತೊರೆದಿದ್ದು, ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿನ ಬಂಡಾಯಕ್ಕೆ ಬಿ.ಎಲ್.ಸಂತೋಷ್ ಕಾರಣ ಎಂಬ ಬಲವಾದ ಆರೋಪಗಳಿವೆ. ನಿಮ್ಮ ಅಭಿಪ್ರಾಯ ಏನು?” ಎಂಬ ಪ್ರಶ್ನೆಗೆ, “ಇಂತಹ ಆರೋಪಗಳಿಗೆ ಬೆಲೆ ಇಲ್ಲ. ಪೂರ್ಣಾವಧಿ ಕಾರ್ಯಕರ್ತರಾಗಿ ಪಕ್ಷದ ಬಲವರ್ಧನೆಗೆ ಸಂತೋಷ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಇಂತಹ ಆರೋಪ ಮಾಡುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ಬಂಜಾರ ಸಮುದಾಯವು ಒಳಮೀಸಲಾತಿ ಪ್ರಸ್ತಾಪವನ್ನು ವಿರೋಧಿಸಿ ಮಾಡಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಅದರಲ್ಲಿ ಗಂಭೀರವಾದದ್ದೇನೂ ಇಲ್ಲ. ನಾವು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದ್ದೇವೆ ಮತ್ತು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಈ ಬಾರಿ ಬಹುಮತವನ್ನು ಪಡೆದು ಹಳೆಯ ಸಂಪ್ರದಾಯವನ್ನು ಮುರಿಯುತ್ತೇವೆ. ನಾವು ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

“ನಾವು ಅಭಿವೃದ್ಧಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದೇವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೆ ತಂದ ಕಾರ್ಯಕ್ರಮಗಳ ಹೊರತಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ನೀಡಿದ ಕಾರ್ಯಕ್ರಮಗಳನ್ನು ತೋರಿಸಲು ನಾವು ಜನಾದೇಶವನ್ನು ಬಯಸುತ್ತೇವೆ. ನಮ್ಮ ಅಭಿಯಾನ ಅಭಿವೃದ್ಧಿಯ ಮೇಲೆ ಆಧಾರಿತವಾಗಿದೆ. ಸುಳ್ಳು ಪ್ರಚಾರಕ್ಕೆ ಬೆಲೆ ಇಲ್ಲ. ಶೇ.40ರಷ್ಟು ಕಮಿಷನ್ ಎಂಬ ಆರೋಪ ಎತ್ತುತ್ತಿರುವವರಿಗೇ ಹಿನ್ನಡೆಯಾಗುತ್ತದೆ. ನಾವು ಖಂಡಿತವಾಗಿಯೂ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ” ಎಂದು ಭವಿಷ್ಯ ನುಡಿದಿದ್ದಾರೆ.

ಕೃಪೆ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...