Homeಕರ್ನಾಟಕಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

ಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಪಕ್ಷದ ಕೇಂದ್ರದ ನಾಯಕತ್ವ (ಹೈಕಮಾಂಡ್) ಬೇರೆ ಯೋಜನೆಗಳನ್ನು ಹೊಂದಿತ್ತು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

‘ದಿ ಹಿಂದೂ’ ಪತ್ರಿಕೆಯ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು, “ಹೌದು, ನಾನು ನನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ, ಪಕ್ಷದ ಕೇಂದ್ರ ನಾಯಕತ್ವವು ಬೇರೆ ಯೋಜನೆಗಳನ್ನು ಹೊಂದಿತ್ತು. ಕೆ.ಎಸ್.ಈಶ್ವರಪ್ಪ, ಶೆಟ್ಟರ್ ಸೇರಿದಂತೆ ಹಲವು ನಾಯಕರಿಗೆ ಈ ಬಾರಿ ಟಿಕೆಟ್ ನೀಡಿಲ್ಲ. ಪಕ್ಷದ ಯುವ ಕಾರ್ಯಕರ್ತರಿಗೆ ಹೆಚ್ಚಿನ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದರು” ಎಂದು ತಿಳಿಸಿದ್ದಾರೆ.

“ಬಿಜೆಪಿಯು ಲಿಂಗಾಯತರಿಗೆ ಟಿಕೆಟ್ ನಿರಾಕರಿಸುವ ಮೂಲಕ ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಂತಹ ಹಿರಿಯ ನಾಯಕರು ಬಿಜೆಪಿ ತೊರೆದಿದ್ದಾರೆ. ಸಮುದಾಯದ ನಾಯಕರಾಗಿ ಇದರ ಬಗ್ಗೆ ಏನು ಹೇಳುತ್ತೀರಿ?” ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

“ಶೆಟ್ಟರ್ ಅವರಿಗೆ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲ ಸ್ಥಾನಮಾನ, ಗೌರವ ನೀಡಿದ್ದೆವು. ಅವರಿಗೇನಾದರೂ ಕುಂದುಕೊರತೆಗಳಿದ್ದರೆ ನಮ್ಮೊಂದಿಗೆ ಚರ್ಚಿಸಬಹುದಿತ್ತು. ಕಾರಣಾಂತರಗಳಿಂದ ಅವರನ್ನು ಚುನಾವಣೆಯಲ್ಲಿ ಕಣಕ್ಕಿಳಿಸಲು ಪಕ್ಷದ ನಾಯಕತ್ವ ಸಿದ್ಧವಿಲ್ಲ ಎಂದು ಹೇಳಿದ್ದೆವು. ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿ ಕೇಂದ್ರ ಸಚಿವರಾಗುವಂತೆ ಕೇಳಿದ್ದೆವು. ಅವರಿಗೆ ಆಸೆಯಿದ್ದರೆ ಅವರ ಪತ್ನಿಯನ್ನು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವಂತೆಯೂ ಹೇಳಿದ್ದೆವು. ಇಷ್ಟೆಲ್ಲ ಆಶ್ವಾಸನೆ ನೀಡಿದರೂ ಪಕ್ಷ ತ್ಯಜಿಸಿದರು” ಎಂದಿದ್ದಾರೆ.

ಮುಂದುವರಿದು, “ಅದೇ ರೀತಿ ಸವದಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ನಂತರ ಉಪಮುಖ್ಯಮಂತ್ರಿ ಮಾಡಿದ್ದೆವು. ಅವರು ಆರು ವರ್ಷಗಳ ಎಂಎಲ್‌ಸಿ ಅವಧಿಯ ಕೇವಲ 10 ತಿಂಗಳುಗಳನ್ನು ಪೂರ್ಣಗೊಳಿಸಿದ್ದಾರೆ ಎಂಬುದು ನಿಮಗೆ ತಿಳಿದಿರಬೇಕು. ಅವರನ್ನು ಸಚಿವರನ್ನಾಗಿ ಮಾಡಿರಬಹುದು ಅಥವಾ ಬೇರೆ ಸ್ಥಾನಮಾನ ನೀಡಿರಬಹುದು. ಸ್ವಾರ್ಥಕ್ಕಾಗಿ ಪಕ್ಷ ತೊರೆದಿದ್ದು, ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿನ ಬಂಡಾಯಕ್ಕೆ ಬಿ.ಎಲ್.ಸಂತೋಷ್ ಕಾರಣ ಎಂಬ ಬಲವಾದ ಆರೋಪಗಳಿವೆ. ನಿಮ್ಮ ಅಭಿಪ್ರಾಯ ಏನು?” ಎಂಬ ಪ್ರಶ್ನೆಗೆ, “ಇಂತಹ ಆರೋಪಗಳಿಗೆ ಬೆಲೆ ಇಲ್ಲ. ಪೂರ್ಣಾವಧಿ ಕಾರ್ಯಕರ್ತರಾಗಿ ಪಕ್ಷದ ಬಲವರ್ಧನೆಗೆ ಸಂತೋಷ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಇಂತಹ ಆರೋಪ ಮಾಡುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ಬಂಜಾರ ಸಮುದಾಯವು ಒಳಮೀಸಲಾತಿ ಪ್ರಸ್ತಾಪವನ್ನು ವಿರೋಧಿಸಿ ಮಾಡಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಅದರಲ್ಲಿ ಗಂಭೀರವಾದದ್ದೇನೂ ಇಲ್ಲ. ನಾವು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದ್ದೇವೆ ಮತ್ತು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಈ ಬಾರಿ ಬಹುಮತವನ್ನು ಪಡೆದು ಹಳೆಯ ಸಂಪ್ರದಾಯವನ್ನು ಮುರಿಯುತ್ತೇವೆ. ನಾವು ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

“ನಾವು ಅಭಿವೃದ್ಧಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದೇವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೆ ತಂದ ಕಾರ್ಯಕ್ರಮಗಳ ಹೊರತಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ನೀಡಿದ ಕಾರ್ಯಕ್ರಮಗಳನ್ನು ತೋರಿಸಲು ನಾವು ಜನಾದೇಶವನ್ನು ಬಯಸುತ್ತೇವೆ. ನಮ್ಮ ಅಭಿಯಾನ ಅಭಿವೃದ್ಧಿಯ ಮೇಲೆ ಆಧಾರಿತವಾಗಿದೆ. ಸುಳ್ಳು ಪ್ರಚಾರಕ್ಕೆ ಬೆಲೆ ಇಲ್ಲ. ಶೇ.40ರಷ್ಟು ಕಮಿಷನ್ ಎಂಬ ಆರೋಪ ಎತ್ತುತ್ತಿರುವವರಿಗೇ ಹಿನ್ನಡೆಯಾಗುತ್ತದೆ. ನಾವು ಖಂಡಿತವಾಗಿಯೂ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ” ಎಂದು ಭವಿಷ್ಯ ನುಡಿದಿದ್ದಾರೆ.

ಕೃಪೆ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...