Homeಕರ್ನಾಟಕಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

ಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಪಕ್ಷದ ಕೇಂದ್ರದ ನಾಯಕತ್ವ (ಹೈಕಮಾಂಡ್) ಬೇರೆ ಯೋಜನೆಗಳನ್ನು ಹೊಂದಿತ್ತು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

‘ದಿ ಹಿಂದೂ’ ಪತ್ರಿಕೆಯ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು, “ಹೌದು, ನಾನು ನನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ, ಪಕ್ಷದ ಕೇಂದ್ರ ನಾಯಕತ್ವವು ಬೇರೆ ಯೋಜನೆಗಳನ್ನು ಹೊಂದಿತ್ತು. ಕೆ.ಎಸ್.ಈಶ್ವರಪ್ಪ, ಶೆಟ್ಟರ್ ಸೇರಿದಂತೆ ಹಲವು ನಾಯಕರಿಗೆ ಈ ಬಾರಿ ಟಿಕೆಟ್ ನೀಡಿಲ್ಲ. ಪಕ್ಷದ ಯುವ ಕಾರ್ಯಕರ್ತರಿಗೆ ಹೆಚ್ಚಿನ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದರು” ಎಂದು ತಿಳಿಸಿದ್ದಾರೆ.

“ಬಿಜೆಪಿಯು ಲಿಂಗಾಯತರಿಗೆ ಟಿಕೆಟ್ ನಿರಾಕರಿಸುವ ಮೂಲಕ ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಂತಹ ಹಿರಿಯ ನಾಯಕರು ಬಿಜೆಪಿ ತೊರೆದಿದ್ದಾರೆ. ಸಮುದಾಯದ ನಾಯಕರಾಗಿ ಇದರ ಬಗ್ಗೆ ಏನು ಹೇಳುತ್ತೀರಿ?” ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

“ಶೆಟ್ಟರ್ ಅವರಿಗೆ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲ ಸ್ಥಾನಮಾನ, ಗೌರವ ನೀಡಿದ್ದೆವು. ಅವರಿಗೇನಾದರೂ ಕುಂದುಕೊರತೆಗಳಿದ್ದರೆ ನಮ್ಮೊಂದಿಗೆ ಚರ್ಚಿಸಬಹುದಿತ್ತು. ಕಾರಣಾಂತರಗಳಿಂದ ಅವರನ್ನು ಚುನಾವಣೆಯಲ್ಲಿ ಕಣಕ್ಕಿಳಿಸಲು ಪಕ್ಷದ ನಾಯಕತ್ವ ಸಿದ್ಧವಿಲ್ಲ ಎಂದು ಹೇಳಿದ್ದೆವು. ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿ ಕೇಂದ್ರ ಸಚಿವರಾಗುವಂತೆ ಕೇಳಿದ್ದೆವು. ಅವರಿಗೆ ಆಸೆಯಿದ್ದರೆ ಅವರ ಪತ್ನಿಯನ್ನು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವಂತೆಯೂ ಹೇಳಿದ್ದೆವು. ಇಷ್ಟೆಲ್ಲ ಆಶ್ವಾಸನೆ ನೀಡಿದರೂ ಪಕ್ಷ ತ್ಯಜಿಸಿದರು” ಎಂದಿದ್ದಾರೆ.

ಮುಂದುವರಿದು, “ಅದೇ ರೀತಿ ಸವದಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ನಂತರ ಉಪಮುಖ್ಯಮಂತ್ರಿ ಮಾಡಿದ್ದೆವು. ಅವರು ಆರು ವರ್ಷಗಳ ಎಂಎಲ್‌ಸಿ ಅವಧಿಯ ಕೇವಲ 10 ತಿಂಗಳುಗಳನ್ನು ಪೂರ್ಣಗೊಳಿಸಿದ್ದಾರೆ ಎಂಬುದು ನಿಮಗೆ ತಿಳಿದಿರಬೇಕು. ಅವರನ್ನು ಸಚಿವರನ್ನಾಗಿ ಮಾಡಿರಬಹುದು ಅಥವಾ ಬೇರೆ ಸ್ಥಾನಮಾನ ನೀಡಿರಬಹುದು. ಸ್ವಾರ್ಥಕ್ಕಾಗಿ ಪಕ್ಷ ತೊರೆದಿದ್ದು, ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿನ ಬಂಡಾಯಕ್ಕೆ ಬಿ.ಎಲ್.ಸಂತೋಷ್ ಕಾರಣ ಎಂಬ ಬಲವಾದ ಆರೋಪಗಳಿವೆ. ನಿಮ್ಮ ಅಭಿಪ್ರಾಯ ಏನು?” ಎಂಬ ಪ್ರಶ್ನೆಗೆ, “ಇಂತಹ ಆರೋಪಗಳಿಗೆ ಬೆಲೆ ಇಲ್ಲ. ಪೂರ್ಣಾವಧಿ ಕಾರ್ಯಕರ್ತರಾಗಿ ಪಕ್ಷದ ಬಲವರ್ಧನೆಗೆ ಸಂತೋಷ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಇಂತಹ ಆರೋಪ ಮಾಡುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ಬಂಜಾರ ಸಮುದಾಯವು ಒಳಮೀಸಲಾತಿ ಪ್ರಸ್ತಾಪವನ್ನು ವಿರೋಧಿಸಿ ಮಾಡಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಅದರಲ್ಲಿ ಗಂಭೀರವಾದದ್ದೇನೂ ಇಲ್ಲ. ನಾವು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದ್ದೇವೆ ಮತ್ತು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಈ ಬಾರಿ ಬಹುಮತವನ್ನು ಪಡೆದು ಹಳೆಯ ಸಂಪ್ರದಾಯವನ್ನು ಮುರಿಯುತ್ತೇವೆ. ನಾವು ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

“ನಾವು ಅಭಿವೃದ್ಧಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದೇವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೆ ತಂದ ಕಾರ್ಯಕ್ರಮಗಳ ಹೊರತಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ನೀಡಿದ ಕಾರ್ಯಕ್ರಮಗಳನ್ನು ತೋರಿಸಲು ನಾವು ಜನಾದೇಶವನ್ನು ಬಯಸುತ್ತೇವೆ. ನಮ್ಮ ಅಭಿಯಾನ ಅಭಿವೃದ್ಧಿಯ ಮೇಲೆ ಆಧಾರಿತವಾಗಿದೆ. ಸುಳ್ಳು ಪ್ರಚಾರಕ್ಕೆ ಬೆಲೆ ಇಲ್ಲ. ಶೇ.40ರಷ್ಟು ಕಮಿಷನ್ ಎಂಬ ಆರೋಪ ಎತ್ತುತ್ತಿರುವವರಿಗೇ ಹಿನ್ನಡೆಯಾಗುತ್ತದೆ. ನಾವು ಖಂಡಿತವಾಗಿಯೂ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ” ಎಂದು ಭವಿಷ್ಯ ನುಡಿದಿದ್ದಾರೆ.

ಕೃಪೆ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...