Homeಕರ್ನಾಟಕಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

ಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಪಕ್ಷದ ಕೇಂದ್ರದ ನಾಯಕತ್ವ (ಹೈಕಮಾಂಡ್) ಬೇರೆ ಯೋಜನೆಗಳನ್ನು ಹೊಂದಿತ್ತು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

‘ದಿ ಹಿಂದೂ’ ಪತ್ರಿಕೆಯ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು, “ಹೌದು, ನಾನು ನನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ, ಪಕ್ಷದ ಕೇಂದ್ರ ನಾಯಕತ್ವವು ಬೇರೆ ಯೋಜನೆಗಳನ್ನು ಹೊಂದಿತ್ತು. ಕೆ.ಎಸ್.ಈಶ್ವರಪ್ಪ, ಶೆಟ್ಟರ್ ಸೇರಿದಂತೆ ಹಲವು ನಾಯಕರಿಗೆ ಈ ಬಾರಿ ಟಿಕೆಟ್ ನೀಡಿಲ್ಲ. ಪಕ್ಷದ ಯುವ ಕಾರ್ಯಕರ್ತರಿಗೆ ಹೆಚ್ಚಿನ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದರು” ಎಂದು ತಿಳಿಸಿದ್ದಾರೆ.

“ಬಿಜೆಪಿಯು ಲಿಂಗಾಯತರಿಗೆ ಟಿಕೆಟ್ ನಿರಾಕರಿಸುವ ಮೂಲಕ ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಂತಹ ಹಿರಿಯ ನಾಯಕರು ಬಿಜೆಪಿ ತೊರೆದಿದ್ದಾರೆ. ಸಮುದಾಯದ ನಾಯಕರಾಗಿ ಇದರ ಬಗ್ಗೆ ಏನು ಹೇಳುತ್ತೀರಿ?” ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

“ಶೆಟ್ಟರ್ ಅವರಿಗೆ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲ ಸ್ಥಾನಮಾನ, ಗೌರವ ನೀಡಿದ್ದೆವು. ಅವರಿಗೇನಾದರೂ ಕುಂದುಕೊರತೆಗಳಿದ್ದರೆ ನಮ್ಮೊಂದಿಗೆ ಚರ್ಚಿಸಬಹುದಿತ್ತು. ಕಾರಣಾಂತರಗಳಿಂದ ಅವರನ್ನು ಚುನಾವಣೆಯಲ್ಲಿ ಕಣಕ್ಕಿಳಿಸಲು ಪಕ್ಷದ ನಾಯಕತ್ವ ಸಿದ್ಧವಿಲ್ಲ ಎಂದು ಹೇಳಿದ್ದೆವು. ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿ ಕೇಂದ್ರ ಸಚಿವರಾಗುವಂತೆ ಕೇಳಿದ್ದೆವು. ಅವರಿಗೆ ಆಸೆಯಿದ್ದರೆ ಅವರ ಪತ್ನಿಯನ್ನು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವಂತೆಯೂ ಹೇಳಿದ್ದೆವು. ಇಷ್ಟೆಲ್ಲ ಆಶ್ವಾಸನೆ ನೀಡಿದರೂ ಪಕ್ಷ ತ್ಯಜಿಸಿದರು” ಎಂದಿದ್ದಾರೆ.

ಮುಂದುವರಿದು, “ಅದೇ ರೀತಿ ಸವದಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ನಂತರ ಉಪಮುಖ್ಯಮಂತ್ರಿ ಮಾಡಿದ್ದೆವು. ಅವರು ಆರು ವರ್ಷಗಳ ಎಂಎಲ್‌ಸಿ ಅವಧಿಯ ಕೇವಲ 10 ತಿಂಗಳುಗಳನ್ನು ಪೂರ್ಣಗೊಳಿಸಿದ್ದಾರೆ ಎಂಬುದು ನಿಮಗೆ ತಿಳಿದಿರಬೇಕು. ಅವರನ್ನು ಸಚಿವರನ್ನಾಗಿ ಮಾಡಿರಬಹುದು ಅಥವಾ ಬೇರೆ ಸ್ಥಾನಮಾನ ನೀಡಿರಬಹುದು. ಸ್ವಾರ್ಥಕ್ಕಾಗಿ ಪಕ್ಷ ತೊರೆದಿದ್ದು, ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿನ ಬಂಡಾಯಕ್ಕೆ ಬಿ.ಎಲ್.ಸಂತೋಷ್ ಕಾರಣ ಎಂಬ ಬಲವಾದ ಆರೋಪಗಳಿವೆ. ನಿಮ್ಮ ಅಭಿಪ್ರಾಯ ಏನು?” ಎಂಬ ಪ್ರಶ್ನೆಗೆ, “ಇಂತಹ ಆರೋಪಗಳಿಗೆ ಬೆಲೆ ಇಲ್ಲ. ಪೂರ್ಣಾವಧಿ ಕಾರ್ಯಕರ್ತರಾಗಿ ಪಕ್ಷದ ಬಲವರ್ಧನೆಗೆ ಸಂತೋಷ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಇಂತಹ ಆರೋಪ ಮಾಡುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ಬಂಜಾರ ಸಮುದಾಯವು ಒಳಮೀಸಲಾತಿ ಪ್ರಸ್ತಾಪವನ್ನು ವಿರೋಧಿಸಿ ಮಾಡಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಅದರಲ್ಲಿ ಗಂಭೀರವಾದದ್ದೇನೂ ಇಲ್ಲ. ನಾವು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದ್ದೇವೆ ಮತ್ತು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಈ ಬಾರಿ ಬಹುಮತವನ್ನು ಪಡೆದು ಹಳೆಯ ಸಂಪ್ರದಾಯವನ್ನು ಮುರಿಯುತ್ತೇವೆ. ನಾವು ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

“ನಾವು ಅಭಿವೃದ್ಧಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದೇವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೆ ತಂದ ಕಾರ್ಯಕ್ರಮಗಳ ಹೊರತಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ನೀಡಿದ ಕಾರ್ಯಕ್ರಮಗಳನ್ನು ತೋರಿಸಲು ನಾವು ಜನಾದೇಶವನ್ನು ಬಯಸುತ್ತೇವೆ. ನಮ್ಮ ಅಭಿಯಾನ ಅಭಿವೃದ್ಧಿಯ ಮೇಲೆ ಆಧಾರಿತವಾಗಿದೆ. ಸುಳ್ಳು ಪ್ರಚಾರಕ್ಕೆ ಬೆಲೆ ಇಲ್ಲ. ಶೇ.40ರಷ್ಟು ಕಮಿಷನ್ ಎಂಬ ಆರೋಪ ಎತ್ತುತ್ತಿರುವವರಿಗೇ ಹಿನ್ನಡೆಯಾಗುತ್ತದೆ. ನಾವು ಖಂಡಿತವಾಗಿಯೂ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ” ಎಂದು ಭವಿಷ್ಯ ನುಡಿದಿದ್ದಾರೆ.

ಕೃಪೆ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...