Homeಕರ್ನಾಟಕಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

ಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಪಕ್ಷದ ಕೇಂದ್ರದ ನಾಯಕತ್ವ (ಹೈಕಮಾಂಡ್) ಬೇರೆ ಯೋಜನೆಗಳನ್ನು ಹೊಂದಿತ್ತು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

‘ದಿ ಹಿಂದೂ’ ಪತ್ರಿಕೆಯ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು, “ಹೌದು, ನಾನು ನನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ, ಪಕ್ಷದ ಕೇಂದ್ರ ನಾಯಕತ್ವವು ಬೇರೆ ಯೋಜನೆಗಳನ್ನು ಹೊಂದಿತ್ತು. ಕೆ.ಎಸ್.ಈಶ್ವರಪ್ಪ, ಶೆಟ್ಟರ್ ಸೇರಿದಂತೆ ಹಲವು ನಾಯಕರಿಗೆ ಈ ಬಾರಿ ಟಿಕೆಟ್ ನೀಡಿಲ್ಲ. ಪಕ್ಷದ ಯುವ ಕಾರ್ಯಕರ್ತರಿಗೆ ಹೆಚ್ಚಿನ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದರು” ಎಂದು ತಿಳಿಸಿದ್ದಾರೆ.

“ಬಿಜೆಪಿಯು ಲಿಂಗಾಯತರಿಗೆ ಟಿಕೆಟ್ ನಿರಾಕರಿಸುವ ಮೂಲಕ ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಂತಹ ಹಿರಿಯ ನಾಯಕರು ಬಿಜೆಪಿ ತೊರೆದಿದ್ದಾರೆ. ಸಮುದಾಯದ ನಾಯಕರಾಗಿ ಇದರ ಬಗ್ಗೆ ಏನು ಹೇಳುತ್ತೀರಿ?” ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

“ಶೆಟ್ಟರ್ ಅವರಿಗೆ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲ ಸ್ಥಾನಮಾನ, ಗೌರವ ನೀಡಿದ್ದೆವು. ಅವರಿಗೇನಾದರೂ ಕುಂದುಕೊರತೆಗಳಿದ್ದರೆ ನಮ್ಮೊಂದಿಗೆ ಚರ್ಚಿಸಬಹುದಿತ್ತು. ಕಾರಣಾಂತರಗಳಿಂದ ಅವರನ್ನು ಚುನಾವಣೆಯಲ್ಲಿ ಕಣಕ್ಕಿಳಿಸಲು ಪಕ್ಷದ ನಾಯಕತ್ವ ಸಿದ್ಧವಿಲ್ಲ ಎಂದು ಹೇಳಿದ್ದೆವು. ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿ ಕೇಂದ್ರ ಸಚಿವರಾಗುವಂತೆ ಕೇಳಿದ್ದೆವು. ಅವರಿಗೆ ಆಸೆಯಿದ್ದರೆ ಅವರ ಪತ್ನಿಯನ್ನು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವಂತೆಯೂ ಹೇಳಿದ್ದೆವು. ಇಷ್ಟೆಲ್ಲ ಆಶ್ವಾಸನೆ ನೀಡಿದರೂ ಪಕ್ಷ ತ್ಯಜಿಸಿದರು” ಎಂದಿದ್ದಾರೆ.

ಮುಂದುವರಿದು, “ಅದೇ ರೀತಿ ಸವದಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ನಂತರ ಉಪಮುಖ್ಯಮಂತ್ರಿ ಮಾಡಿದ್ದೆವು. ಅವರು ಆರು ವರ್ಷಗಳ ಎಂಎಲ್‌ಸಿ ಅವಧಿಯ ಕೇವಲ 10 ತಿಂಗಳುಗಳನ್ನು ಪೂರ್ಣಗೊಳಿಸಿದ್ದಾರೆ ಎಂಬುದು ನಿಮಗೆ ತಿಳಿದಿರಬೇಕು. ಅವರನ್ನು ಸಚಿವರನ್ನಾಗಿ ಮಾಡಿರಬಹುದು ಅಥವಾ ಬೇರೆ ಸ್ಥಾನಮಾನ ನೀಡಿರಬಹುದು. ಸ್ವಾರ್ಥಕ್ಕಾಗಿ ಪಕ್ಷ ತೊರೆದಿದ್ದು, ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿನ ಬಂಡಾಯಕ್ಕೆ ಬಿ.ಎಲ್.ಸಂತೋಷ್ ಕಾರಣ ಎಂಬ ಬಲವಾದ ಆರೋಪಗಳಿವೆ. ನಿಮ್ಮ ಅಭಿಪ್ರಾಯ ಏನು?” ಎಂಬ ಪ್ರಶ್ನೆಗೆ, “ಇಂತಹ ಆರೋಪಗಳಿಗೆ ಬೆಲೆ ಇಲ್ಲ. ಪೂರ್ಣಾವಧಿ ಕಾರ್ಯಕರ್ತರಾಗಿ ಪಕ್ಷದ ಬಲವರ್ಧನೆಗೆ ಸಂತೋಷ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಇಂತಹ ಆರೋಪ ಮಾಡುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ಬಂಜಾರ ಸಮುದಾಯವು ಒಳಮೀಸಲಾತಿ ಪ್ರಸ್ತಾಪವನ್ನು ವಿರೋಧಿಸಿ ಮಾಡಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಅದರಲ್ಲಿ ಗಂಭೀರವಾದದ್ದೇನೂ ಇಲ್ಲ. ನಾವು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದ್ದೇವೆ ಮತ್ತು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಈ ಬಾರಿ ಬಹುಮತವನ್ನು ಪಡೆದು ಹಳೆಯ ಸಂಪ್ರದಾಯವನ್ನು ಮುರಿಯುತ್ತೇವೆ. ನಾವು ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

“ನಾವು ಅಭಿವೃದ್ಧಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದೇವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೆ ತಂದ ಕಾರ್ಯಕ್ರಮಗಳ ಹೊರತಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ನೀಡಿದ ಕಾರ್ಯಕ್ರಮಗಳನ್ನು ತೋರಿಸಲು ನಾವು ಜನಾದೇಶವನ್ನು ಬಯಸುತ್ತೇವೆ. ನಮ್ಮ ಅಭಿಯಾನ ಅಭಿವೃದ್ಧಿಯ ಮೇಲೆ ಆಧಾರಿತವಾಗಿದೆ. ಸುಳ್ಳು ಪ್ರಚಾರಕ್ಕೆ ಬೆಲೆ ಇಲ್ಲ. ಶೇ.40ರಷ್ಟು ಕಮಿಷನ್ ಎಂಬ ಆರೋಪ ಎತ್ತುತ್ತಿರುವವರಿಗೇ ಹಿನ್ನಡೆಯಾಗುತ್ತದೆ. ನಾವು ಖಂಡಿತವಾಗಿಯೂ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ” ಎಂದು ಭವಿಷ್ಯ ನುಡಿದಿದ್ದಾರೆ.

ಕೃಪೆ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...