Homeಮುಖಪುಟ‘40 ಶಾಸಕರ ಬೇಟೆಗೆ ಪ್ರಯತ್ನ’: ಆಪರೇಷನ್‌ ಕಮಲ ವಿಫಲ ಎಂದ ಎಎಪಿ

‘40 ಶಾಸಕರ ಬೇಟೆಗೆ ಪ್ರಯತ್ನ’: ಆಪರೇಷನ್‌ ಕಮಲ ವಿಫಲ ಎಂದ ಎಎಪಿ

- Advertisement -
- Advertisement -

ದೆಹಲಿಯ ಎಎಪಿ ಸರ್ಕಾರವನ್ನು ಉರುಳಿಸಲು ಬಿಜೆಪಿಯು ತಮ್ಮ ಶಾಸಕರಿಗೆ 20 ಕೋಟಿ ರೂ. ಆಫರ್‌ ನೀಡಿದೆ ಎಂದು ಪಕ್ಷವು ಆರೋಪಿಸಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಕ್ಷದ ಶಾಸಕರ ‘ತುರ್ತು’ ಸಭೆ ನಡೆಸಿದ್ದಾರೆ.

ದೆಹಲಿ ಎಎಪಿಯ 62 ಶಾಸಕರಲ್ಲಿ 53 ಮಂದಿ ಸದಸ್ಯರು ಮುಖ್ಯಮಂತ್ರಿ ಕೇಜ್ರಿವಾಲ್ ಮನೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾರೆ. ಉಳಿದ ಶಾಸಕರು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸ್ಪೀಕರ್ ಮೂಲಕ ಫೋನ್‌ನಲ್ಲಿ ತಮ್ಮ ಬೆಂಬಲವನ್ನು ವಾಗ್ದಾನ ಮಾಡಿದ್ದಾರೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಕನಿಷ್ಠ 12 ಶಾಸಕರು ತಮಗೆ ಬಿಜೆಪಿಯಿಂದ ಆಫರ್‌ ಬಂದಿದೆ ಎಂದು ಹೇಳಿದ್ದಾರೆ. ಆದರೆ ಅವರೆಲ್ಲರೂ ತಮ್ಮ ಕೊನೆಯ ಉಸಿರು ಇರುವವರೆಗೂ ಕೇಜ್ರಿವಾಲ್‌ಗೆ ಬೆಂಬಲ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದು ಸೌರಭ್‌ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

‘ಬಿಜೆಪಿಯ ಆಪರೇಷನ್ ಕಮಲದ ವೈಫಲ್ಯಕ್ಕಾಗಿ ಪ್ರಾರ್ಥಿಸಲು’ ಸಭೆಯ ನಂತರ ಕೇಜ್ರಿವಾಲ್ ಮತ್ತು ಅವರ ಶಾಸಕರು ಮಹಾತ್ಮಾ ಗಾಂಧಿಯವರ ಸ್ಮಾರಕ ರಾಜ್‌ಘಾಟ್‌ಗೆ ದೊಡ್ಡ ಗುಂಪಿನೊಂದಿಗೆ ತೆರಳಿದ್ದಾರೆ. “ಅವರು 40 ಶಾಸಕರಿಗೆ ಲಂಚ ಕೊಡಲು ಪ್ರಯತ್ನಿಸುತ್ತಿದ್ದಾರೆ ಎಂದು ನನಗೆ ತಿಳಿಯಿತು. ಆದರೆ ಒಬ್ಬ ಶಾಸಕ ಕೂಡಾ ಅವರಿಗೆ ಮಣಿಯದಿರುವುದು ನನಗೆ ಸಂತೋಷವಾಗಿದೆ” ಎಂದು ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಳಿಗ್ಗೆ ಎಎಪಿ ಸಭೆಗೆ ಆಗಮಿಸಿದವರನ್ನು ಟ್ರ್ಯಾಕ್ ಮಾಡುವಾಗ ಮತ್ತು ಸಂಪರ್ಕಕ್ಕೆ ಸಿಗದ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಗೊಂದಲ ಉಂಟಾಗಿದ್ದವು. “ಎಲ್ಲಾ ಶಾಸಕರನ್ನು ಸಂಪರ್ಕಿಸಲಾಗುತ್ತಿದೆ. ಸಭೆಯ ಬಗ್ಗೆ ನಿನ್ನೆಯೆ ಸಂದೇಶ ನೀಡಲಾಗಿದೆ. ಸಂಪರ್ಕಕ್ಕೆ ಸಿಗದ ಶಾಸಕರನ್ನು ಸಂಪರ್ಕಕ್ಕೆ ಪ್ರಯತ್ನಿಸಲಾಗುತ್ತಿದೆ. ಬಿಜೆಪಿ 40 ಶಾಸಕರನ್ನು ಒಡೆಯಲು ತಯಾರಿ ನಡೆಸುತ್ತಿದೆ” ಎಂದು ಶಾಸಕ ಪಾಂಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಎಎಪಿ 62 ಶಾಸಕರನ್ನು ಹೊಂದಿದೆ. ಬಿಜೆಪಿಗೆ ಎಂಟು ಸ್ಥಾನಗಳಿದ್ದು ಬಹುಮತಕ್ಕೆ ಇನ್ನೂ 28ರ ಅಗತ್ಯವಿದೆ. ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಕ್ರಮ ಎದುರಿಸದೆ ಇರಲು ಎಎಪಿಯಿಂದ ಸುಮಾರು 40 ಶಾಸಕರು ಪಕ್ಷಾಂತರವಾಗಬೇಕಾಗಿದೆ.

ಇದನ್ನೂ ಓದಿ: `ಬಿಜೆಪಿ ಸೇರುವುದಾದರೆ CBI & ED ಪ್ರಕರಣ ಮುಕ್ತಾಯ’: ಬಿಜೆಪಿಯಿಂದ ಆಫರ್‌ ಬಂದಿದೆ ಎಂದ ದೆಹಲಿ ಉಪಮುಖ್ಯಮಂತ್ರಿ

ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮಾದರಿಯಲ್ಲಿ ಬಿಜೆಪಿ ತನ್ನ ಸರ್ಕಾರವನ್ನು ಉರುಳಿಸಲು ಆಪರೇಷನ್ ಕಮಲದ ಸಂಚು ರೂಪಿಸುತ್ತಿದೆ ಎಂದು ಎಎಪಿ ಆರೋಪಿಸಿದೆ. ಬಿಜೆಪಿಯು ತಮ್ಮ ಶಾಸಕರಿಗೆ 20 ಕೋಟಿ ರೂ. ಆಫರ್‌ ನೀಡಿದ್ದು, ಅವರ ಜೊತೆಗೆ ಇನ್ನೂ ಹೆಚ್ಚಿನ ಜನರನ್ನು ತಂದರೆ 25 ಕೋಟಿ ರೂ. ನೀಡುತ್ತೇವೆ ಎಂದು ಹೇಳಿದೆ ಎಂದು ಎಎಪಿ ನಾಯಕರು ಆರೋಪಿಸಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ದಾಳಿ ನಡೆಸಿದ ಎರಡು ದಿನಗಳ ನಂತರ ಈ ಆರೋಪಗಳನ್ನು ಮಾಡಲಾಗಿದೆ.

ಪಕ್ಷ ಬದಲಾಯಿಸಿದರೆ ತನ್ನ ವಿರುದ್ಧದ ಪ್ರಕರಣಗಳನ್ನು ಕೈಬಿಡುವ ಮತ್ತು ಅವರನ್ನು ಮುಖ್ಯಮಂತ್ರಿ ಮಾಡುವ ಪ್ರಸ್ತಾಪದೊಂದಿಗೆ ಬಿಜೆಪಿ ತಮ್ಮನ್ನು ಸಂಪರ್ಕಿಸಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ. ‘‘ಮನೀಷ್ ಸಿಸೋಡಿಯಾ ಅವರಂತಹ ಸಹವರ್ತಿಯನ್ನು ಪಡೆಯಲು ಅದೃಷ್ಟ ಮಾಡಿದ್ದೇನೆ. ಅವರು ಮುಖ್ಯಮಂತ್ರಿಯಾಗುವ ಪ್ರಸ್ತಾಪವನ್ನು ತಿರಸ್ಕರಿಸಿದರು” ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ರಾಜಕೀಯ: ನಿತೀಶ್ ಹೊಸ ಪಟ್ಟು; ದೆಹಲಿ ರಾಜಕೀಯದಲ್ಲಿ ಬೀಸುವುದೇ ಹೊಸ ಗಾಳಿ?

ಸಿಸೋಡಿಯಾ ಅವರ ವಿರುದ್ಧ 14 ಗಂಟೆಗಳ ದಾಳಿ ನಡದರೂ ಸಿಬಿಐಗೆ ಏನೂ ಸಿಕ್ಕಿಲ್ಲ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದ್ದಾರೆ. 40 ಶಾಸಕರನ್ನು ಖರೀದಿಸಲು ಬಿಜೆಪಿಗೆ 800 ಕೋಟಿ ಎಲ್ಲಿಂದ ಬಂತು ಎಂದು ಎಎಪಿ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಕಳಂಕಿತ CBI,ED ಮತ್ತು ಇತರೆ ಬಿಜೆಪಿ ಕೃಪಾಪೋಷಿತ ಗುಲಾಮ ಸರ್ಕಾರಿ ಸಂಸ್ಥೆಗಳಿಗೆ ಇಲ್ಲಿ ಕರ್ನಾಟಕದಲ್ಲಿ 2019ರಲ್ಲಿ ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಗುಲಾಮ ಪ್ರತಿನಿಧಿಗಳನ್ನ ಜಾನುವಾರುಗಳಿಗಿಂತ ಕೀಳಾಗಿ ಖರೀದಿ ಮಾಡಿತಲ್ಲಾ ಅದರ ತನಿಖಾ ವ್ಯಾಪ್ತಿಯು ಈ ಗುಲಾಮ CBI ಮತ್ತು ED ಸಂಸ್ಥೆಗಳಿಗೆ ಬರೋದಿಲ್ವಾ? ಈ ಸಂಸ್ಥೆಗಳಲ್ಲಿ ಕೆಲಸ ಮಾಡೋ ಗುಲಾಮರೇ ಒಂದು ವಿಷಯ ಮನದಟ್ಟಾಗಿರಲಿ ನೀವು ತಿನ್ನುತ್ತಿರೋ ಅನ್ನ ಪ್ರಜೆಗಳ ತೆರಿಗೆ ಹಣದಿಂದ ಅ ಕಾರಣಕ್ಕಾಗಿಯಾದರು ಪ್ರಜೆಗಳಿಗೆ ಮತ್ತು ಸಂವಿಧಾನಕ್ಕೆ ಬದ್ದರಾಗಿರಿ,ಯಾವುದೋ ರಾಜಕೀಯ ಪಕ್ಷಕ್ಕಲ್ಲ.

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...