Homeಮುಖಪುಟ‘40 ಶಾಸಕರ ಬೇಟೆಗೆ ಪ್ರಯತ್ನ’: ಆಪರೇಷನ್‌ ಕಮಲ ವಿಫಲ ಎಂದ ಎಎಪಿ

‘40 ಶಾಸಕರ ಬೇಟೆಗೆ ಪ್ರಯತ್ನ’: ಆಪರೇಷನ್‌ ಕಮಲ ವಿಫಲ ಎಂದ ಎಎಪಿ

- Advertisement -
- Advertisement -

ದೆಹಲಿಯ ಎಎಪಿ ಸರ್ಕಾರವನ್ನು ಉರುಳಿಸಲು ಬಿಜೆಪಿಯು ತಮ್ಮ ಶಾಸಕರಿಗೆ 20 ಕೋಟಿ ರೂ. ಆಫರ್‌ ನೀಡಿದೆ ಎಂದು ಪಕ್ಷವು ಆರೋಪಿಸಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಕ್ಷದ ಶಾಸಕರ ‘ತುರ್ತು’ ಸಭೆ ನಡೆಸಿದ್ದಾರೆ.

ದೆಹಲಿ ಎಎಪಿಯ 62 ಶಾಸಕರಲ್ಲಿ 53 ಮಂದಿ ಸದಸ್ಯರು ಮುಖ್ಯಮಂತ್ರಿ ಕೇಜ್ರಿವಾಲ್ ಮನೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾರೆ. ಉಳಿದ ಶಾಸಕರು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸ್ಪೀಕರ್ ಮೂಲಕ ಫೋನ್‌ನಲ್ಲಿ ತಮ್ಮ ಬೆಂಬಲವನ್ನು ವಾಗ್ದಾನ ಮಾಡಿದ್ದಾರೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಕನಿಷ್ಠ 12 ಶಾಸಕರು ತಮಗೆ ಬಿಜೆಪಿಯಿಂದ ಆಫರ್‌ ಬಂದಿದೆ ಎಂದು ಹೇಳಿದ್ದಾರೆ. ಆದರೆ ಅವರೆಲ್ಲರೂ ತಮ್ಮ ಕೊನೆಯ ಉಸಿರು ಇರುವವರೆಗೂ ಕೇಜ್ರಿವಾಲ್‌ಗೆ ಬೆಂಬಲ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದು ಸೌರಭ್‌ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

‘ಬಿಜೆಪಿಯ ಆಪರೇಷನ್ ಕಮಲದ ವೈಫಲ್ಯಕ್ಕಾಗಿ ಪ್ರಾರ್ಥಿಸಲು’ ಸಭೆಯ ನಂತರ ಕೇಜ್ರಿವಾಲ್ ಮತ್ತು ಅವರ ಶಾಸಕರು ಮಹಾತ್ಮಾ ಗಾಂಧಿಯವರ ಸ್ಮಾರಕ ರಾಜ್‌ಘಾಟ್‌ಗೆ ದೊಡ್ಡ ಗುಂಪಿನೊಂದಿಗೆ ತೆರಳಿದ್ದಾರೆ. “ಅವರು 40 ಶಾಸಕರಿಗೆ ಲಂಚ ಕೊಡಲು ಪ್ರಯತ್ನಿಸುತ್ತಿದ್ದಾರೆ ಎಂದು ನನಗೆ ತಿಳಿಯಿತು. ಆದರೆ ಒಬ್ಬ ಶಾಸಕ ಕೂಡಾ ಅವರಿಗೆ ಮಣಿಯದಿರುವುದು ನನಗೆ ಸಂತೋಷವಾಗಿದೆ” ಎಂದು ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಳಿಗ್ಗೆ ಎಎಪಿ ಸಭೆಗೆ ಆಗಮಿಸಿದವರನ್ನು ಟ್ರ್ಯಾಕ್ ಮಾಡುವಾಗ ಮತ್ತು ಸಂಪರ್ಕಕ್ಕೆ ಸಿಗದ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಗೊಂದಲ ಉಂಟಾಗಿದ್ದವು. “ಎಲ್ಲಾ ಶಾಸಕರನ್ನು ಸಂಪರ್ಕಿಸಲಾಗುತ್ತಿದೆ. ಸಭೆಯ ಬಗ್ಗೆ ನಿನ್ನೆಯೆ ಸಂದೇಶ ನೀಡಲಾಗಿದೆ. ಸಂಪರ್ಕಕ್ಕೆ ಸಿಗದ ಶಾಸಕರನ್ನು ಸಂಪರ್ಕಕ್ಕೆ ಪ್ರಯತ್ನಿಸಲಾಗುತ್ತಿದೆ. ಬಿಜೆಪಿ 40 ಶಾಸಕರನ್ನು ಒಡೆಯಲು ತಯಾರಿ ನಡೆಸುತ್ತಿದೆ” ಎಂದು ಶಾಸಕ ಪಾಂಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಎಎಪಿ 62 ಶಾಸಕರನ್ನು ಹೊಂದಿದೆ. ಬಿಜೆಪಿಗೆ ಎಂಟು ಸ್ಥಾನಗಳಿದ್ದು ಬಹುಮತಕ್ಕೆ ಇನ್ನೂ 28ರ ಅಗತ್ಯವಿದೆ. ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಕ್ರಮ ಎದುರಿಸದೆ ಇರಲು ಎಎಪಿಯಿಂದ ಸುಮಾರು 40 ಶಾಸಕರು ಪಕ್ಷಾಂತರವಾಗಬೇಕಾಗಿದೆ.

ಇದನ್ನೂ ಓದಿ: `ಬಿಜೆಪಿ ಸೇರುವುದಾದರೆ CBI & ED ಪ್ರಕರಣ ಮುಕ್ತಾಯ’: ಬಿಜೆಪಿಯಿಂದ ಆಫರ್‌ ಬಂದಿದೆ ಎಂದ ದೆಹಲಿ ಉಪಮುಖ್ಯಮಂತ್ರಿ

ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮಾದರಿಯಲ್ಲಿ ಬಿಜೆಪಿ ತನ್ನ ಸರ್ಕಾರವನ್ನು ಉರುಳಿಸಲು ಆಪರೇಷನ್ ಕಮಲದ ಸಂಚು ರೂಪಿಸುತ್ತಿದೆ ಎಂದು ಎಎಪಿ ಆರೋಪಿಸಿದೆ. ಬಿಜೆಪಿಯು ತಮ್ಮ ಶಾಸಕರಿಗೆ 20 ಕೋಟಿ ರೂ. ಆಫರ್‌ ನೀಡಿದ್ದು, ಅವರ ಜೊತೆಗೆ ಇನ್ನೂ ಹೆಚ್ಚಿನ ಜನರನ್ನು ತಂದರೆ 25 ಕೋಟಿ ರೂ. ನೀಡುತ್ತೇವೆ ಎಂದು ಹೇಳಿದೆ ಎಂದು ಎಎಪಿ ನಾಯಕರು ಆರೋಪಿಸಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ದಾಳಿ ನಡೆಸಿದ ಎರಡು ದಿನಗಳ ನಂತರ ಈ ಆರೋಪಗಳನ್ನು ಮಾಡಲಾಗಿದೆ.

ಪಕ್ಷ ಬದಲಾಯಿಸಿದರೆ ತನ್ನ ವಿರುದ್ಧದ ಪ್ರಕರಣಗಳನ್ನು ಕೈಬಿಡುವ ಮತ್ತು ಅವರನ್ನು ಮುಖ್ಯಮಂತ್ರಿ ಮಾಡುವ ಪ್ರಸ್ತಾಪದೊಂದಿಗೆ ಬಿಜೆಪಿ ತಮ್ಮನ್ನು ಸಂಪರ್ಕಿಸಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ. ‘‘ಮನೀಷ್ ಸಿಸೋಡಿಯಾ ಅವರಂತಹ ಸಹವರ್ತಿಯನ್ನು ಪಡೆಯಲು ಅದೃಷ್ಟ ಮಾಡಿದ್ದೇನೆ. ಅವರು ಮುಖ್ಯಮಂತ್ರಿಯಾಗುವ ಪ್ರಸ್ತಾಪವನ್ನು ತಿರಸ್ಕರಿಸಿದರು” ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ರಾಜಕೀಯ: ನಿತೀಶ್ ಹೊಸ ಪಟ್ಟು; ದೆಹಲಿ ರಾಜಕೀಯದಲ್ಲಿ ಬೀಸುವುದೇ ಹೊಸ ಗಾಳಿ?

ಸಿಸೋಡಿಯಾ ಅವರ ವಿರುದ್ಧ 14 ಗಂಟೆಗಳ ದಾಳಿ ನಡದರೂ ಸಿಬಿಐಗೆ ಏನೂ ಸಿಕ್ಕಿಲ್ಲ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದ್ದಾರೆ. 40 ಶಾಸಕರನ್ನು ಖರೀದಿಸಲು ಬಿಜೆಪಿಗೆ 800 ಕೋಟಿ ಎಲ್ಲಿಂದ ಬಂತು ಎಂದು ಎಎಪಿ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಕಳಂಕಿತ CBI,ED ಮತ್ತು ಇತರೆ ಬಿಜೆಪಿ ಕೃಪಾಪೋಷಿತ ಗುಲಾಮ ಸರ್ಕಾರಿ ಸಂಸ್ಥೆಗಳಿಗೆ ಇಲ್ಲಿ ಕರ್ನಾಟಕದಲ್ಲಿ 2019ರಲ್ಲಿ ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಗುಲಾಮ ಪ್ರತಿನಿಧಿಗಳನ್ನ ಜಾನುವಾರುಗಳಿಗಿಂತ ಕೀಳಾಗಿ ಖರೀದಿ ಮಾಡಿತಲ್ಲಾ ಅದರ ತನಿಖಾ ವ್ಯಾಪ್ತಿಯು ಈ ಗುಲಾಮ CBI ಮತ್ತು ED ಸಂಸ್ಥೆಗಳಿಗೆ ಬರೋದಿಲ್ವಾ? ಈ ಸಂಸ್ಥೆಗಳಲ್ಲಿ ಕೆಲಸ ಮಾಡೋ ಗುಲಾಮರೇ ಒಂದು ವಿಷಯ ಮನದಟ್ಟಾಗಿರಲಿ ನೀವು ತಿನ್ನುತ್ತಿರೋ ಅನ್ನ ಪ್ರಜೆಗಳ ತೆರಿಗೆ ಹಣದಿಂದ ಅ ಕಾರಣಕ್ಕಾಗಿಯಾದರು ಪ್ರಜೆಗಳಿಗೆ ಮತ್ತು ಸಂವಿಧಾನಕ್ಕೆ ಬದ್ದರಾಗಿರಿ,ಯಾವುದೋ ರಾಜಕೀಯ ಪಕ್ಷಕ್ಕಲ್ಲ.

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...