Homeಮುಖಪುಟ‘40 ಶಾಸಕರ ಬೇಟೆಗೆ ಪ್ರಯತ್ನ’: ಆಪರೇಷನ್‌ ಕಮಲ ವಿಫಲ ಎಂದ ಎಎಪಿ

‘40 ಶಾಸಕರ ಬೇಟೆಗೆ ಪ್ರಯತ್ನ’: ಆಪರೇಷನ್‌ ಕಮಲ ವಿಫಲ ಎಂದ ಎಎಪಿ

- Advertisement -
- Advertisement -

ದೆಹಲಿಯ ಎಎಪಿ ಸರ್ಕಾರವನ್ನು ಉರುಳಿಸಲು ಬಿಜೆಪಿಯು ತಮ್ಮ ಶಾಸಕರಿಗೆ 20 ಕೋಟಿ ರೂ. ಆಫರ್‌ ನೀಡಿದೆ ಎಂದು ಪಕ್ಷವು ಆರೋಪಿಸಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಕ್ಷದ ಶಾಸಕರ ‘ತುರ್ತು’ ಸಭೆ ನಡೆಸಿದ್ದಾರೆ.

ದೆಹಲಿ ಎಎಪಿಯ 62 ಶಾಸಕರಲ್ಲಿ 53 ಮಂದಿ ಸದಸ್ಯರು ಮುಖ್ಯಮಂತ್ರಿ ಕೇಜ್ರಿವಾಲ್ ಮನೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾರೆ. ಉಳಿದ ಶಾಸಕರು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸ್ಪೀಕರ್ ಮೂಲಕ ಫೋನ್‌ನಲ್ಲಿ ತಮ್ಮ ಬೆಂಬಲವನ್ನು ವಾಗ್ದಾನ ಮಾಡಿದ್ದಾರೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಕನಿಷ್ಠ 12 ಶಾಸಕರು ತಮಗೆ ಬಿಜೆಪಿಯಿಂದ ಆಫರ್‌ ಬಂದಿದೆ ಎಂದು ಹೇಳಿದ್ದಾರೆ. ಆದರೆ ಅವರೆಲ್ಲರೂ ತಮ್ಮ ಕೊನೆಯ ಉಸಿರು ಇರುವವರೆಗೂ ಕೇಜ್ರಿವಾಲ್‌ಗೆ ಬೆಂಬಲ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದು ಸೌರಭ್‌ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

‘ಬಿಜೆಪಿಯ ಆಪರೇಷನ್ ಕಮಲದ ವೈಫಲ್ಯಕ್ಕಾಗಿ ಪ್ರಾರ್ಥಿಸಲು’ ಸಭೆಯ ನಂತರ ಕೇಜ್ರಿವಾಲ್ ಮತ್ತು ಅವರ ಶಾಸಕರು ಮಹಾತ್ಮಾ ಗಾಂಧಿಯವರ ಸ್ಮಾರಕ ರಾಜ್‌ಘಾಟ್‌ಗೆ ದೊಡ್ಡ ಗುಂಪಿನೊಂದಿಗೆ ತೆರಳಿದ್ದಾರೆ. “ಅವರು 40 ಶಾಸಕರಿಗೆ ಲಂಚ ಕೊಡಲು ಪ್ರಯತ್ನಿಸುತ್ತಿದ್ದಾರೆ ಎಂದು ನನಗೆ ತಿಳಿಯಿತು. ಆದರೆ ಒಬ್ಬ ಶಾಸಕ ಕೂಡಾ ಅವರಿಗೆ ಮಣಿಯದಿರುವುದು ನನಗೆ ಸಂತೋಷವಾಗಿದೆ” ಎಂದು ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಳಿಗ್ಗೆ ಎಎಪಿ ಸಭೆಗೆ ಆಗಮಿಸಿದವರನ್ನು ಟ್ರ್ಯಾಕ್ ಮಾಡುವಾಗ ಮತ್ತು ಸಂಪರ್ಕಕ್ಕೆ ಸಿಗದ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಗೊಂದಲ ಉಂಟಾಗಿದ್ದವು. “ಎಲ್ಲಾ ಶಾಸಕರನ್ನು ಸಂಪರ್ಕಿಸಲಾಗುತ್ತಿದೆ. ಸಭೆಯ ಬಗ್ಗೆ ನಿನ್ನೆಯೆ ಸಂದೇಶ ನೀಡಲಾಗಿದೆ. ಸಂಪರ್ಕಕ್ಕೆ ಸಿಗದ ಶಾಸಕರನ್ನು ಸಂಪರ್ಕಕ್ಕೆ ಪ್ರಯತ್ನಿಸಲಾಗುತ್ತಿದೆ. ಬಿಜೆಪಿ 40 ಶಾಸಕರನ್ನು ಒಡೆಯಲು ತಯಾರಿ ನಡೆಸುತ್ತಿದೆ” ಎಂದು ಶಾಸಕ ಪಾಂಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಎಎಪಿ 62 ಶಾಸಕರನ್ನು ಹೊಂದಿದೆ. ಬಿಜೆಪಿಗೆ ಎಂಟು ಸ್ಥಾನಗಳಿದ್ದು ಬಹುಮತಕ್ಕೆ ಇನ್ನೂ 28ರ ಅಗತ್ಯವಿದೆ. ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಕ್ರಮ ಎದುರಿಸದೆ ಇರಲು ಎಎಪಿಯಿಂದ ಸುಮಾರು 40 ಶಾಸಕರು ಪಕ್ಷಾಂತರವಾಗಬೇಕಾಗಿದೆ.

ಇದನ್ನೂ ಓದಿ: `ಬಿಜೆಪಿ ಸೇರುವುದಾದರೆ CBI & ED ಪ್ರಕರಣ ಮುಕ್ತಾಯ’: ಬಿಜೆಪಿಯಿಂದ ಆಫರ್‌ ಬಂದಿದೆ ಎಂದ ದೆಹಲಿ ಉಪಮುಖ್ಯಮಂತ್ರಿ

ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮಾದರಿಯಲ್ಲಿ ಬಿಜೆಪಿ ತನ್ನ ಸರ್ಕಾರವನ್ನು ಉರುಳಿಸಲು ಆಪರೇಷನ್ ಕಮಲದ ಸಂಚು ರೂಪಿಸುತ್ತಿದೆ ಎಂದು ಎಎಪಿ ಆರೋಪಿಸಿದೆ. ಬಿಜೆಪಿಯು ತಮ್ಮ ಶಾಸಕರಿಗೆ 20 ಕೋಟಿ ರೂ. ಆಫರ್‌ ನೀಡಿದ್ದು, ಅವರ ಜೊತೆಗೆ ಇನ್ನೂ ಹೆಚ್ಚಿನ ಜನರನ್ನು ತಂದರೆ 25 ಕೋಟಿ ರೂ. ನೀಡುತ್ತೇವೆ ಎಂದು ಹೇಳಿದೆ ಎಂದು ಎಎಪಿ ನಾಯಕರು ಆರೋಪಿಸಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ದಾಳಿ ನಡೆಸಿದ ಎರಡು ದಿನಗಳ ನಂತರ ಈ ಆರೋಪಗಳನ್ನು ಮಾಡಲಾಗಿದೆ.

ಪಕ್ಷ ಬದಲಾಯಿಸಿದರೆ ತನ್ನ ವಿರುದ್ಧದ ಪ್ರಕರಣಗಳನ್ನು ಕೈಬಿಡುವ ಮತ್ತು ಅವರನ್ನು ಮುಖ್ಯಮಂತ್ರಿ ಮಾಡುವ ಪ್ರಸ್ತಾಪದೊಂದಿಗೆ ಬಿಜೆಪಿ ತಮ್ಮನ್ನು ಸಂಪರ್ಕಿಸಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ. ‘‘ಮನೀಷ್ ಸಿಸೋಡಿಯಾ ಅವರಂತಹ ಸಹವರ್ತಿಯನ್ನು ಪಡೆಯಲು ಅದೃಷ್ಟ ಮಾಡಿದ್ದೇನೆ. ಅವರು ಮುಖ್ಯಮಂತ್ರಿಯಾಗುವ ಪ್ರಸ್ತಾಪವನ್ನು ತಿರಸ್ಕರಿಸಿದರು” ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ರಾಜಕೀಯ: ನಿತೀಶ್ ಹೊಸ ಪಟ್ಟು; ದೆಹಲಿ ರಾಜಕೀಯದಲ್ಲಿ ಬೀಸುವುದೇ ಹೊಸ ಗಾಳಿ?

ಸಿಸೋಡಿಯಾ ಅವರ ವಿರುದ್ಧ 14 ಗಂಟೆಗಳ ದಾಳಿ ನಡದರೂ ಸಿಬಿಐಗೆ ಏನೂ ಸಿಕ್ಕಿಲ್ಲ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದ್ದಾರೆ. 40 ಶಾಸಕರನ್ನು ಖರೀದಿಸಲು ಬಿಜೆಪಿಗೆ 800 ಕೋಟಿ ಎಲ್ಲಿಂದ ಬಂತು ಎಂದು ಎಎಪಿ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಕಳಂಕಿತ CBI,ED ಮತ್ತು ಇತರೆ ಬಿಜೆಪಿ ಕೃಪಾಪೋಷಿತ ಗುಲಾಮ ಸರ್ಕಾರಿ ಸಂಸ್ಥೆಗಳಿಗೆ ಇಲ್ಲಿ ಕರ್ನಾಟಕದಲ್ಲಿ 2019ರಲ್ಲಿ ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಗುಲಾಮ ಪ್ರತಿನಿಧಿಗಳನ್ನ ಜಾನುವಾರುಗಳಿಗಿಂತ ಕೀಳಾಗಿ ಖರೀದಿ ಮಾಡಿತಲ್ಲಾ ಅದರ ತನಿಖಾ ವ್ಯಾಪ್ತಿಯು ಈ ಗುಲಾಮ CBI ಮತ್ತು ED ಸಂಸ್ಥೆಗಳಿಗೆ ಬರೋದಿಲ್ವಾ? ಈ ಸಂಸ್ಥೆಗಳಲ್ಲಿ ಕೆಲಸ ಮಾಡೋ ಗುಲಾಮರೇ ಒಂದು ವಿಷಯ ಮನದಟ್ಟಾಗಿರಲಿ ನೀವು ತಿನ್ನುತ್ತಿರೋ ಅನ್ನ ಪ್ರಜೆಗಳ ತೆರಿಗೆ ಹಣದಿಂದ ಅ ಕಾರಣಕ್ಕಾಗಿಯಾದರು ಪ್ರಜೆಗಳಿಗೆ ಮತ್ತು ಸಂವಿಧಾನಕ್ಕೆ ಬದ್ದರಾಗಿರಿ,ಯಾವುದೋ ರಾಜಕೀಯ ಪಕ್ಷಕ್ಕಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...