Homeಮುಖಪುಟಮಮತಾ ಬ್ಯಾನರ್ಜಿ ಗಾಯಗೊಂಡಿರುವುದೇಗೆ? ಊಹಾಪೋಹಗಳ ಬೆನ್ನಲ್ಲಿ ಸ್ಪಷ್ಟನೆ ನೀಡಿದ ಟಿಎಂಸಿ

ಮಮತಾ ಬ್ಯಾನರ್ಜಿ ಗಾಯಗೊಂಡಿರುವುದೇಗೆ? ಊಹಾಪೋಹಗಳ ಬೆನ್ನಲ್ಲಿ ಸ್ಪಷ್ಟನೆ ನೀಡಿದ ಟಿಎಂಸಿ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಣೆಗೆ ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ದಿಢೀರ್ ಆಗಿ ಗಾಯಗೊಂಡ ಸ್ಥಿತಿಯಲ್ಲಿ ಕಾಣಿಸಿಕೊಂಡ ದೀದಿಗೆ ಏನು ಆಗಿದ್ದು ಎಂದು ಎಲ್ಲರಲ್ಲೂ ಪ್ರಶ್ನೆ ಮೂಡಿತ್ತು. ಈ ಮಧ್ಯೆ ಮಮತಾ ಬ್ಯಾನರ್ಜಿಯನ್ನು ಯಾರೋ ಹಿಂದಿನಿಂದ ತಳ್ಳಿದ ಕಾರಣ ಬಿದ್ದು ಗಾಯಗೊಂಡಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ತನಿಖೆಗೆ ಬಿಜೆಪಿ ಕೂಡ ಆಗ್ರಹಿಸಿತ್ತು. ಈ ಕುರಿತ ಎಲ್ಲಾ ಊಹಾಪೋಹಗಳಿಗೆ ಇದೀಗ ಟಿಎಂಸಿ ಸ್ಪಷ್ಟನೆಯನ್ನು ನೀಡಿದ್ದು, ಅವರನ್ನು ಹಿಂದಿನಿಂದ ತಳ್ಳಲಾಗಿದೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ, ಟಿಎಂಸಿ ನಾಯಕ ಮತ್ತು ರಾಜ್ಯ ಸಚಿವ ಶಶಿ ಪಂಜ ಅವರು ಈ ಕುರಿತು ಮಾಹಿತಿಯನ್ನು ನೀಡಿದ್ದು, ಮಮತಾ ಬ್ಯಾನರ್ಜಿ ತಲೆ ಸುತ್ತಿನಿಂದು ಕುಸಿದು ಬಿದ್ದಿದ್ದಾರೆ, ಯಾರೂ ಅವರನ್ನು ಹಿಂದಿನಿಂದ ತಳ್ಳಲಿಲ್ಲ, ಬಿದ್ದ ನಂತರ ಅವರು ಗಾಯಗೊಂಡಿದ್ದರು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ.  ಎಲ್ಲದರ ಬಗ್ಗೆ ವಿವರಗಳು ಶೀಘ್ರದಲ್ಲೇ ಹೊರಬರಲಿದೆ. ಎಲ್ಲರೂ ಮಮತಾ ಬ್ಯಾನರ್ಜಿಯವರ ಯೋಗಕ್ಷೇಮವನ್ನು ಬಯಸುತ್ತಾರೆ, ಆದರೆ ಈ ಬಗ್ಗೆ ತಪ್ಪು ಅರ್ಥವನ್ನು ಕಲ್ಪಿಸುವುದು ಸರಿಯಲ್ಲ, ಮಮತಾ ಬ್ಯಾನರ್ಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

69 ವರ್ಷದ ಬ್ಯಾನರ್ಜಿ ಅವರು ಗುರುವಾರ ಸಂಜೆ ಕೋಲ್ಕತ್ತಾದ ಕಾಳಿಘಾಟ್ ನಿವಾಸದಲ್ಲಿ ಬಿದ್ದ ನಂತರ ಅವರ ಹಣೆಯ ಮತ್ತು ಮೂಗಿಗೆ ಗಾಯಗಳಾಗಿತ್ತು. ಅವರ ಹಣೆಯ ಮೇಲೆ ಮೂರು ಹೊಲಿಗೆಗಳನ್ನು ಮತ್ತು ಅವರ ಮೂಗಿನ ಮೇಲೆ ಒಂದು ಹೊಲಿಗೆ ಹಾಕಲಾಗಿದ್ದು, ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗಳ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಅವರನ್ನು ಹಿಂದಿನಿಂದ ತಳ್ಳಿದ ಕಾರಣಕ್ಕೆ ಅವರು ಬಿದ್ದಿರಬಹುದು ಎಂದು ಮಮತಾ ಅವರಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಹೆಳಿದ್ದರು, ಆದರೆ ಆ ಬಳಿಕ ಪ್ರತಿಕ್ರಿಯಿಸಿದ ವೈದ್ಯರು ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

ಎಸ್‌ಎಸ್‌ಕೆಎಂ ಆಸ್ಪತ್ರೆಯ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಮಣಿಮೊಯ್ ಬಂಡೋಪಾಧ್ಯಾಯ ಈ ಕುರಿತು ಪ್ರತಿಕ್ರಿಯಿಸಿದ್ದು, ಬಹುಶಃ ನಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

ಮಮತಾ ಅವರ ಹಣೆಗೆ ಗಂಭೀರ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟಿಎಂಸಿ ಮೊದಲು ಅಧಿಕೃತ ಎಕ್ಸ್ ಖಾತೆಯಲ್ಲಿ ಫೋಟೋ ಹಂಚಿಕೊಂಡಿತ್ತು. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಮಮತಾ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದರು. ಘಟನೆ ನಡೆದಾಗ ಮಮತಾ ಅವರ ಸೋದರಳಿಯ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮನೆಯಲ್ಲಿದ್ದರು, ಅವರೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಟಿಎಂಸಿ ನಾಯಕ ರಾಜೀಬ್ ಬ್ಯಾನರ್ಜಿ ಹೇಳಿದ್ದರು.

ಇದನ್ನು ಓದಿ: ಏಳನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...