Homeಮುಖಪುಟನೈತಿಕ ಸಮಿತಿ ತನಿಖೆ ಮಧ್ಯೆ ಮೊಯಿತ್ರಾಗೆ ಹೊಸ ಜವಾಬ್ದಾರಿ ನೀಡಿದ TMC

ನೈತಿಕ ಸಮಿತಿ ತನಿಖೆ ಮಧ್ಯೆ ಮೊಯಿತ್ರಾಗೆ ಹೊಸ ಜವಾಬ್ದಾರಿ ನೀಡಿದ TMC

- Advertisement -
- Advertisement -

ನೈತಿಕ ಸಮಿತಿ ತನಿಖೆಯ ವಿವಾದದ ನಡುವೆ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರಿಗೆ ಪಕ್ಷವು ಹೊಸ ಜವಾಬ್ದಾರಿ ನೀಡಿದೆ. ಮೊಯಿತ್ರಾ ಅವರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೃಷ್ಣನಗರ (ನಾಡಿಯಾ ಉತ್ತರ) ಜಿಲ್ಲಾ ಮುಖ್ಯಸ್ಥರನ್ನಾಗಿ ಅವರನ್ನು ನೇಮಿಸಲಾಗಿದೆ.

ಪಶ್ಚಿಮ ಬಂಗಾಳದ ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ನಗದು-ಪ್ರಶ್ನೆ ಪ್ರಕರಣದ ವಿಚಾರವಾಗಿ ಭಾರೀ ವಿವಾದ ಸೃಷ್ಟಿಯಾಗಿದೆ. ಈ ನಡುವೆ ಮೊಯಿತ್ರಾ ಅವರು ಹೊಸ ಜವಾಬ್ದಾರಿ ಪಡೆದಿದ್ದಾರೆ.

ಈ ಹಿಂದೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷಕ್ಕೆ ಧನ್ಯವಾದ ತಿಳಿಸಿದ್ದಾರೆ. ”ನನ್ನನ್ನು ಕೃಷ್ಣನಗರ (ನಾಡಿಯಾ ಉತ್ತರ) ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕಾಗಿ ಮಮತಾ ಬ್ಯಾನರ್ಜಿ ಮತ್ತು ಎಐಟಿಸಿ (ಅಖಿಲ ಭಾರತ ತೃಣಮೂಲ ಕಾಂಗ್ರೆಸ್) ಅವರಿಗೆ ಧನ್ಯವಾದಗಳು. ಕೃಷ್ಣನಗರದ ಜನರಿಗಾಗಿ ಪಕ್ಷದೊಂದಿಗೆ ಯಾವಾಗಲೂ ಕೆಲಸ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಬಂಗಾಳದಲ್ಲಿ ಆಡಳಿತ ಪಕ್ಷವು ಘೋಷಿಸಿದ ಇತರ 15 ಹೊಸ ಜಿಲ್ಲಾ ಮುಖ್ಯಸ್ಥರಲ್ಲಿ ಮೊಯಿತ್ರಾ ಅವರೂ ಸೇರಿದ್ದಾರೆ.

ಮೊಯಿತ್ರಾ ವಿರುದ್ಧದ ನಗದು-ಪ್ರಶ್ನೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಬಹಿರಂಗವಾಗಿ ಅವರ ನಿಲ್ಲದೇ ಜಾಣ ಮೌನವಹಿಸಿತ್ತು. ತೃಣಮೂಲ ಸಂಸದೆ ಮತ್ತು ಅಭಿಷೇಕ್ ಬ್ಯಾನರ್ಜಿ ಅವರನ್ನು ಸಂಸತ್ತಿನಿಂದ ಅಮಾನತುಗೊಳಿಸುವಂತೆ ಶಿಫಾರಸು ಮಾಡುವ ಲೋಕಸಭೆಯ ನೈತಿಕ ಸಮಿತಿಯ ನಿರ್ಧಾರದ ವಿಚಾರದಲ್ಲಿ ಅವರನ್ನು ಬೆಂಬಲಿಸಿದ್ದರೂ, ಸಾರ್ವಜನಿಕ ಸ್ಥಾನ ನೀಡುವ ಮೂಲಕ ಜಾಣತನ ತೋರಿದೆ.

ನೈತಿಕ ಸಮಿತಿ ಸಭೆಯಲ್ಲಿ ಮೊಯಿತ್ರಾ ಅವರಿಗೆ ಪ್ರಶ್ನಿಸಿದ ರೀತಿಗೆ ಅವರು ಅಲ್ಲಿಂದ ಹೊರಬಂದಿದ್ದರು. ಆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದ ಅವರು, ”ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ವಿನೋದ್ ಸೋಂಕರ್ ಅವರು ತಮ್ಮ ವೈಯಕ್ತಿಕ ಮತ್ತು ಅನೈತಿಕ ಪ್ರಶ್ನೆಗಳನ್ನು ಕೇಳಿದ್ದಾರೆ” ಎಂದು ಆರೋಪಿಸಿದರು.

”ನೀವು ರಾತ್ರಿಯಲ್ಲಿ ಯಾರೊಂದಿಗೆ ಮಾತನಾಡುತ್ತೀರಿ”, “ಎಷ್ಟು ಬಾರಿ”, “ನೀವು ನನಗೆ ಕರೆ ವಿವರಗಳನ್ನು ನೀಡಬಹುದೇ” ಸೇರಿದಂತೆ ನನ್ನ ವೈಯಕ್ತಿಕ ಜೀವನದ ಬಗ್ಗೆ ಅತ್ಯಂತ ಅಸಹ್ಯಕರ ಪ್ರಶ್ನೆಗಳನ್ನು ಕೇಳಿದರು” ಎಂದು ಮೊಯಿತ್ರಾ ಹೇಳಿದರು.

”ನೀವು ದರ್ಶನ್ ಹಿರಾನಂದನಿ ಅವರ ಆತ್ಮೀಯ ಸ್ನೇಹಿತರಾಗಿದ್ದೀರಿ ಎಷ್ಟು ಆತ್ಮೀಯವಾಗಿದ್ದೀರಿ? ಇದು ಅವರ ಹೆಂಡತಿಗೆ ತಿಳಿದಿದೆಯಾ? ಎಂದು ಕೇಳಿದರು. ನೀವು ಹೌದು ಅಥವಾ ಇಲ್ಲ ಎಂದು ಉತ್ತರಿಸಬೇಕು” ಎಂದು ಹೇಳಿರುವುದಾಗಿ ಮೊಯಿತ್ರಾ ದಿ ಹಿಂದೂಗೆ ತಿಳಿಸಿದರು.

ಆ ನಂತರ ನೈತಿಕ ಸಮಿತಿಯು ಲೋಕಸಭೆಯ ಸ್ಪೀಕರ್‌ಗೆ ತನ್ನ 500 ಪುಟಗಳ ವರದಿಯಲ್ಲಿ ಅವರು ಸಂಸದರಾಗಿ ಮುಂದುವರಿಯಲು ಅವಕಾಶ ನೀಡಬಾರದು ಎಂದು ಹೇಳಿದೆ ಮತ್ತು ಅವರು ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಕೋರಿದೆ.

ಇದನ್ನೂ ಓದಿ: ನೈತಿಕ ಸಮಿತಿಯ ಕರಡು ಗೌಪ್ಯ ವರದಿ NDTVಯಿಂದ ಸೋರಿಕೆ: ಸ್ಪೀಕರ್‌ಗೆ ಮೊಯಿತ್ರಾ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...