Homeಮುಖಪುಟನೈತಿಕ ಸಮಿತಿ ತನಿಖೆ ಮಧ್ಯೆ ಮೊಯಿತ್ರಾಗೆ ಹೊಸ ಜವಾಬ್ದಾರಿ ನೀಡಿದ TMC

ನೈತಿಕ ಸಮಿತಿ ತನಿಖೆ ಮಧ್ಯೆ ಮೊಯಿತ್ರಾಗೆ ಹೊಸ ಜವಾಬ್ದಾರಿ ನೀಡಿದ TMC

- Advertisement -
- Advertisement -

ನೈತಿಕ ಸಮಿತಿ ತನಿಖೆಯ ವಿವಾದದ ನಡುವೆ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರಿಗೆ ಪಕ್ಷವು ಹೊಸ ಜವಾಬ್ದಾರಿ ನೀಡಿದೆ. ಮೊಯಿತ್ರಾ ಅವರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೃಷ್ಣನಗರ (ನಾಡಿಯಾ ಉತ್ತರ) ಜಿಲ್ಲಾ ಮುಖ್ಯಸ್ಥರನ್ನಾಗಿ ಅವರನ್ನು ನೇಮಿಸಲಾಗಿದೆ.

ಪಶ್ಚಿಮ ಬಂಗಾಳದ ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ನಗದು-ಪ್ರಶ್ನೆ ಪ್ರಕರಣದ ವಿಚಾರವಾಗಿ ಭಾರೀ ವಿವಾದ ಸೃಷ್ಟಿಯಾಗಿದೆ. ಈ ನಡುವೆ ಮೊಯಿತ್ರಾ ಅವರು ಹೊಸ ಜವಾಬ್ದಾರಿ ಪಡೆದಿದ್ದಾರೆ.

ಈ ಹಿಂದೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷಕ್ಕೆ ಧನ್ಯವಾದ ತಿಳಿಸಿದ್ದಾರೆ. ”ನನ್ನನ್ನು ಕೃಷ್ಣನಗರ (ನಾಡಿಯಾ ಉತ್ತರ) ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕಾಗಿ ಮಮತಾ ಬ್ಯಾನರ್ಜಿ ಮತ್ತು ಎಐಟಿಸಿ (ಅಖಿಲ ಭಾರತ ತೃಣಮೂಲ ಕಾಂಗ್ರೆಸ್) ಅವರಿಗೆ ಧನ್ಯವಾದಗಳು. ಕೃಷ್ಣನಗರದ ಜನರಿಗಾಗಿ ಪಕ್ಷದೊಂದಿಗೆ ಯಾವಾಗಲೂ ಕೆಲಸ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಬಂಗಾಳದಲ್ಲಿ ಆಡಳಿತ ಪಕ್ಷವು ಘೋಷಿಸಿದ ಇತರ 15 ಹೊಸ ಜಿಲ್ಲಾ ಮುಖ್ಯಸ್ಥರಲ್ಲಿ ಮೊಯಿತ್ರಾ ಅವರೂ ಸೇರಿದ್ದಾರೆ.

ಮೊಯಿತ್ರಾ ವಿರುದ್ಧದ ನಗದು-ಪ್ರಶ್ನೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಬಹಿರಂಗವಾಗಿ ಅವರ ನಿಲ್ಲದೇ ಜಾಣ ಮೌನವಹಿಸಿತ್ತು. ತೃಣಮೂಲ ಸಂಸದೆ ಮತ್ತು ಅಭಿಷೇಕ್ ಬ್ಯಾನರ್ಜಿ ಅವರನ್ನು ಸಂಸತ್ತಿನಿಂದ ಅಮಾನತುಗೊಳಿಸುವಂತೆ ಶಿಫಾರಸು ಮಾಡುವ ಲೋಕಸಭೆಯ ನೈತಿಕ ಸಮಿತಿಯ ನಿರ್ಧಾರದ ವಿಚಾರದಲ್ಲಿ ಅವರನ್ನು ಬೆಂಬಲಿಸಿದ್ದರೂ, ಸಾರ್ವಜನಿಕ ಸ್ಥಾನ ನೀಡುವ ಮೂಲಕ ಜಾಣತನ ತೋರಿದೆ.

ನೈತಿಕ ಸಮಿತಿ ಸಭೆಯಲ್ಲಿ ಮೊಯಿತ್ರಾ ಅವರಿಗೆ ಪ್ರಶ್ನಿಸಿದ ರೀತಿಗೆ ಅವರು ಅಲ್ಲಿಂದ ಹೊರಬಂದಿದ್ದರು. ಆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದ ಅವರು, ”ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ವಿನೋದ್ ಸೋಂಕರ್ ಅವರು ತಮ್ಮ ವೈಯಕ್ತಿಕ ಮತ್ತು ಅನೈತಿಕ ಪ್ರಶ್ನೆಗಳನ್ನು ಕೇಳಿದ್ದಾರೆ” ಎಂದು ಆರೋಪಿಸಿದರು.

”ನೀವು ರಾತ್ರಿಯಲ್ಲಿ ಯಾರೊಂದಿಗೆ ಮಾತನಾಡುತ್ತೀರಿ”, “ಎಷ್ಟು ಬಾರಿ”, “ನೀವು ನನಗೆ ಕರೆ ವಿವರಗಳನ್ನು ನೀಡಬಹುದೇ” ಸೇರಿದಂತೆ ನನ್ನ ವೈಯಕ್ತಿಕ ಜೀವನದ ಬಗ್ಗೆ ಅತ್ಯಂತ ಅಸಹ್ಯಕರ ಪ್ರಶ್ನೆಗಳನ್ನು ಕೇಳಿದರು” ಎಂದು ಮೊಯಿತ್ರಾ ಹೇಳಿದರು.

”ನೀವು ದರ್ಶನ್ ಹಿರಾನಂದನಿ ಅವರ ಆತ್ಮೀಯ ಸ್ನೇಹಿತರಾಗಿದ್ದೀರಿ ಎಷ್ಟು ಆತ್ಮೀಯವಾಗಿದ್ದೀರಿ? ಇದು ಅವರ ಹೆಂಡತಿಗೆ ತಿಳಿದಿದೆಯಾ? ಎಂದು ಕೇಳಿದರು. ನೀವು ಹೌದು ಅಥವಾ ಇಲ್ಲ ಎಂದು ಉತ್ತರಿಸಬೇಕು” ಎಂದು ಹೇಳಿರುವುದಾಗಿ ಮೊಯಿತ್ರಾ ದಿ ಹಿಂದೂಗೆ ತಿಳಿಸಿದರು.

ಆ ನಂತರ ನೈತಿಕ ಸಮಿತಿಯು ಲೋಕಸಭೆಯ ಸ್ಪೀಕರ್‌ಗೆ ತನ್ನ 500 ಪುಟಗಳ ವರದಿಯಲ್ಲಿ ಅವರು ಸಂಸದರಾಗಿ ಮುಂದುವರಿಯಲು ಅವಕಾಶ ನೀಡಬಾರದು ಎಂದು ಹೇಳಿದೆ ಮತ್ತು ಅವರು ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಕೋರಿದೆ.

ಇದನ್ನೂ ಓದಿ: ನೈತಿಕ ಸಮಿತಿಯ ಕರಡು ಗೌಪ್ಯ ವರದಿ NDTVಯಿಂದ ಸೋರಿಕೆ: ಸ್ಪೀಕರ್‌ಗೆ ಮೊಯಿತ್ರಾ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...