Homeಮುಖಪುಟಟಿಎಂಸಿ ನಾಯಕ ಶಹಜಹಾನ್ ಬಂಧನ: 10 ದಿನಗಳ ಕಸ್ಟಡಿ

ಟಿಎಂಸಿ ನಾಯಕ ಶಹಜಹಾನ್ ಬಂಧನ: 10 ದಿನಗಳ ಕಸ್ಟಡಿ

- Advertisement -
- Advertisement -

ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಶಹಜಹಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.

ಸಂದೇಶಖಾಲಿಯಲ್ಲಿ ಗ್ರಾಮಸ್ಥರು, ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಅನೇಕ ಆರೋಪಗಳನ್ನು ಹೊರಿಸಿರುವ ತೃಣಮೂಲ ಕಾಂಗ್ರೆಸ್‌ ನಾಯಕ ಶೇಖ್ ಶಹಜಹಾನ್‌ಗೆ ಫೆಬ್ರವರಿ 29ರಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿ ನೀಡಿದೆ. ಬಂಧನದ ಬೆನ್ನಲ್ಲಿ ಶಹಜಹಾನ್‌ ಅವರನ್ನು ಆರು ವರ್ಷಗಳ ಕಾಲ ತೃಣಮೂಲ ಕಾಂಗ್ರೆಸ್‌ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಶಹಜಹಾನ್ ಮತ್ತು ಇತರ ಸ್ಥಳೀಯ ತೃಣಮೂಲ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗ್ರಾಮಸ್ಥರು ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸಿದ ನಂತರ ಫೆಬ್ರವರಿ ಮೊದಲ ವಾರದಿಂದ ಸಂದೇಶಖಾಲಿ ಕುದಿಯುತ್ತಿದೆ. ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ತೃಣಮೂಲ ನಾಯಕರಾದ ಶಿಬೋಪ್ರಸಾದ್ ಹಜ್ರಾ ಮತ್ತು ಉತ್ತಮ್ ಸರ್ದಾರ್ ಅವರನ್ನು ಪೊಲೀಸರು ಬಂಧಿಸಿದ್ದರೆ, ಶಹಾಜಹಾನ್ ಅವರು ಇದುವರೆಗೆ ಭದ್ರತಾ ಸಂಸ್ಥೆಗಳಿಂದ ತಪ್ಪಿಸಿಕೊಂಡಿದ್ದರು.

PDS ಹಗರಣಕ್ಕೆ ಸಂಬಂಧಿಸಿದಂತೆ ಜನವರಿ 5ರಂದು ಸಂದೇಶಖಾಲಿಯಲ್ಲಿರುವ ಅವರ ನಿವಾಸದಲ್ಲಿ ಶೋಧ ನಡೆಸುವಾಗ ಅವರ ಬೆಂಬಲಿಗರು ಇಡಿ ತಂಡದ ಮೇಲೆ ದಾಳಿ ಮಾಡಿದ 55 ದಿನಗಳ ನಂತರ ಅವರ ಬಂಧನವಾಗಿದೆ. ಇಡಿ ಉಪನಿರ್ದೇಶಕರು ನೀಡಿದ ದೂರಿನ ಆಧಾರದ ಮೇಲೆ ಪಶ್ಚಿಮ ಬಂಗಾಳ ಪೊಲೀಸ್‌ನ ಅಪರಾಧ ತನಿಖಾ ಇಲಾಖೆ ದಾಳಿಯ ಕುರಿತ ತನಿಖೆಯ ನೇತೃತ್ವವನ್ನು  ವಹಿಸಿಕೊಂಡಿದೆ.

ಪಶ್ಚಿಮ ಬಂಗಾಳ ಪೊಲೀಸ್‌ನ ಹೆಚ್ಚುವರಿ ನಿರ್ದೇಶಕರಾದ(ದಕ್ಷಿಣ ವಿಭಾಗ) ಸುಪ್ರತಿಮ್ ಸರ್ಕಾರ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ನಾವು 2024ರ ಜನವರಿ 5ರಂದು ನಡೆದ ಇಡಿ ಅಧಿಕಾರಿಗಳ ಮೇಲಿನ ದಾಳಿಯ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಶೇಖ್ ಶಹಜಹಾನ್ ಅವರನ್ನು ಮಿನಾಖಾ ಪ್ರದೇಶದ ಬಮನ್‌ಪುಕೂರ್‌ನಿಂದ ಬಂಧಿಸಿದ್ದೇವೆ. ಶಹಜಹಾನ್ ವಿರುದ್ಧ 307 (ಕೊಲೆಗೆ ಯತ್ನ) 353  ಮತ್ತು 326ರಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಆರೋಪಿಗಳ ಬಂಧನದಲ್ಲಿ ಕಾನೂನು ಅಡೆತಡೆಗಳು ಇವೆ ಎಂದು  ಸರ್ಕಾರ್ ಹೇಳಿದರು, ಮತ್ತು ಒಮ್ಮೆ ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ನಂತರ, ಪೊಲೀಸರು ವ್ಯಾಪಕ ಶೋಧಗಳನ್ನು ನಡೆಸಲು ಪ್ರಾರಂಭಿಸಿದರು. ಇಡಿ ಅರ್ಜಿಯ ನಂತರ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಎಡಿಜಿ ಉಲ್ಲೇಖಿಸಿದ್ದಾರೆ. ನಮಗೆ ಕಾನೂನು ಅಡೆತಡೆಗಳು ಇದ್ದವು ಆದರೆ ‘ಇಡಿ’  ಅವರನ್ನು ಏಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಶಹಜಹಾನ್ ಅವರ ಬಂಧನದ ನಂತರ, ಅವರನ್ನು ಬೆಳಿಗ್ಗೆ 10.40ರ ಸುಮಾರಿಗೆ ಬಸಿರ್ಹತ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪೊಲೀಸರು 14 ದಿನಗಳ ಕಸ್ಟಡಿಗೆ ಕೋರಿದರು, ಆದರೆ ನ್ಯಾಯಾಲಯವು 10 ದಿನಗಳ ಕಾಲ ನೀಡಿತು. ಶಹಜಹಾನ್ ಅವರನ್ನು ನಂತರ ಕೋಲ್ಕತ್ತಾದ ಭವಾನಿ ಭವನದಲ್ಲಿರುವ ಪಶ್ಚಿಮ ಬಂಗಾಳದ ಪೊಲೀಸ್ ಪ್ರಧಾನ ಕಚೇರಿಗೆ ಕರೆತರಲಾಗಿದೆ.

ಶಹಜಹಾನ್‌ರನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸುವ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ ತೃಣಮೂಲ ನಾಯಕ ಡೆರೆಕ್ ಓಬ್ರಿಯೆನ್ ಪ್ರಧಾನಿ ನರೇಂದ್ರ ಮೋದಿಯವರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ನಾರಾಯಣ ರಾಣೆ ಅಥವಾ ಹಿಮಂತ ಬಿಸ್ವಾ ಶರ್ಮಾ ಅಥವಾ ಸುವೆಂದು ಅಧಿಕಾರಿಯನ್ನು ನಾಳೆ ಅಮಾನತು ಮಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ತೃಣಮೂಲ ನಾಯಕತ್ವವು ಆರಂಭದಲ್ಲಿ ಶಹಜಹಾನ್ ಅವರ ಬೆಂಬಲಕ್ಕೆ ನಿಂತಿತ್ತು. ಆದರೆ ಪ್ರತಿಭಟನೆ  ಹೆಚ್ಚಾಗುತ್ತಿದ್ದಂತೆ ಅವರಿಂದ ಅಂತರ ಕಾಯ್ದುಕೊಂಡಿತ್ತು.

ಇದನ್ನು ಓದಿ: ಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು ಸಚಿವಾಲಯ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...