Homeಮುಖಪುಟಟಿಎಂಸಿ ನಾಯಕ ಶಹಜಹಾನ್ ಬಂಧನ: 10 ದಿನಗಳ ಕಸ್ಟಡಿ

ಟಿಎಂಸಿ ನಾಯಕ ಶಹಜಹಾನ್ ಬಂಧನ: 10 ದಿನಗಳ ಕಸ್ಟಡಿ

- Advertisement -
- Advertisement -

ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಶಹಜಹಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.

ಸಂದೇಶಖಾಲಿಯಲ್ಲಿ ಗ್ರಾಮಸ್ಥರು, ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಅನೇಕ ಆರೋಪಗಳನ್ನು ಹೊರಿಸಿರುವ ತೃಣಮೂಲ ಕಾಂಗ್ರೆಸ್‌ ನಾಯಕ ಶೇಖ್ ಶಹಜಹಾನ್‌ಗೆ ಫೆಬ್ರವರಿ 29ರಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿ ನೀಡಿದೆ. ಬಂಧನದ ಬೆನ್ನಲ್ಲಿ ಶಹಜಹಾನ್‌ ಅವರನ್ನು ಆರು ವರ್ಷಗಳ ಕಾಲ ತೃಣಮೂಲ ಕಾಂಗ್ರೆಸ್‌ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಶಹಜಹಾನ್ ಮತ್ತು ಇತರ ಸ್ಥಳೀಯ ತೃಣಮೂಲ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗ್ರಾಮಸ್ಥರು ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸಿದ ನಂತರ ಫೆಬ್ರವರಿ ಮೊದಲ ವಾರದಿಂದ ಸಂದೇಶಖಾಲಿ ಕುದಿಯುತ್ತಿದೆ. ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ತೃಣಮೂಲ ನಾಯಕರಾದ ಶಿಬೋಪ್ರಸಾದ್ ಹಜ್ರಾ ಮತ್ತು ಉತ್ತಮ್ ಸರ್ದಾರ್ ಅವರನ್ನು ಪೊಲೀಸರು ಬಂಧಿಸಿದ್ದರೆ, ಶಹಾಜಹಾನ್ ಅವರು ಇದುವರೆಗೆ ಭದ್ರತಾ ಸಂಸ್ಥೆಗಳಿಂದ ತಪ್ಪಿಸಿಕೊಂಡಿದ್ದರು.

PDS ಹಗರಣಕ್ಕೆ ಸಂಬಂಧಿಸಿದಂತೆ ಜನವರಿ 5ರಂದು ಸಂದೇಶಖಾಲಿಯಲ್ಲಿರುವ ಅವರ ನಿವಾಸದಲ್ಲಿ ಶೋಧ ನಡೆಸುವಾಗ ಅವರ ಬೆಂಬಲಿಗರು ಇಡಿ ತಂಡದ ಮೇಲೆ ದಾಳಿ ಮಾಡಿದ 55 ದಿನಗಳ ನಂತರ ಅವರ ಬಂಧನವಾಗಿದೆ. ಇಡಿ ಉಪನಿರ್ದೇಶಕರು ನೀಡಿದ ದೂರಿನ ಆಧಾರದ ಮೇಲೆ ಪಶ್ಚಿಮ ಬಂಗಾಳ ಪೊಲೀಸ್‌ನ ಅಪರಾಧ ತನಿಖಾ ಇಲಾಖೆ ದಾಳಿಯ ಕುರಿತ ತನಿಖೆಯ ನೇತೃತ್ವವನ್ನು  ವಹಿಸಿಕೊಂಡಿದೆ.

ಪಶ್ಚಿಮ ಬಂಗಾಳ ಪೊಲೀಸ್‌ನ ಹೆಚ್ಚುವರಿ ನಿರ್ದೇಶಕರಾದ(ದಕ್ಷಿಣ ವಿಭಾಗ) ಸುಪ್ರತಿಮ್ ಸರ್ಕಾರ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ನಾವು 2024ರ ಜನವರಿ 5ರಂದು ನಡೆದ ಇಡಿ ಅಧಿಕಾರಿಗಳ ಮೇಲಿನ ದಾಳಿಯ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಶೇಖ್ ಶಹಜಹಾನ್ ಅವರನ್ನು ಮಿನಾಖಾ ಪ್ರದೇಶದ ಬಮನ್‌ಪುಕೂರ್‌ನಿಂದ ಬಂಧಿಸಿದ್ದೇವೆ. ಶಹಜಹಾನ್ ವಿರುದ್ಧ 307 (ಕೊಲೆಗೆ ಯತ್ನ) 353  ಮತ್ತು 326ರಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಆರೋಪಿಗಳ ಬಂಧನದಲ್ಲಿ ಕಾನೂನು ಅಡೆತಡೆಗಳು ಇವೆ ಎಂದು  ಸರ್ಕಾರ್ ಹೇಳಿದರು, ಮತ್ತು ಒಮ್ಮೆ ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ನಂತರ, ಪೊಲೀಸರು ವ್ಯಾಪಕ ಶೋಧಗಳನ್ನು ನಡೆಸಲು ಪ್ರಾರಂಭಿಸಿದರು. ಇಡಿ ಅರ್ಜಿಯ ನಂತರ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಎಡಿಜಿ ಉಲ್ಲೇಖಿಸಿದ್ದಾರೆ. ನಮಗೆ ಕಾನೂನು ಅಡೆತಡೆಗಳು ಇದ್ದವು ಆದರೆ ‘ಇಡಿ’  ಅವರನ್ನು ಏಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಶಹಜಹಾನ್ ಅವರ ಬಂಧನದ ನಂತರ, ಅವರನ್ನು ಬೆಳಿಗ್ಗೆ 10.40ರ ಸುಮಾರಿಗೆ ಬಸಿರ್ಹತ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪೊಲೀಸರು 14 ದಿನಗಳ ಕಸ್ಟಡಿಗೆ ಕೋರಿದರು, ಆದರೆ ನ್ಯಾಯಾಲಯವು 10 ದಿನಗಳ ಕಾಲ ನೀಡಿತು. ಶಹಜಹಾನ್ ಅವರನ್ನು ನಂತರ ಕೋಲ್ಕತ್ತಾದ ಭವಾನಿ ಭವನದಲ್ಲಿರುವ ಪಶ್ಚಿಮ ಬಂಗಾಳದ ಪೊಲೀಸ್ ಪ್ರಧಾನ ಕಚೇರಿಗೆ ಕರೆತರಲಾಗಿದೆ.

ಶಹಜಹಾನ್‌ರನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸುವ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ ತೃಣಮೂಲ ನಾಯಕ ಡೆರೆಕ್ ಓಬ್ರಿಯೆನ್ ಪ್ರಧಾನಿ ನರೇಂದ್ರ ಮೋದಿಯವರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ನಾರಾಯಣ ರಾಣೆ ಅಥವಾ ಹಿಮಂತ ಬಿಸ್ವಾ ಶರ್ಮಾ ಅಥವಾ ಸುವೆಂದು ಅಧಿಕಾರಿಯನ್ನು ನಾಳೆ ಅಮಾನತು ಮಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ತೃಣಮೂಲ ನಾಯಕತ್ವವು ಆರಂಭದಲ್ಲಿ ಶಹಜಹಾನ್ ಅವರ ಬೆಂಬಲಕ್ಕೆ ನಿಂತಿತ್ತು. ಆದರೆ ಪ್ರತಿಭಟನೆ  ಹೆಚ್ಚಾಗುತ್ತಿದ್ದಂತೆ ಅವರಿಂದ ಅಂತರ ಕಾಯ್ದುಕೊಂಡಿತ್ತು.

ಇದನ್ನು ಓದಿ: ಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು ಸಚಿವಾಲಯ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...