Homeಮುಖಪುಟಟಿಎಂಸಿ ನಾಯಕ ಶಹಜಹಾನ್ ಬಂಧನ: 10 ದಿನಗಳ ಕಸ್ಟಡಿ

ಟಿಎಂಸಿ ನಾಯಕ ಶಹಜಹಾನ್ ಬಂಧನ: 10 ದಿನಗಳ ಕಸ್ಟಡಿ

- Advertisement -
- Advertisement -

ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಶಹಜಹಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.

ಸಂದೇಶಖಾಲಿಯಲ್ಲಿ ಗ್ರಾಮಸ್ಥರು, ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಅನೇಕ ಆರೋಪಗಳನ್ನು ಹೊರಿಸಿರುವ ತೃಣಮೂಲ ಕಾಂಗ್ರೆಸ್‌ ನಾಯಕ ಶೇಖ್ ಶಹಜಹಾನ್‌ಗೆ ಫೆಬ್ರವರಿ 29ರಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿ ನೀಡಿದೆ. ಬಂಧನದ ಬೆನ್ನಲ್ಲಿ ಶಹಜಹಾನ್‌ ಅವರನ್ನು ಆರು ವರ್ಷಗಳ ಕಾಲ ತೃಣಮೂಲ ಕಾಂಗ್ರೆಸ್‌ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಶಹಜಹಾನ್ ಮತ್ತು ಇತರ ಸ್ಥಳೀಯ ತೃಣಮೂಲ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗ್ರಾಮಸ್ಥರು ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸಿದ ನಂತರ ಫೆಬ್ರವರಿ ಮೊದಲ ವಾರದಿಂದ ಸಂದೇಶಖಾಲಿ ಕುದಿಯುತ್ತಿದೆ. ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ತೃಣಮೂಲ ನಾಯಕರಾದ ಶಿಬೋಪ್ರಸಾದ್ ಹಜ್ರಾ ಮತ್ತು ಉತ್ತಮ್ ಸರ್ದಾರ್ ಅವರನ್ನು ಪೊಲೀಸರು ಬಂಧಿಸಿದ್ದರೆ, ಶಹಾಜಹಾನ್ ಅವರು ಇದುವರೆಗೆ ಭದ್ರತಾ ಸಂಸ್ಥೆಗಳಿಂದ ತಪ್ಪಿಸಿಕೊಂಡಿದ್ದರು.

PDS ಹಗರಣಕ್ಕೆ ಸಂಬಂಧಿಸಿದಂತೆ ಜನವರಿ 5ರಂದು ಸಂದೇಶಖಾಲಿಯಲ್ಲಿರುವ ಅವರ ನಿವಾಸದಲ್ಲಿ ಶೋಧ ನಡೆಸುವಾಗ ಅವರ ಬೆಂಬಲಿಗರು ಇಡಿ ತಂಡದ ಮೇಲೆ ದಾಳಿ ಮಾಡಿದ 55 ದಿನಗಳ ನಂತರ ಅವರ ಬಂಧನವಾಗಿದೆ. ಇಡಿ ಉಪನಿರ್ದೇಶಕರು ನೀಡಿದ ದೂರಿನ ಆಧಾರದ ಮೇಲೆ ಪಶ್ಚಿಮ ಬಂಗಾಳ ಪೊಲೀಸ್‌ನ ಅಪರಾಧ ತನಿಖಾ ಇಲಾಖೆ ದಾಳಿಯ ಕುರಿತ ತನಿಖೆಯ ನೇತೃತ್ವವನ್ನು  ವಹಿಸಿಕೊಂಡಿದೆ.

ಪಶ್ಚಿಮ ಬಂಗಾಳ ಪೊಲೀಸ್‌ನ ಹೆಚ್ಚುವರಿ ನಿರ್ದೇಶಕರಾದ(ದಕ್ಷಿಣ ವಿಭಾಗ) ಸುಪ್ರತಿಮ್ ಸರ್ಕಾರ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ನಾವು 2024ರ ಜನವರಿ 5ರಂದು ನಡೆದ ಇಡಿ ಅಧಿಕಾರಿಗಳ ಮೇಲಿನ ದಾಳಿಯ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಶೇಖ್ ಶಹಜಹಾನ್ ಅವರನ್ನು ಮಿನಾಖಾ ಪ್ರದೇಶದ ಬಮನ್‌ಪುಕೂರ್‌ನಿಂದ ಬಂಧಿಸಿದ್ದೇವೆ. ಶಹಜಹಾನ್ ವಿರುದ್ಧ 307 (ಕೊಲೆಗೆ ಯತ್ನ) 353  ಮತ್ತು 326ರಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಆರೋಪಿಗಳ ಬಂಧನದಲ್ಲಿ ಕಾನೂನು ಅಡೆತಡೆಗಳು ಇವೆ ಎಂದು  ಸರ್ಕಾರ್ ಹೇಳಿದರು, ಮತ್ತು ಒಮ್ಮೆ ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ನಂತರ, ಪೊಲೀಸರು ವ್ಯಾಪಕ ಶೋಧಗಳನ್ನು ನಡೆಸಲು ಪ್ರಾರಂಭಿಸಿದರು. ಇಡಿ ಅರ್ಜಿಯ ನಂತರ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಎಡಿಜಿ ಉಲ್ಲೇಖಿಸಿದ್ದಾರೆ. ನಮಗೆ ಕಾನೂನು ಅಡೆತಡೆಗಳು ಇದ್ದವು ಆದರೆ ‘ಇಡಿ’  ಅವರನ್ನು ಏಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಶಹಜಹಾನ್ ಅವರ ಬಂಧನದ ನಂತರ, ಅವರನ್ನು ಬೆಳಿಗ್ಗೆ 10.40ರ ಸುಮಾರಿಗೆ ಬಸಿರ್ಹತ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪೊಲೀಸರು 14 ದಿನಗಳ ಕಸ್ಟಡಿಗೆ ಕೋರಿದರು, ಆದರೆ ನ್ಯಾಯಾಲಯವು 10 ದಿನಗಳ ಕಾಲ ನೀಡಿತು. ಶಹಜಹಾನ್ ಅವರನ್ನು ನಂತರ ಕೋಲ್ಕತ್ತಾದ ಭವಾನಿ ಭವನದಲ್ಲಿರುವ ಪಶ್ಚಿಮ ಬಂಗಾಳದ ಪೊಲೀಸ್ ಪ್ರಧಾನ ಕಚೇರಿಗೆ ಕರೆತರಲಾಗಿದೆ.

ಶಹಜಹಾನ್‌ರನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸುವ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ ತೃಣಮೂಲ ನಾಯಕ ಡೆರೆಕ್ ಓಬ್ರಿಯೆನ್ ಪ್ರಧಾನಿ ನರೇಂದ್ರ ಮೋದಿಯವರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ನಾರಾಯಣ ರಾಣೆ ಅಥವಾ ಹಿಮಂತ ಬಿಸ್ವಾ ಶರ್ಮಾ ಅಥವಾ ಸುವೆಂದು ಅಧಿಕಾರಿಯನ್ನು ನಾಳೆ ಅಮಾನತು ಮಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ತೃಣಮೂಲ ನಾಯಕತ್ವವು ಆರಂಭದಲ್ಲಿ ಶಹಜಹಾನ್ ಅವರ ಬೆಂಬಲಕ್ಕೆ ನಿಂತಿತ್ತು. ಆದರೆ ಪ್ರತಿಭಟನೆ  ಹೆಚ್ಚಾಗುತ್ತಿದ್ದಂತೆ ಅವರಿಂದ ಅಂತರ ಕಾಯ್ದುಕೊಂಡಿತ್ತು.

ಇದನ್ನು ಓದಿ: ಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು ಸಚಿವಾಲಯ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...