Homeಮುಖಪುಟಟಿಎಂಸಿ ನಾಯಕ ಶಹಜಹಾನ್ ಬಂಧನ: 10 ದಿನಗಳ ಕಸ್ಟಡಿ

ಟಿಎಂಸಿ ನಾಯಕ ಶಹಜಹಾನ್ ಬಂಧನ: 10 ದಿನಗಳ ಕಸ್ಟಡಿ

- Advertisement -
- Advertisement -

ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಶಹಜಹಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.

ಸಂದೇಶಖಾಲಿಯಲ್ಲಿ ಗ್ರಾಮಸ್ಥರು, ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಅನೇಕ ಆರೋಪಗಳನ್ನು ಹೊರಿಸಿರುವ ತೃಣಮೂಲ ಕಾಂಗ್ರೆಸ್‌ ನಾಯಕ ಶೇಖ್ ಶಹಜಹಾನ್‌ಗೆ ಫೆಬ್ರವರಿ 29ರಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿ ನೀಡಿದೆ. ಬಂಧನದ ಬೆನ್ನಲ್ಲಿ ಶಹಜಹಾನ್‌ ಅವರನ್ನು ಆರು ವರ್ಷಗಳ ಕಾಲ ತೃಣಮೂಲ ಕಾಂಗ್ರೆಸ್‌ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಶಹಜಹಾನ್ ಮತ್ತು ಇತರ ಸ್ಥಳೀಯ ತೃಣಮೂಲ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗ್ರಾಮಸ್ಥರು ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸಿದ ನಂತರ ಫೆಬ್ರವರಿ ಮೊದಲ ವಾರದಿಂದ ಸಂದೇಶಖಾಲಿ ಕುದಿಯುತ್ತಿದೆ. ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ತೃಣಮೂಲ ನಾಯಕರಾದ ಶಿಬೋಪ್ರಸಾದ್ ಹಜ್ರಾ ಮತ್ತು ಉತ್ತಮ್ ಸರ್ದಾರ್ ಅವರನ್ನು ಪೊಲೀಸರು ಬಂಧಿಸಿದ್ದರೆ, ಶಹಾಜಹಾನ್ ಅವರು ಇದುವರೆಗೆ ಭದ್ರತಾ ಸಂಸ್ಥೆಗಳಿಂದ ತಪ್ಪಿಸಿಕೊಂಡಿದ್ದರು.

PDS ಹಗರಣಕ್ಕೆ ಸಂಬಂಧಿಸಿದಂತೆ ಜನವರಿ 5ರಂದು ಸಂದೇಶಖಾಲಿಯಲ್ಲಿರುವ ಅವರ ನಿವಾಸದಲ್ಲಿ ಶೋಧ ನಡೆಸುವಾಗ ಅವರ ಬೆಂಬಲಿಗರು ಇಡಿ ತಂಡದ ಮೇಲೆ ದಾಳಿ ಮಾಡಿದ 55 ದಿನಗಳ ನಂತರ ಅವರ ಬಂಧನವಾಗಿದೆ. ಇಡಿ ಉಪನಿರ್ದೇಶಕರು ನೀಡಿದ ದೂರಿನ ಆಧಾರದ ಮೇಲೆ ಪಶ್ಚಿಮ ಬಂಗಾಳ ಪೊಲೀಸ್‌ನ ಅಪರಾಧ ತನಿಖಾ ಇಲಾಖೆ ದಾಳಿಯ ಕುರಿತ ತನಿಖೆಯ ನೇತೃತ್ವವನ್ನು  ವಹಿಸಿಕೊಂಡಿದೆ.

ಪಶ್ಚಿಮ ಬಂಗಾಳ ಪೊಲೀಸ್‌ನ ಹೆಚ್ಚುವರಿ ನಿರ್ದೇಶಕರಾದ(ದಕ್ಷಿಣ ವಿಭಾಗ) ಸುಪ್ರತಿಮ್ ಸರ್ಕಾರ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ನಾವು 2024ರ ಜನವರಿ 5ರಂದು ನಡೆದ ಇಡಿ ಅಧಿಕಾರಿಗಳ ಮೇಲಿನ ದಾಳಿಯ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಶೇಖ್ ಶಹಜಹಾನ್ ಅವರನ್ನು ಮಿನಾಖಾ ಪ್ರದೇಶದ ಬಮನ್‌ಪುಕೂರ್‌ನಿಂದ ಬಂಧಿಸಿದ್ದೇವೆ. ಶಹಜಹಾನ್ ವಿರುದ್ಧ 307 (ಕೊಲೆಗೆ ಯತ್ನ) 353  ಮತ್ತು 326ರಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಆರೋಪಿಗಳ ಬಂಧನದಲ್ಲಿ ಕಾನೂನು ಅಡೆತಡೆಗಳು ಇವೆ ಎಂದು  ಸರ್ಕಾರ್ ಹೇಳಿದರು, ಮತ್ತು ಒಮ್ಮೆ ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ನಂತರ, ಪೊಲೀಸರು ವ್ಯಾಪಕ ಶೋಧಗಳನ್ನು ನಡೆಸಲು ಪ್ರಾರಂಭಿಸಿದರು. ಇಡಿ ಅರ್ಜಿಯ ನಂತರ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಎಡಿಜಿ ಉಲ್ಲೇಖಿಸಿದ್ದಾರೆ. ನಮಗೆ ಕಾನೂನು ಅಡೆತಡೆಗಳು ಇದ್ದವು ಆದರೆ ‘ಇಡಿ’  ಅವರನ್ನು ಏಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಶಹಜಹಾನ್ ಅವರ ಬಂಧನದ ನಂತರ, ಅವರನ್ನು ಬೆಳಿಗ್ಗೆ 10.40ರ ಸುಮಾರಿಗೆ ಬಸಿರ್ಹತ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪೊಲೀಸರು 14 ದಿನಗಳ ಕಸ್ಟಡಿಗೆ ಕೋರಿದರು, ಆದರೆ ನ್ಯಾಯಾಲಯವು 10 ದಿನಗಳ ಕಾಲ ನೀಡಿತು. ಶಹಜಹಾನ್ ಅವರನ್ನು ನಂತರ ಕೋಲ್ಕತ್ತಾದ ಭವಾನಿ ಭವನದಲ್ಲಿರುವ ಪಶ್ಚಿಮ ಬಂಗಾಳದ ಪೊಲೀಸ್ ಪ್ರಧಾನ ಕಚೇರಿಗೆ ಕರೆತರಲಾಗಿದೆ.

ಶಹಜಹಾನ್‌ರನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸುವ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ ತೃಣಮೂಲ ನಾಯಕ ಡೆರೆಕ್ ಓಬ್ರಿಯೆನ್ ಪ್ರಧಾನಿ ನರೇಂದ್ರ ಮೋದಿಯವರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ನಾರಾಯಣ ರಾಣೆ ಅಥವಾ ಹಿಮಂತ ಬಿಸ್ವಾ ಶರ್ಮಾ ಅಥವಾ ಸುವೆಂದು ಅಧಿಕಾರಿಯನ್ನು ನಾಳೆ ಅಮಾನತು ಮಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ತೃಣಮೂಲ ನಾಯಕತ್ವವು ಆರಂಭದಲ್ಲಿ ಶಹಜಹಾನ್ ಅವರ ಬೆಂಬಲಕ್ಕೆ ನಿಂತಿತ್ತು. ಆದರೆ ಪ್ರತಿಭಟನೆ  ಹೆಚ್ಚಾಗುತ್ತಿದ್ದಂತೆ ಅವರಿಂದ ಅಂತರ ಕಾಯ್ದುಕೊಂಡಿತ್ತು.

ಇದನ್ನು ಓದಿ: ಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು ಸಚಿವಾಲಯ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...