Homeಮುಖಪುಟನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-ಟಿಎಂಸಿ ಸಂಸದೆ ನುಸ್ರತ್

ನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-ಟಿಎಂಸಿ ಸಂಸದೆ ನುಸ್ರತ್

- Advertisement -
- Advertisement -

ವಿವಾಹ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿರುವ ತೃಣಮೂಲ ಸಂಸದೆ ನುಸ್ರತ್ ಜಹಾನ್ ಬುಧವಾರ ಹೇಳಿಕೆ ನೀಡಿದ್ದು, ನಿಖಿಲ್ ಜೈನ್ ಅವರೊಂದಿಗಿನ ಅವರ ವಿವಾಹವು ಎಂದಿಗೂ ಮಾನ್ಯವಾಗಿಲ್ಲ, ಹಾಗಾಗೀ ವಿಚ್ಛೇದನದ ಪ್ರಶ್ನೆ ಉದ್ಭವಿಸಲ್ಲ ಎಂದು ಹೇಳಿದ್ದಾರೆ.

ಭಾರತದಲ್ಲಿ ಅಂತರ್‌ ಧರ್ಮಿಯ ಮದುವೆಗೆ ವಿಶೇಷ ವಿವಾಹ ಕಾಯ್ದೆಯಡಿ ಮಾನ್ಯತೆಯ ಅಗತ್ಯವಿದೆ. ಆದರೆ ನಮ್ಮ ವಿವಾಹಕ್ಕೆ ಕಾನೂನುಬದ್ಧ ಮಾನ್ಯತೆ ಇಲ್ಲದ ಕಾರಣ ವಿಚ್ಛೇದನದ ಪ್ರಶ್ನೆಯೇ ಇಲ್ಲ. ನಾವು ಬಹಳ ಹಿಂದೆಯೇ ಬೇರೆಯಾಗಿದ್ದೇವೆ. ಆದರೆ ನನ್ನ ಖಾಸಗಿ ಜೀವನದ ವಿಚಾರವನ್ನು ನನ್ನಲ್ಲಿಯೇ ಇಟ್ಟುಕೊಳ್ಳುವ ಉದ್ದೇಶದಿಂದ ನಾನು ಅದರ ಬಗ್ಗೆ ಮಾತನಾಡಲಿಲ್ಲ” ಎಂದು ಸಂಸದೆ ನುಸ್ರತ್ ಹೇಳಿದ್ದಾರೆ.

ನಟಿ, ರಾಜಕಾರಣಿ ನುಸ್ರತ್ ಜಹಾನ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ 2019 ರಲ್ಲಿಯೇ ಟರ್ಕಿಯ ಉದ್ಯಮಿ ನಿಖಿಲ್ ಜೈನ್ ಅವರನ್ನು ವಿವಾಹವಾಗಿದ್ದರು. ಕೋಲ್ಕತ್ತಾದಲ್ಲೂ ‌ಆರತಾಕ್ಷತೆ ಸಮಾರಂಭ ನಡೆದಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದರು. ಟರ್ಕಿಯ ಮದುವೆ ಕಾಯ್ದೆ ಪ್ರಕಾರ ವಿವಾಹ ಸಮಾರಂಭವನ್ನು ಮಾಡಲಾಗಿತ್ತು ಎಂದು ಸಂಸದೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮರಳುಗಾಡಿನಲ್ಲಿ ಬಾಯಾರಿಕೆಗೆ ಬಲಿಯಾದ 5 ವರ್ಷದ ಬಾಲಕಿ

2021 ರ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನಟ, ರಾಜಕಾರಣಿ ಯಶ್ ದಾಸ್‌ಗುಪ್ತಾ ಅವರೊಂದಿಗೆ ನುಸ್ರತ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳು ಹಬ್ಬಿದ್ದವು. ಕೆಲವು ದಿನಗಳ ಹಿಂದೆ ನುಸ್ರತ್, ಯಶ್ ದಾಸ್‌ಗುಪ್ತಾ ಅವರ ಮಗುವಿನ ತಾಯಿಯಾಗುತ್ತಿದ್ದಾರೆ ಎಂಬ ಊಹಾಪೋಹಗಳು ಹೆಚ್ಚಾದ ಹಿನ್ನೆಲೆ, ಬರಹಗಾರ್ತಿ ತಸ್ಲೀಮಾ ನಸ್ರೀನ್ ಈ ವದಂತಿಗಳು ನಿಜವಾಗಿದ್ದರೆ, ನುಸ್ರತ್ ನಿಖಿಲ್‌ನಿಂದ ವಿಚ್ಛೇದನ ಪಡೆಯಬೇಕು ಎಂದು ಹೇಳಿದ್ದರು.

ಸದ್ಯ ತನ್ನ ವಿವಾಹದ ಕುರಿತು ಸ್ಪಷ್ಟನೆ ನೀಡಿರುವ ಸಂಸದೆ ನುಸ್ರತ್, “ನನ್ನ ವೈಯಕ್ತಿಕ ಜೀವನದ ಬಗ್ಗೆ ಅಥವಾ ನನಗೆ ಸಂಬಂಧವಿಲ್ಲದ ಯಾರ ಬಗ್ಗೆಯೂ ನಾನು ಎಂದಿಗೂ ಮಾತನಾಡುವುದಿಲ್ಲ. ಹೀಗಾಗಿ, ತಮ್ಮನ್ನು ತಾವು ಸಾಮಾನ್ಯ ಜನರು ಎಂದು ಕರೆದುಕೊಳ್ಳುವವರು ಅವರಿಗೆ ಸಂಬಂಧವಿಲ್ಲದ ಯಾವುದರ ಬಗ್ಗೆಯೂ ಮಾತನಾಡಬಾರದು” ಎಂದು ನುಸ್ರತ್ ಹೇಳಿದ್ದಾರೆ.

ನಿಖಿಲ್ ಜೈನ್ ಕೋಲ್ಕತಾ ಮೂಲದ ಉದ್ಯಮಿಯಾಗಿದ್ದು, ಮದುವೆಗೂ ಒಂದು ವರ್ಷದ ಮೊದಲು ಇಬ್ಬರು ಭೇಟಿಯಾಗಿದ್ದರು. ಇತ್ತೀಚೆಗೆ, ನುಸ್ರತ್ ಗರ್ಭಧಾರಣೆಯ ವದಂತಿಗಳು ಹರಡುತ್ತಿದ್ದಂತೆ, ಕೆಲವು ಸುದ್ದಿ ವಾಹಿನಿಗಳು ನಿಖಿಲ್ ಅವರನ್ನು ಸಂಪರ್ಕಿಸಿದ್ದು, ಹಲವು ತಿಂಗಳುಗಳಿಂದ ಪರಸ್ಪರ ಸಂಪರ್ಕದಲ್ಲಿಲ್ಲದ ಕಾರಣ ನುಸ್ರತ್ ಅವರ ಗರ್ಭಧಾರಣೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...