Homeಮುಖಪುಟನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-ಟಿಎಂಸಿ ಸಂಸದೆ ನುಸ್ರತ್

ನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-ಟಿಎಂಸಿ ಸಂಸದೆ ನುಸ್ರತ್

- Advertisement -
- Advertisement -

ವಿವಾಹ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿರುವ ತೃಣಮೂಲ ಸಂಸದೆ ನುಸ್ರತ್ ಜಹಾನ್ ಬುಧವಾರ ಹೇಳಿಕೆ ನೀಡಿದ್ದು, ನಿಖಿಲ್ ಜೈನ್ ಅವರೊಂದಿಗಿನ ಅವರ ವಿವಾಹವು ಎಂದಿಗೂ ಮಾನ್ಯವಾಗಿಲ್ಲ, ಹಾಗಾಗೀ ವಿಚ್ಛೇದನದ ಪ್ರಶ್ನೆ ಉದ್ಭವಿಸಲ್ಲ ಎಂದು ಹೇಳಿದ್ದಾರೆ.

ಭಾರತದಲ್ಲಿ ಅಂತರ್‌ ಧರ್ಮಿಯ ಮದುವೆಗೆ ವಿಶೇಷ ವಿವಾಹ ಕಾಯ್ದೆಯಡಿ ಮಾನ್ಯತೆಯ ಅಗತ್ಯವಿದೆ. ಆದರೆ ನಮ್ಮ ವಿವಾಹಕ್ಕೆ ಕಾನೂನುಬದ್ಧ ಮಾನ್ಯತೆ ಇಲ್ಲದ ಕಾರಣ ವಿಚ್ಛೇದನದ ಪ್ರಶ್ನೆಯೇ ಇಲ್ಲ. ನಾವು ಬಹಳ ಹಿಂದೆಯೇ ಬೇರೆಯಾಗಿದ್ದೇವೆ. ಆದರೆ ನನ್ನ ಖಾಸಗಿ ಜೀವನದ ವಿಚಾರವನ್ನು ನನ್ನಲ್ಲಿಯೇ ಇಟ್ಟುಕೊಳ್ಳುವ ಉದ್ದೇಶದಿಂದ ನಾನು ಅದರ ಬಗ್ಗೆ ಮಾತನಾಡಲಿಲ್ಲ” ಎಂದು ಸಂಸದೆ ನುಸ್ರತ್ ಹೇಳಿದ್ದಾರೆ.

ನಟಿ, ರಾಜಕಾರಣಿ ನುಸ್ರತ್ ಜಹಾನ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ 2019 ರಲ್ಲಿಯೇ ಟರ್ಕಿಯ ಉದ್ಯಮಿ ನಿಖಿಲ್ ಜೈನ್ ಅವರನ್ನು ವಿವಾಹವಾಗಿದ್ದರು. ಕೋಲ್ಕತ್ತಾದಲ್ಲೂ ‌ಆರತಾಕ್ಷತೆ ಸಮಾರಂಭ ನಡೆದಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದರು. ಟರ್ಕಿಯ ಮದುವೆ ಕಾಯ್ದೆ ಪ್ರಕಾರ ವಿವಾಹ ಸಮಾರಂಭವನ್ನು ಮಾಡಲಾಗಿತ್ತು ಎಂದು ಸಂಸದೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮರಳುಗಾಡಿನಲ್ಲಿ ಬಾಯಾರಿಕೆಗೆ ಬಲಿಯಾದ 5 ವರ್ಷದ ಬಾಲಕಿ

2021 ರ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನಟ, ರಾಜಕಾರಣಿ ಯಶ್ ದಾಸ್‌ಗುಪ್ತಾ ಅವರೊಂದಿಗೆ ನುಸ್ರತ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳು ಹಬ್ಬಿದ್ದವು. ಕೆಲವು ದಿನಗಳ ಹಿಂದೆ ನುಸ್ರತ್, ಯಶ್ ದಾಸ್‌ಗುಪ್ತಾ ಅವರ ಮಗುವಿನ ತಾಯಿಯಾಗುತ್ತಿದ್ದಾರೆ ಎಂಬ ಊಹಾಪೋಹಗಳು ಹೆಚ್ಚಾದ ಹಿನ್ನೆಲೆ, ಬರಹಗಾರ್ತಿ ತಸ್ಲೀಮಾ ನಸ್ರೀನ್ ಈ ವದಂತಿಗಳು ನಿಜವಾಗಿದ್ದರೆ, ನುಸ್ರತ್ ನಿಖಿಲ್‌ನಿಂದ ವಿಚ್ಛೇದನ ಪಡೆಯಬೇಕು ಎಂದು ಹೇಳಿದ್ದರು.

ಸದ್ಯ ತನ್ನ ವಿವಾಹದ ಕುರಿತು ಸ್ಪಷ್ಟನೆ ನೀಡಿರುವ ಸಂಸದೆ ನುಸ್ರತ್, “ನನ್ನ ವೈಯಕ್ತಿಕ ಜೀವನದ ಬಗ್ಗೆ ಅಥವಾ ನನಗೆ ಸಂಬಂಧವಿಲ್ಲದ ಯಾರ ಬಗ್ಗೆಯೂ ನಾನು ಎಂದಿಗೂ ಮಾತನಾಡುವುದಿಲ್ಲ. ಹೀಗಾಗಿ, ತಮ್ಮನ್ನು ತಾವು ಸಾಮಾನ್ಯ ಜನರು ಎಂದು ಕರೆದುಕೊಳ್ಳುವವರು ಅವರಿಗೆ ಸಂಬಂಧವಿಲ್ಲದ ಯಾವುದರ ಬಗ್ಗೆಯೂ ಮಾತನಾಡಬಾರದು” ಎಂದು ನುಸ್ರತ್ ಹೇಳಿದ್ದಾರೆ.

ನಿಖಿಲ್ ಜೈನ್ ಕೋಲ್ಕತಾ ಮೂಲದ ಉದ್ಯಮಿಯಾಗಿದ್ದು, ಮದುವೆಗೂ ಒಂದು ವರ್ಷದ ಮೊದಲು ಇಬ್ಬರು ಭೇಟಿಯಾಗಿದ್ದರು. ಇತ್ತೀಚೆಗೆ, ನುಸ್ರತ್ ಗರ್ಭಧಾರಣೆಯ ವದಂತಿಗಳು ಹರಡುತ್ತಿದ್ದಂತೆ, ಕೆಲವು ಸುದ್ದಿ ವಾಹಿನಿಗಳು ನಿಖಿಲ್ ಅವರನ್ನು ಸಂಪರ್ಕಿಸಿದ್ದು, ಹಲವು ತಿಂಗಳುಗಳಿಂದ ಪರಸ್ಪರ ಸಂಪರ್ಕದಲ್ಲಿಲ್ಲದ ಕಾರಣ ನುಸ್ರತ್ ಅವರ ಗರ್ಭಧಾರಣೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...