Homeಮುಖಪುಟನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-ಟಿಎಂಸಿ ಸಂಸದೆ ನುಸ್ರತ್

ನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-ಟಿಎಂಸಿ ಸಂಸದೆ ನುಸ್ರತ್

- Advertisement -
- Advertisement -

ವಿವಾಹ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿರುವ ತೃಣಮೂಲ ಸಂಸದೆ ನುಸ್ರತ್ ಜಹಾನ್ ಬುಧವಾರ ಹೇಳಿಕೆ ನೀಡಿದ್ದು, ನಿಖಿಲ್ ಜೈನ್ ಅವರೊಂದಿಗಿನ ಅವರ ವಿವಾಹವು ಎಂದಿಗೂ ಮಾನ್ಯವಾಗಿಲ್ಲ, ಹಾಗಾಗೀ ವಿಚ್ಛೇದನದ ಪ್ರಶ್ನೆ ಉದ್ಭವಿಸಲ್ಲ ಎಂದು ಹೇಳಿದ್ದಾರೆ.

ಭಾರತದಲ್ಲಿ ಅಂತರ್‌ ಧರ್ಮಿಯ ಮದುವೆಗೆ ವಿಶೇಷ ವಿವಾಹ ಕಾಯ್ದೆಯಡಿ ಮಾನ್ಯತೆಯ ಅಗತ್ಯವಿದೆ. ಆದರೆ ನಮ್ಮ ವಿವಾಹಕ್ಕೆ ಕಾನೂನುಬದ್ಧ ಮಾನ್ಯತೆ ಇಲ್ಲದ ಕಾರಣ ವಿಚ್ಛೇದನದ ಪ್ರಶ್ನೆಯೇ ಇಲ್ಲ. ನಾವು ಬಹಳ ಹಿಂದೆಯೇ ಬೇರೆಯಾಗಿದ್ದೇವೆ. ಆದರೆ ನನ್ನ ಖಾಸಗಿ ಜೀವನದ ವಿಚಾರವನ್ನು ನನ್ನಲ್ಲಿಯೇ ಇಟ್ಟುಕೊಳ್ಳುವ ಉದ್ದೇಶದಿಂದ ನಾನು ಅದರ ಬಗ್ಗೆ ಮಾತನಾಡಲಿಲ್ಲ” ಎಂದು ಸಂಸದೆ ನುಸ್ರತ್ ಹೇಳಿದ್ದಾರೆ.

ನಟಿ, ರಾಜಕಾರಣಿ ನುಸ್ರತ್ ಜಹಾನ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ 2019 ರಲ್ಲಿಯೇ ಟರ್ಕಿಯ ಉದ್ಯಮಿ ನಿಖಿಲ್ ಜೈನ್ ಅವರನ್ನು ವಿವಾಹವಾಗಿದ್ದರು. ಕೋಲ್ಕತ್ತಾದಲ್ಲೂ ‌ಆರತಾಕ್ಷತೆ ಸಮಾರಂಭ ನಡೆದಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದರು. ಟರ್ಕಿಯ ಮದುವೆ ಕಾಯ್ದೆ ಪ್ರಕಾರ ವಿವಾಹ ಸಮಾರಂಭವನ್ನು ಮಾಡಲಾಗಿತ್ತು ಎಂದು ಸಂಸದೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮರಳುಗಾಡಿನಲ್ಲಿ ಬಾಯಾರಿಕೆಗೆ ಬಲಿಯಾದ 5 ವರ್ಷದ ಬಾಲಕಿ

2021 ರ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನಟ, ರಾಜಕಾರಣಿ ಯಶ್ ದಾಸ್‌ಗುಪ್ತಾ ಅವರೊಂದಿಗೆ ನುಸ್ರತ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳು ಹಬ್ಬಿದ್ದವು. ಕೆಲವು ದಿನಗಳ ಹಿಂದೆ ನುಸ್ರತ್, ಯಶ್ ದಾಸ್‌ಗುಪ್ತಾ ಅವರ ಮಗುವಿನ ತಾಯಿಯಾಗುತ್ತಿದ್ದಾರೆ ಎಂಬ ಊಹಾಪೋಹಗಳು ಹೆಚ್ಚಾದ ಹಿನ್ನೆಲೆ, ಬರಹಗಾರ್ತಿ ತಸ್ಲೀಮಾ ನಸ್ರೀನ್ ಈ ವದಂತಿಗಳು ನಿಜವಾಗಿದ್ದರೆ, ನುಸ್ರತ್ ನಿಖಿಲ್‌ನಿಂದ ವಿಚ್ಛೇದನ ಪಡೆಯಬೇಕು ಎಂದು ಹೇಳಿದ್ದರು.

ಸದ್ಯ ತನ್ನ ವಿವಾಹದ ಕುರಿತು ಸ್ಪಷ್ಟನೆ ನೀಡಿರುವ ಸಂಸದೆ ನುಸ್ರತ್, “ನನ್ನ ವೈಯಕ್ತಿಕ ಜೀವನದ ಬಗ್ಗೆ ಅಥವಾ ನನಗೆ ಸಂಬಂಧವಿಲ್ಲದ ಯಾರ ಬಗ್ಗೆಯೂ ನಾನು ಎಂದಿಗೂ ಮಾತನಾಡುವುದಿಲ್ಲ. ಹೀಗಾಗಿ, ತಮ್ಮನ್ನು ತಾವು ಸಾಮಾನ್ಯ ಜನರು ಎಂದು ಕರೆದುಕೊಳ್ಳುವವರು ಅವರಿಗೆ ಸಂಬಂಧವಿಲ್ಲದ ಯಾವುದರ ಬಗ್ಗೆಯೂ ಮಾತನಾಡಬಾರದು” ಎಂದು ನುಸ್ರತ್ ಹೇಳಿದ್ದಾರೆ.

ನಿಖಿಲ್ ಜೈನ್ ಕೋಲ್ಕತಾ ಮೂಲದ ಉದ್ಯಮಿಯಾಗಿದ್ದು, ಮದುವೆಗೂ ಒಂದು ವರ್ಷದ ಮೊದಲು ಇಬ್ಬರು ಭೇಟಿಯಾಗಿದ್ದರು. ಇತ್ತೀಚೆಗೆ, ನುಸ್ರತ್ ಗರ್ಭಧಾರಣೆಯ ವದಂತಿಗಳು ಹರಡುತ್ತಿದ್ದಂತೆ, ಕೆಲವು ಸುದ್ದಿ ವಾಹಿನಿಗಳು ನಿಖಿಲ್ ಅವರನ್ನು ಸಂಪರ್ಕಿಸಿದ್ದು, ಹಲವು ತಿಂಗಳುಗಳಿಂದ ಪರಸ್ಪರ ಸಂಪರ್ಕದಲ್ಲಿಲ್ಲದ ಕಾರಣ ನುಸ್ರತ್ ಅವರ ಗರ್ಭಧಾರಣೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...