Homeಮುಖಪುಟಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಮಮತಾ ಬ್ಯಾನರ್ಜಿ ಬೇರೆ ಪಕ್ಷ ಸೇರಲು ಕಾಂಗ್ರೆಸ್ ಅನ್ನು ತೊರೆಯಲಿಲ್ಲ, 1998 ರಲ್ಲಿ ಅವರೇ ಹೊಸ ಪಕ್ಷವನ್ನು ಸ್ಥಾಪಿಸಿದರು ಎಂದು ಡೆರೆಕ್ ಒಬ್ರಿಯೆನ್ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಪ್ರಸ್ತುತ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮೇಲೆ ನಡೆಸಿರುವ ವಾಗ್ದಾಳಿಗೆ, ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್ ತಿರುಗೇಟು ನೀಡಿದ್ದಾರೆ. ಅಮಿತ್‌ ಶಾ ಏಳು ಸುಳ್ಳುಗಳ ತುಣುಕುಗಳನ್ನು ಒಟ್ಟುಗೂಡಿಸಿ ಭಾಷಣ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಆಡಳಿತಾರೂಢ ತೃಣಮೂಲದ ಮೇಲೆ ಆಗಾಗ್ಗೆ ಸುಳ್ಳು ದಾಳಿ ನಡೆಸುತ್ತಿರುವ ಬಿಜೆಪಿ ನಾಯಕರ ಮಾತುಗಳನ್ನು ಫ್ಯಾಕ್ಟ್ ಚೆಕ್ ಮಾಡಿ ದಾಳಿ ನಡೆಸುತ್ತಿರುವ ಡೆರೆಕ್ ಒಬ್ರಿಯೆನ್, ಅಮಿತ್ ಶಾ ಭಾಷಣದಲ್ಲಿನ 7 ಸುಳ್ಳುಗಳನ್ನು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ, ಬಿಜೆಪಿ ನಾಯಕರನ್ನು ಪ್ರವಾಸಿ ಗುಂಪು ಎಂದು ವ್ಯಂಗ್ಯವಾಡಿದ್ದಾರೆ. ಕಳೆದ ಬಾರಿಯ ಬಂಗಾಳ ಪ್ರವಾಸದಲ್ಲಿಯೂ ಮಮತಾ ಬ್ಯಾನರ್ಜಿ, ಅಮಿತ್ ಶಾ ಅವರನ್ನು ಹೊರಗಿನವರು ಎಂದು ಬಣ್ಣಿಸಿದ್ದರು. ಇದನ್ನು ಒಬ್ರಿಯೆನ್ ಕೂಡಾ ಮುಂದುವರೆಸಿದ್ದಾರೆ. 

ಇದನ್ನೂ ಓದಿ: ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

7 ಸುಳ್ಳುಗಳಿಗೆ ಉತ್ತರ ನೀಡಿರುವ ಡೆರೆಕ್ ಒಬ್ರಿಯೆನ್,  “ಪ್ರವಾಸಿ ಗ್ಯಾಂಗ್” ನ ಸಹಾಯಕರೊಬ್ಬರು ಬಂಗಾಳದಲ್ಲಿ ಮಾಡಿದ ಭಾಷಣದ ಫ್ಯಾಕ್ಟ್‌ಚೆಕ್ ಎಂದು ಹೇಳಿದ್ದಾರೆ. ಜೊತೆಗೆ ಒಂದು ಭಾಷಣದಲ್ಲಿ 7 ಸುಳ್ಳುಗಳ ತುಣುಕುಗಳನ್ನು ಕೂಡಿಸಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರೆದು, ಅಮಿತ್ ಶಾ ಅವರ ಮಾನದಂಡಗಳಿಗೆ ಈ ಸುಳ್ಳುಗಳು ಕಡಿಮೆಯಾಗಿವೆ ಎಂದು ವ್ಯಂಗ್ಯವಾಡಿದ್ದಾರೆ. ಏಳು ಸುಳ್ಳುಗಳ ತುಣುಕನ್ನು ಒಂದುಗೂಡಿಸಿ ಭಾಷಣ ಮಾಡಿದ್ದಾರೆ ಎಂದು ಆಧಾರ ಸಮೇತ ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದನ್ನು ಟೀಕಿಸಿದ್ದ ಅಮಿತ್ ಶಾ, ಮತ್ತೊಂದು ಪಕ್ಷಕ್ಕಾಗಿ ಕಾಂಗ್ರೆಸ್ ಅನ್ನು ತೊರೆದಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡೆರೆಕ್ ಒಬ್ರಿಯೆನ್, ಮಮತಾ ಬ್ಯಾನರ್ಜಿ ಬೇರೆ ಪಕ್ಷ ಸೇರಲು ಕಾಂಗ್ರೆಸ್ ಅನ್ನು ತೊರೆಯಲಿಲ್ಲ. ಆಕೆಯೇ ಹೊಸ ಪಕ್ಷವನ್ನು 1998 ರಲ್ಲಿ ಸ್ಥಾಪಿಸಿದರು ಎಂದು ತಿರುಗೇಟು ನೀಡಿದ್ದಾರೆ.

Image

ರ್‍ಯಾಲಿಯಲ್ಲಿ ಅಮಿತ್ ಶಾ ಮಾಡಿದ ಎಲ್ಲಾ ಆರೋಪಗಳನ್ನು ಸುಳ್ಳು ಎಂದಿರುವ ಸಂಸದ ಡೆರೆಕ್ ಒಬ್ರಿಯೆನ್, ಪ್ರತಿಯೊಂದಕ್ಕೂ ಉತ್ತರ ನೀಡಿದ್ದಾರೆ.

ಅಮಿತ್ ಶಾ, ಸಿಎಂ ಮಮತಾ ಬ್ಯಾನರ್ಜಿ ಮೇಲೆ  ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದಂತಹ ಆರೋಪಗಳನ್ನು ಮಾಡಿದ್ದಾರೆ. ಈ ಕಾರಣದಿಂದ ಅನೇಕ ಟಿಎಂಸಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮಿತ್ ಶಾ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಐವರು ಶಾಸಕರು ಸೇರಿದಂತೆ ಒಂಬತ್ತು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಟಿಎಂಸಿ ಪ್ರಭಾವಿ ಮುಖಂಡ ಮತ್ತು ಮಾಜಿ ಸಚಿವ ಸುವೇಂದು ಅಧಿಕಾರಿ ಸೇರಿದಂತೆ, 2018 ರಲ್ಲಿ ಸಿಪಿಎಂ ತೊರೆದು ಟಿಎಂಸಿ ಸೇರಿದ್ದ ಶಾಸಕಿ ದೀಪಾಲಿ ಬಿಸ್ವಾಸ್ ಮತ್ತು ‌ಸಿಪಿಎಂ, ಸಿಪಿಐ ಹಾಗೂ ಕಾಂಗ್ರೆಸ್‌ನ ತಲಾ ಒಬ್ಬ ಶಾಸಕರು ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಮೇದಿನಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಿದರು. ಬರ್ಧಮಾನ್‌ ಪೂರ್ವ ಕ್ಷೇತ್ರದ ಟಿಎಂಸಿ ಸಂಸದ ಸುನಿಲ್‌ ಮಂಡಲ್‌ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...