Homeಮುಖಪುಟಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಮಮತಾ ಬ್ಯಾನರ್ಜಿ ಬೇರೆ ಪಕ್ಷ ಸೇರಲು ಕಾಂಗ್ರೆಸ್ ಅನ್ನು ತೊರೆಯಲಿಲ್ಲ, 1998 ರಲ್ಲಿ ಅವರೇ ಹೊಸ ಪಕ್ಷವನ್ನು ಸ್ಥಾಪಿಸಿದರು ಎಂದು ಡೆರೆಕ್ ಒಬ್ರಿಯೆನ್ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಪ್ರಸ್ತುತ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮೇಲೆ ನಡೆಸಿರುವ ವಾಗ್ದಾಳಿಗೆ, ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್ ತಿರುಗೇಟು ನೀಡಿದ್ದಾರೆ. ಅಮಿತ್‌ ಶಾ ಏಳು ಸುಳ್ಳುಗಳ ತುಣುಕುಗಳನ್ನು ಒಟ್ಟುಗೂಡಿಸಿ ಭಾಷಣ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಆಡಳಿತಾರೂಢ ತೃಣಮೂಲದ ಮೇಲೆ ಆಗಾಗ್ಗೆ ಸುಳ್ಳು ದಾಳಿ ನಡೆಸುತ್ತಿರುವ ಬಿಜೆಪಿ ನಾಯಕರ ಮಾತುಗಳನ್ನು ಫ್ಯಾಕ್ಟ್ ಚೆಕ್ ಮಾಡಿ ದಾಳಿ ನಡೆಸುತ್ತಿರುವ ಡೆರೆಕ್ ಒಬ್ರಿಯೆನ್, ಅಮಿತ್ ಶಾ ಭಾಷಣದಲ್ಲಿನ 7 ಸುಳ್ಳುಗಳನ್ನು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ, ಬಿಜೆಪಿ ನಾಯಕರನ್ನು ಪ್ರವಾಸಿ ಗುಂಪು ಎಂದು ವ್ಯಂಗ್ಯವಾಡಿದ್ದಾರೆ. ಕಳೆದ ಬಾರಿಯ ಬಂಗಾಳ ಪ್ರವಾಸದಲ್ಲಿಯೂ ಮಮತಾ ಬ್ಯಾನರ್ಜಿ, ಅಮಿತ್ ಶಾ ಅವರನ್ನು ಹೊರಗಿನವರು ಎಂದು ಬಣ್ಣಿಸಿದ್ದರು. ಇದನ್ನು ಒಬ್ರಿಯೆನ್ ಕೂಡಾ ಮುಂದುವರೆಸಿದ್ದಾರೆ. 

ಇದನ್ನೂ ಓದಿ: ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

7 ಸುಳ್ಳುಗಳಿಗೆ ಉತ್ತರ ನೀಡಿರುವ ಡೆರೆಕ್ ಒಬ್ರಿಯೆನ್,  “ಪ್ರವಾಸಿ ಗ್ಯಾಂಗ್” ನ ಸಹಾಯಕರೊಬ್ಬರು ಬಂಗಾಳದಲ್ಲಿ ಮಾಡಿದ ಭಾಷಣದ ಫ್ಯಾಕ್ಟ್‌ಚೆಕ್ ಎಂದು ಹೇಳಿದ್ದಾರೆ. ಜೊತೆಗೆ ಒಂದು ಭಾಷಣದಲ್ಲಿ 7 ಸುಳ್ಳುಗಳ ತುಣುಕುಗಳನ್ನು ಕೂಡಿಸಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರೆದು, ಅಮಿತ್ ಶಾ ಅವರ ಮಾನದಂಡಗಳಿಗೆ ಈ ಸುಳ್ಳುಗಳು ಕಡಿಮೆಯಾಗಿವೆ ಎಂದು ವ್ಯಂಗ್ಯವಾಡಿದ್ದಾರೆ. ಏಳು ಸುಳ್ಳುಗಳ ತುಣುಕನ್ನು ಒಂದುಗೂಡಿಸಿ ಭಾಷಣ ಮಾಡಿದ್ದಾರೆ ಎಂದು ಆಧಾರ ಸಮೇತ ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದನ್ನು ಟೀಕಿಸಿದ್ದ ಅಮಿತ್ ಶಾ, ಮತ್ತೊಂದು ಪಕ್ಷಕ್ಕಾಗಿ ಕಾಂಗ್ರೆಸ್ ಅನ್ನು ತೊರೆದಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡೆರೆಕ್ ಒಬ್ರಿಯೆನ್, ಮಮತಾ ಬ್ಯಾನರ್ಜಿ ಬೇರೆ ಪಕ್ಷ ಸೇರಲು ಕಾಂಗ್ರೆಸ್ ಅನ್ನು ತೊರೆಯಲಿಲ್ಲ. ಆಕೆಯೇ ಹೊಸ ಪಕ್ಷವನ್ನು 1998 ರಲ್ಲಿ ಸ್ಥಾಪಿಸಿದರು ಎಂದು ತಿರುಗೇಟು ನೀಡಿದ್ದಾರೆ.

Image

ರ್‍ಯಾಲಿಯಲ್ಲಿ ಅಮಿತ್ ಶಾ ಮಾಡಿದ ಎಲ್ಲಾ ಆರೋಪಗಳನ್ನು ಸುಳ್ಳು ಎಂದಿರುವ ಸಂಸದ ಡೆರೆಕ್ ಒಬ್ರಿಯೆನ್, ಪ್ರತಿಯೊಂದಕ್ಕೂ ಉತ್ತರ ನೀಡಿದ್ದಾರೆ.

ಅಮಿತ್ ಶಾ, ಸಿಎಂ ಮಮತಾ ಬ್ಯಾನರ್ಜಿ ಮೇಲೆ  ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದಂತಹ ಆರೋಪಗಳನ್ನು ಮಾಡಿದ್ದಾರೆ. ಈ ಕಾರಣದಿಂದ ಅನೇಕ ಟಿಎಂಸಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮಿತ್ ಶಾ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಐವರು ಶಾಸಕರು ಸೇರಿದಂತೆ ಒಂಬತ್ತು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಟಿಎಂಸಿ ಪ್ರಭಾವಿ ಮುಖಂಡ ಮತ್ತು ಮಾಜಿ ಸಚಿವ ಸುವೇಂದು ಅಧಿಕಾರಿ ಸೇರಿದಂತೆ, 2018 ರಲ್ಲಿ ಸಿಪಿಎಂ ತೊರೆದು ಟಿಎಂಸಿ ಸೇರಿದ್ದ ಶಾಸಕಿ ದೀಪಾಲಿ ಬಿಸ್ವಾಸ್ ಮತ್ತು ‌ಸಿಪಿಎಂ, ಸಿಪಿಐ ಹಾಗೂ ಕಾಂಗ್ರೆಸ್‌ನ ತಲಾ ಒಬ್ಬ ಶಾಸಕರು ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಮೇದಿನಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಿದರು. ಬರ್ಧಮಾನ್‌ ಪೂರ್ವ ಕ್ಷೇತ್ರದ ಟಿಎಂಸಿ ಸಂಸದ ಸುನಿಲ್‌ ಮಂಡಲ್‌ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...