Homeಮುಖಪುಟಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಮಮತಾ ಬ್ಯಾನರ್ಜಿ ಬೇರೆ ಪಕ್ಷ ಸೇರಲು ಕಾಂಗ್ರೆಸ್ ಅನ್ನು ತೊರೆಯಲಿಲ್ಲ, 1998 ರಲ್ಲಿ ಅವರೇ ಹೊಸ ಪಕ್ಷವನ್ನು ಸ್ಥಾಪಿಸಿದರು ಎಂದು ಡೆರೆಕ್ ಒಬ್ರಿಯೆನ್ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಪ್ರಸ್ತುತ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮೇಲೆ ನಡೆಸಿರುವ ವಾಗ್ದಾಳಿಗೆ, ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್ ತಿರುಗೇಟು ನೀಡಿದ್ದಾರೆ. ಅಮಿತ್‌ ಶಾ ಏಳು ಸುಳ್ಳುಗಳ ತುಣುಕುಗಳನ್ನು ಒಟ್ಟುಗೂಡಿಸಿ ಭಾಷಣ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಆಡಳಿತಾರೂಢ ತೃಣಮೂಲದ ಮೇಲೆ ಆಗಾಗ್ಗೆ ಸುಳ್ಳು ದಾಳಿ ನಡೆಸುತ್ತಿರುವ ಬಿಜೆಪಿ ನಾಯಕರ ಮಾತುಗಳನ್ನು ಫ್ಯಾಕ್ಟ್ ಚೆಕ್ ಮಾಡಿ ದಾಳಿ ನಡೆಸುತ್ತಿರುವ ಡೆರೆಕ್ ಒಬ್ರಿಯೆನ್, ಅಮಿತ್ ಶಾ ಭಾಷಣದಲ್ಲಿನ 7 ಸುಳ್ಳುಗಳನ್ನು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ, ಬಿಜೆಪಿ ನಾಯಕರನ್ನು ಪ್ರವಾಸಿ ಗುಂಪು ಎಂದು ವ್ಯಂಗ್ಯವಾಡಿದ್ದಾರೆ. ಕಳೆದ ಬಾರಿಯ ಬಂಗಾಳ ಪ್ರವಾಸದಲ್ಲಿಯೂ ಮಮತಾ ಬ್ಯಾನರ್ಜಿ, ಅಮಿತ್ ಶಾ ಅವರನ್ನು ಹೊರಗಿನವರು ಎಂದು ಬಣ್ಣಿಸಿದ್ದರು. ಇದನ್ನು ಒಬ್ರಿಯೆನ್ ಕೂಡಾ ಮುಂದುವರೆಸಿದ್ದಾರೆ. 

ಇದನ್ನೂ ಓದಿ: ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

7 ಸುಳ್ಳುಗಳಿಗೆ ಉತ್ತರ ನೀಡಿರುವ ಡೆರೆಕ್ ಒಬ್ರಿಯೆನ್,  “ಪ್ರವಾಸಿ ಗ್ಯಾಂಗ್” ನ ಸಹಾಯಕರೊಬ್ಬರು ಬಂಗಾಳದಲ್ಲಿ ಮಾಡಿದ ಭಾಷಣದ ಫ್ಯಾಕ್ಟ್‌ಚೆಕ್ ಎಂದು ಹೇಳಿದ್ದಾರೆ. ಜೊತೆಗೆ ಒಂದು ಭಾಷಣದಲ್ಲಿ 7 ಸುಳ್ಳುಗಳ ತುಣುಕುಗಳನ್ನು ಕೂಡಿಸಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರೆದು, ಅಮಿತ್ ಶಾ ಅವರ ಮಾನದಂಡಗಳಿಗೆ ಈ ಸುಳ್ಳುಗಳು ಕಡಿಮೆಯಾಗಿವೆ ಎಂದು ವ್ಯಂಗ್ಯವಾಡಿದ್ದಾರೆ. ಏಳು ಸುಳ್ಳುಗಳ ತುಣುಕನ್ನು ಒಂದುಗೂಡಿಸಿ ಭಾಷಣ ಮಾಡಿದ್ದಾರೆ ಎಂದು ಆಧಾರ ಸಮೇತ ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದನ್ನು ಟೀಕಿಸಿದ್ದ ಅಮಿತ್ ಶಾ, ಮತ್ತೊಂದು ಪಕ್ಷಕ್ಕಾಗಿ ಕಾಂಗ್ರೆಸ್ ಅನ್ನು ತೊರೆದಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡೆರೆಕ್ ಒಬ್ರಿಯೆನ್, ಮಮತಾ ಬ್ಯಾನರ್ಜಿ ಬೇರೆ ಪಕ್ಷ ಸೇರಲು ಕಾಂಗ್ರೆಸ್ ಅನ್ನು ತೊರೆಯಲಿಲ್ಲ. ಆಕೆಯೇ ಹೊಸ ಪಕ್ಷವನ್ನು 1998 ರಲ್ಲಿ ಸ್ಥಾಪಿಸಿದರು ಎಂದು ತಿರುಗೇಟು ನೀಡಿದ್ದಾರೆ.

Image

ರ್‍ಯಾಲಿಯಲ್ಲಿ ಅಮಿತ್ ಶಾ ಮಾಡಿದ ಎಲ್ಲಾ ಆರೋಪಗಳನ್ನು ಸುಳ್ಳು ಎಂದಿರುವ ಸಂಸದ ಡೆರೆಕ್ ಒಬ್ರಿಯೆನ್, ಪ್ರತಿಯೊಂದಕ್ಕೂ ಉತ್ತರ ನೀಡಿದ್ದಾರೆ.

ಅಮಿತ್ ಶಾ, ಸಿಎಂ ಮಮತಾ ಬ್ಯಾನರ್ಜಿ ಮೇಲೆ  ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದಂತಹ ಆರೋಪಗಳನ್ನು ಮಾಡಿದ್ದಾರೆ. ಈ ಕಾರಣದಿಂದ ಅನೇಕ ಟಿಎಂಸಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮಿತ್ ಶಾ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಐವರು ಶಾಸಕರು ಸೇರಿದಂತೆ ಒಂಬತ್ತು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಟಿಎಂಸಿ ಪ್ರಭಾವಿ ಮುಖಂಡ ಮತ್ತು ಮಾಜಿ ಸಚಿವ ಸುವೇಂದು ಅಧಿಕಾರಿ ಸೇರಿದಂತೆ, 2018 ರಲ್ಲಿ ಸಿಪಿಎಂ ತೊರೆದು ಟಿಎಂಸಿ ಸೇರಿದ್ದ ಶಾಸಕಿ ದೀಪಾಲಿ ಬಿಸ್ವಾಸ್ ಮತ್ತು ‌ಸಿಪಿಎಂ, ಸಿಪಿಐ ಹಾಗೂ ಕಾಂಗ್ರೆಸ್‌ನ ತಲಾ ಒಬ್ಬ ಶಾಸಕರು ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಮೇದಿನಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಿದರು. ಬರ್ಧಮಾನ್‌ ಪೂರ್ವ ಕ್ಷೇತ್ರದ ಟಿಎಂಸಿ ಸಂಸದ ಸುನಿಲ್‌ ಮಂಡಲ್‌ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...