Homeಮುಖಪುಟಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಮಮತಾ ಬ್ಯಾನರ್ಜಿ ಬೇರೆ ಪಕ್ಷ ಸೇರಲು ಕಾಂಗ್ರೆಸ್ ಅನ್ನು ತೊರೆಯಲಿಲ್ಲ, 1998 ರಲ್ಲಿ ಅವರೇ ಹೊಸ ಪಕ್ಷವನ್ನು ಸ್ಥಾಪಿಸಿದರು ಎಂದು ಡೆರೆಕ್ ಒಬ್ರಿಯೆನ್ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಪ್ರಸ್ತುತ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮೇಲೆ ನಡೆಸಿರುವ ವಾಗ್ದಾಳಿಗೆ, ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್ ತಿರುಗೇಟು ನೀಡಿದ್ದಾರೆ. ಅಮಿತ್‌ ಶಾ ಏಳು ಸುಳ್ಳುಗಳ ತುಣುಕುಗಳನ್ನು ಒಟ್ಟುಗೂಡಿಸಿ ಭಾಷಣ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಆಡಳಿತಾರೂಢ ತೃಣಮೂಲದ ಮೇಲೆ ಆಗಾಗ್ಗೆ ಸುಳ್ಳು ದಾಳಿ ನಡೆಸುತ್ತಿರುವ ಬಿಜೆಪಿ ನಾಯಕರ ಮಾತುಗಳನ್ನು ಫ್ಯಾಕ್ಟ್ ಚೆಕ್ ಮಾಡಿ ದಾಳಿ ನಡೆಸುತ್ತಿರುವ ಡೆರೆಕ್ ಒಬ್ರಿಯೆನ್, ಅಮಿತ್ ಶಾ ಭಾಷಣದಲ್ಲಿನ 7 ಸುಳ್ಳುಗಳನ್ನು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ, ಬಿಜೆಪಿ ನಾಯಕರನ್ನು ಪ್ರವಾಸಿ ಗುಂಪು ಎಂದು ವ್ಯಂಗ್ಯವಾಡಿದ್ದಾರೆ. ಕಳೆದ ಬಾರಿಯ ಬಂಗಾಳ ಪ್ರವಾಸದಲ್ಲಿಯೂ ಮಮತಾ ಬ್ಯಾನರ್ಜಿ, ಅಮಿತ್ ಶಾ ಅವರನ್ನು ಹೊರಗಿನವರು ಎಂದು ಬಣ್ಣಿಸಿದ್ದರು. ಇದನ್ನು ಒಬ್ರಿಯೆನ್ ಕೂಡಾ ಮುಂದುವರೆಸಿದ್ದಾರೆ. 

ಇದನ್ನೂ ಓದಿ: ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

7 ಸುಳ್ಳುಗಳಿಗೆ ಉತ್ತರ ನೀಡಿರುವ ಡೆರೆಕ್ ಒಬ್ರಿಯೆನ್,  “ಪ್ರವಾಸಿ ಗ್ಯಾಂಗ್” ನ ಸಹಾಯಕರೊಬ್ಬರು ಬಂಗಾಳದಲ್ಲಿ ಮಾಡಿದ ಭಾಷಣದ ಫ್ಯಾಕ್ಟ್‌ಚೆಕ್ ಎಂದು ಹೇಳಿದ್ದಾರೆ. ಜೊತೆಗೆ ಒಂದು ಭಾಷಣದಲ್ಲಿ 7 ಸುಳ್ಳುಗಳ ತುಣುಕುಗಳನ್ನು ಕೂಡಿಸಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರೆದು, ಅಮಿತ್ ಶಾ ಅವರ ಮಾನದಂಡಗಳಿಗೆ ಈ ಸುಳ್ಳುಗಳು ಕಡಿಮೆಯಾಗಿವೆ ಎಂದು ವ್ಯಂಗ್ಯವಾಡಿದ್ದಾರೆ. ಏಳು ಸುಳ್ಳುಗಳ ತುಣುಕನ್ನು ಒಂದುಗೂಡಿಸಿ ಭಾಷಣ ಮಾಡಿದ್ದಾರೆ ಎಂದು ಆಧಾರ ಸಮೇತ ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದನ್ನು ಟೀಕಿಸಿದ್ದ ಅಮಿತ್ ಶಾ, ಮತ್ತೊಂದು ಪಕ್ಷಕ್ಕಾಗಿ ಕಾಂಗ್ರೆಸ್ ಅನ್ನು ತೊರೆದಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡೆರೆಕ್ ಒಬ್ರಿಯೆನ್, ಮಮತಾ ಬ್ಯಾನರ್ಜಿ ಬೇರೆ ಪಕ್ಷ ಸೇರಲು ಕಾಂಗ್ರೆಸ್ ಅನ್ನು ತೊರೆಯಲಿಲ್ಲ. ಆಕೆಯೇ ಹೊಸ ಪಕ್ಷವನ್ನು 1998 ರಲ್ಲಿ ಸ್ಥಾಪಿಸಿದರು ಎಂದು ತಿರುಗೇಟು ನೀಡಿದ್ದಾರೆ.

Image

ರ್‍ಯಾಲಿಯಲ್ಲಿ ಅಮಿತ್ ಶಾ ಮಾಡಿದ ಎಲ್ಲಾ ಆರೋಪಗಳನ್ನು ಸುಳ್ಳು ಎಂದಿರುವ ಸಂಸದ ಡೆರೆಕ್ ಒಬ್ರಿಯೆನ್, ಪ್ರತಿಯೊಂದಕ್ಕೂ ಉತ್ತರ ನೀಡಿದ್ದಾರೆ.

ಅಮಿತ್ ಶಾ, ಸಿಎಂ ಮಮತಾ ಬ್ಯಾನರ್ಜಿ ಮೇಲೆ  ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದಂತಹ ಆರೋಪಗಳನ್ನು ಮಾಡಿದ್ದಾರೆ. ಈ ಕಾರಣದಿಂದ ಅನೇಕ ಟಿಎಂಸಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮಿತ್ ಶಾ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಐವರು ಶಾಸಕರು ಸೇರಿದಂತೆ ಒಂಬತ್ತು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಟಿಎಂಸಿ ಪ್ರಭಾವಿ ಮುಖಂಡ ಮತ್ತು ಮಾಜಿ ಸಚಿವ ಸುವೇಂದು ಅಧಿಕಾರಿ ಸೇರಿದಂತೆ, 2018 ರಲ್ಲಿ ಸಿಪಿಎಂ ತೊರೆದು ಟಿಎಂಸಿ ಸೇರಿದ್ದ ಶಾಸಕಿ ದೀಪಾಲಿ ಬಿಸ್ವಾಸ್ ಮತ್ತು ‌ಸಿಪಿಎಂ, ಸಿಪಿಐ ಹಾಗೂ ಕಾಂಗ್ರೆಸ್‌ನ ತಲಾ ಒಬ್ಬ ಶಾಸಕರು ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಮೇದಿನಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಿದರು. ಬರ್ಧಮಾನ್‌ ಪೂರ್ವ ಕ್ಷೇತ್ರದ ಟಿಎಂಸಿ ಸಂಸದ ಸುನಿಲ್‌ ಮಂಡಲ್‌ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...