Homeಮುಖಪುಟಪೆಟ್ರೋಲ್ 200 ರೂ.ಗೆ ಏರಿದಾಗ ಟ್ರಿಪಲ್ ರೈಡಿಂಗ್‌ಗೆ ಅವಕಾಶ: ಅಸ್ಸಾಂ ಬಿಜೆಪಿ ಮುಖ್ಯಸ್ಥನ ವಿಚಿತ್ರ ಹೇಳಿಕೆ

ಪೆಟ್ರೋಲ್ 200 ರೂ.ಗೆ ಏರಿದಾಗ ಟ್ರಿಪಲ್ ರೈಡಿಂಗ್‌ಗೆ ಅವಕಾಶ: ಅಸ್ಸಾಂ ಬಿಜೆಪಿ ಮುಖ್ಯಸ್ಥನ ವಿಚಿತ್ರ ಹೇಳಿಕೆ

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 200 ರೂಪಾಯಿಗೆಗೆ ಏರಿದಾಗ ದ್ವಿಚಕ್ರ ವಾಹನಗಳಲ್ಲಿ ಟ್ರಿಪಲ್ ರೈಡಿಂಗ್‌ಗೆ ಅವಕಾಶ ನೀಡಲಾಗುವುದು ಎಂದು ಅಸ್ಸಾಂ ಬಿಜೆಪಿ ಮುಖ್ಯಸ್ಥ ಭಾಬೇಶ್ ಕಲಿತಾ ಮಂಗಳವಾರ ವಿಚಿತ್ರ ಹೇಳಿಕೆ ನೀಡಿದ್ದಾರೆ.

“ರಾಜ್ಯದಲ್ಲಿ ಪೆಟ್ರೋಲ್ ಬೆಲೆ ರೂ. 200 ಕ್ಕೆ ಏರಿಕೆಯಾದ ನಂತರ ದ್ವಿಚಕ್ರ ವಾಹನದಲ್ಲಿ ಮೂವರು ಸವಾರಿ ಮಾಡಲು ಅವಕಾಶ ನೀಡಲಾಗುವುದು. ಆದರೆ, ಸರ್ಕಾರದಿಂದ ಅದಕ್ಕೆ ಅನುಮತಿ ಪಡೆಯಬೇಕು” ಎಂದು ಸ್ಥಳೀಯ ಮಾಧ್ಯಮಗಳಿಗೆ ಭಾಬೇಶ್ ಕಲಿತಾ ಹೇಳಿದ್ದಾರೆ.

ಅಸ್ಸಾಂನ ತಾಮುಲ್ಪುರದಲ್ಲಿ ನಡೆದ ಸಮಾರಂಭದಲ್ಲಿ ಈ ವಿಚಿತ್ರವಾದ ಹೇಳಿಕೆಯನ್ನು ನೀಡಿದ್ದು, ಮಾಜಿ ಸಚಿವರಾಗಿದ್ದ ಭಾಬೇಶ್ ಕಲಿತಾ, ಈ ವರ್ಷದ ಜೂನ್‌ನಲ್ಲಿ ಅಸ್ಸಾಂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ಪೆಟ್ರೋಲ್ ಬೆಲೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಜನರು ವಾಹನಗಳನ್ನು ರೋಡಿಗಿಳಿಸಲು ಹಿಂದೇಟು ಹಾಕುತ್ತಿದ್ದಾರೆ. ಇಂತಹ ಸಮಯದಲ್ಲಿ ಬಿಜೆಪಿ ಮುಖ್ಯಸ್ಥರ ಹೇಳಿಕೆ ರಾಜ್ಯದಲ್ಲಿ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಟ್ರಿಪಲ್ ರೈಡಿಂಗ್‌ಗೆ ಅವಕಾಶ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಆಡಳಿತಾರೂಢ ಬಿಜೆಪಿಯ ಅಧ್ಯಕ್ಷರಾದ ಭಾಬೇಶ್ ಕಲಿತಾ ಇಂತಹ ವಿಲಕ್ಷಣವಾದ ಹೇಳಿಕೆಯನ್ನು ನೀಡುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಅವರು ಈ ಹೇಳಿಕೆಯನ್ನು ತಮಾಷೆಗಾಗಿ ಹೇಳಿದ್ದಾರೋ ಅಥವಾ ನಿಜವಾಗಿಯೂ ಗಂಭೀರವಾಗಿ ಹೇಳಿದ್ದಾರೋ?” ಎಂದು ಅಸ್ಸಾಂ ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಅಧ್ಯಕ್ಷರಾದ ಬೊಬೀತಾ ಶರ್ಮಾ ಪ್ರಶ್ನಿಸಿದ್ದಾರೆ.

“ಅವರ ಹೇಳಿಕೆಗೆ ಕಾರಣ ಏನಾದರೂ ಇರಲಿ, ಇಂಧನ ಬೆಲೆ ಏರಿಕೆಯ ಬಗ್ಗೆ ಅವರು ಇಂತಹ ವಿಚಿತ್ರ ಹೇಳಿಕೆಗಳನ್ನು ನೀಡುತ್ತಿರುವುದು ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಂಕಷ್ಟ ಎದುರಿಸುತ್ತಿರುವ ಸಾಮಾನ್ಯ ಜನರ ಬಗೆಗಿನ ಅಗೌರವ ಮತ್ತು ಅಸೂಕ್ಷ್ಮತೆಯನ್ನು ವ್ಯಕ್ತಪಡಿಸುತ್ತದೆ” ಎಂದು ಶರ್ಮಾ ಕಿಡಿಕಾರಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿ ಮಂಗಳವಾರ ಪೆಟ್ರೋಲ್ ಬೆಲೆ 101.80 ರೂಪಾಯಿ ಮತ್ತು ಡೀಸೆಲ್ 94.27 ರೂಪಾಯಿಯಾಗಿದೆ.


ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...