Homeಮುಖಪುಟಪೆಟ್ರೋಲ್ 200 ರೂ.ಗೆ ಏರಿದಾಗ ಟ್ರಿಪಲ್ ರೈಡಿಂಗ್‌ಗೆ ಅವಕಾಶ: ಅಸ್ಸಾಂ ಬಿಜೆಪಿ ಮುಖ್ಯಸ್ಥನ ವಿಚಿತ್ರ ಹೇಳಿಕೆ

ಪೆಟ್ರೋಲ್ 200 ರೂ.ಗೆ ಏರಿದಾಗ ಟ್ರಿಪಲ್ ರೈಡಿಂಗ್‌ಗೆ ಅವಕಾಶ: ಅಸ್ಸಾಂ ಬಿಜೆಪಿ ಮುಖ್ಯಸ್ಥನ ವಿಚಿತ್ರ ಹೇಳಿಕೆ

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 200 ರೂಪಾಯಿಗೆಗೆ ಏರಿದಾಗ ದ್ವಿಚಕ್ರ ವಾಹನಗಳಲ್ಲಿ ಟ್ರಿಪಲ್ ರೈಡಿಂಗ್‌ಗೆ ಅವಕಾಶ ನೀಡಲಾಗುವುದು ಎಂದು ಅಸ್ಸಾಂ ಬಿಜೆಪಿ ಮುಖ್ಯಸ್ಥ ಭಾಬೇಶ್ ಕಲಿತಾ ಮಂಗಳವಾರ ವಿಚಿತ್ರ ಹೇಳಿಕೆ ನೀಡಿದ್ದಾರೆ.

“ರಾಜ್ಯದಲ್ಲಿ ಪೆಟ್ರೋಲ್ ಬೆಲೆ ರೂ. 200 ಕ್ಕೆ ಏರಿಕೆಯಾದ ನಂತರ ದ್ವಿಚಕ್ರ ವಾಹನದಲ್ಲಿ ಮೂವರು ಸವಾರಿ ಮಾಡಲು ಅವಕಾಶ ನೀಡಲಾಗುವುದು. ಆದರೆ, ಸರ್ಕಾರದಿಂದ ಅದಕ್ಕೆ ಅನುಮತಿ ಪಡೆಯಬೇಕು” ಎಂದು ಸ್ಥಳೀಯ ಮಾಧ್ಯಮಗಳಿಗೆ ಭಾಬೇಶ್ ಕಲಿತಾ ಹೇಳಿದ್ದಾರೆ.

ಅಸ್ಸಾಂನ ತಾಮುಲ್ಪುರದಲ್ಲಿ ನಡೆದ ಸಮಾರಂಭದಲ್ಲಿ ಈ ವಿಚಿತ್ರವಾದ ಹೇಳಿಕೆಯನ್ನು ನೀಡಿದ್ದು, ಮಾಜಿ ಸಚಿವರಾಗಿದ್ದ ಭಾಬೇಶ್ ಕಲಿತಾ, ಈ ವರ್ಷದ ಜೂನ್‌ನಲ್ಲಿ ಅಸ್ಸಾಂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ಪೆಟ್ರೋಲ್ ಬೆಲೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಜನರು ವಾಹನಗಳನ್ನು ರೋಡಿಗಿಳಿಸಲು ಹಿಂದೇಟು ಹಾಕುತ್ತಿದ್ದಾರೆ. ಇಂತಹ ಸಮಯದಲ್ಲಿ ಬಿಜೆಪಿ ಮುಖ್ಯಸ್ಥರ ಹೇಳಿಕೆ ರಾಜ್ಯದಲ್ಲಿ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಟ್ರಿಪಲ್ ರೈಡಿಂಗ್‌ಗೆ ಅವಕಾಶ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಆಡಳಿತಾರೂಢ ಬಿಜೆಪಿಯ ಅಧ್ಯಕ್ಷರಾದ ಭಾಬೇಶ್ ಕಲಿತಾ ಇಂತಹ ವಿಲಕ್ಷಣವಾದ ಹೇಳಿಕೆಯನ್ನು ನೀಡುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಅವರು ಈ ಹೇಳಿಕೆಯನ್ನು ತಮಾಷೆಗಾಗಿ ಹೇಳಿದ್ದಾರೋ ಅಥವಾ ನಿಜವಾಗಿಯೂ ಗಂಭೀರವಾಗಿ ಹೇಳಿದ್ದಾರೋ?” ಎಂದು ಅಸ್ಸಾಂ ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಅಧ್ಯಕ್ಷರಾದ ಬೊಬೀತಾ ಶರ್ಮಾ ಪ್ರಶ್ನಿಸಿದ್ದಾರೆ.

“ಅವರ ಹೇಳಿಕೆಗೆ ಕಾರಣ ಏನಾದರೂ ಇರಲಿ, ಇಂಧನ ಬೆಲೆ ಏರಿಕೆಯ ಬಗ್ಗೆ ಅವರು ಇಂತಹ ವಿಚಿತ್ರ ಹೇಳಿಕೆಗಳನ್ನು ನೀಡುತ್ತಿರುವುದು ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಂಕಷ್ಟ ಎದುರಿಸುತ್ತಿರುವ ಸಾಮಾನ್ಯ ಜನರ ಬಗೆಗಿನ ಅಗೌರವ ಮತ್ತು ಅಸೂಕ್ಷ್ಮತೆಯನ್ನು ವ್ಯಕ್ತಪಡಿಸುತ್ತದೆ” ಎಂದು ಶರ್ಮಾ ಕಿಡಿಕಾರಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿ ಮಂಗಳವಾರ ಪೆಟ್ರೋಲ್ ಬೆಲೆ 101.80 ರೂಪಾಯಿ ಮತ್ತು ಡೀಸೆಲ್ 94.27 ರೂಪಾಯಿಯಾಗಿದೆ.


ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...