Homeಮುಖಪುಟಪೆಟ್ರೋಲ್ 200 ರೂ.ಗೆ ಏರಿದಾಗ ಟ್ರಿಪಲ್ ರೈಡಿಂಗ್‌ಗೆ ಅವಕಾಶ: ಅಸ್ಸಾಂ ಬಿಜೆಪಿ ಮುಖ್ಯಸ್ಥನ ವಿಚಿತ್ರ ಹೇಳಿಕೆ

ಪೆಟ್ರೋಲ್ 200 ರೂ.ಗೆ ಏರಿದಾಗ ಟ್ರಿಪಲ್ ರೈಡಿಂಗ್‌ಗೆ ಅವಕಾಶ: ಅಸ್ಸಾಂ ಬಿಜೆಪಿ ಮುಖ್ಯಸ್ಥನ ವಿಚಿತ್ರ ಹೇಳಿಕೆ

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 200 ರೂಪಾಯಿಗೆಗೆ ಏರಿದಾಗ ದ್ವಿಚಕ್ರ ವಾಹನಗಳಲ್ಲಿ ಟ್ರಿಪಲ್ ರೈಡಿಂಗ್‌ಗೆ ಅವಕಾಶ ನೀಡಲಾಗುವುದು ಎಂದು ಅಸ್ಸಾಂ ಬಿಜೆಪಿ ಮುಖ್ಯಸ್ಥ ಭಾಬೇಶ್ ಕಲಿತಾ ಮಂಗಳವಾರ ವಿಚಿತ್ರ ಹೇಳಿಕೆ ನೀಡಿದ್ದಾರೆ.

“ರಾಜ್ಯದಲ್ಲಿ ಪೆಟ್ರೋಲ್ ಬೆಲೆ ರೂ. 200 ಕ್ಕೆ ಏರಿಕೆಯಾದ ನಂತರ ದ್ವಿಚಕ್ರ ವಾಹನದಲ್ಲಿ ಮೂವರು ಸವಾರಿ ಮಾಡಲು ಅವಕಾಶ ನೀಡಲಾಗುವುದು. ಆದರೆ, ಸರ್ಕಾರದಿಂದ ಅದಕ್ಕೆ ಅನುಮತಿ ಪಡೆಯಬೇಕು” ಎಂದು ಸ್ಥಳೀಯ ಮಾಧ್ಯಮಗಳಿಗೆ ಭಾಬೇಶ್ ಕಲಿತಾ ಹೇಳಿದ್ದಾರೆ.

ಅಸ್ಸಾಂನ ತಾಮುಲ್ಪುರದಲ್ಲಿ ನಡೆದ ಸಮಾರಂಭದಲ್ಲಿ ಈ ವಿಚಿತ್ರವಾದ ಹೇಳಿಕೆಯನ್ನು ನೀಡಿದ್ದು, ಮಾಜಿ ಸಚಿವರಾಗಿದ್ದ ಭಾಬೇಶ್ ಕಲಿತಾ, ಈ ವರ್ಷದ ಜೂನ್‌ನಲ್ಲಿ ಅಸ್ಸಾಂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ಪೆಟ್ರೋಲ್ ಬೆಲೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಜನರು ವಾಹನಗಳನ್ನು ರೋಡಿಗಿಳಿಸಲು ಹಿಂದೇಟು ಹಾಕುತ್ತಿದ್ದಾರೆ. ಇಂತಹ ಸಮಯದಲ್ಲಿ ಬಿಜೆಪಿ ಮುಖ್ಯಸ್ಥರ ಹೇಳಿಕೆ ರಾಜ್ಯದಲ್ಲಿ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಟ್ರಿಪಲ್ ರೈಡಿಂಗ್‌ಗೆ ಅವಕಾಶ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಆಡಳಿತಾರೂಢ ಬಿಜೆಪಿಯ ಅಧ್ಯಕ್ಷರಾದ ಭಾಬೇಶ್ ಕಲಿತಾ ಇಂತಹ ವಿಲಕ್ಷಣವಾದ ಹೇಳಿಕೆಯನ್ನು ನೀಡುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಅವರು ಈ ಹೇಳಿಕೆಯನ್ನು ತಮಾಷೆಗಾಗಿ ಹೇಳಿದ್ದಾರೋ ಅಥವಾ ನಿಜವಾಗಿಯೂ ಗಂಭೀರವಾಗಿ ಹೇಳಿದ್ದಾರೋ?” ಎಂದು ಅಸ್ಸಾಂ ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಅಧ್ಯಕ್ಷರಾದ ಬೊಬೀತಾ ಶರ್ಮಾ ಪ್ರಶ್ನಿಸಿದ್ದಾರೆ.

“ಅವರ ಹೇಳಿಕೆಗೆ ಕಾರಣ ಏನಾದರೂ ಇರಲಿ, ಇಂಧನ ಬೆಲೆ ಏರಿಕೆಯ ಬಗ್ಗೆ ಅವರು ಇಂತಹ ವಿಚಿತ್ರ ಹೇಳಿಕೆಗಳನ್ನು ನೀಡುತ್ತಿರುವುದು ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಂಕಷ್ಟ ಎದುರಿಸುತ್ತಿರುವ ಸಾಮಾನ್ಯ ಜನರ ಬಗೆಗಿನ ಅಗೌರವ ಮತ್ತು ಅಸೂಕ್ಷ್ಮತೆಯನ್ನು ವ್ಯಕ್ತಪಡಿಸುತ್ತದೆ” ಎಂದು ಶರ್ಮಾ ಕಿಡಿಕಾರಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿ ಮಂಗಳವಾರ ಪೆಟ್ರೋಲ್ ಬೆಲೆ 101.80 ರೂಪಾಯಿ ಮತ್ತು ಡೀಸೆಲ್ 94.27 ರೂಪಾಯಿಯಾಗಿದೆ.


ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...