Homeಮುಖಪುಟಪೆಟ್ರೋಲ್ 200 ರೂ.ಗೆ ಏರಿದಾಗ ಟ್ರಿಪಲ್ ರೈಡಿಂಗ್‌ಗೆ ಅವಕಾಶ: ಅಸ್ಸಾಂ ಬಿಜೆಪಿ ಮುಖ್ಯಸ್ಥನ ವಿಚಿತ್ರ ಹೇಳಿಕೆ

ಪೆಟ್ರೋಲ್ 200 ರೂ.ಗೆ ಏರಿದಾಗ ಟ್ರಿಪಲ್ ರೈಡಿಂಗ್‌ಗೆ ಅವಕಾಶ: ಅಸ್ಸಾಂ ಬಿಜೆಪಿ ಮುಖ್ಯಸ್ಥನ ವಿಚಿತ್ರ ಹೇಳಿಕೆ

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 200 ರೂಪಾಯಿಗೆಗೆ ಏರಿದಾಗ ದ್ವಿಚಕ್ರ ವಾಹನಗಳಲ್ಲಿ ಟ್ರಿಪಲ್ ರೈಡಿಂಗ್‌ಗೆ ಅವಕಾಶ ನೀಡಲಾಗುವುದು ಎಂದು ಅಸ್ಸಾಂ ಬಿಜೆಪಿ ಮುಖ್ಯಸ್ಥ ಭಾಬೇಶ್ ಕಲಿತಾ ಮಂಗಳವಾರ ವಿಚಿತ್ರ ಹೇಳಿಕೆ ನೀಡಿದ್ದಾರೆ.

“ರಾಜ್ಯದಲ್ಲಿ ಪೆಟ್ರೋಲ್ ಬೆಲೆ ರೂ. 200 ಕ್ಕೆ ಏರಿಕೆಯಾದ ನಂತರ ದ್ವಿಚಕ್ರ ವಾಹನದಲ್ಲಿ ಮೂವರು ಸವಾರಿ ಮಾಡಲು ಅವಕಾಶ ನೀಡಲಾಗುವುದು. ಆದರೆ, ಸರ್ಕಾರದಿಂದ ಅದಕ್ಕೆ ಅನುಮತಿ ಪಡೆಯಬೇಕು” ಎಂದು ಸ್ಥಳೀಯ ಮಾಧ್ಯಮಗಳಿಗೆ ಭಾಬೇಶ್ ಕಲಿತಾ ಹೇಳಿದ್ದಾರೆ.

ಅಸ್ಸಾಂನ ತಾಮುಲ್ಪುರದಲ್ಲಿ ನಡೆದ ಸಮಾರಂಭದಲ್ಲಿ ಈ ವಿಚಿತ್ರವಾದ ಹೇಳಿಕೆಯನ್ನು ನೀಡಿದ್ದು, ಮಾಜಿ ಸಚಿವರಾಗಿದ್ದ ಭಾಬೇಶ್ ಕಲಿತಾ, ಈ ವರ್ಷದ ಜೂನ್‌ನಲ್ಲಿ ಅಸ್ಸಾಂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ಪೆಟ್ರೋಲ್ ಬೆಲೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಜನರು ವಾಹನಗಳನ್ನು ರೋಡಿಗಿಳಿಸಲು ಹಿಂದೇಟು ಹಾಕುತ್ತಿದ್ದಾರೆ. ಇಂತಹ ಸಮಯದಲ್ಲಿ ಬಿಜೆಪಿ ಮುಖ್ಯಸ್ಥರ ಹೇಳಿಕೆ ರಾಜ್ಯದಲ್ಲಿ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಟ್ರಿಪಲ್ ರೈಡಿಂಗ್‌ಗೆ ಅವಕಾಶ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಆಡಳಿತಾರೂಢ ಬಿಜೆಪಿಯ ಅಧ್ಯಕ್ಷರಾದ ಭಾಬೇಶ್ ಕಲಿತಾ ಇಂತಹ ವಿಲಕ್ಷಣವಾದ ಹೇಳಿಕೆಯನ್ನು ನೀಡುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಅವರು ಈ ಹೇಳಿಕೆಯನ್ನು ತಮಾಷೆಗಾಗಿ ಹೇಳಿದ್ದಾರೋ ಅಥವಾ ನಿಜವಾಗಿಯೂ ಗಂಭೀರವಾಗಿ ಹೇಳಿದ್ದಾರೋ?” ಎಂದು ಅಸ್ಸಾಂ ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಅಧ್ಯಕ್ಷರಾದ ಬೊಬೀತಾ ಶರ್ಮಾ ಪ್ರಶ್ನಿಸಿದ್ದಾರೆ.

“ಅವರ ಹೇಳಿಕೆಗೆ ಕಾರಣ ಏನಾದರೂ ಇರಲಿ, ಇಂಧನ ಬೆಲೆ ಏರಿಕೆಯ ಬಗ್ಗೆ ಅವರು ಇಂತಹ ವಿಚಿತ್ರ ಹೇಳಿಕೆಗಳನ್ನು ನೀಡುತ್ತಿರುವುದು ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಂಕಷ್ಟ ಎದುರಿಸುತ್ತಿರುವ ಸಾಮಾನ್ಯ ಜನರ ಬಗೆಗಿನ ಅಗೌರವ ಮತ್ತು ಅಸೂಕ್ಷ್ಮತೆಯನ್ನು ವ್ಯಕ್ತಪಡಿಸುತ್ತದೆ” ಎಂದು ಶರ್ಮಾ ಕಿಡಿಕಾರಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿ ಮಂಗಳವಾರ ಪೆಟ್ರೋಲ್ ಬೆಲೆ 101.80 ರೂಪಾಯಿ ಮತ್ತು ಡೀಸೆಲ್ 94.27 ರೂಪಾಯಿಯಾಗಿದೆ.


ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...