Homeಮುಖಪುಟತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

ತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

- Advertisement -
- Advertisement -

ಶಾಲಾ ಅವಧಿಯಲ್ಲಿ ಅಥವಾ ನಂತರದಲ್ಲಿ ಶಾಲಾ ಆವರಣದಲ್ಲಿ ಯಾವುದೇ ರೀತಿಯ ರಾಜಕೀಯ ರ್‍ಯಾಲಿಗಳನ್ನು ಹಾಗೂ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ತ್ರಿಪುರಾ ಸರ್ಕಾರ ಶನಿವಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತಿರುವ ಮುಖ್ಯೋಪಾಧ್ಯಾಯರ ವಿರುದ್ಧ ಕೆಲವು ದೂರುಗಳು ಬಂದ ನಂತರ ರಾಜ್ಯ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ಇಂತಹ ಯಾವುದೇ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ)ವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯು ಆದೇಶಿಸಿದೆ.

“ಆಟದ ಮೈದಾನ ಸೇರಿದಂತೆ ಯಾವುದೇ ಶಾಲೆಗೆ ಸಂಬಂಧಿಸಿದ ಯಾವುದೇ ಸಂಪನ್ಮೂಲಗಳನ್ನು ರಾಜಕೀಯ ಕಾರ್ಯಕ್ರಮ ಹಾಗೂ ರ್‍ಯಾಲಿಗಳಿಗಾಗಿ ರಾಜಕೀಯ ಪಕ್ಷಗಳು ಬಳಸುವಂತಿಲ್ಲ. ರಜಾ ದಿನಗಳಲ್ಲಿ ಅಥವಾ ಶಾಲಾ ಸಮಯದ ನಂತರ ಇತರ ಕಾರ್ಯಕ್ರಮಗಳನ್ನು ಆಯೋಜಿಸಲು ಕೆಲವು ಮುಖ್ಯೋಪಾಧ್ಯಾಯರು/ಟಿಐಸಿಗಳು ಅವಕಾಶ ನೀಡುತ್ತಿದ್ದಾರೆ. ಇದು ನಿಯಮದ ಉಲ್ಲಂಘನೆಯಾಗಿದೆ” ಎಂದು ಇಲಾಖೆ ಹೇಳಿದೆ.

ಕೋವಿಡ್-19 ಲಾಕ್‌ಡೌನ್‌ ಕ್ರಮಗಳಿಂದಾಗಿ ಈಗಾಗಲೇ ತರಗತಿ ಬೋಧನೆಯ ಮೇಲೆ ತೀವ್ರ ಪರಿಣಾಮ ಬೀರಿರುವುದರಿಂದ ಶಾಲಾ ಸಮಯದಲ್ಲಿ ದೈಹಿಕ ತರಗತಿಗಳಲ್ಲಿನ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತ್ರಿಪುರಾ ಸರ್ಕಾರ ಒತ್ತಿಹೇಳಿದೆ.

“ಶಿಕ್ಷಣ-ಕಲಿಕಾ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಮತ್ತು ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸುವ ಇಂತಹ ಕಾರ್ಯಕ್ರಮಗಳಿಗೆ ಮುಖ್ಯೋಪಾಧ್ಯಾಯರು ಅವಕಾಶ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ. ಈಗಾಗಲೇ ಮಾಡಿರುವ ಉಲ್ಲಂಘನೆಗಳಿಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಲ್ಲಾ ಮುಖ್ಯೋಪಾಧ್ಯಾಯರು/ಟಿಐಸಿಗಳಿಗೆ ತಿಳಿಸಬೇಕು ಎಂದೂ ಸರ್ಕಾರ ಹೇಳಿದೆ. ಈ ಮೂಲಕ, ಭವಿಷ್ಯದಲ್ಲಿ ನಿಯಮವನ್ನು ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬೇಕು” ಎಂದೂ ಆದೇಶದಲ್ಲಿ ಹೇಳಲಾಗಿದೆ.

“ಯಾವುದೇ ಸಂಸ್ಥೆಯು ಅನುಮತಿ ಪಡೆಯದೆ ಶಾಲೆಯ ಆವರಣದಲ್ಲಿ ಕಾರ್ಯಕ್ರಮ/ರ್‍ಯಾಲಿಗಳನ್ನು ನಡೆಸಲು ಯೋಜಿಸುತ್ತಿದ್ದರೆ, ಆ ಬಗ್ಗೆ HM/TIC ಅವರು ಶಾಲೆಗಳ ಇನ್ಸ್ಪೆಕ್ಟರ್/ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ತಿಳಿಸಬೇಕು. ಅಂತಹ ಮಾಹಿತಿಯನ್ನು ಸ್ವೀಕರಿಸಿದ ನಂತರ, ಆ ಬಗ್ಗೆ ಶಿಕ್ಷಣಾಧಿಕಾರಿಗಳು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ತಕ್ಷಣವೇ ಕ್ರಮಕೈಗೊಳ್ಳಬೇಕು” ಎಂದು ಸರ್ಕಾರ ಹೇಳಿದೆ.

ದುರುದ್ದೇಶವೂ ಇರುವಂತಿದೆ: ಶಿವಸುಂದರ್‌

“ಬಿಜೆಪಿ ಸರ್ಕಾರ ಈ ಆದೇಶವನ್ನು ಸ್ವಾರ್ಥ ಹಿತಾಸಕ್ತಿಯಿಂದಲೂ ಮಾಡಿದಂತಿದೆ. ಯಾವುದೇ ರಾಜಕೀಯ ಪಕ್ಷಗಳಿಗೆ ಜನರನ್ನು ತಲುಪಲು, ಜನರನ್ನು ಸೇರಿಸಿ ಕಾರ್ಯಕ್ರಮಗಳನ್ನು ನಡೆಸಲು ಸುಲಭಕ್ಕೆ ಸಿಗುವ ಸ್ಥಳ ಎಂದರೆ ಶಾಲೆಗಳ ಆವರಣಗಳು. ಹೀಗಾಗಿ, ಬಿಜೆಪಿಗೆ ಈ ಆವರಣಗಳ ಹೊರತಾಗಿಯೂ ಜನರನ್ನು ತಲುಪಲು ವಾಟ್ಸಾಪ್, ಖಾಸಗೀ ಮೈದಾನಗಳು ಸೇರಿದಂತೆ ವಿವಿಧ ರೀತಿಯ ದಾರಿಗಳನ್ನು ಹುಡುಕಿಕೊಂಡಿದೆ” ಎಂದು ಸಾಮಾಜಿಕ ಕಾರ್ಯಕರ್ತ ಶಿವಸುಂದರ್ ಹೇಳಿದ್ದಾರೆ.

“ಶಾಲೆಗಳಲ್ಲಿ ಮಕ್ಕಳು ಆಗತಾನೇ ವಿಚಾರಗಳನ್ನು ಮೈಗೂಡಿಸಿಕೊಳ್ಳಲು ಆರಂಭಿಸಿರುತ್ತಾರೆ. ಬಿಜೆಪಿಯು ಶಿಕ್ಷಕರ ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತನ್ನ ಧೋರಣೆ, ಮತಾಂಧತೆಯ ವಾದವನ್ನು ತುಂಬುತ್ತಿದೆ. ಆದರೆ, ಬೇರೆ ಪಕ್ಷಗಳು ಈಗಲೂ ಸಾರ್ವಜನಿಕ ಮೈದಾನಗಳ ಮೇಲೆ ಅವಲಂಬಿತವಾಗಿವೆ. ಜನರನ್ನು ಹಾಗೂ ವಿದ್ಯಾರ್ಥಿಗಳನ್ನು ತಲುಪಲು ಬೇರಾವುದೇ ಮಾರ್ಗಗಳಿಲ್ಲ. ಅಂತಹ ಪಕ್ಷಗಳು ಜನರನ್ನು ತಲುಪದಂತೆ ತಡೆಯುವ ಹುನ್ನಾರದಿಂದ ಬಿಜೆಪಿ ಸರ್ಕಾರ ಈ ಆದೇಶವನ್ನು ಹೊರಡಿಸಿರುವಂತಿದೆ. ಶಾಲಾ ಆವರಣಗಳನ್ನು ರಾಜಕೀಯ ಕಾರ್ಯಕ್ರಮಕ್ಕಾಗಿ ಬಳಸಿಕೊಳ್ಳದಂತೆ ತಡೆಯುವುದು ಸರಿ, ಆದರೆ, ಅದಕ್ಕೆ ಪರ್ಯಾಯವಾಗಿ ಸುಲಭಕ್ಕೆ ಸಿಗುವಂತಹ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಇಲ್ಲವಾದರೆ ಇದು ಮತ್ತಷ್ಟು ಆಕ್ಷೇಪಾರ್ಹವಾಗುತ್ತದೆ” ಎನ್ನುತ್ತಾರೆ ಶಿವಸುಂದರ್‌.


ಇದನ್ನೂ ಓದಿರಿ: ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್- ನಿತೀಶ್ ಕುಮಾರ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...