Homeಮುಖಪುಟತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

ತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

- Advertisement -
- Advertisement -

ಶಾಲಾ ಅವಧಿಯಲ್ಲಿ ಅಥವಾ ನಂತರದಲ್ಲಿ ಶಾಲಾ ಆವರಣದಲ್ಲಿ ಯಾವುದೇ ರೀತಿಯ ರಾಜಕೀಯ ರ್‍ಯಾಲಿಗಳನ್ನು ಹಾಗೂ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ತ್ರಿಪುರಾ ಸರ್ಕಾರ ಶನಿವಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತಿರುವ ಮುಖ್ಯೋಪಾಧ್ಯಾಯರ ವಿರುದ್ಧ ಕೆಲವು ದೂರುಗಳು ಬಂದ ನಂತರ ರಾಜ್ಯ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ಇಂತಹ ಯಾವುದೇ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ)ವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯು ಆದೇಶಿಸಿದೆ.

“ಆಟದ ಮೈದಾನ ಸೇರಿದಂತೆ ಯಾವುದೇ ಶಾಲೆಗೆ ಸಂಬಂಧಿಸಿದ ಯಾವುದೇ ಸಂಪನ್ಮೂಲಗಳನ್ನು ರಾಜಕೀಯ ಕಾರ್ಯಕ್ರಮ ಹಾಗೂ ರ್‍ಯಾಲಿಗಳಿಗಾಗಿ ರಾಜಕೀಯ ಪಕ್ಷಗಳು ಬಳಸುವಂತಿಲ್ಲ. ರಜಾ ದಿನಗಳಲ್ಲಿ ಅಥವಾ ಶಾಲಾ ಸಮಯದ ನಂತರ ಇತರ ಕಾರ್ಯಕ್ರಮಗಳನ್ನು ಆಯೋಜಿಸಲು ಕೆಲವು ಮುಖ್ಯೋಪಾಧ್ಯಾಯರು/ಟಿಐಸಿಗಳು ಅವಕಾಶ ನೀಡುತ್ತಿದ್ದಾರೆ. ಇದು ನಿಯಮದ ಉಲ್ಲಂಘನೆಯಾಗಿದೆ” ಎಂದು ಇಲಾಖೆ ಹೇಳಿದೆ.

ಕೋವಿಡ್-19 ಲಾಕ್‌ಡೌನ್‌ ಕ್ರಮಗಳಿಂದಾಗಿ ಈಗಾಗಲೇ ತರಗತಿ ಬೋಧನೆಯ ಮೇಲೆ ತೀವ್ರ ಪರಿಣಾಮ ಬೀರಿರುವುದರಿಂದ ಶಾಲಾ ಸಮಯದಲ್ಲಿ ದೈಹಿಕ ತರಗತಿಗಳಲ್ಲಿನ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತ್ರಿಪುರಾ ಸರ್ಕಾರ ಒತ್ತಿಹೇಳಿದೆ.

“ಶಿಕ್ಷಣ-ಕಲಿಕಾ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಮತ್ತು ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸುವ ಇಂತಹ ಕಾರ್ಯಕ್ರಮಗಳಿಗೆ ಮುಖ್ಯೋಪಾಧ್ಯಾಯರು ಅವಕಾಶ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ. ಈಗಾಗಲೇ ಮಾಡಿರುವ ಉಲ್ಲಂಘನೆಗಳಿಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಲ್ಲಾ ಮುಖ್ಯೋಪಾಧ್ಯಾಯರು/ಟಿಐಸಿಗಳಿಗೆ ತಿಳಿಸಬೇಕು ಎಂದೂ ಸರ್ಕಾರ ಹೇಳಿದೆ. ಈ ಮೂಲಕ, ಭವಿಷ್ಯದಲ್ಲಿ ನಿಯಮವನ್ನು ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬೇಕು” ಎಂದೂ ಆದೇಶದಲ್ಲಿ ಹೇಳಲಾಗಿದೆ.

“ಯಾವುದೇ ಸಂಸ್ಥೆಯು ಅನುಮತಿ ಪಡೆಯದೆ ಶಾಲೆಯ ಆವರಣದಲ್ಲಿ ಕಾರ್ಯಕ್ರಮ/ರ್‍ಯಾಲಿಗಳನ್ನು ನಡೆಸಲು ಯೋಜಿಸುತ್ತಿದ್ದರೆ, ಆ ಬಗ್ಗೆ HM/TIC ಅವರು ಶಾಲೆಗಳ ಇನ್ಸ್ಪೆಕ್ಟರ್/ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ತಿಳಿಸಬೇಕು. ಅಂತಹ ಮಾಹಿತಿಯನ್ನು ಸ್ವೀಕರಿಸಿದ ನಂತರ, ಆ ಬಗ್ಗೆ ಶಿಕ್ಷಣಾಧಿಕಾರಿಗಳು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ತಕ್ಷಣವೇ ಕ್ರಮಕೈಗೊಳ್ಳಬೇಕು” ಎಂದು ಸರ್ಕಾರ ಹೇಳಿದೆ.

ದುರುದ್ದೇಶವೂ ಇರುವಂತಿದೆ: ಶಿವಸುಂದರ್‌

“ಬಿಜೆಪಿ ಸರ್ಕಾರ ಈ ಆದೇಶವನ್ನು ಸ್ವಾರ್ಥ ಹಿತಾಸಕ್ತಿಯಿಂದಲೂ ಮಾಡಿದಂತಿದೆ. ಯಾವುದೇ ರಾಜಕೀಯ ಪಕ್ಷಗಳಿಗೆ ಜನರನ್ನು ತಲುಪಲು, ಜನರನ್ನು ಸೇರಿಸಿ ಕಾರ್ಯಕ್ರಮಗಳನ್ನು ನಡೆಸಲು ಸುಲಭಕ್ಕೆ ಸಿಗುವ ಸ್ಥಳ ಎಂದರೆ ಶಾಲೆಗಳ ಆವರಣಗಳು. ಹೀಗಾಗಿ, ಬಿಜೆಪಿಗೆ ಈ ಆವರಣಗಳ ಹೊರತಾಗಿಯೂ ಜನರನ್ನು ತಲುಪಲು ವಾಟ್ಸಾಪ್, ಖಾಸಗೀ ಮೈದಾನಗಳು ಸೇರಿದಂತೆ ವಿವಿಧ ರೀತಿಯ ದಾರಿಗಳನ್ನು ಹುಡುಕಿಕೊಂಡಿದೆ” ಎಂದು ಸಾಮಾಜಿಕ ಕಾರ್ಯಕರ್ತ ಶಿವಸುಂದರ್ ಹೇಳಿದ್ದಾರೆ.

“ಶಾಲೆಗಳಲ್ಲಿ ಮಕ್ಕಳು ಆಗತಾನೇ ವಿಚಾರಗಳನ್ನು ಮೈಗೂಡಿಸಿಕೊಳ್ಳಲು ಆರಂಭಿಸಿರುತ್ತಾರೆ. ಬಿಜೆಪಿಯು ಶಿಕ್ಷಕರ ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತನ್ನ ಧೋರಣೆ, ಮತಾಂಧತೆಯ ವಾದವನ್ನು ತುಂಬುತ್ತಿದೆ. ಆದರೆ, ಬೇರೆ ಪಕ್ಷಗಳು ಈಗಲೂ ಸಾರ್ವಜನಿಕ ಮೈದಾನಗಳ ಮೇಲೆ ಅವಲಂಬಿತವಾಗಿವೆ. ಜನರನ್ನು ಹಾಗೂ ವಿದ್ಯಾರ್ಥಿಗಳನ್ನು ತಲುಪಲು ಬೇರಾವುದೇ ಮಾರ್ಗಗಳಿಲ್ಲ. ಅಂತಹ ಪಕ್ಷಗಳು ಜನರನ್ನು ತಲುಪದಂತೆ ತಡೆಯುವ ಹುನ್ನಾರದಿಂದ ಬಿಜೆಪಿ ಸರ್ಕಾರ ಈ ಆದೇಶವನ್ನು ಹೊರಡಿಸಿರುವಂತಿದೆ. ಶಾಲಾ ಆವರಣಗಳನ್ನು ರಾಜಕೀಯ ಕಾರ್ಯಕ್ರಮಕ್ಕಾಗಿ ಬಳಸಿಕೊಳ್ಳದಂತೆ ತಡೆಯುವುದು ಸರಿ, ಆದರೆ, ಅದಕ್ಕೆ ಪರ್ಯಾಯವಾಗಿ ಸುಲಭಕ್ಕೆ ಸಿಗುವಂತಹ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಇಲ್ಲವಾದರೆ ಇದು ಮತ್ತಷ್ಟು ಆಕ್ಷೇಪಾರ್ಹವಾಗುತ್ತದೆ” ಎನ್ನುತ್ತಾರೆ ಶಿವಸುಂದರ್‌.


ಇದನ್ನೂ ಓದಿರಿ: ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್- ನಿತೀಶ್ ಕುಮಾರ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....